ತುಮಕೂರು: ವಿಕಲಚೇತನರ ಹಾಗೂ ಹಿರಿಯನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ವಿಕಲಚೇತನರ ಪುನರ್ವಸತಿ ಯೋಜನೆಯಡಿ ತುಮಕೂರು ತಾಲ್ಲೂಕಿನ ಹೊಳಕಲ್ಲು, ಹೊನ್ನುಡಿಕೆ, ಹಿರೇಹಳ್ಳಿ, ಸೀತಕಲ್ಲು ಮತ್ತು ನೆಲಹಾಳ್ ಈ ಐದು ಗ್ರಾಮ ಪಂಚಾಯಿತಿಗಳು ಹಾಗೂ ತುರುವೇಕೆರೆ ತಾಲ್ಲೂಕಿನ ತಂಡಗ, ಭೈತರಹೊಸಹಳ್ಳಿ, ತಾಳೆಕೆರೆ, ಉಲ್ಲೇಕೆರೆ ಮತ್ತು ಆನೇಕೆರೆ ಸೇರಿದಂತೆ 10 ಗ್ರಾಮ ಪಂಚಾಯಿತಿಗಳಲ್ಲಿ ಖಾಲಿಯಿರುವ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ತಾತ್ಕಾಲಿಕ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.
ಮಾಸಿಕ ರೂ.9000/- ಗಳ ಗೌರವಧನ ಆಧಾರದಲ್ಲಿ ಭರ್ತಿ ಮಾಡಿಕೊಳ್ಳಲಾಗುವುದು. ಸದರಿ ಹುದ್ದೆಗೆ ಶೇ.40ರ ಮೇಲ್ಪಟ್ಟು ಪ್ರಮಾಣವಿರುವ ವಿಕಲಚೇತನ ಅಭ್ಯರ್ಥಿಗಳು, ಎಸ್.ಎಸ್.ಎಲ್.ಸಿ ಉತ್ತೀರ್ಣ 18-45 ವರ್ಷದೊಳಗಿನ ಹಾಗೂ ಅದೇ ಗ್ರಾಮ ಪಂಚಾಯಿತಿಯ ವ್ಯಾಪ್ತಿಯಲ್ಲಿ ವಾಸವಿರುವ ಮತ್ತು ಕಡ್ಡಾಯವಾಗಿ ವಿಕಲಚೇತನರ ವಿಶಿಷ್ಠ ಗುರುತಿನ ಚೀಟಿ (ಯು.ಡಿ.ಐ.ಡಿ) ಹೊಂದಿರುವ ವಿಕಲಚೇತನ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
ಆಸಕ್ತರು ಅರ್ಜಿ ನಮೂನೆಯನ್ನು ತಾಲ್ಲೂಕು ಪಂಚಾಯಿತಿ ಕಾರ್ಯಾಲಯ ತುರುವೇಕೆರೆ ಮತ್ತು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯನಾಗರಿಕರ ಕಲ್ಯಾಣಾಧಿಕಾರಿಗಳ ಕಛೇರಿ, ಎಂ.ಜಿ.ರಸ್ತೆ, ಜಿಲ್ಲಾ ಬಾಲಭವನ ಆವರಣ, ತುಮಕೂರು ಇಲ್ಲಿ ಪಡೆದು ಅವಶ್ಯಕ ದಾಖಲಾತಿಗಳೊಂದಿಗೆ ಆಗಸ್ಟ್ 19ರೊಳಗಾಗಿ ಸಲ್ಲಿಸತಕ್ಕದ್ದು. ಹೆಚ್ಚಿನ ಮಾಹಿತಿಗಾಗಿ ತಾಲ್ಲೂಕು ಎಂ.ಆರ್.ಡಬ್ಲ್ಯೂರವರ ದೂರವಾಣಿ 8073752073 ಮತ್ತು 9741572446 ನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 81233 82149 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA