ಬೆಂಗಳೂರು ಗ್ರಾಮಾಂತರ: ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2024-25ನೇ ಸಾಲಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ, ದೊಡ್ಡಬಳ್ಳಾಪುರ, ಹೊಸಕೋಟೆ ಮತ್ತು ನೆಲಮಂಗಲ ತಾಲ್ಲೂಕುಗಳ ವ್ಯಾಪ್ತಿಗೆ ಒಳಪಡುವ ಪರಿಶಿಷ್ಟ ಜಾತಿಯ ಅಭ್ಯರ್ಥಿಗಳಿಗೆ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಆಡಳಿತ ನ್ಯಾಯಾಧೀಕರಣ ಯೋಜನೆಯಡಿ ಎರಡನೇ ಹಂತದಲ್ಲಿ ತರಬೇತಿ ನೀಡುವ ಸಲುವಾಗಿ ಪರಿಶಿಷ್ಟ ಜಾತಿಯ ಕಾನೂನು ಪದವೀಧರರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಹ ಅಭ್ಯರ್ಥಿಗಳು, ಸಮಾಜ ಕಲ್ಯಾಣ ಇಲಾಖೆಯ ವೆಬ್ ಸೈಟ್ (www.sw.kar.nic.in) ನಲ್ಲಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು 2024 ರ ಸೆಪ್ಟೆಂಬರ್– 20 ರಿಂದ ಪ್ರಾರಂಭವಾಗಿದ್ದು, 2024 ರ ಸೆಪ್ಟೆಂಬರ್– 30 ಕೊನೆಯ ದಿನಾಂಕವಾಗಿರುತ್ತದೆ.
ಷರತ್ತುಗಳು:
ಅಭ್ಯರ್ಥಿಗಳು 40 ವರ್ಷ ವಯೋಮಿತಿಯೊಳಗಿರಬೇಕು. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ, ದೊಡ್ಡಬಳ್ಳಾಪುರ, ಹೊಸಕೋಟೆ ಮತ್ತು ನೆಲಮಂಗಲ ತಾಲ್ಲೂಕುಗಳ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸತಕ್ಕದ್ದು.
ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕಕ್ಕೆ ಎರಡು ವರ್ಷದ ಒಳಗೆ ಕಾನೂನು ಪದವಿಯನ್ನು ಪಡೆದಿರಬೇಕು. ವಾರ್ಷಿಕ ಆದಾಯ ರೂ.2,00,000/-ಗಳ ಒಳಗೊಂಡಿರಬೇಕು. ತರಬೇತಿ ಅವಧಿ ಎರಡು ವರ್ಷಗಳಾಗಿದ್ದು, ಮಾಸಿಕ ರೂ.10,000/-ಗಳ ಶಿಷ್ಯ ವೇತನ ನೀಡಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳನ್ನು ಜಿಲ್ಲಾ ಪಬ್ಲಿಕ್ ಪ್ರಾಸಿಕ್ಯೂಟರ್ ಅಥವಾ 20 ವರ್ಷಕ್ಕಿಂತ ಹೆಚ್ಚಿನ ಅನುಭವ ಹೊಂದಿರುವ ಹಿರಿಯ ವಕೀಲರಲ್ಲಿ ತರಬೇತಿ ತರಬೇತಿ ನಿಯೋಜಿಸಲಾಗುವುದು.
ಆಯ್ಕೆಯಾದ ಅಭ್ಯರ್ಥಿಗಳು ಯಾವುದೇ ಕಾರಣಕ್ಕೂ ತರಬೇತಿಯನ್ನು ಪೂರ್ಣಗೊಳಿಸದೆ ಮಧ್ಯಂತರದಲ್ಲಿ ಬಿಟ್ಟು ಹೋಗಬಾರದು ಹಾಗೆ ಬಿಟ್ಟು ಹೋದ ಪಕ್ಷದಲ್ಲಿ ತರಬೇತಿ ಅವಧಿಯಲ್ಲಿ ಪಾವತಿಸಿದ ಶಿಷ್ಯ ವೇತನ ವಾಪಸ್ಸು ಪಡೆಯಲಾಗುವುದು ಹಾಗೂ ಈ ನಿಯಮ ಕೇಂದ್ರ ಮತ್ತು ರಾಜ್ಯ ಸರ್ಕಾರಿ ಉದ್ದಿಮೆಯಲ್ಲಿ ನೇಮಕ ಹೊಂದಿರುವವರಿಗೆ ಅನ್ವಯಿಸುವುದಿಲ್ಲ. ಸುಳ್ಳು ದಾಖಲೆ ಮಾಹಿತಿಯನ್ನು ಒದಗಿಸಿ ಆಯ್ಕೆಯಾದ ಅಭ್ಯರ್ಥಿಗಳನ್ನು ಕಾನೂನಿನ ಅನ್ವಯ ಶಿಕ್ಷೆಗೆ ಗುರಿಪಡಿಸಲಾಗುವುದು ಹಾಗೂ ತರಬೇತಿ ಅವಧಿಯಲ್ಲಿ ಪಾವತಿಸಿದ ಶಿಷ್ಯವೇತನ ಶೇ.10 ರಂತೆ ಬಡ್ಡಿಯೊಂದಿಗೆ ವಸೂಲಿ ಮಾಡಲಾಗುವುದು. ಅರ್ಜಿಯಲ್ಲಿನ ಮಾಹಿತಿಯು ಅಪೂರ್ಣವಾಗಿದ್ದಲ್ಲಿ ಅಂತಹ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. ಆಯ್ಕೆ ಸಮಿತಿಯ ತಿರ್ಮಾನವೇ ಅಂತಿಮ ತೀರ್ಮಾನವಾಗಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರ ಕಚೇರಿ, ನಂ–217, ಎರಡನೇ ಮಹಡಿ, ಜಿಲ್ಲಾಡಳಿತ ಭವನ, ಬೀರಸಂದ್ರ, ದೇವನಹಳ್ಳಿ ತಾಲ್ಲೂಕು–562110. ದೂರವಾಣಿ ಸಂಖ್ಯೆ 29787447, ದೇವನಹಳ್ಳಿ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು– 27681784, ದೊಡ್ಡಬಳ್ಳಾಪುರ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು– 27623681, ಹೊಸಕೋಟೆ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು- 27931528, ನೆಲಮಂಗಲ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು– 27723172 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q