ತುಮಕೂರು: ಜೆಡಿಎಸ್ ತೊರೆದು ಪ್ರತ್ಯೇಕ ಗುಬ್ಬಿ ಹಿತರಕ್ಷಣ ಪಕ್ಷ ರಚಿಸಿಕೊಂಡು, ಗುಬ್ಬಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಮುಖಂಡ ಹಾಗೂ ಜೆಡಿಎಸ್ ಮಾಜಿ ಶಾಸಕ ಎಸ್ ಆರ್ ಶ್ರೀನಿವಾಸ್ ಅವರಿಗೆ ಬಾಹ್ಯ ಬೆಂಬಲ ನೀಡಲು ಗುಬ್ಬಿ ಪಟ್ಟಣ ಪಂಚಾಯ್ತಿಯ ಜೆಡಿಎಸ್ ಪಕ್ಷದ 9 ಸದಸ್ಯರು ನಿರ್ಧರಿಸಿದ್ದಾರೆ. ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡದೇ, ಕಾಂಗ್ರೆಸ್ ಪಕ್ಷದ ಎಸ್ ಆರ್ ಶ್ರೀನಿವಾಸ್ ಗೆ ಬಾಹ್ಯ ಬೆಂಬಲಕ್ಕೆ ನಿಂತಿದ್ದಾರೆ.
ಗುಬ್ಬಿ ಕ್ಷೇತ್ರದಲ್ಲಿನ ಜೆಡಿಎಸ್ ಅಭ್ಯರ್ಥಿ ವಿರುದ್ಧ ಅಸಮಾಧಾನ ಹೊರಹಾಕಿದ ಪ.ಪಂ ಸದಸ್ಯರು, ನಮಗೆ ಜೆಡಿಎಸ್ ಪಕ್ಷದ ಮೇಲೆ ಅಸಮಾಧಾನ ಇಲ್ಲ. ನಮಗೇ ಕೇವಲ ಗುಬ್ಬಿ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿರೋ ನಾಗರಾಜ್ ಮೇಲೆ ಅಸಮಾಧಾನ ಎಂದು ತುಮಕೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಗುಬ್ಬಿ ಪಟ್ಟಣ ಪಂಚಾಯಿತಿ ಜೆಡಿಎಸ್ ಸದಸ್ಯ ಸಿದ್ದರಾಮಣ್ಣ ಅವರು, ಪಟ್ಟಣ ಪಂಚಾಯ್ತಿ ಸದಸ್ಯರನ್ನ ನಿರ್ಲಕ್ಷ್ಯ ಮಾಡಿದ್ದು, ಕೆಲ ದಿನಗಳ ಹಿಂದೆ ಗುಬ್ಬಿ ಕ್ಷೇತ್ರದಲ್ಲಿ ನಡೆದ ಜೆಡಿಎಸ್ ಪಂಚರತ್ನ ಯಾತ್ರೆ, ವಿವಿಧ ಜೆಡಿಎಸ್ ಸಭೆ, ಸಮಾರಂಭ ಕಾರ್ಯಕ್ರಮಗಳಿಗೆ ಆಹ್ವಾನ ನೀಡದೇ ಪ.ಪಂ ಸದಸ್ಯರನ್ನ ನಿರ್ಲಕ್ಷ್ಯ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.
ಎಸ್ ಆರ್ ಶ್ರೀನಿವಾಸ್ ಜೆಡಿಎಸ್ ಪಕ್ಷವನ್ನು ತೊರೆದ ನಂತರ ಗುಬ್ಬಿ ಪಟ್ಟಣ ಪಂಚಾಯಿತಿ ಜೆಡಿಎಸ್ ಪಕ್ಷದ ಪ.ಪಂ 9 ಸದಸ್ಯರನ್ನ ಗುಬ್ಬಿ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ನಾಗರಾಜ್ ಗಣನೆಗೆ ತೆಗೆದುಕೊಂಡಿಲ್ಲ ಎಂದು ಹೇಳಿದ್ದಾರೆ.
ನಾವು 9 ಮಂದಿ ಪಟ್ಟಣ ಪಂಚಾಯಿತಿ ಸದಸ್ಯರು ಈಗಾಗಲೇ ಗುಬ್ಬಿ ಹಿತರಕ್ಷಣ ಪಕ್ಷ ಎಂದು ರಚಿಸಿಕೊಂಡಿದ್ದು ನಮಗೆ ಪಟ್ಟಣ ಪಂಚಾಯಿತಿಯಲ್ಲಿ ಪ್ರತ್ಯೇಕ ಆಸನದ ವ್ಯವಸ್ಥೆಯನ್ನು ಕಲ್ಪಿಸಿಕೊಡಬೇಕೆಂದು ಸಹ ಗುಬ್ಬಿ ಪಟ್ಟಣ ಪಂಚಾಯಿತಿ ಮುಖ್ಯ ಅಧಿಕಾರಿಗೆ ಪತ್ರ ಬರೆದಿದ್ದೇವೆ ಎಂದು ಹೇಳಿದ್ದಾರೆ.
ಪ್ರತಿಯೊಬ್ಬರಿಗೂ ಸ್ವಾಭಿಮಾನ ಅನ್ನೋದು ಇರುತ್ತೆ. ಅದಕ್ಕಾಗಿಯೇ ನಾವೆಲ್ಲಾ ನಾಗರಾಜ್ ಮೇಲಿನ ಅಸಮಾಧಾನಕ್ಕೆ ಎಸ್ ಆರ್ ಶ್ರೀನಿವಾಸ್ ಗೆ ಬಾಹ್ಯ ಬೆಂಬಲ ಕೊಡಲು ಮುಂದಾಗಿದ್ದೇವೆ ಎಂದು ತಿಳಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಪಟ್ಟಣ ಪಂಚಾಯಿತಿ ಸದಸ್ಯರಾದ ಮೋಹನ್, ಶೌಕತ್ ಅಲಿ, ಸಿದ್ದರಾಮಣ್ಣ, ರಂಗಸ್ವಾಮಿ, ರೇಣುಕ ಪ್ರಸಾದ್, ಮಂಗಳಮ್ಮ, ಕುಮಾರ, ಮಮತಾ, ಶ್ವೇತಾ ಅವರುಗಳು ಹಾಜರಿದ್ದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy