nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬೈಕ್ ಗೆ ಟಿಪ್ಪರ್ ಲಾರಿ ಡಿಕ್ಕಿ:  ಇಬ್ಬರು ಸ್ಪಾಟ್ ಡೆತ್, ವೃದ್ಧೆಗೆ ಗಂಭೀರ ಗಾಯ

    October 7, 2025

    ತುಮಕೂರು | ಮಾರ್ಕೋನಹಳ್ಳಿ ಜಲಾಶಯದಲ್ಲಿ 6 ಮಂದಿ ಜಲಸಮಾಧಿ

    October 7, 2025

    ಇದು ಪ್ರೈವೇಟ್ ದೇವರು!: ದಲಿತ ಸಮುದಾಯದವರಿಗೆ ಪೂಜೆಗೆ ಅವಕಾಶ ನಿರಾಕರಣೆ!

    October 7, 2025
    Facebook Twitter Instagram
    ಟ್ರೆಂಡಿಂಗ್
    • ಬೈಕ್ ಗೆ ಟಿಪ್ಪರ್ ಲಾರಿ ಡಿಕ್ಕಿ:  ಇಬ್ಬರು ಸ್ಪಾಟ್ ಡೆತ್, ವೃದ್ಧೆಗೆ ಗಂಭೀರ ಗಾಯ
    • ತುಮಕೂರು | ಮಾರ್ಕೋನಹಳ್ಳಿ ಜಲಾಶಯದಲ್ಲಿ 6 ಮಂದಿ ಜಲಸಮಾಧಿ
    • ಇದು ಪ್ರೈವೇಟ್ ದೇವರು!: ದಲಿತ ಸಮುದಾಯದವರಿಗೆ ಪೂಜೆಗೆ ಅವಕಾಶ ನಿರಾಕರಣೆ!
    • ಪಾವಗಡ | ಶಿಷ್ಯ ವೇತನ, ಮದ್ಯಪಾನ ಮುಕ್ತರಿಗೆ ಅಭಿನಂದನೆ ಕಾರ್ಯಕ್ರಮ
    • ಮೇಕೆಗಳ ಹಿಂಡಿನ ಮೇಲೆ ಹುಲಿ ದಾಳಿ: ಮೂರು ಮೇಕೆಗಳು ಸಾವು, ಅರಣ್ಯಾಧಿಕಾರಿಗಳ ನಿರ್ಲಕ್ಷ್ಯ ವಿರುದ್ಧ ಆಕ್ರೋಶ
    • ಮಧುಗಿರಿ | ಮೂಲಸೌಕರ್ಯ, ನಿರ್ವಹಣೆ ಸಮಸ್ಯೆಯಿಂದ ಬಳಲುತ್ತಿರುವ ಸರ್ಕಾರಿ ಕಾಲೇಜು
    • ಸರಗೂರು | ವಿವಿಧೆಡೆಗಳಲ್ಲಿ ವಾಲ್ಮೀಕಿ ಜಯಂತಿ ಆಚರಣೆ
    • ಗುಬ್ಬಿ: ಆರ್ಥಿಕ ಸಂಕಷ್ಟದಲ್ಲಿದ್ದ ವಿದ್ಯಾರ್ಥಿಗಳ ಕಾಲೇಜು ಶುಲ್ಕ ಪಾವತಿಸಿದ ಗ್ರಾಮಸ್ಥರು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅನುಭವ ಮಂಟಪ-ಬಸವಾದಿ ಶರಣರ ವೈಭವ ರಥಯಾತ್ರೆ: ಜಿಲ್ಲಾಧಿಕಾರಿಗಳಿಂದ ಚಾಲನೆ
    ತುಮಕೂರು April 20, 2025

    ಅನುಭವ ಮಂಟಪ-ಬಸವಾದಿ ಶರಣರ ವೈಭವ ರಥಯಾತ್ರೆ: ಜಿಲ್ಲಾಧಿಕಾರಿಗಳಿಂದ ಚಾಲನೆ

    By adminApril 20, 2025No Comments2 Mins Read
    basava

    ತುಮಕೂರು: ಕರ್ನಾಟಕ ಸಾಂಸ್ಕೃತಿಕ ನಾಯಕ ವಿಶ್ವ ಗುರು ಬಸವಣ್ಣನವರ ಬದುಕು, ಸಂದೇಶ ಮತ್ತು ಚಿಂತನೆಗಳನ್ನು ಪ್ರಚುರಪಡಿಸುವ ನಿಟ್ಟಿನಲ್ಲಿ ಏಪ್ರಿಲ್ 17 ರಿಂದ 29ರವರೆಗೆ ರಾಜ್ಯದಾದ್ಯಂತ ಹಮ್ಮಿಕೊಂಡಿರುವ ಅನುಭವ ಮಂಟಪ–ಬಸವಾದಿ ಶರಣರ ವೈಭವ ರಥಯಾತ್ರೆ ಕಾರ್ಯಕ್ರಮಕ್ಕೆ ಶನಿವಾರ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಚಾಲನೆ ನೀಡಿದರು.

    ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದಲ್ಲಿ ರಥಯಾತ್ರೆಯನ್ನು ಸ್ವಾಗತಿಸಿ ಮಾತನಾಡಿದ ಅವರು, ಬಾಗಲಕೋಟೆ ಜಿಲ್ಲೆ ಬಸವನ ಬಾಗೇವಾಡಿಯಲ್ಲಿ ಏಪ್ರಿಲ್ 29 ಹಾಗೂ 30ರಂದು ಆಯೋಜಿಸಿರುವ ಅನುಭವ ಮಂಟಪ–ಬಸವಾದಿ ಶರಣರ ವೈಭವ ಕಾರ್ಯಕ್ರಮದ ಅಂಗವಾಗಿ ಈ ರಥಯಾತ್ರೆಯನ್ನು ಆಯೋಜಿಸಲಾಗಿದೆ. ವಿಧಾನಸೌಧದ ಮುಂಭಾಗದಲ್ಲಿ ರಾಜ್ಯದ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಏಪ್ರಿಲ್ 17ರಂದು ರಥಯಾತ್ರೆಗೆ ಚಾಲನೆ ನೀಡಿದ್ದು, ರಥಯಾತ್ರೆಯು ನಾಡಿನಾದ್ಯಂತ ಸಂಚರಿಸಿ ಬಸವಣ್ಣನವರ ಬದುಕು, ಸಂದೇಶ ಮತ್ತು ಚಿಂತನೆಗಳನ್ನು ಪ್ರಚುರಪಡಿಸಲಿದೆ ಎಂದು ತಿಳಿಸಿದರು.


    Provided by
    Provided by
    Provided by

    ಇಂದು ಪ್ರಜಾಪ್ರಭುತ್ವದಲ್ಲಿ ಸಮಾನತೆ, ಸ್ವಾತಂತ್ರö್ಯದ ಬಗ್ಗೆ ನಾವೆಲ್ಲಾ ಮಾತನಾಡುತ್ತಿದ್ದೇವೆ. ಆದರೆ ಬಸವಣ್ಣನವರು 12ನೇ ಶತಮಾನದಲ್ಲಿಯೇ ತಮ್ಮ ಅನುಭವ ಮಂಟಪದ ಮೂಲಕ ಮಹಿಳೆಯರು ಸೇರಿದಂತೆ ಎಲ್ಲಾ ಕಾಯಕ ಸಮುದಾಯಗಳಿಗೆ ಸಮಾನ ಅವಕಾಶ ಕಲ್ಪಿಸುವ ಮೂಲಕ ಸಮಾಜದ ಏಳಿಗೆಗಾಗಿ ಹಗಲಿರುಳು ಶ್ರಮಿಸಿದರು. ಸಾಮಾಜಿಕ ತಾರತಮ್ಯ, ಲಿಂಗತಾರತಮ್ಯ, ಮೂಢ ನಂಬಿಕೆಗಳನ್ನು ಹೋಗಲಾಡಿಸಲು 800 ವರ್ಷಗಳ ಹಿಂದೆಯೇ ರಚಿಸಿದ ವಚನಗಳು ಇಂದಿಗೂ ಪ್ರಸ್ತುತವಾಗಿವೆ. ಬಸವಣ್ಣನವರ ಮಹತ್ವವನ್ನು ನಾಡಿಗೆ ಸಾರಲು ಹೊರಟಿರುವುದು ಶ್ಲಾಘನೀಯ. ನಮ್ಮ ಜಿಲ್ಲೆಯಲ್ಲಿಯೂ ಬಸವಣ್ಣನವರ ವಚನಗಳ ಕುರಿತು ವಿಚಾರ ಸಂಕಿರಣಗಳನ್ನು ಏರ್ಪಡಿಸಲು ಜಿಲ್ಲಾಡಳಿತದಿಂದ ತಯಾರಿ ನಡೆಸಲಾಗುವುದು ಎಂದು ತಿಳಿಸಿದರು.

    ನಗರ ಶಾಸಕ ಜಿ.ಬಿ.ಜೋತಿಗಣೇಶ್ ಮಾತನಾಡಿ, ಬಸವಣ್ಣನವರ ಜಯಂತಿ ಅಂಗವಾಗಿ ಅವರ ಬದುಕು, ತತ್ವಗಳನ್ನು ಜನತೆಗೆ ತಿಳಿಸಲು ಸರಕಾರ ಕೈಗೊಂಡಿರುವ ಅನುಭವ ಮಂಟಪ–ಬಸವಾದಿ ಶರಣರ ವೈಭವ ರಥಯಾತ್ರೆ ಇಂದು ತುಮಕೂರಿಗೆ ಆಗಮಿಸಿದೆ. ಬಸವಣ್ಣನವರ ವಚನಗಳ ಸಾರವನ್ನು ತಿಳಿದು ನಡೆದರೆ, ಕಲ್ಯಾಣ ರಾಜ್ಯ ಸಾಕಾರಗೊಳ್ಳಲಿದೆ ಎಂದು ತಿಳಿಸಿದರು.

    ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಕೆ.ಎಸ್.ಸಿದ್ದಲಿಂಗಪ್ಪ ಮಾತನಾಡಿ, ಬಸವಾದಿ ಶರಣರ ಸಂದೇಶಗಳನ್ನು ಸರಕಾರ ನಾಡಿಗೆ ಪಸರಿಸಲು ಹೊರಟಿರುವುದು ಸ್ವಾಗತಾರ್ಹ. ಇದರ ಜೊತೆಗೆ ಶಾಲಾ, ಕಾಲೇಜುಗಳಲ್ಲಿ ಬಸವಣ್ಣನವರ ಬಗ್ಗೆ ವಿಚಾರ ಸಂಕಿರಣ, ಕಾರ್ಯಾಗಾರಗಳನ್ನು ನಡೆಸುವುದರ ಜೊತೆಗೆ, ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬಸವಭವನ ನಿರ್ಮಾಣ ಮಾಡಬೇಕೆಂಬುದು ಬಹು ಜನರ ಬೇಡಿಕೆಯಾಗಿದೆ. ಸರಕಾರ ಈ ನಿಟ್ಟಿನಲ್ಲಿ ಕಾರ್ಯಕ್ರಮಗಳನ್ನು ರೂಪಿಸಬೇಕೆಂಬುದು ಶರಣರ ಒತ್ತಾಯವಾಗಿದೆ ಎಂದರು.

    ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಡಾ: ಎನ್. ತಿಪ್ಪೇಸ್ವಾಮಿ, ತಹಶೀಲ್ದಾರ್ ರಾಜೇಶ್ವರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸುರೇಶ್ ಕುಮಾರ್, ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾ ಜಿಲ್ಲಾಧ್ಯಕ್ಷ ಡಾ: ಪರಮೇಶ್, ತುಮಕೂರು ನಗರ ವೀರಶೈವ ಸೇವಾ ಸಮಾಜದ ಅಧ್ಯಕ್ಷ ಜಿ.ಎಸ್.ಚಂದ್ರಮೌಳಿ, ಮುಖಂಡರಾದ ಸದಾಶಿವಯ್ಯ, ಎಂ.ಜಿ. ಸಿದ್ದರಾಮಯ್ಯ, ಡಾ.ಡಿ.ಎನ್.ಯೋಗೀಶ್ವರಪ್ಪ, ಎಸ್. ಕುಮಾರಸ್ವಾಮಿ, ರಾಜಶೇಖರಯ್ಯ, ಶಶಿಧರನ್, ತಕರಾರಿ ಮಹೇಶ್, ಕನ್ನಡ ಪ್ರಕಾಶ, ಶ್ರೀಧರ, ಅನುಸೂಯಮ್ಮ ಸೇರಿದಂತೆ ಮತ್ತಿತರರು ಹಾಜರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

    admin
    • Website

    Related Posts

    ತುಮಕೂರು | ಮಾರ್ಕೋನಹಳ್ಳಿ ಜಲಾಶಯದಲ್ಲಿ 6 ಮಂದಿ ಜಲಸಮಾಧಿ

    October 7, 2025

    ತುಮಕೂರು | ಅವೈಜ್ಞಾನಿಕ ಬಿಪಿಎಲ್ ಪಡಿತರ ಕಾರ್ಡ್ ರದ್ಧತಿ ವಿರುದ್ಧ ಪ್ರತಿಭಟನೆ

    October 6, 2025

    ಕೆರೆಗೆ ರಾಸಾಯನಿಕ ತ್ಯಾಜ್ಯ ಸುರಿದ ಆರೋಪ: ಮೂವರ ಬಂಧನ

    October 6, 2025

    Comments are closed.

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕುಣಿಗಲ್

    ಬೈಕ್ ಗೆ ಟಿಪ್ಪರ್ ಲಾರಿ ಡಿಕ್ಕಿ:  ಇಬ್ಬರು ಸ್ಪಾಟ್ ಡೆತ್, ವೃದ್ಧೆಗೆ ಗಂಭೀರ ಗಾಯ

    October 7, 2025

    ಕುಣಿಗಲ್: ಬೈಕ್ ಗೆ ಟಿಪ್ಪರ್ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟು, ವೃದ್ಧೆಯೊಬ್ಬರು ತೀವ್ರವಾಗಿ ಗಾಯಗೊಂಡಿರುವ ಘಟನೆ…

    ತುಮಕೂರು | ಮಾರ್ಕೋನಹಳ್ಳಿ ಜಲಾಶಯದಲ್ಲಿ 6 ಮಂದಿ ಜಲಸಮಾಧಿ

    October 7, 2025

    ಇದು ಪ್ರೈವೇಟ್ ದೇವರು!: ದಲಿತ ಸಮುದಾಯದವರಿಗೆ ಪೂಜೆಗೆ ಅವಕಾಶ ನಿರಾಕರಣೆ!

    October 7, 2025

    ಪಾವಗಡ | ಶಿಷ್ಯ ವೇತನ, ಮದ್ಯಪಾನ ಮುಕ್ತರಿಗೆ ಅಭಿನಂದನೆ ಕಾರ್ಯಕ್ರಮ

    October 7, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.