nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬೀದಿಬದಿ ವ್ಯಾಪಾರ: ಜನತೆಯೊಂದಿಗೆ ಸೌಜನ್ಯವಿರಲಿ: ಸಂಘದ ಜಿಲ್ಲಾ ಅಧ್ಯಕ್ಷ ಶಂಕರಪ್ಪ

    January 24, 2026

    ಮೊಬೈಲ್ ಬಳಕೆಯಿಂದ ಅಮೂಲ್ಯ ಜೀವನ ಹಾಳು ಮಾಡಿಕೊಳ್ಳಬೇಡಿ: ಸರ್ಕಾರಿ ಅಭಿಯೋಜಕಿ ಕೆ.ಶೋಭಾ

    January 24, 2026

    ಜ.26ರಂದು ಸಂಗೊಳ್ಳಿ ರಾಯಣ್ಣ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಕಾರ್ಯಕ್ರಮ

    January 24, 2026
    Facebook Twitter Instagram
    ಟ್ರೆಂಡಿಂಗ್
    • ಬೀದಿಬದಿ ವ್ಯಾಪಾರ: ಜನತೆಯೊಂದಿಗೆ ಸೌಜನ್ಯವಿರಲಿ: ಸಂಘದ ಜಿಲ್ಲಾ ಅಧ್ಯಕ್ಷ ಶಂಕರಪ್ಪ
    • ಮೊಬೈಲ್ ಬಳಕೆಯಿಂದ ಅಮೂಲ್ಯ ಜೀವನ ಹಾಳು ಮಾಡಿಕೊಳ್ಳಬೇಡಿ: ಸರ್ಕಾರಿ ಅಭಿಯೋಜಕಿ ಕೆ.ಶೋಭಾ
    • ಜ.26ರಂದು ಸಂಗೊಳ್ಳಿ ರಾಯಣ್ಣ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಕಾರ್ಯಕ್ರಮ
    • ಜ.27ರಂದು ಸವಿತಾ ಮಹರ್ಷಿ ಜಯಂತಿ
    • ಒಲಂಪಿಯಾಡ್ ಪರೀಕ್ಷೆ: ವರಿನ್ ವಸತಿ ಶಾಲೆಯ ವಿದ್ಯಾರ್ಥಿಗಳಿಗೆ ಚಿನ್ನದ ಪದಕ
    • ‘ಲ್ಯಾಂಡ್‌ ಲಾರ್ಡ್’ ಸಿನಿಮಾ ಬಿಡುಗಡೆ: ಆಟೋ ಚಾಲಕರಿಂದ ಸಂಭ್ರಮ
    • ಫೆ.22ರಿಂದ ಗುಬ್ಬಿಯಪ್ಪ ಜಾತ್ರಾ ಮಹೋತ್ಸವ: ಪೂರ್ವಭಾವಿ ಸಭೆ
    • ಶ್ರೀ ಚಿಕ್ಕದೇವಮ್ಮನವರ 49ನೇ ವರ್ಷದ ವಿಶೇಷ ಪೂಜಾ ಮಹೋತ್ಸವ, ಪಲ್ಲಕ್ಕಿ ಉತ್ಸವ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪ್ರತಿ ಮತಗಟ್ಟೆಗೆ ಬಿಎಲ್ ಎಗಳನ್ನು ನೇಮಿಸಿ: ಎಡಿಸಿ
    ತುಮಕೂರು March 19, 2025

    ಪ್ರತಿ ಮತಗಟ್ಟೆಗೆ ಬಿಎಲ್ ಎಗಳನ್ನು ನೇಮಿಸಿ: ಎಡಿಸಿ

    By adminMarch 19, 2025No Comments2 Mins Read
    tumakuru

    ತುಮಕೂರು: ಜಿಲ್ಲೆಯ 11 ವಿಧಾನಸಭಾ ಕ್ಷೇತ್ರಗಳಲ್ಲಿ 2627 ಮತಗಟ್ಟೆಗಳಿದ್ದು, ಪ್ರತಿ ಮತಗಟ್ಟೆಗೂ ಮತಗಟ್ಟೆ ಮಟ್ಟದ ಏಜೆಂಟ್(ಬಿಎಲ್ ಎ)ಗಳನ್ನು ನೇಮಿಸಲು ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಅಪರ ಜಿಲ್ಲಾಧಿಕಾರಿ ಹಾಗೂ ಅಪರ ಜಿಲ್ಲಾ ಚುನಾವಣಾಧಿಕಾರಿ ಡಾ.ಎನ್.ತಿಪ್ಪೇಸ್ವಾಮಿ ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಗೆ ತಿಳಿಸಿದರು.

    ಜಿಲ್ಲಾಧಿಕಾರಿಗಳ ಕಚೇರಿ ನ್ಯಾಯಾಲಯ ಸಭಾಂಗಣದಲ್ಲಿ ಬುಧವಾರ ಮತದಾರರ ಪಟ್ಟಿ ತಯಾರಿಕೆ, ಬಿಎಲ್ ಓಗಳ ನೇಮಕಾತಿ ಹಾಗೂ ಇತರೆ ಚುನಾವಣಾ ವಿಷಯಗಳ ಕುರಿತು ನೋಂದಾಯಿತ/ಮಾನ್ಯತೆ ಪಡೆದ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಚುನಾವಣಾ ಆಯೋಗದ ನಿರ್ದೇಶನದಂತೆ ಮತದಾರರ ಪಟ್ಟಿ ತಯಾರಿಕೆ ಪ್ರಕ್ರಿಯೆಯನ್ನು ಸದೃಢಪಡಿಸುವ ಹಾಗೂ ಯಾವುದೇ ಚುನಾವಣೆಗಳನ್ನು ಪಾರದರ್ಶಕವಾಗಿ ನಡೆಸುವ ಸಂಬಂಧ ಈ ಸಭೆ ನಡೆಸಲಾಗುತ್ತಿದೆ ಎಂದು ತಿಳಿಸಿದರು.


    Provided by
    Provided by

    ಚುನಾವಣೆಗಳಿಗೆ ಸಂಬಂಧಿಸಿದಂತೆ ಮತದಾರರ ಪಟ್ಟಿ ಹಾಗೂ ಇತರೆ ಚುನಾವಣಾ ಮಾಹಿತಿಗಳನ್ನು ಭಾರತ ಚುನಾವಣಾ ಆಯೋಗದ ವೆಬ್ ಸೈಟ್, ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ವೆಬ್ ಸೈಟ್ ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳ ವೆಬ್ ಸೈಟ್ ನಲ್ಲಿ ಕಾಲಕಾಲಕ್ಕೆ ಪ್ರಕಟಿಸಲಾಗುತ್ತಿದ್ದು, ರಾಜಕೀಯ ಪಕ್ಷಗಳು ಸದರಿ ವೆಬ್ ಸೈಟ್ ಗೆ ಭೇಟಿ ನೀಡಿ ಅಗತ್ಯ ಮಾಹಿತಿಯನ್ನು ಪಡೆಯಬಹುದಾಗಿದೆ. ಜಿಲ್ಲೆಯಲ್ಲಿ ಅಂತಿಮ ಮತದಾರರ ಪಟ್ಟಿಯಂತೆ ಒಟ್ಟು 1140384 ಪುರುಷರು, 1165030 ಮಹಿಳೆಯರು ಹಾಗೂ 88 ಇತರೆ ಸೇರಿ ಒಟ್ಟು 2305502 ಮತದಾರರಿದ್ದಾರೆ. ಜಿಲ್ಲೆಯಲ್ಲಿರುವ 2627 ಮತಗಟ್ಟೆಗಳಿಗೆ 276 ಮತಗಟ್ಟೆ ಮಟ್ಟದ ಅಧಿಕಾರಿಗಳ ಮೇಲ್ವಿಚಾರಕರನ್ನು ನೇಮಿಸಲಾಗಿದೆ ಎಂದು ಮಾಹಿತಿ ನೀಡಿದರು.
    ಮತದಾರರ ಗುರುತಿನ ಚೀಟಿಗಾಗಿ ಅರ್ಹರಿಂದ ಸ್ವೀಕೃತವಾದ ಅರ್ಜಿಗಳನ್ನು ನಿಗದಿತ ಅವಧಿಯೊಳಗೆ ವಿಲೇವಾರಿ ಮಾಡಲಾಗುತ್ತಿದ್ದು, ಗುರುತಿನ ಚೀಟಿಗಳನ್ನು ಅಂಚೆ ಮೂಲಕ ಮತದಾರರಿಗೆ ರವಾನಿಸಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಮತದಾರರ ಪಟ್ಟಿ, ಎಪಿಕ್ ಕಾರ್ಡ್, ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿ, ತೆಗೆದುಹಾಕುವುದು, ವರ್ಗಾವಣೆಗಾಗಿ ಅಗತ್ಯ ದಾಖಲೆಗಳೊಂದಿಗೆ ನಿಗಧಿತ ನಮೂನೆಯಲ್ಲಿ ನಿರಂತರವಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಮತದಾರರ ಪಟ್ಟಿ ನೋಂದಣಿಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ 1950ಯನ್ನು ಸಂಪರ್ಕಿಸಬಹುದಾಗಿದೆ ಎಂದು ವಿವರಿಸಿದರು.

    ಬಿಎಲ್ ಓಗಳಿಗೆ ನಿರ್ಧಿಷ್ಟ ಸ್ಥಳ ನಿಗಧಿಪಡಿಸಲು ಸಲಹೆ:

    ಮತಗಟ್ಟೆ ಮಟ್ಟದ ಅಧಿಕಾರಿ(ಬಿಎಲ್ ಓ)ಗಳಿಗೆ ಚುನಾವಣಾ ಕೆಲಸಗಳನ್ನು ನಿರ್ವಹಿಸಲು ಅನುವಾಗುವಂತೆ ಪ್ರತ್ಯೇಕವಾಗಿ ನಿರ್ಧಿಷ್ಟ ಸ್ಥಳ ನಿಗಧಿಪಡಿಸಿ ನೆರಳು, ನೀರು ಸೇರಿದಂತೆ ಅಗತ್ಯ ಮೂಲಸೌಕರ್ಯಗಳನ್ನು ಒದಗಿಸಬೇಕು ಎಂದು ನೋಂದಾಯಿತ ಹಾಗೂ ಮಾನ್ಯತೆ ಪಡೆದ ರಾಜ್ಯ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಸಭೆಗೆ ಸಲಹೆ ನೀಡಿದರು.
    ಸಭೆಯಲ್ಲಿ ಚುನಾವಣಾ ತಹಶೀಲ್ದಾರ್ ರೇಷ್ಮ, ನೋಂದಾಯಿತ ಹಾಗೂ ಮಾನ್ಯತೆ ಪಡೆದ ರಾಜ್ಯ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಸೇರಿದಂತೆ ಮತ್ತಿತರರು ಹಾಜರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

     

    admin
    • Website

    Related Posts

    ಜ.26ರಂದು ಸಂಗೊಳ್ಳಿ ರಾಯಣ್ಣ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಕಾರ್ಯಕ್ರಮ

    January 24, 2026

    ಜ.27ರಂದು ಸವಿತಾ ಮಹರ್ಷಿ ಜಯಂತಿ

    January 24, 2026

    ಒಲಂಪಿಯಾಡ್ ಪರೀಕ್ಷೆ: ವರಿನ್ ವಸತಿ ಶಾಲೆಯ ವಿದ್ಯಾರ್ಥಿಗಳಿಗೆ ಚಿನ್ನದ ಪದಕ

    January 24, 2026

    Comments are closed.

    Our Picks

    ಆರ್ಡರ್ ಮಾಡಿದ್ದು ಕಸ್ಟಮರ್.. ಆದ್ರೆ ಹೊಟ್ಟೆ ತುಂಬಿದ್ದು ಡೆಲಿವರಿ ಬಾಯ್ ಗೆ! ರಾತ್ರಿ 2:30ಕ್ಕೆ ನಡೆದ ‘ಬಿರಿಯಾನಿ’ ಪುರಾಣ

    January 17, 2026

    EPF ರಿಟರ್ನ್ ಸಲ್ಲಿಕೆಗೆ ಜನವರಿ 20ರವರೆಗೆ ಅವಧಿ ವಿಸ್ತರಣೆ

    January 17, 2026

    ಶಬರಿಮಲೆಯಲ್ಲಿ ಇಂದು ಮಕರ ಜ್ಯೋತಿ ದರ್ಶನ: ಅಯ್ಯಪ್ಪನ ಕಣ್ತುಂಬಿಕೊಳ್ಳಲು ಭಕ್ತರ ಸಾಗರ, ಕ್ಷಣಗಣನೆ ಆರಂಭ

    January 14, 2026

    ಆರ್‌ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

    December 25, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುರುವೇಕೆರೆ

    ಬೀದಿಬದಿ ವ್ಯಾಪಾರ: ಜನತೆಯೊಂದಿಗೆ ಸೌಜನ್ಯವಿರಲಿ: ಸಂಘದ ಜಿಲ್ಲಾ ಅಧ್ಯಕ್ಷ ಶಂಕರಪ್ಪ

    January 24, 2026

    ತುರುವೇಕೆರೆ: ಕರ್ನಾಟಕ ಪ್ರದೇಶ ಬೀದಿ ಬದಿ ವ್ಯಾಪಾರಿಗಳ ಒಕ್ಕೂಟ ತುರುವೇಕೆರೆ ಘಟಕದ ವತಿಯಿಂದ ರಾಷ್ಟ್ರೀಯ ಬೀದಿ ಬದಿ ವ್ಯಾಪಾರಿಗಳ ದಿನಾಚರಣೆ…

    ಮೊಬೈಲ್ ಬಳಕೆಯಿಂದ ಅಮೂಲ್ಯ ಜೀವನ ಹಾಳು ಮಾಡಿಕೊಳ್ಳಬೇಡಿ: ಸರ್ಕಾರಿ ಅಭಿಯೋಜಕಿ ಕೆ.ಶೋಭಾ

    January 24, 2026

    ಜ.26ರಂದು ಸಂಗೊಳ್ಳಿ ರಾಯಣ್ಣ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಕಾರ್ಯಕ್ರಮ

    January 24, 2026

    ಜ.27ರಂದು ಸವಿತಾ ಮಹರ್ಷಿ ಜಯಂತಿ

    January 24, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.