nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕಬ್ಬಿನ ಟ್ರ್ಯಾಕ್ಟರ್‌ ಗೆ ಕಾರು ಡಿಕ್ಕಿ: ನಾಲ್ವರು ಸಾವು

    December 3, 2025

    ಕಬ್ಬಿನ ತೋಟಕ್ಕೆ ಎಳೆದೊಯ್ದು ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ: ಇಬ್ಬರು ಆರೋಪಿಗಳ ಬಂಧನ

    December 3, 2025

    ರಸ್ತೆ ಅಗಲಿಕರಣ: ಮುಲಾಜಿಲ್ಲದೆ ಅಕ್ರಮ ಕಟ್ಟಡ ತೆರವುಗೊಳಿಸಿ: ಸಿಇಓ ಪ್ರಭು ಜಿ. ಸೂಚನೆ

    December 3, 2025
    Facebook Twitter Instagram
    ಟ್ರೆಂಡಿಂಗ್
    • ಕಬ್ಬಿನ ಟ್ರ್ಯಾಕ್ಟರ್‌ ಗೆ ಕಾರು ಡಿಕ್ಕಿ: ನಾಲ್ವರು ಸಾವು
    • ಕಬ್ಬಿನ ತೋಟಕ್ಕೆ ಎಳೆದೊಯ್ದು ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ: ಇಬ್ಬರು ಆರೋಪಿಗಳ ಬಂಧನ
    • ರಸ್ತೆ ಅಗಲಿಕರಣ: ಮುಲಾಜಿಲ್ಲದೆ ಅಕ್ರಮ ಕಟ್ಟಡ ತೆರವುಗೊಳಿಸಿ: ಸಿಇಓ ಪ್ರಭು ಜಿ. ಸೂಚನೆ
    • ನಕಲಿ ಜಾತಿ ಪ್ರಮಾಣ ಪತ್ರ: ರವೀಂದ್ರ ಸ್ವಾಮಿ ವಿರುದ್ಧ ಅಟ್ರಾಸಿಟಿ ಪ್ರಕರಣ ದಾಖಲಿಸಿ ಗಡೀಪಾರು ಮಾಡಿ: ಮಾರುತಿ ಬೌದ್ಧೆ
    • ಕುರಿಗಾಹಿಯ ಮೇಲೆ ಚಿರತೆ ದಾಳಿ: ಕುರಿ ಮೇಯಿಸಲು ಹೋಗಿದ್ದ ವೇಳೆ ಘಟನೆ
    • ದೀಪೇಶ್ ದೀಪಕ್ ಶೆಣೈಗೆ ಕರ್ನಾಟಕ ಸರ್ಕಾರದ ಪ್ರತಿಷ್ಠಿತ ರಾಜ್ಯ ಮಟ್ಟದ ಹೊಯ್ಸಳ ಶೌರ್ಯ ಪ್ರಶಸ್ತಿ
    • ಮಕ್ಕಳ ಪ್ರತಿಭೆ ಗುರುತಿಸಿ ಪ್ರೋತ್ಸಾಹಿಸಬೇಕು: ಎಸ್ ಡಿಎಂಸಿ ಅಧ್ಯಕ್ಷ ನಾಗೇಂದ್ರ ಕುಮಾರ್
    • ಡಾ.ಜಿ.ಪರಮೇಶ್ವರ್ ಮುಖ್ಯಮಂತ್ರಿಯಾಗಲೆಂದು ವಿಶೇಷ ಪೂಜೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪ್ರತಿ ಮತಗಟ್ಟೆಗೆ ಬಿಎಲ್ ಎಗಳನ್ನು ನೇಮಿಸಿ: ಎಡಿಸಿ
    ತುಮಕೂರು March 19, 2025

    ಪ್ರತಿ ಮತಗಟ್ಟೆಗೆ ಬಿಎಲ್ ಎಗಳನ್ನು ನೇಮಿಸಿ: ಎಡಿಸಿ

    By adminMarch 19, 2025No Comments2 Mins Read
    tumakuru

    ತುಮಕೂರು: ಜಿಲ್ಲೆಯ 11 ವಿಧಾನಸಭಾ ಕ್ಷೇತ್ರಗಳಲ್ಲಿ 2627 ಮತಗಟ್ಟೆಗಳಿದ್ದು, ಪ್ರತಿ ಮತಗಟ್ಟೆಗೂ ಮತಗಟ್ಟೆ ಮಟ್ಟದ ಏಜೆಂಟ್(ಬಿಎಲ್ ಎ)ಗಳನ್ನು ನೇಮಿಸಲು ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಅಪರ ಜಿಲ್ಲಾಧಿಕಾರಿ ಹಾಗೂ ಅಪರ ಜಿಲ್ಲಾ ಚುನಾವಣಾಧಿಕಾರಿ ಡಾ.ಎನ್.ತಿಪ್ಪೇಸ್ವಾಮಿ ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಗೆ ತಿಳಿಸಿದರು.

    ಜಿಲ್ಲಾಧಿಕಾರಿಗಳ ಕಚೇರಿ ನ್ಯಾಯಾಲಯ ಸಭಾಂಗಣದಲ್ಲಿ ಬುಧವಾರ ಮತದಾರರ ಪಟ್ಟಿ ತಯಾರಿಕೆ, ಬಿಎಲ್ ಓಗಳ ನೇಮಕಾತಿ ಹಾಗೂ ಇತರೆ ಚುನಾವಣಾ ವಿಷಯಗಳ ಕುರಿತು ನೋಂದಾಯಿತ/ಮಾನ್ಯತೆ ಪಡೆದ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಚುನಾವಣಾ ಆಯೋಗದ ನಿರ್ದೇಶನದಂತೆ ಮತದಾರರ ಪಟ್ಟಿ ತಯಾರಿಕೆ ಪ್ರಕ್ರಿಯೆಯನ್ನು ಸದೃಢಪಡಿಸುವ ಹಾಗೂ ಯಾವುದೇ ಚುನಾವಣೆಗಳನ್ನು ಪಾರದರ್ಶಕವಾಗಿ ನಡೆಸುವ ಸಂಬಂಧ ಈ ಸಭೆ ನಡೆಸಲಾಗುತ್ತಿದೆ ಎಂದು ತಿಳಿಸಿದರು.


    Provided by
    Provided by

    ಚುನಾವಣೆಗಳಿಗೆ ಸಂಬಂಧಿಸಿದಂತೆ ಮತದಾರರ ಪಟ್ಟಿ ಹಾಗೂ ಇತರೆ ಚುನಾವಣಾ ಮಾಹಿತಿಗಳನ್ನು ಭಾರತ ಚುನಾವಣಾ ಆಯೋಗದ ವೆಬ್ ಸೈಟ್, ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ವೆಬ್ ಸೈಟ್ ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳ ವೆಬ್ ಸೈಟ್ ನಲ್ಲಿ ಕಾಲಕಾಲಕ್ಕೆ ಪ್ರಕಟಿಸಲಾಗುತ್ತಿದ್ದು, ರಾಜಕೀಯ ಪಕ್ಷಗಳು ಸದರಿ ವೆಬ್ ಸೈಟ್ ಗೆ ಭೇಟಿ ನೀಡಿ ಅಗತ್ಯ ಮಾಹಿತಿಯನ್ನು ಪಡೆಯಬಹುದಾಗಿದೆ. ಜಿಲ್ಲೆಯಲ್ಲಿ ಅಂತಿಮ ಮತದಾರರ ಪಟ್ಟಿಯಂತೆ ಒಟ್ಟು 1140384 ಪುರುಷರು, 1165030 ಮಹಿಳೆಯರು ಹಾಗೂ 88 ಇತರೆ ಸೇರಿ ಒಟ್ಟು 2305502 ಮತದಾರರಿದ್ದಾರೆ. ಜಿಲ್ಲೆಯಲ್ಲಿರುವ 2627 ಮತಗಟ್ಟೆಗಳಿಗೆ 276 ಮತಗಟ್ಟೆ ಮಟ್ಟದ ಅಧಿಕಾರಿಗಳ ಮೇಲ್ವಿಚಾರಕರನ್ನು ನೇಮಿಸಲಾಗಿದೆ ಎಂದು ಮಾಹಿತಿ ನೀಡಿದರು.
    ಮತದಾರರ ಗುರುತಿನ ಚೀಟಿಗಾಗಿ ಅರ್ಹರಿಂದ ಸ್ವೀಕೃತವಾದ ಅರ್ಜಿಗಳನ್ನು ನಿಗದಿತ ಅವಧಿಯೊಳಗೆ ವಿಲೇವಾರಿ ಮಾಡಲಾಗುತ್ತಿದ್ದು, ಗುರುತಿನ ಚೀಟಿಗಳನ್ನು ಅಂಚೆ ಮೂಲಕ ಮತದಾರರಿಗೆ ರವಾನಿಸಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಮತದಾರರ ಪಟ್ಟಿ, ಎಪಿಕ್ ಕಾರ್ಡ್, ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿ, ತೆಗೆದುಹಾಕುವುದು, ವರ್ಗಾವಣೆಗಾಗಿ ಅಗತ್ಯ ದಾಖಲೆಗಳೊಂದಿಗೆ ನಿಗಧಿತ ನಮೂನೆಯಲ್ಲಿ ನಿರಂತರವಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಮತದಾರರ ಪಟ್ಟಿ ನೋಂದಣಿಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ 1950ಯನ್ನು ಸಂಪರ್ಕಿಸಬಹುದಾಗಿದೆ ಎಂದು ವಿವರಿಸಿದರು.

    ಬಿಎಲ್ ಓಗಳಿಗೆ ನಿರ್ಧಿಷ್ಟ ಸ್ಥಳ ನಿಗಧಿಪಡಿಸಲು ಸಲಹೆ:

    ಮತಗಟ್ಟೆ ಮಟ್ಟದ ಅಧಿಕಾರಿ(ಬಿಎಲ್ ಓ)ಗಳಿಗೆ ಚುನಾವಣಾ ಕೆಲಸಗಳನ್ನು ನಿರ್ವಹಿಸಲು ಅನುವಾಗುವಂತೆ ಪ್ರತ್ಯೇಕವಾಗಿ ನಿರ್ಧಿಷ್ಟ ಸ್ಥಳ ನಿಗಧಿಪಡಿಸಿ ನೆರಳು, ನೀರು ಸೇರಿದಂತೆ ಅಗತ್ಯ ಮೂಲಸೌಕರ್ಯಗಳನ್ನು ಒದಗಿಸಬೇಕು ಎಂದು ನೋಂದಾಯಿತ ಹಾಗೂ ಮಾನ್ಯತೆ ಪಡೆದ ರಾಜ್ಯ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಸಭೆಗೆ ಸಲಹೆ ನೀಡಿದರು.
    ಸಭೆಯಲ್ಲಿ ಚುನಾವಣಾ ತಹಶೀಲ್ದಾರ್ ರೇಷ್ಮ, ನೋಂದಾಯಿತ ಹಾಗೂ ಮಾನ್ಯತೆ ಪಡೆದ ರಾಜ್ಯ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಸೇರಿದಂತೆ ಮತ್ತಿತರರು ಹಾಜರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

     

    admin
    • Website

    Related Posts

    ಕುರಿಗಾಹಿಯ ಮೇಲೆ ಚಿರತೆ ದಾಳಿ: ಕುರಿ ಮೇಯಿಸಲು ಹೋಗಿದ್ದ ವೇಳೆ ಘಟನೆ

    December 3, 2025

    ಹನುಮ ಜಯಂತಿಯಲ್ಲಿ ಪರಮೇಶ್ವರ್ ಪರ ‘ದಲಿತ ಸಿಎಂ’ ಕೂಗು: 101 ತೆಂಗಿನಕಾಯಿ ಹೊಡೆದು ಪೂಜೆ, ಉರುಳು ಸೇವೆ!

    December 2, 2025

    ಕನ್ನಡ ಸಾಹಿತ್ಯ ಸಮ್ಮೇಳನ: ನೆಲ ಜಲಭಾಷೆ ಕುರಿತಾದ ಸ್ಪರ್ಧೆಗಳಲ್ಲಿ ನೀವೂ ಭಾಗಿಯಾಗಿ!

    December 2, 2025

    Comments are closed.

    Our Picks

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಕಬ್ಬಿನ ಟ್ರ್ಯಾಕ್ಟರ್‌ ಗೆ ಕಾರು ಡಿಕ್ಕಿ: ನಾಲ್ವರು ಸಾವು

    December 3, 2025

    ಜಮಖಂಡಿ: ಬಾಗಲಕೋಟೆ ಜಿಲ್ಲೆಯ ಸಿದ್ದಾಪುರ ಪ್ರಭುಲಿಂಗೇಶ್ವರ ಸಕ್ಕರೆ ಕಾರ್ಖಾನೆ ಹತ್ತಿರ ರಾತ್ರಿ 12.30ಕ್ಕೆ ರಸ್ತೆ ಬದಿ ನಿಲ್ಲಿಸಲಾಗಿದ್ದ ಕಬ್ಬಿನ ಟ್ರ್ಯಾಕ್ಟರ್‌…

    ಕಬ್ಬಿನ ತೋಟಕ್ಕೆ ಎಳೆದೊಯ್ದು ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ: ಇಬ್ಬರು ಆರೋಪಿಗಳ ಬಂಧನ

    December 3, 2025

    ರಸ್ತೆ ಅಗಲಿಕರಣ: ಮುಲಾಜಿಲ್ಲದೆ ಅಕ್ರಮ ಕಟ್ಟಡ ತೆರವುಗೊಳಿಸಿ: ಸಿಇಓ ಪ್ರಭು ಜಿ. ಸೂಚನೆ

    December 3, 2025

    ನಕಲಿ ಜಾತಿ ಪ್ರಮಾಣ ಪತ್ರ: ರವೀಂದ್ರ ಸ್ವಾಮಿ ವಿರುದ್ಧ ಅಟ್ರಾಸಿಟಿ ಪ್ರಕರಣ ದಾಖಲಿಸಿ ಗಡೀಪಾರು ಮಾಡಿ: ಮಾರುತಿ ಬೌದ್ಧೆ

    December 3, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.