ಪಾವಗಡ: ಪಾವಗಡ ಪಟ್ಟಣದ ಅಪಘಾತಗಳ ಕೇಂದ್ರ ಬಿಂದುವಾದ ತುಮಕೂರು ರಸ್ತೆ ಇಂಡೇನ್ ಗ್ಯಾಸ್ ಗೌಡೌನ್ ಮುಂಭಾಗದ ರಸ್ತೆ ತಿರುವಿನಲ್ಲಿ ಕೆಂಪು ದೀಪ ಅಳವಡಿಸುವಂತೆ ಹೆಲ್ಪ್ ಸೊಸೈಟಿ ಒತ್ತಾಯಿಸಿದೆ.
ಈ ಪ್ರದೇಶ ಆಕ್ಸಿಡೆಂಟ್ ಝೋನ್ ಆಗಿದ್ದು, ಇಲ್ಲಿ ಸರಣಿ ಅಪಘಾತಗಳು ನಡೆಯುತ್ತಿದೆ. ಈ ಸಂಬಂಧ ರಸ್ತೆ ನಿರ್ವಹಣೆ ಕೆ-ಶಿಪ್ ನವರು ಅಥವಾ ಪಿ. ಡಬ್ಲ್ಯೂ. ಡಿ ಅಧಿಕಾರಿಗಳು ಈ ಕೂಡಲೇ ರಸ್ತೆ ತಿರುವಿನಲ್ಲಿ ಕೆಂಪುದೀಪ ಅಳವಡಿಸುವಂತೆ ಹೆಲ್ಪ್ ಸೊಸೈಟಿ ಅಧ್ಯಕ್ಷ ಮಾನಂ ಶಶಿಕಿರಣ್ ಒತ್ತಾಯಿಸಿದರು.
ಖಾಸಗಿ ಕಂಪನಿಯ ನಿರ್ಲಕ್ಷ ಹಾಗೂ ನೀರು ಸರಬರಾಜು ಕಂಪನಿಯ ಕಾಮಗಾರಿಯ ನಿರ್ಲಕ್ಷದಿಂದ ಇಂದು ಬೆಳ್ಳಂಬೆಳಗ್ಗೆ ತಾಲ್ಲೂಕು ಕಚೇರಿಯ ಅಧಿಕಾರಿಯೊಬ್ಬರಿಗೆ ಸದರಿ ಸ್ಥಳದಲ್ಲಿ ಅಪಘಾತವಾಗಿದ್ದು ಮತ್ತಷ್ಟು ಅಪಘಾತ, ಸಾವು, ನೋವು ಸಂಭವಿಸುವ ಅಪಾಯದ ಹಿಲ್ಲೆಯಲ್ಲಿ ಹೆಲ್ಪ್ ಸೊಸೈಟಿ ಸಂಬಂಧ ಪಟ್ಟ ಅಧಿಕಾರಿಗಳ ಗಮನಕ್ಕೆ ವಿಚಾರವನ್ನು ತಂದಿದ್ದು, ಕೂಡಲೇ ಕೆ -ಶಿಪ್ ಅಧಿಕಾರಿ ಹಾಗೂ ಪಿ. ಡಬ್ಲ್ಯೂ. ಡಿ ಅಧಿಕಾರಿಗಳಾದ ಅನಿಲ್ ಕುಮಾರ್ ಸ್ಥಳಕ್ಕೆ ಆಗಮಿಸಿ ಕೂಡಲೇ ಅಪಘಾತ ತಪ್ಪಿಸಲು ಸೂಕ್ತ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ಹೆಲ್ಪ್ ಸೊಸೈಟಿ ಅಧ್ಯಕ್ಷ ಮಾನಂ ಶಶಿಕಿರಣ್, ಆಟೋ ಚಾಲಕರ ಸಂಘದ ಅಧ್ಯಕ್ಷ ಬೇಕರಿ ನಾಗರಾಜ, ಗೌತಮ್, ಸಾಯಿ ಹಾಜರಿದ್ದರು.
ವರದಿ: ನಂದೀಶ್ ನಾಯ್ಕ ಪಿ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB