ನಮ್ಮತುಮಕೂರು ಸುದ್ದಿ, ಮಾಹಿತಿ: ಬೆಂಗಳೂರಿನ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಧೀನದಲ್ಲಿ ಕಾರ್ಯ ನಿರ್ವಹಿಸುತ್ತಿರುವ ತುಮಕೂರು ತಾಲ್ಲೂಕಿನ 4 ಹಾಗೂ ಕೊರಟಗೆರೆ ತಾಲ್ಲೂಕಿನ 5 ವಸತಿ ಶಾಲೆಗಳಲ್ಲಿ 2025-26ನೇ ಸಾಲಿಗೆ 7, 8 ಮತ್ತು 9ನೇ ತರಗತಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ತುಮಕೂರು ತಾಲ್ಲೂಕಿನ ವಸತಿ ಶಾಲೆಗಳು :
ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆ ತಿಮ್ಮಸಂದ್ರ, ಹೆಬ್ಬೂರು(ಪ್ರಾಂಶುಪಾಲರ ಮೊ.ಸಂ.9880056870); ಮೊರಾರ್ಜಿ ದೇಸಾಯಿ ವಸತಿ ಶಾಲೆ, ನರಸಾಪುರ, ಹೆಬ್ಬೂರು(7676672510); ಡಾ: ಬಿ.ಆರ್. ಅಂಬೇಡ್ಕರ್ ವಸತಿ ಶಾಲೆ, ಕೋರಾ(ದೇವರಾಯಪಟ್ಟಣ), ಮೊ.ಸಂ.9901606460); ಕಿತ್ತೂರು ರಣಿ ಚೆನ್ನಮ್ಮ ವಸತಿ ಶಾಲೆ, ಗೂಳೂರು(ಬಡ್ಡಿಹಳ್ಳಿ) ಮೊ.ಸಂ.9591049218).
ಕೊರಟಗೆರೆ ತಾಲ್ಲೂಕಿನ ವಸತಿ ಶಾಲೆಗಳು :
ಮೊರಾರ್ಜಿ ದೇಸಾಯಿ ವಸತಿ ಶಾಲೆ, ರೆಡ್ಡಿಕಟ್ಟೆ ಭಾರೆ(ಮೊ.ಸಂ.9743579508); ಮೊರಾರ್ಜಿ ದೇಸಾಯಿ ವಸತಿ ಶಾಲೆ, ಬೈಚಾಪುರ(ಮೊ.ಸಂ.9164997010); ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆ, ಹೂಲಿಕುಂಟೆ(ಮೊ.ಸಂ.8762639916); ಇಂದಿರಾ ಗಾಂಧಿ ವಸತಿ ಶಾಲೆ ಸಿದ್ದರಬೆಟ್ಟ(ಮೊ.ಸಂ.9972645217); ಡಾ: ಬಿ.ಆರ್. ಅಂಬೇಡ್ಕರ್ ವಸತಿ ಶಾಲೆ, ಕೋಳಾಲ(ಮೊ.ಸಂ.9449239585).
ವಿದ್ಯಾಥಿಗಳು ತುಮಕೂರು ಜಿಲ್ಲೆಯವರಾಗಿರಬೇಕು. ಜಿಲ್ಲೆಯ ಯಾವುದೇ ಸರ್ಕಾರಿ, ಅನುದಾನಿತ/ಅನುದಾನ ರಹಿತ ಶಾಲೆಗಳಲ್ಲಿ ವ್ಯಾಸಂಗ ಮಾಡಿ, ಹಿಂದಿನ ವರ್ಷದ ತರಗತಿಯ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ವಿದ್ಯಾರ್ಥಿಗಳು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1, 2ಎ, 2ಬಿ, 3ಎ, 3ಬಿ ವರ್ಗಕ್ಕೆ ಸೇರಿದವರಾಗಿದ್ದು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1ಕ್ಕೆ ಆದಾಯ ಮಿತಿ 2.50ಲಕ್ಷ ಹಾಗೂ 2ಎ, 2ಬಿ, 3ಎ, 3ಬಿ ವರ್ಗದವರ ಆದಾಯ ಮಿತಿಯನ್ನು 1ಲಕ್ಷ ರೂ.ಗಳೊಳಗಿರಬೇಕು. 9ನೇ ತರಗತಿ ಪ್ರವೇಶ ಬಯಸುವವರು ಹಿಂದಿನ ತರಗತಿಯಲ್ಲಿ ಆಂಗ್ಲ ಮಾಧ್ಯಮದಲ್ಲಿ ವ್ಯಾಸಂಗ ಮಾಡಿರಬೇಕು.
ನಿಗಧಿತ ಅರ್ಜಿ ನಮೂನೆಯನ್ನು ಆಯಾ ತಾಲ್ಲೂಕಿನ ಸಂಬಂಧಿಸಿದ ವಸತಿ ನಿಲಯಗಳಿಂದ ಪಡೆದು ಭರ್ತಿ ಮಾಡಿದ ಅರ್ಜಿಯೊಂದಿಗೆ ಹಿಂದಿನ ವರ್ಷದ ಅಂಕಪಟ್ಟಿ, ಜಾತಿ/ಆದಾಯ ಪ್ರಮಾಣ ಪತ್ರ, ವಿದ್ಯಾರ್ಥಿಯ ಇತ್ತೀಚಿನ 2 ಭಾವಚಿತ್ರ, ವಿದ್ಯಾರ್ಥಿ ಹಾಗೂ ಪೋಷಕರ ಆಧಾರ್ ಕಾರ್ಡ್ ಪ್ರತಿಯನ್ನು ಲಗತ್ತಿಸಿ ಜೂನ್ 12ರೊಳಗಾಗಿ ಆಯಾ ವಸತಿ ನಿಲಯಗಳಿಗೆ ಸಲ್ಲಿಸಬೇಕು.
ಆಯ್ಕೆಯು ಹಿಂದಿನ ತರಗತಿಯಲ್ಲಿ ಪಡೆದ ಅಂಕಗಳನ್ನು ಆಧರಿಸಿ ಮೆರಿಟ್ ಆಧಾರದ ಮೇಲೆ ದಾಖಲಾತಿಯನ್ನು ಮಾಡಿಕೊಳ್ಳಲಾಗುವುದು ಎಂದು ಆಯಾ ತಾಲ್ಲೂಕಿನ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW