nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬೆಳೆ ಹಾನಿ ಪರಿಹಾರಕ್ಕಾಗಿ ಆಗ್ರಹಿಸಿ ಶಾಸಕ ಶರಣು ಸಲಗರ್‌ ನೇತೃತ್ವದಲ್ಲಿ ಪ್ರತಿಭಟನಾ ಮೆರವಣಿಗೆ

    October 18, 2025

    ಗೂಡ್ಸ್ ಪಲ್ಟಿಯಾಗಿ ಕಾರ್ಮಿಕರಿಗೆ ಗಾಯ ಪ್ರಕರಣ: ಜೆಡಿಎಸ್ ಮುಖಂಡ ಕೃಷ್ಣನಾಯಕ ಆಸ್ಪತ್ರೆಗೆ ಭೇಟಿ

    October 18, 2025

    ಮರಿದಾಸನಹಳ್ಳಿ ಶಾಲೆಯ ಕಬಡ್ಡಿಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

    October 18, 2025
    Facebook Twitter Instagram
    ಟ್ರೆಂಡಿಂಗ್
    • ಬೆಳೆ ಹಾನಿ ಪರಿಹಾರಕ್ಕಾಗಿ ಆಗ್ರಹಿಸಿ ಶಾಸಕ ಶರಣು ಸಲಗರ್‌ ನೇತೃತ್ವದಲ್ಲಿ ಪ್ರತಿಭಟನಾ ಮೆರವಣಿಗೆ
    • ಗೂಡ್ಸ್ ಪಲ್ಟಿಯಾಗಿ ಕಾರ್ಮಿಕರಿಗೆ ಗಾಯ ಪ್ರಕರಣ: ಜೆಡಿಎಸ್ ಮುಖಂಡ ಕೃಷ್ಣನಾಯಕ ಆಸ್ಪತ್ರೆಗೆ ಭೇಟಿ
    • ಮರಿದಾಸನಹಳ್ಳಿ ಶಾಲೆಯ ಕಬಡ್ಡಿಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ
    • ಅಲ್ಪಸಂಖ್ಯಾತ ಸಮುದಾಯದವರ ಸರಳ ವಿವಾಹ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ
    • ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದವರಿಗೆ ರಾಜ್ಯ ಪ್ರಶಸ್ತಿ: ನಾಮ ನಿರ್ದೇಶನಕ್ಕೆ ಆಹ್ವಾನ
    • ಭಾಗ್ಯಲಕ್ಷ್ಮಿ ಯೋಜನೆ: ಪರಿಪಕ್ವ ಮೊತ್ತ ಪಡೆಯಲು ದಾಖಲೆ ಸಲ್ಲಿಸಿ
    • ಹಸು, ಎಮ್ಮೆ ಸಾಕಾಣಿಕೆ: ಸಹಾಯಧನ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ
    • ಕಬಡ್ಡಿ ಮಾನಸಿಕವಾಗಿ ಶಕ್ತಿಯುತ ಬೆಳವಣಿಗೆಗೆ ಸಹಕಾರಿ: ಡಾ.ಜಿ.ಪರಮೇಶ್ವರ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಹಿರಿಯೂರು: ವಾಣಿ ಸಕ್ಕರೆ ಪದವಿ ಪೂರ್ವ ಕಾಲೇಜಿನಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ
    ಜಿಲ್ಲಾ ಸುದ್ದಿ March 9, 2022

    ಹಿರಿಯೂರು: ವಾಣಿ ಸಕ್ಕರೆ ಪದವಿ ಪೂರ್ವ ಕಾಲೇಜಿನಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

    By adminMarch 9, 2022No Comments2 Mins Read
    mahila dinacharane

    ಹಿರಿಯೂರು: ತಾಲ್ಲೂಕಿನ ವಾಣಿ ಸಕ್ಕರೆ ಪದವಿ ಪೂರ್ವ ಕಾಲೇಜಿನಲ್ಲಿ ಕಾಲೇಜಿನಲ್ಲಿ ಸಾಂಸ್ಕೃತಿಕ ಸಮಿತಿ, ಐ.ಕ್ಯೂ.ಎ.ಸಿ, ಎನ್.ಎಸ್.ಎಸ್., ಕ್ರೀಡೆ, ಯೂತ್ ರೆಡ್ ಕ್ರಾಸ್, ರೇಂಜರ್ಸ್ ಹಾಗೂ ರೋವರ್ಸ್ ಸಹಯೋಗದಲ್ಲಿ   ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ನಡೆಸಲಾಯಿತು.

    ಕಾರ್ಯಕ್ರಮದಲ್ಲಿ ಭಾಗವಹಿಸಿದ ಹಿರಿಯೂರು ತಾಲ್ಲೂಕಿನ ಶಾಸಕಿ ಪೂರ್ಣಿಮಾ ಶ್ರೀನಿವಾಸ್ , ಮಹಿಳಾ ದಿನಾಚರಣೆ ಕೇವಲ ಒಂದು ದಿನದ ಆಚರಣೆಯಾಗಿ ಉಳಿಯದೇ,  ಸಮಾಜದಲ್ಲಿ ಮಹಿಳೆಯರಿಗೆ ಉತ್ತಮ ಸ್ಥಾನಮಾನ, ಗೌರವ ಹಾಗೂ ಸ್ವಾತಂತ್ರ್ಯ ಸಿಗುವಂತಾಗಬೇಕು  ಎಂದು ಹೇಳಿದರು.


    Provided by
    Provided by
    Provided by

    ನಮ್ಮ ಭಾರತ ದೇಶದಲ್ಲಿ ಮಹಿಳೆಯರಿಗೆ ತಮ್ಮದೇ ಆದ  ಸ್ಥಾನಮಾನ, ಗೌರವಗಳಿದ್ದು, ಸಮಾಜದಲ್ಲಿ ಮಹಿಳೆಯರನ್ನು ಅತ್ಯಂತ ಗೌರವಪೂರ್ಣವಾಗಿ ಕಾಣಲಾಗುತ್ತಿದೆ. ಆದರೂ ನಮ್ಮ ಗ್ರಾಮೀಣ ಪ್ರದೇಶದ ಮಹಿಳೆಯರಿಗೆ ಇನ್ನು ಅನೇಕ ಮೂಢನಂಬಿಕೆ ಆಚರಣೆಗಳು, ಕಟ್ಟುಪಾಡುಗಳಿದ್ದು, ಈ ಎಲ್ಲಾ ಆಚರಣೆಗಳು ಹಾಗೂ ಕಟ್ಟುಪಾಡುಗಳಿಂದ ಮಹಿಳೆಯರು ಹೊರಬರಬೇಕು  ಎಂದು ಕರೆ ನೀಡಿದರು.

    ಸಮಾಜದಲ್ಲಿ ಮಹಿಳೆಯರು ಮತ್ತು ಪುರುಷರು ಒಂದು ಕುಟುಂಬಕ್ಕೆ ಎರಡು ಕಣ್ಣುಗಳಿದ್ದಂತೆ,  ಆದರೂ, ಕೆಲವು ಸಂದರ್ಭದಲ್ಲಿ ಪುರುಷರಿಂದ ಮಹಿಳೆಯರ ಮೇಲೆ ದೌರ್ಜನ್ಯಗಳು ನಡೆಯುತ್ತಿದ್ದು, ಮಹಿಳೆಯರ  ರಕ್ಷಣೆಗಾಗಿ ಸರ್ಕಾರ ಅನೇಕ ಕಾನೂನುಗಳನ್ನು ಜಾರಿಗೊಳಿಸಿದೆ. ಮಹಿಳೆಯರು ಈ ಕಾನೂನಿನ ಸದುಪಯೋಗ ಪಡೆಯಬೇಕಲ್ಲದೆ, ಅದರ ದುರುಪಯೋಗವಾಗದಂತೆ ಎಚ್ಚರ ವಹಿಸಬೇಕು ಎಂದರು.

     ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವಾಣಿ ಕಾಲೇಜಿನ ಪ್ರಾಂಶುಪಾಲರಾದ ಡಾ.ಧರಣೇಂದ್ರಯ್ಯ ಮಾತನಾಡಿ, ಭಾರತೀಯರ ಭವ್ಯ ಇತಿಹಾಸ ಪರಂಪರೆಯಲ್ಲಿ ಅನಾದಿ ಕಾಲದಿಂದಲೂ ಮಹಿಳೆಯರ ಬಗ್ಗೆ ನಮ್ಮ ಸಮಾಜ ಅತ್ಯಂತ ಗೌರವ ಭಾವನೆ ಹೊಂದಿದ್ದು, ಇಂದಿನ ಆಧುನಿಕ ಜಗತ್ತಿನಲ್ಲಿ ಮಹಿಳೆಯರು ಸಾಮಾಜಿಕ, ಆರ್ಥಿಕ, ರಾಜಕೀಯ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲಿ ತಮ್ಮನ್ನು ಗುರುತಿಸಿಕೊಂಡು ಯಶಸ್ವಿಯಾಗಿರುವುದಕ್ಕೆ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯಂತಹ ಜಾಗೃತಿ ಕಾರ್ಯಕ್ರಮಗಳೇ ಕಾರಣವಾಗಿವೆ ಎಂಬುದಾಗಿ ಹೇಳಿದರು.

    ಈ ಕಾರ್ಯಕ್ರಮದಲ್ಲಿ ಹಿರಿಯ ಪತ್ರಕರ್ತರಾದ ಪ್ರೊ.ಹೆಚ್.ಎನ್.ನರಸಿಂಹಯ್ಯ, ನಗರಸಭೆ ಸದಸ್ಯರಾದ ಸಣ್ಣಪ್ಪ, ಸಿಡಿಸಿ ಸದಸ್ಯರುಗಳಾದ ಕಬಡ್ಡಿ ಶ್ರೀನಿವಾಸ್, ಆನಂದ ಶೆಟ್ಟರು, ಶೋಭಾ, ದೈಹಿಕ ಶಿಕ್ಷಣ ನಿರ್ದೇಶಕರಾದ ಹೆಚ್.ತಿಪ್ಪೇಸ್ವಾಮಿ, ಕನ್ನಡ ವಿಭಾಗ ಮುಖ್ಯಸ್ಥರಾದ ಪುಷ್ಪಲತಾ, ಅಧೀಕ್ಷಕರಾದ ಸೌಮ್ಯ, ರೂಪಶ್ರೀ, ಗೀತಾ, ಶಿವಲೀಲಾ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲ್ಲೂಕು ಯೋಜನಾಧಿಕಾರಿ ಹರಿಪ್ರಸಾದ್ ರೈ, ಮೇಲ್ವಿಚಾರಕರಾದ ಮಂಜುಳಾ ಸೇರಿದಂತೆ ಕಾಲೇಜು ಸಿಬ್ಬಂದಿ ಉಪಸ್ಥಿತರಿದ್ದರು.

    ವಿದ್ಯಾರ್ಥಿನಿ ಕುಮಾರಿ ವಿ.ನಿರ್ಮಲ ಪ್ರಾರ್ಥಿಸಿದರು. ಇತಿಹಾಸ ಸಹಾಯಕ ಪ್ರಾಧ್ಯಾಪಕರಾದ ಬಿ.ಇ.ಜಗನ್ನಾಥ್ ಸ್ವಾಗತಿಸಿದರು. ಇತಿಹಾಸ ಸಹ ಪ್ರಾಧ್ಯಾಪಕರಾದ ಡಾ.ಸಿದ್ಧಲಿಂಗಯ್ಯ, ವಂದಿಸಿದರು, ಕುಮಾರಿ ವಿದ್ಯಾರ್ಥಿನಿ ಕುಮಾರಿ ಸೃಷ್ಠಿ ಕಾರ್ಯಕ್ರಮ ನಿರೂಪಿಸಿದರು.

    ವರದಿ: ಮುರುಳಿಧರನ್ ಆರ್., ಹಿರಿಯೂರು ( ಚಿತ್ರದುರ್ಗ – ದಾವಣಗೆರೆ )


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ಬೆಳೆ ಹಾನಿ ಪರಿಹಾರಕ್ಕಾಗಿ ಆಗ್ರಹಿಸಿ ಶಾಸಕ ಶರಣು ಸಲಗರ್‌ ನೇತೃತ್ವದಲ್ಲಿ ಪ್ರತಿಭಟನಾ ಮೆರವಣಿಗೆ

    October 18, 2025

    ಗೂಡ್ಸ್ ಪಲ್ಟಿಯಾಗಿ ಕಾರ್ಮಿಕರಿಗೆ ಗಾಯ ಪ್ರಕರಣ: ಜೆಡಿಎಸ್ ಮುಖಂಡ ಕೃಷ್ಣನಾಯಕ ಆಸ್ಪತ್ರೆಗೆ ಭೇಟಿ

    October 18, 2025

    ಹುಲಿ ದಾಳಿಗೆ ಗಾಯಗೊಂಡ ರೈತನ ಮನೆಗೆ ಜೆಡಿಎಸ್ ಮುಖಂಡ ಕೃಷ್ಣನಾಯಕ ಭೇಟಿ!

    October 18, 2025

    Leave A Reply Cancel Reply

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಬೆಳೆ ಹಾನಿ ಪರಿಹಾರಕ್ಕಾಗಿ ಆಗ್ರಹಿಸಿ ಶಾಸಕ ಶರಣು ಸಲಗರ್‌ ನೇತೃತ್ವದಲ್ಲಿ ಪ್ರತಿಭಟನಾ ಮೆರವಣಿಗೆ

    October 18, 2025

    ಬೀದರ್: ಮಹಾರಾಷ್ಟ್ರ ಸರ್ಕಾರದ ಮಾದರಿಯಲ್ಲಿ ರೈತರಿಗೆ ಬೆಳೆ ಹಾನಿ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ಬಸವಕಲ್ಯಾಣ ಶಾಸಕ ಶರಣು ಸಲಗರ್…

    ಗೂಡ್ಸ್ ಪಲ್ಟಿಯಾಗಿ ಕಾರ್ಮಿಕರಿಗೆ ಗಾಯ ಪ್ರಕರಣ: ಜೆಡಿಎಸ್ ಮುಖಂಡ ಕೃಷ್ಣನಾಯಕ ಆಸ್ಪತ್ರೆಗೆ ಭೇಟಿ

    October 18, 2025

    ಮರಿದಾಸನಹಳ್ಳಿ ಶಾಲೆಯ ಕಬಡ್ಡಿಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

    October 18, 2025

    ಅಲ್ಪಸಂಖ್ಯಾತ ಸಮುದಾಯದವರ ಸರಳ ವಿವಾಹ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

    October 18, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.