ತುಮಕೂರು: ನಗರದ ಅಂತರಸನಹಳ್ಳಿ ಮಾರುಕಟ್ಟೆ ಬಳಿ ಶುಕ್ರವಾರ ಸಂಜೆ ಕಾರ್ ಗಳ ನಡುವೆ ಸರಣಿ ಅಪಘಾತ ಸಂಭವಿಸಿದ್ದು ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸದೆ ಕಾರ್ ಚಾಲಕರು ಮತ್ತು ಪ್ರಯಾಣಿಕರು ಪಾರಾದ ಘಟನೆ ನಡೆದಿದೆ.
ಅಂತರಸನಹಳ್ಳಿ ಎಪಿಎಂಸಿ ಮಾರುಕಟ್ಟೆಯ ಬಳಿ ಸ್ಕಾರ್ಪಿಯೋ ವಾಹನದ ಚಾಲಕ ಅಜಾಗರೂಕತೆಯ ಚಾಲನೆಯಿಂದಾಗಿ ಮುಂದೆ ಚಲಿಸುತ್ತಿದ್ದ ಬುಲೆರೋ ವಾಹನಕ್ಕೆ ಡಿಕ್ಕಿ ಹೊಡೆಸಿದ್ದು, ಪರಿಣಾಮ ಬುಲೆರೋ ವಾಹನ , ಅದರ ಮುಂದೆ ಚಲಿಸುತ್ತಿದ್ದ ಇನ್ನೂ ನೊಂದಣಿಯಾಗದ ಹೊಸ ಮಾರುತಿ ಬಲೆನೊ ಕಾರ್ ಡಿಕ್ಕಿ ಹೊಡೆದಿದೆ.
ಅಪಘಾತ ನಡೆದ ಕೂಡಲೇ ಸಾರ್ವಜನಿಕರು ಧಾವಿಸಿ ವಾಹನಗಳನ್ನು ರಸ್ತೆ ಬದಿಗೆ ತಂದು ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಇನ್ನು ಅಪಘಾತದಲ್ಲಿ ಸ್ಕಾರ್ಪಿಯೋ ವಾಹನದ ಮುಂಭಾಗ ಸಂಪೂರ್ಣ ಜಖಂಗೊಂಡಿದ್ದು ರೇಡಿಯೇಟರ್ ಮತ್ತು ಎಂಜಿನ್ ಸಂಪೂರ್ಣ ಹಾಳಾಗಿದೆ, ಹಾಗೆಯೇ ಬುಲೆರೋ ಹಾಗೂ ಮಾರುತಿ ಬಲೆನೊ ಕಾರ್ ನ ಬಲಭಾಗ ಸಂಪೂರ್ಣ ಜಖಂಗೊಂಡಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy