ತುಮಕೂರು: ತೋಟಗಾರಿಕೆ ಇಲಾಖೆ ವತಿಯಿಂದ 2025–26ನೇ ಸಾಲಿನ ಕೇಂದ್ರ ಪುರಸ್ಕೃತ ಯೋಜನೆಯಾದ ಕೃಷಿ ವಿಸ್ತರಣೆ ಮತ್ತು ತರಬೇತಿ ಅಭಿಯಾನ ಹಾಗೂ ತೋಟಗಾರಿಕೆಯಲ್ಲಿ ಯಾಂತ್ರೀಕರಣ ಕಾರ್ಯಕ್ರಮದಡಿ ಸಹಾಯಧನ ಸೌಲಭ್ಯ ಕಲ್ಪಿಸಲು ತೋಟಗಾರಿಕೆ ರೈತರು ಹಾಗೂ ಉದ್ದಿಮೆದಾರರಿಂದ ಅರ್ಜಿ ಆಹ್ವಾನಿಸಲಾಗಿದೆ.
ರೈತರಿಗೆ ಅಡಿಕೆ ಸುಲಿಯುವ ಯಂತ್ರ, ದೋಟಿ, ಬ್ರಷ್ಕಟರ್, ಟಿಲ್ಲರ್, ಪವರ್ ವೀಡರ್, ಸ್ಪ್ರೇಯರ್, ರೋಟೋವೇಟರ್, ಡಿಗ್ಗರ್ ಹಾಗೂ ಇತರೆ ಯಂತ್ರಗಳನ್ನು ಖರೀದಿಸಲು ಸಹಾಯಧನ ನೀಡಲಾಗುವುದು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಸಣ್ಣ/ಅತೀ ಸಣ್ಣ ಹಾಗೂ ಮಹಿಳಾ ರೈತರಿಗೆ ಶೇ.50ರಷ್ಟು ಹಾಗೂ ಸಾಮಾನ್ಯ, ಇತರೆ ವರ್ಗದ ರೈತರಿಗೆ ಶೇ. 40ರಷ್ಟು(ಗರಿಷ್ಠ 1.25 ಲಕ್ಷ ಅಥವಾ 5 ಯಂತ್ರೋಪಕರಣ ಮಾತ್ರ) ಸಹಾಯಧನ ನೀಡಲಾಗುವುದು.
ಆಸಕ್ತ ರೈತರು ಹಾಗೂ ಉದ್ದಿಮೆದಾರರು ಭರ್ತಿ ಮಾಡಿದ ಅರ್ಜಿಯೊಂದಿಗೆ ಪಹಣಿ, ಬೆಳೆ ದೃಢೀಕರಣ, ಚೆಕ್ ಬಂದಿ, ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಪುಸ್ತಕ, ಜಾತಿ ಪ್ರಮಾಣ ಪತ್ರ (ಪ.ಜಾತಿ/ಪ.ಪಂಗಡ ರೈತರಿಗೆ) ಜಂಟಿ ಖಾತೆಯಿದ್ದರೆ ಒಪ್ಪಿಗೆ ಪತ್ರ, ಖಾತೆದಾರರ ಮರಣ ಹೊಂದಿದ್ದಲ್ಲಿ ಮರಣ ಪ್ರಮಾಣ ಪತ್ರ, ಮತ್ತಿತರೆ ದಾಖಲೆಗಳನ್ನು ಲಗತ್ತಿಸಿ ಹತ್ತಿರದ ಗ್ರಾಮ ಪಂಚಾಯಿತಿ ಕಚೇರಿ ಅಥವಾ ತಾಲ್ಲೂಕು ಮಟ್ಟದ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿಗೆ ಸಲ್ಲಿಸಬಹುದು.
ಸರ್ಕಾರದಿಂದ ನೀಡಲಾಗುವ ಗುರಿ ಮತ್ತು ಅನುದಾನದ ಆಧಾರದ ಮೇಲೆ ಪಾರದರ್ಶಕವಾಗಿ ಫಲಾನುಭವಿಗಳನ್ನು ಆಯ್ಕೆ ಮಾಡಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿ ತುಮಕೂರು–9686503500, ಗುಬ್ಬಿ–9535781963, ಸಿರಾ–9844042356, ಕುಣಿಗಲ್–9606570210, ತಿಪಟೂರು– 9845014293, ಚಿಕ್ಕನಾಯಕನಹಳ್ಳಿ–9686056705, ಮಧುಗಿರಿ–9916378199, ತುರುವೇಕೆರೆ–9448416334, ಕೊರಟಗೆರೆ–9448001644 ಹಾಗೂ ಪಾವಗಡ–9448448970ಯನ್ನು ಸಂಪರ್ಕಿಸಬಹುದೆಂದು ತೋಟಗಾರಿಕೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW