ಅಂತ್ಯಸಂಸ್ಕಾರಕ್ಕೆ ಗುಬ್ಬಿ ಶಾಸಕ ವಾಸು ಬರಬೇಕು ಹಾಗೂ ನನ್ನ ಕುಟುಂಬಕ್ಕೆ ಸಹಾಯ ಮಾಡಬೇಕೆಂದು ಬರೆದಿಟ್ಟು ಕೆರೆಗೆ ಹಾರಿ ವ್ಯಕ್ತಿಯೊರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ಸೋಂಪುರ ಹೋಬಳಿಯ ದೇವರಹೊಸಹಳ್ಳಿ ಗ್ರಾಮದಲ್ಲಿ ನಡೆದಿದೆ.
ಜಿಲ್ಲೆಯ ಗುಬ್ಬಿ ಪಟ್ಟಣದ ನಿವಾಸಿ ಜಯಪ್ರಕಾಶ್ (39) ಆತ್ಮಹತ್ಯೆ ಮಾಡಿಕೊಂಡವರು. ಗ್ರಾನೆಟ್ ಕೆಲಸ ನಿರ್ವಹಿಸುತ್ತಾ ಜೀವನ ಸಾಗಿಸುತ್ತಿದ್ದ ಜಯಪ್ರಕಾಶ್ ಸಣ್ಣ ಪುಟ್ಟ ಸಾಲ ಮಾಡಿಕೊಂಡಿದ್ದು, ಗೋಮಾಳದಲ್ಲಿ ಜಮೀನು ಸಾಗುವಳಿ ಮಾಡಿಕೊಂಡು ಬಂದಿದ್ದು, ಸಾಗುವಳಿ ಚೀಟಿ ಸಹ ನೀಡಲಾಗಿತ್ತು. ಆದರೆ ಅದರ ಪಹಣಿ ಆತನ ಹೆಸರಿಗೆ ಬಂದಿರಲಿಲ್ಲ. ಈ ಬಗ್ಗೆ ನೊಂದಿದ್ದ ಜಯಪ್ರಕಾಶ್ ವಿಸ್ತೃತವಾದ ಡೆತ್ ನೋಟ್ ಬರೆದಿಟ್ಟು ಮನೆದೇವರಾದ ದೇವರ ಹೊಸಹಳ್ಳಿಯ ವೀರಭದ್ರ ಸ್ವಾಮಿಯ ಗ್ರಾಮದಲ್ಲಿರುವ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಡೆತ್ ನೋಟ್ನಲ್ಲಿ ನನ್ನ ಅಂತ್ಯಸಂಸ್ಕಾರಕ್ಕೆ ಗುಬ್ಬಿ ಶಾಸಕ ವಾಸು ಬರಬೇಕು ಹಾಗೂ ನನ್ನ ಕುಟುಂಬಕ್ಕೆ ಸಹಾಯ ಮಾಡಬೇಕೆಂದು ಬರೆದಿದ್ದರು. ಪ್ರಕರಣ ದಾಖಲಿಸಿಕೊಂಡಿರುವ ಡಾಬಸ್ ಪೇಟೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy