ಬೆಂಗಳೂರು: ಕೇಂದ್ರ ಸರ್ಕಾರ ಕೊಡುವ ಅಕ್ಕಿಯಲ್ಲೂ ಕಾಂಗ್ರೆಸ್ ಸರ್ಕಾರ 2 ಕೆಜಿ ಅಕ್ಕಿಯನ್ನು ಕಡಿತಗೊಳಿಸಿದೆ ಎಂದು ಮಾಜಿ ಸಿಎಂ ಬೊಮ್ಮಾಯಿ ಆರೋಪಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅನ್ನಭಾಗ್ಯ ಯೋಜನೆಯಲ್ಲಿ ಅಕ್ಕಿ ಕಡಿತ ಮಾಡಲಾಗಿದೆ. ಕಾಂಗ್ರೆಸ್ ಗ್ಯಾರಂಟಿಗಳ ಹೆಸರಿನಲ್ಲಿ ಜನರಿಗೆ ದೋಖಾ ಮಾಡಿದೆ. ಇದು ಅನ್ನಭಾಗ್ಯ ಯೋಜನೆಯಲ್ಲ, ಕನ್ನ ಭಾಗ್ಯ ಎಂದು ವ್ಯಂಗ್ಯ ಮಾಡಿದ್ದಾರೆ.
ಮಾಜಿ ಸಿಎಂ ಕುಮಾರಸ್ವಾಮಿಯವರು ವರ್ಗಾವಣೆ ವಿಚಾರವಾಗಿ ರೇಟ್ ಫಿಕ್ಸ್ ದಾಖಲೆ ಕೊಟ್ಟಿದ್ದಾರೆ. ಅದಕ್ಕೂ ಮುಂಚೆಯೇ ನಾನು ಈ ವಿಚಾರ ಪ್ರಸ್ತಾಪಿಸಿದ್ದೆ. ಎಲ್.ಹೆಚ್, ವಿಧಾನಸೌಧ, ಕೆಕೆ ಗೆಸ್ಟ್ ಹೌಸ್ನಲ್ಲಿ ಜನರ ದಂಡು ಸೇರುತ್ತಿದೆ ಎಂದಿದ್ದೆ.ಈಗ ಅವರು ಒಂದು ಇಲಾಖೆಯ ದರ ಪಟ್ಟಿಯನ್ನೇ ಕೊಟ್ಟಿದ್ದಾರೆ. ಈ ಬಗ್ಗೆ ಸರ್ಕಾರ ಸ್ಪಷ್ಟನೆ ಕೊಡಬೇಕು ಎಂದು ಆಗ್ರಹಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


