nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೃಷಿ ಲೋಕ /ಕಾಡು ಹಣ್ಣು.. | ಕೋಳಿ ಜುಟ್ಟು ಹಣ್ಣು

    August 2, 2026

    ಮಗುವಿನ ರೋಗನಿರೋಧಕ ಶಕ್ತಿ ಹೆಚ್ಚಳಕ್ಕೆ ಸ್ತನ್ಯಪಾನ ಅತ್ಯಗತ್ಯ: ಸಿ. ದೀಪಾ ಕರೆ

    August 2, 2026

    ತುಮಕೂರಲ್ಲಿ ರಾಜ್ಯಮಟ್ಟದ ಬ್ಯಾಡ್ಮಿಂಟನ್ ಸ್ಪರ್ಧೆಗೆ ಯಶಸ್ವಿ ತೆರೆ

    August 2, 2026
    Facebook Twitter Instagram
    ಟ್ರೆಂಡಿಂಗ್
    • ಕೃಷಿ ಲೋಕ /ಕಾಡು ಹಣ್ಣು.. | ಕೋಳಿ ಜುಟ್ಟು ಹಣ್ಣು
    • ಮಗುವಿನ ರೋಗನಿರೋಧಕ ಶಕ್ತಿ ಹೆಚ್ಚಳಕ್ಕೆ ಸ್ತನ್ಯಪಾನ ಅತ್ಯಗತ್ಯ: ಸಿ. ದೀಪಾ ಕರೆ
    • ತುಮಕೂರಲ್ಲಿ ರಾಜ್ಯಮಟ್ಟದ ಬ್ಯಾಡ್ಮಿಂಟನ್ ಸ್ಪರ್ಧೆಗೆ ಯಶಸ್ವಿ ತೆರೆ
    • ತುಮಕೂರು: 30ನೇ ವಾರ್ಡಿನ ಗಾರೇನರಸಯ್ಯ ನಕಟ್ಟೆ ಸ್ವಚ್ಛತಾ ಕಾರ್ಯ: ಪಾಲಿಕೆ ಸಿಬ್ಬಂದಿ, ನಾಗರಿಕ ಹಿತರಕ್ಷಣಾ ಸಮಿತಿ ಭಾಗಿ
    • ಲಿಂಕ್ ಕೆನಾಲ್, ಭೂಸ್ವಾಧೀನ ವಿರೋಧಿಸಿ ಆ. 6ರಿಂದ ಮೂರು ದಿನಗಳ ಸತ್ಯಾಗ್ರಹ: ಎಐ ಡೇಟಾ ಕೇಂದ್ರಗಳಿಂದ ಪರಿಸರ, ಉದ್ಯೋಗಕ್ಕೆ ಆತಂಕ ಆರೋಪ
    • ಸಂತಪುರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಡಾ. ಮಹಾಂತ ಶಿವಯೋಗಿ ಜಯಂತಿ ಹಾಗೂ ವ್ಯಸನ ಮುಕ್ತ ದಿನಾಚರಣೆ
    • ತುಮಕೂರು: ದೇವರಾಯಪಟ್ಟಣದಲ್ಲಿ ಚಿರತೆ ಹಾವಳಿ, ಇಸ್ರೋ ಆವರಣದಲ್ಲಿ ಕುರಿ ಬಲಿ – ಬೋನು ಅಳವಡಿಕೆ
    • ಗೃಹಲಕ್ಷ್ಮಿ, ಯುವನಿಧಿ: 323 ಕೋಟಿ ರೂ. ಬಿಡುಗಡೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅನ್ನದಲ್ಲೂ ಧೂಳು, ನೀರಲ್ಲೂ ಧೂಳು, ಪ್ರತಿ ಮನೆಯಲ್ಲೂ ರೋಗಿಗಳು: ಕ್ರಷರ್ ಸೃಷ್ಟಿಸಿದ ಪ್ರಾಣ ಭೀತಿ!
    ಕೊರಟಗೆರೆ June 29, 2022

    ಅನ್ನದಲ್ಲೂ ಧೂಳು, ನೀರಲ್ಲೂ ಧೂಳು, ಪ್ರತಿ ಮನೆಯಲ್ಲೂ ರೋಗಿಗಳು: ಕ್ರಷರ್ ಸೃಷ್ಟಿಸಿದ ಪ್ರಾಣ ಭೀತಿ!

    By adminJune 29, 2022No Comments4 Mins Read
    crusher

    ಕೊರಟಗೆರೆ: ತಿನ್ನುವ ಅನ್ನದಲ್ಲೂ ಧೂಳು, ಕುಡಿಯುವ ನೀರಿನಲ್ಲೂ  ಧೂಳು.. ಹೌದು ಕೊರಟಗೆರೆ ತಾಲ್ಲೂಕಿನ ಸಿ.ಎನ್.ದುರ್ಗ ಹೋಬಳಿಯ  ಬಿಕ್ಕೆಗುಟ್ಟೆ ಗ್ರಾಮದ ಬಳಿ ನಡೆಯುತ್ತಿರುವ ಕ್ರಷರ್‍ ಗಳ ಹಾವಳಿಯಿಂದ  ಜನರು ಮಣ್ಣನ್ನು ತಮ್ಮ ಆಹಾರವಾಗಿ ಮತ್ತು ಕುಡಿಯುವ ನೀರಾಗಿ  ಬಳಸುತ್ತಿದ್ದಾರೆ. ಜನರು ಮಾತ್ರವಲ್ಲದೇ ಅಮಾಯಕ  ಮೂಕ ಪ್ರಾಣಿಗಳು ಧೂಳು ಸೇವಿಸುವಂತಾಗಿದೆ. ಇದರಿಂದ ಜನರು ಪ್ರಾಣ ಭೀತಿಯಲ್ಲಿ ದಿನ  ನಿತ್ಯ ಜೀವನ ಕಳೆಯುವಂತಾಗಿದೆ.

    ಪ್ರತಿನಿತ್ಯ ಕ್ರಷರ್ ನಿಂದ ಸಿಡಿಸುವ ಸಿಡಿ ಮದ್ದುಗಳಿಂದಾಗಿ ಶಬ್ಧ ಮಾಲಿನ್ಯಉಂಟಾಗುವುದಷ್ಟೇ ಅಲ್ಲದೇ ಪಕ್ಕದಲ್ಲೇ ಇರುವ ಗ್ರಾಮಗಳಿಗೆ ಒಂದುನರಕವಾಗಿ ಪರಿಣಮಿಸಿದೆ. ಸದಾ ಧೂಳಿನಿಂದ ಕೂಡಿಕೊಂಡಿರುವ ಈ ಪ್ರದೇಶದಲ್ಲಿ ಜನ ಜೀವನ ಅಸ್ತವ್ಯಸ್ತವಾಗಿ ಜನರು ಬೇರೆ ಪ್ರದೇಶಗಳಿಗೆ  ಹೋಗುವುದೊಂದೇ ಬಾಕಿ ಉಳಿದಿದೆ.

    ಬಿಕ್ಕೆಗುಟ್ಟೆ ಗ್ರಾಮದಲ್ಲಿನ ಜನರು ಒಂದಿಲ್ಲೊಂದು ಖಾಯಿಲೆಯಿಂದ ಮರಣ ಹೊಂದುತ್ತಿದ್ದಾರೆ. ಜನ ಪ್ರತಿನಿಧಿಗಳಿಗೆ ಹಾಗೂ ಅಧಿಕಾರಿಗಳಿಗೆ ಹಿಡಿ ಶಾಪ ಹಾಕುತ್ತಲೇ, ಸತ್ತವರಿಗೆ ಮಣ್ಣು ಹಾಕುತ್ತಿದ್ದಾರೆ. ಇನ್ನೊಂದೆಡೆ ಮೂಕ ಪ್ರಾಣಿಗಳ ವೇದನೆಯನ್ನು ಕೇಳುವವರು ಯಾರು?  ಅವುಗಳಿಗೆ ಸರಿಯಾದ ಮೇವು ಸಿಗುತ್ತಿಲ್ಲ. ತಿನ್ನುವ ಹುಲ್ಲಿನ ಮೇಲೆ ಒಂದು ಅಡಿ  ಧೂಳು ಕುಳಿತುಕೊಂಡರೆ ಮುಗ್ಧ ಪ್ರಾಣಿಗಳು ಹೇಗೆ ತಾನೆ ತಿನ್ನಲು  ಸಾಧ್ಯ? ಎಂದು ಪ್ರಶ್ನಿಸುವಂತಾಗಿದೆ.

    ಈ ಸಮಸ್ಯೆಗಳ ಬಗ್ಗೆ ಅಧಿಕಾರಿಗಳಿಗೆ ಎಷ್ಟೇ ಬಾರಿ ಮನವಿ ಮಾಡಿಕೊಂಡರೂ ಸರಿಯಾಗಿ ಸ್ಪಂದಿಸುತ್ತಿಲ್ಲ. ಗ್ರಾಮಸ್ಥರು ಕ್ರಷರ್ ಬಳಿ ಹೋಗಿ ಕೆಲಸ ನಿಲ್ಲಿಸಲು ಹೇಳಿದರೆ. ಪೊಲೀಸ್ ಮುಖಾಂತರ ಬೆದರಿಕೆ ಬೇರೆ ಹಾಕಿಸುತ್ತಾರಂತೆ. ಅಂದರೆ ಪೊಲೀಸರು ಸಾರ್ವಜನಿಕರ ಹಿತಕ್ಕಾಗಿ ಕೆಲಸ ಮಾಡುತ್ತಿದ್ದಾರೋ ಅಥವಾ ಕ್ರಶರ್ ಓನರ್  ಪರವಾಗಿ ಕೆಲಸ ಮಾಡುತ್ತಿದ್ದಾರೊ ತಿಳಿಯದಾಗಿದೆ.

    ಬಿಕ್ಕಳಿಕೆ ಬಂದರು ಕುಡಿಯಲು ಯೋಗ್ಯವಲ್ಲದ ನೀರು ಇಲ್ಲಿನದ್ದಾಗಿದೆ. ಪ್ರತಿದಿನ ಕುಡಿಯಲು ಬಳಸುವ ನೀರು ಕ್ರಷರ್‍ ಗಳ ಹಾವಳಿಯಿಂದ  ಧೂಳುಮಯವಾಗಿದೆ.

    ಧೂಳಿನಿಂದಾಗಿ ಮನೆಯೊಳಗೆ ಕುಳಿತು ಊಟ ಮಾಡಲು ಆಗುತ್ತಿಲ್ಲ.  ಹೊಲ ಗದ್ದೆಗಳಿಗೆ ಹೋಗಿ ಕೆಲ ಮಾಡಿ ಮನೆಗೆ ಬಂದು ಕುಳಿತರೆ ಸಾಕು  ಸಿಡಿಮದ್ದುಗಳಿಂದ ಬರುವ ಸಣ್ಣ ಸಣ್ಣ ಕಲ್ಲುಗಳು ಮನೆಯ ಹೆಂಚು, ತಗಡಿನ  ಮೇಲೆ ಬೀಳುತ್ತವೆ. ಇದರಿಂದಾಗಿ ಮನೆಯಲ್ಲಿ ನೆಮ್ಮದಿಯಾಗಿ ನಿದ್ದೆ  ಮಾಡುವುದಿರಲಿ, ಊಟ ಮಾಡುವುದಕ್ಕೂ ಭಯ ಪಡುವಂತಾಗಿದೆ.

    ಹಸುಗೂಸು  ಇರುವ ಮನೆಯಲ್ಲಿ ಮಕ್ಕಳು ಹಾಗೂ ಗರ್ಭೀಣಿಯರು ಸಾಕಷ್ಟು ಸಮಸ್ಯೆಯನ್ನು ಅನುಭವಿಸುವಂತಾಗಿದೆ. ಪ್ರಭಾವಿಗಳಿಗೆ ಸೇರಿರುವ ಬಿಕ್ಕೆಗುಟ್ಟೆ ಜಲ್ಲಿ ಕ್ರಷರ್ ಗಳು  ಪ್ರಭಾವಿಗಳ ಒಡೆತನದಲ್ಲಿ ಕೆಲಸ ಮಾಡುತ್ತಿದ್ದು,  ಅವರನ್ನು ಎದುರಿಸಲು ಸಾಮಾನ್ಯ ಜನರು ಭಯ ಪಡುವಂತಾಗಿದೆ. ಅಧಿಕಾರಿ  ವರ್ಗವೂ ಅವರ ಜೊತೆ ಶಾಮೀಲಾಗಿರುವ ಶಂಕೆಯನ್ನು ಬಿಕ್ಕೆಗುಟ್ಟೆ  ಗ್ರಾಮದ ಜನರು ವ್ಯಕ್ತಪಡಿಸಿದ್ದಾರೆ.

    ಇನ್ನೂ ಅಲ್ಲಿ ಕೆಲಸ ಮಾಡುವವರು  ಸ್ಥಳೀಯ ಜನರಿಗೆ ಮುಂಚಿತವಾಗಿ ಮಾಹಿತಿ ಕೊಡದೆ ಕ್ರಷರ್ ಗಳಲ್ಲಿ  ಸಿಡಿಮದ್ದುಗಳನ್ನು ಸಿಡಿಸುತ್ತಿದ್ದು, ಇದರಿಂದಾಗಿ ಗರ್ಭಿಣಿಯರಾಗಿರುವ ಹೆಂಗಸರಿಗೆ ಗರ್ಭಪಾತವಾಗುತ್ತಿದೆ. ಇಲ್ಲದೇ  ಅಪೌಷ್ಟಿಕತೆ ಸೇರಿದಂತೆ ನಾನಾ ರೋಗ ರುಜಿನಗಳು ಬರುವ ಸಾಧ್ಯತೆ ಇದೆ.

    ಇನ್ನೂ ಯಾವ ಮಾಧ್ಯಮದವರು ಬಂದರೂ, ಯಾವ ಅಧಿಕಾರಿಗಳು ಬಂದರೂ ನಮಗೆ ನ್ಯಾಯ ಸಿಕ್ಕಿಲ್ಲ ಎಂದು ವರದಿ ಮಾಡಲು ಹೋದ ನಮ್ಮ ವಾಹಿನಿ ವರದಿಗಾರರ ಮೇಲೂ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದರು.

    ಪ್ರಭಾವಿಗಳ ಕಲ್ಲು ಗಣಿಗಾರಿಕೆಯಿಂದ ಸುತ್ತಮುತ್ತಲ ಬೆಳೆಗಳು ನಾಶವಾಗಿ, ರೈತರು ಸಾಲ ತೀರಿಸಲಾಗದೇ ಆತ್ಮಹತ್ಯೆ ಮಾಡಿಕೊಳ್ಳುವ ಸ್ಥಿತಿ ಬಂದಿದೆ. ಇನ್ನೂ ಜೆಲ್ಲಿಯನ್ನು ತುಂಬಿಕೊಂಡು ಹೋಗುವ ರಸ್ತೆಗಳೆಲ್ಲಾ ಮಣ್ಣಿನಿಂದ ಕೂಡಿದ್ದು, ಇದರಿಂದಾಗಿ ಆ ಸುತ್ತಮುತ್ತಲಿನ ಜೀವಸಂಕುಲವೇ ನಾಶವಾಗುವ ಸಾಧ್ಯತೆ ಇದೆ.

    ಕ್ರಷರ್ ನಲ್ಲಿ ಸಿಡಿದ ಸಿಡಿಮದ್ದಿನ  ಶಬ್ದಕ್ಕೆ ಹಸುಗಳು ಬೆದರಿದ ಹಸುಗಳು ವ್ಯಕ್ತಿಯೊಬ್ಬರನ್ನು ಎಳೆದುಕೊಂಡು ಹೋಗಿದ್ದು, ಪರಿಣಾಮವಾಗಿ ಅವರು ಕಾಲು ಮುರಿತಕ್ಕೊಳಗಾಗಿ ಇಂದು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಹೊಟ್ಟೆಗೆ ಏನು ತಿನ್ನುತ್ತಾರೆ? ಅವರು ಸಾರ್ವಜನಿಕರ ಕೆಲಸಗಾರರೋ ಅಥವಾ ಪ್ರಭಾವಿಗಳ ದಾಸರೋ ಎಂದು ಬಿಕ್ಕೆಗುಟ್ಟೆ ಗ್ರಾಮದ ಜನ ಅಧಿಕಾರಿಗಳಿಗೆ ಮತ್ತು ಜನಪ್ರತಿನಿಧಿಗಳಿಗೆ ಹಿಡಿ ಶಾಪ ಹಾಕಿದರು.

    ಮೃತ ದೇಹವನ್ನು ಇಟ್ಟುಕೊಂಡು ಪ್ರತಿಭಟನೆಗೆ ಸಿದ್ಧರಾಗಿದ್ದ ಸ್ಥಳೀಯರು ಸರಕಾರಿ ರಜೆ ಇದ್ದುದರಿಂದ ಅಂತ್ಯ ಸಂಸ್ಕಾರ ಮಾಡಿದ್ದಾರೆ. ಸ್ಥಳದಲ್ಲೇ ನಮ್ಮ ಪ್ರತಿನಿಧಿ ತಾಲ್ಲೂಕು ದಂಡಾಧಿಕಾರಿಗಳಿಗೆ ಕರೆ ಮಾಡಿ  ವಿಷಯ ಮುಟ್ಟಿಸಿದಾಗ ಸೋಮವಾರದಂದು ಸಂಪೂರ್ಣ ಮಾಹಿತಿ ಪಡೆದು  ಮೇಲಾಧಿಕಾರಿಗಳಿಗೆ ವರದಿ ಸಲ್ಲಿಸುವುದಾಗಿ ಅಲ್ಲಿದ್ದ ಕುಟುಂಬಸ್ಥರಿಗೆ ಹಾಗೂ  ನಮ್ಮ ಪ್ರತಿನಿಧಿಗೆ ಭರವಸೆ ನೀಡಿದ್ದಾರೆ.

    ನಹೀದಾ ಜಮ್ ಜಮ್, ತಾಲ್ಲೂಕು ದಂಡಾಧಿಕಾರಿ.

    ಈಗಾಗಲೇ ಆ ಗ್ರಾಮಕ್ಕೆ ನಮ್ಮ ಅಧಿಕಾರಿಗಳು ಭೇಟಿ ನೀಡಿದ್ದಾರೆ. ಅಲ್ಲಿನ ಜನರ ಸಮಸ್ಯೆಗಳನ್ನು ಆಲಿಸಿ ವರದಿ ಸಲ್ಲಿಸಿದ್ದಾರೆ  . ನಾನು ಕೂಡ ನಾಳೆ ಆ ಗ್ರಾಮಕ್ಕೆ ತೆರಳುತ್ತಿದ್ದೇನೆ. ಜನರ ಸಮಸ್ಯೆಗಳನ್ನು ಆದಷ್ಟು ಬೇಗ ಬಗೆಹರಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ತಿಳಿಸಿದರು.

    ನರಸಿಂಹ ರಾಜು, ಸ್ಥಳೀಯ.

    ನಮ್ಮ ಗ್ರಾಮದಲ್ಲಿ ಸುಮಾರು 80 ಕುಟುಂಬಗಳಿವೆ. ಎಲ್ಲಾ ಮನೆಯಲ್ಲೂ 4-5 ಜನ ವಾಸವಿದ್ದಾರೆ. ಆದ್ರೆ ಎಲ್ಲಾ ಮನೆಯಲ್ಲಿಯೂ ಕೂಡ ಒಬ್ಬ ರೋಗಿ ಕಡ್ಡಾಯವಾಗಿದ್ದರೆ. ಏಕೆಂದರೆ ಇಲ್ಲಿ ನಡೆಸುತ್ತಿರುವ ಕ್ರಷರ್‍ ಗಳಿಂದ ಬರುವ ಧೂಳಿನಿಂದ ಹಿರಿಯರು, ಮಕ್ಕಳು ಅನರೋಗ್ಯಕ್ಕೀಡಾಗುತ್ತಿದ್ದಾರೆ. ಅಷ್ಟೇ ಅಲ್ಲ  ತಿನ್ನುವ ಅನ್ನದಲ್ಲೂ ಧೂಳು, ಕುಡಿಯುವ ನೀರಿನದು ಧೂಳು ತುಂಬಿಕೊಳ್ಳುತ್ತದೆ. ವಾರಗಳಲ್ಲಿ ಸುರಿಸುವ ಮದ್ದಿನಿಂದ ಮನೆಗಳು  ಬಿರುಕು ಬಿಟ್ಟಿವೆ. ಇಷ್ಟೆಲ್ಲಾ ಆಗುತ್ತಿದ್ದರೂ ಯಾವ ಅಧಿಕಾರಿಗಳು ನಮ್ಮ ಊರಿನ  ಕಡೆ ಬರುತ್ತಿಲ್ಲ. ನಮ್ಮ ಸಮಸ್ಯೆ ಆಲಿಸುತ್ತಿಲ್ಲ ಎಂದು ತಿಳಿಸಿದರು.

    ನಾಗರಾಜು, ಸಾಮಾಜಿಕ ಹೋರಾಟಗಾರ.

    ಪ್ರಕೃತಿಯ ತಾಣವಾಗಿದ್ದ ಈ ಊರನ್ನು ಕ್ರಷರ್‍ಗಳ ಹಾವಳಿಯಿಂದ ಹಾಳು ಮಾಡಿದ್ದಾರೆ. ಕಾಡಿನಿಂದ ನಾಡಿಗೆ ಬರುತ್ತಿರುವ ಪ್ರಾಣಿಗಳ ಹಾವಳಿ ಒಂದು ಕಡೆ ಆದರೆ, ಇನ್ನೊಂದು ಕಡೆ ಕ್ರಶರ್ ಸಿಡಿಮದ್ದಿನ ಹಾವಳಿ. ಅನೇಕ ವರ್ಷಗಳಿಂದ ಈ ಕ್ರಷರ್‍ಗಳ ವಿರುದ್ಧವಾಗಿ ಹೋರಾಟ ಮಾಡುತ್ತಾ ಬರುತ್ತಿದ್ದೇವೆ. ಆದರೆ ಯಾವ ಅಧಿಕಾರಿಯೂ ಸ್ಪಂದಿಸಿಲ್ಲ. ಸಂಬಂಧಪಟ್ಟ ಎಲ್ಲಾ ಅಧಿಕಾರಿಗಳಲ್ಲಿ ಮನವಿ ಮಾಡಿದ್ದೇವೆ. ಇತ್ತೀಚೆಗೆ ನಡೆದ ಗ್ರಾಮ ವಾಸ್ತವ್ಯದಲ್ಲಿ ಕೂಡ ಮನವಿ  ಸಲ್ಲಿಸಿದ್ದೇವೆ. ಆದರೆ ಯಾವುದಕ್ಕೂ ಸ್ಪಂದಿಸದ ಅಧಿಕಾರಿಗಳ ಮುರ್ಖ  ವರ್ತನೆಗೆ ಬೇಸರವಾಗಿದೆ ಎಂದು ತಿಳಿಸಿದರು.

    ನವೀನ್ ಕುಮಾರ್, ಮಾನವ ಹಕ್ಕುಗಳ ಹೋರಾಟಗಾರ

    ಬಿಕ್ಕೆಗುಟ್ಟೆ ಊರಲ್ಲಿ ವಾಸಿಸುವ ಪ್ರತಿಯೊಂದು ಕುಟುಂಬಕ್ಕೂ ಸರಿಯಾದ ಮನೆಯಿಲ್ಲ. ಗುಡಿಸಲಿಲ್ಲ. ಕಲ್ಲಿನ ಕ್ವಾರೆಯಲ್ಲಿ ಸಿಡಿಸುವ ಸಿಡಿಮದ್ದಿನಿಂದ ಭಯಭೀತರಾಗಿರುವ ಗರ್ಭಿಣಿ ಮಹಿಳೆಯರು, ಇದುವರೆಗೂ ಅನೇಕ ಮೂಕ ಪ್ರಾಣಿಗಳು ಸಾವನ್ನಪ್ಪಿವೆ, ಇತ್ತೀಚೆಗೆ ಒಬ್ಬ ವ್ಯಕ್ತಿ ಮೃತಪಟ್ಟಿದ್ದಾನೆ.

    ಕ್ರಶರ್ ನಿಲ್ಲಿಸಿ ಎಂದು ಹೋಗುವ ಗ್ರಾಮಸ್ಥರಿಗೆ ಪೆÇಲೀಸರಿಂದ ಬೆದರಿಸಿ ಮತ್ತೆ ವಾಪಸ್ ಕಳಿಸುತ್ತಾರೆ. ಎಲ್ಲಿ ಹೋಯಿತು ನಮ್ಮ ಪ್ರಜಾಪ್ರಭುತ್ವ. ಎಲ್ಲಿ ಇದ್ದಾರೆ ನಿಷ್ಟಾವಂತ ಅಧಿಕಾರಿಗಳು. ಈ ಜನರ ಕಷ್ಟಕ್ಕೆ ಆಗುವ ಅಧಿಕಾರಿ ಯಾರು ಕಾದು ನೋಡಬೇಕಾಗಿದೆ ಎಂದು ತಿಳಿಸಿದರು.

    ವರದಿ : ಟೈಗರ್ ನಾಗ್

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

     

    admin
    • Website

    Related Posts

    ಡ್ರಗ್ಸ್ ಮುಕ್ತ ಕರ್ನಾಟಕಕ್ಕೆ ಸಂಕಲ್ಪ: ಕೊರಟಗೆರೆಯಲ್ಲಿ ಪೊಲೀಸ್ ಇಲಾಖೆಯಿಂದ ಬೃಹತ್ ಜಾಗೃತಿ ಅಭಿಯಾನ

    July 29, 2026

    ಮಾಜಿ ಸಚಿವ ಸಿ. ವೀರಣ್ಣ ಇನ್ನಿಲ್ಲ: ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಸಂಸ್ಕಾರ | ಡಿಸಿಎಂ ಡಾ.ಜಿ.ಪರಮೇಶ್ವರ್ ಸೇರಿದಂತೆ ಹಲವು ನಾಯಕರಿಂದ ಸಂತಾಪ

    July 25, 2026

    ಗ್ರಾಮೀಣ ಪ್ರತಿಭೆಯ ವೈದ್ಯಕೀಯ ಕನಸು ನನಸು: ನೀಟ್ ನಲ್ಲಿ ಕೊರಟಗೆರೆಯ ಸುಭಾಷ್ ಗೆ ಭರ್ಜರಿ ಸಾಧನೆ!

    July 25, 2026

    Leave A Reply Cancel Reply

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಲೇಖನ

    ಕೃಷಿ ಲೋಕ /ಕಾಡು ಹಣ್ಣು.. | ಕೋಳಿ ಜುಟ್ಟು ಹಣ್ಣು

    August 2, 2026

    ಹಣ್ಣು ಎಂದಾಕ್ಷಣ ಇದೀಗ ವಿದೇಶಿ ಹಣ್ಣುಗಳದ್ದೇ ಹವಾ ನಮ್ಮ ಕಾಡು ಹಣ್ಣುಗಳ ಔಷಧೀಯ ಗುಣಗಳ ಮುಂದೆ ಇದೇನು ಅಲ್ಲ ಮುಂದೊಂದು…

    ಮಗುವಿನ ರೋಗನಿರೋಧಕ ಶಕ್ತಿ ಹೆಚ್ಚಳಕ್ಕೆ ಸ್ತನ್ಯಪಾನ ಅತ್ಯಗತ್ಯ: ಸಿ. ದೀಪಾ ಕರೆ

    August 2, 2026

    ತುಮಕೂರಲ್ಲಿ ರಾಜ್ಯಮಟ್ಟದ ಬ್ಯಾಡ್ಮಿಂಟನ್ ಸ್ಪರ್ಧೆಗೆ ಯಶಸ್ವಿ ತೆರೆ

    August 2, 2026

    ತುಮಕೂರು: 30ನೇ ವಾರ್ಡಿನ ಗಾರೇನರಸಯ್ಯ ನಕಟ್ಟೆ ಸ್ವಚ್ಛತಾ ಕಾರ್ಯ: ಪಾಲಿಕೆ ಸಿಬ್ಬಂದಿ, ನಾಗರಿಕ ಹಿತರಕ್ಷಣಾ ಸಮಿತಿ ಭಾಗಿ

    August 2, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.