ತುಮಕೂರು: ಜಿಲ್ಲೆ ಗುಬ್ಬಿ ತಾಲೂಕು ಗೋನೆಗಾರರು ಕೇರಾ ಸುರಕ್ಷಾ ವಿಮಾ ಯೋಜನೆಯ ಪ್ರಯೋಜನವನ್ನು ಪಡೆಯಬೇಕೆಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಮನವಿ ಮಾಡಿದ್ದಾರೆ.
ಕೇರಾ ಸುರಕ್ಷಾ ವಿಮಾ ಯೋಜನೆಯು ವೈಯಕ್ತಿಕ ಅಪಘಾತ ವಿಮಾ ಯೋಜನೆಯಾಗಿದ್ದು, ತೆಂಗು ಅಭಿವೃದ್ಧಿ ಮಂಡಳಿಯು ಈ ಯೋಜನೆಯನ್ನು ಅನುಷ್ಠಾನಗೊಳಿಸಿದೆ.
ಗುಬ್ಬಿ ತಾಲೂಕಿನಲ್ಲಿ ಸುಮಾರು 37439.80 ಹೆಕ್ಟೇರ್ ಪ್ರದೇಶದಲ್ಲಿ ತೆಂಗು ಬೆಳೆಯಲಾಗುತ್ತಿದ್ದು, ಕಾಯಿ ಅಥವಾ ಎಳನೀರು ಕೊಯ್ಯು ಮಾಡುವ ಗೋನೆಗಾರರ ಸುರಕ್ಷತಾ ದೃಷ್ಟಿಯಿಂದ ಈ ಯೋಜನೆಯನ್ನು ಅನುಷ್ಠಾನಗೊಳಿಸಲಾಗಿದೆ. ಗೋನೆಗಾರರಿಗೆ ಏನೇ ಅಪಘಾತ ಸಂಭವಿಸಿದರೂ ಕೇರಾ ಸುರಕ್ಷಾ ವಿಮಾ ಯೋಜನೆಯಡಿ ವಿವಿಧ ಸೌಲಭ್ಯ ಒದಗಿಸಲಾಗುವುದು. ತೆಂಗಿನ ಮರ ಹತ್ತುವವರು/ ತೆಂಗಿನಕಾಯಿ ಕೀಳುವವರು/ ನೀರಾ ತಂತ್ರಜ್ಞರು ಅಪಘಾತಕ್ಕೊಳಗಾಗಿ ಮರಣ ಹೊಂದಿದಲ್ಲಿ ಅಥವಾ ಅಂಗವಿಕಲರಾದಲ್ಲಿ ದುರ್ಘಟನೆ/ ಅಪಘಾತವಾದ 7 ದಿನಗಳೊಳಗಾಗಿ ತೆಂಗು ಅಭಿವೃದ್ಧಿ ಮಂಡಳಿಗೆ ಮಾಹಿತಿ ನೀಡಬೇಕು. ಮರಣ ಹೊಂದಿದಲ್ಲಿ 7 ಲಕ್ಷ ರೂ., ಶಾಶ್ವತ ಭಾಗಶಃ ಅಂಗವಿಕಲತೆ ಹೊಂದಿದಲ್ಲಿ 3.50 ಲಕ್ಷ ರೂ., ಆಸ್ಪತ್ರೆ ವೆಚ್ಚ(24 ಲೀಟರ್ ಇಆ) 2 ಲಕ್ಷ ರೂ., ತಾತ್ಕಾಲಿಕ ಅಂಗವಿಕಲತೆಯನ್ನು ಹೊಂದಿದ ಕೊಯ್ಲುಗಾರನಿಗೆ ಗರಿಷ್ಠ 21,000 ರೂ.(ಪ್ರತಿ ವಾರ 3500 ರೂ.ನಂತೆ), ಅಂಬುಲೆನ್ಸ್ ಖರ್ಚು 3,500 ರೂ. ಹಾಗೂ ಪಾಲಿಸಿದಾರ ಮೃತಪಟ್ಟರೆ ಅಂತ್ಯ ಸಂಸ್ಕಾರಕ್ಕೆ 5,500 ರೂ. ಗಳನ್ನು ವಿಮಾ ಕಂಪನಿಯಿಂದ ನೀಡಲಾಗುವುದು. ಅಪಘಾತ ಸಂಭವಿಸಿದ 3 ದಿನಗಳೊಳಗಾಗಿ ಮಂಡಳಿಯ ಗಮನಕ್ಕೆ ತರಬೇಕು.
ಆಸಕ್ತ ತೆಂಗು ತೋಟಗಾರರು ತೆಂಗು ಅಭಿವೃದ್ಧಿ ಮಂಡಳಿಯ ನಿಗದಿತ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಆಧಾರ್ ಕಾರ್ಡ್ ಪ್ರತಿ, ಬ್ಯಾಂಕ್ ಪಾಸ್ ಪುಸ್ತಕದ ಪ್ರತಿ, ರೈತರ ವಾರ್ಷಿಕ ವಂತಿಕೆ ಪಾವತಿಸಿದ ರಸೀದಿಯೊಂದಿಗೆ ಅಗತ್ಯ ದಾಖಲೆಗಳನ್ನು ಸಲ್ಲಿಸಿ ವಿಮಾ ಪಾಲಿಸಿ ಹೊಂದಬಹುದಾಗಿದೆ. ಅರ್ಜಿದಾರರು 18 ರಿಂದ 65 ವರ್ಷದೊಳಗಿನವರಾಗಿರಬೇಕು.
ವಾರ್ಷಿಕ ವಿಮಾ ಕಂತಿನ ಹಣವನ್ನು 956 ರೂ.ಗಳಿಗೆ ನಿಗದಿಪಡಿಸಲಾಗಿದೆ. ಇದರಲ್ಲಿ ಶೇ.85:15 ರಂತೆ ತೆಂಗು ಅಭಿವೃದ್ಧಿ ಮಂಡಳಿಯ ವಂತಿಕೆ 813ರೂ. ಹಾಗೂ ರೈತರ ವಂತಿಕೆ 143 ರೂ.ಗಳನ್ನು ಒಳಗೊಂಡಿರುತ್ತದೆ. ರೈತರು ವಿಮಾ ಕಂತಿನ ವಂತಿಕೆಯನ್ನು ತೆಂಗು ಅಭಿವೃದ್ಧಿ ಮಂಡಳಿ (Coconut development board payable at cochin) ಗೆ ಡಿಡಿ ಮೂಲಕ ಅಥವಾ ಆನ್ಲೈನ್ NEFT/ BHIM/Phone pe/ Google pay/Pay- tm ಮೂಲಕ State bank of India, Iyyatti Jn., Ernakulam ಶಾಖೆ(Account No.61124170321, IFSC Code: SBIN0031449) ಗೆ ಪಾವತಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಾಲತಾಣ www.coconut.board.gov.in/ <http://www.coconut.board.gov.in/ > Scheme.aspx#kera suraksha insuranceಗೆ ಭೇಟಿ ನೀಡಿ ಮಾಹಿತಿ ಪಡೆಯಬಹುದು ಅಥವಾ ರೈತ ಸಂಪರ್ಕ ಕೇಂದ್ರದ ಸಹಾಯಕ ತೋಟಗಾರಿಕೆ ಅಧಿಕಾರಿ ಚೇಳೂರು– 6362409080, ಸಿ.ಎಸ್.ಪುರ– 7259243329, ಹಾಗಲವಾಡಿ– 8700480581, ನಿಟ್ಟೂರು ಹಾಗೂ ಕಡಬ– 9535376687 ನ್ನು ಸಂಪರ್ಕಿಸಬೇಕೆಂದು ಅವರು ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


