nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕಾರವಾರ:  ಅಬಕಾರಿ ಇಲಾಖೆಯಿಂದ 90 ಲಕ್ಷ ಮೌಲ್ಯದ ಮದ್ಯಸಾರ, ವಾಹನ ವಶ

    February 26, 2026

    ಕಾರವಾರ:  ಜನಗಣತಿ ಕಾರ್ಯ ಜವಾಬ್ದಾರಿಯಿಂದ ನಿರ್ವಹಿಸಿ: ಜಿಲ್ಲಾಧಿಕಾರಿ

    February 26, 2026

    ಧಾರವಾಡ: ಜಿಲ್ಲಾಮಟ್ಟದ 12 ನೇ ಜನತಾ ದರ್ಶನ,  ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಿದ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್

    February 26, 2026
    Facebook Twitter Instagram
    ಟ್ರೆಂಡಿಂಗ್
    • ಕಾರವಾರ:  ಅಬಕಾರಿ ಇಲಾಖೆಯಿಂದ 90 ಲಕ್ಷ ಮೌಲ್ಯದ ಮದ್ಯಸಾರ, ವಾಹನ ವಶ
    • ಕಾರವಾರ:  ಜನಗಣತಿ ಕಾರ್ಯ ಜವಾಬ್ದಾರಿಯಿಂದ ನಿರ್ವಹಿಸಿ: ಜಿಲ್ಲಾಧಿಕಾರಿ
    • ಧಾರವಾಡ: ಜಿಲ್ಲಾಮಟ್ಟದ 12 ನೇ ಜನತಾ ದರ್ಶನ,  ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಿದ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್
    • ಬಳ್ಳಾರಿ:   ಮಾ.1 ರಂದು ಶ್ರೀ ಜಗದ್ಗುರು ರೇಣುಕಾಚಾರ್ಯರ ಜಯಂತಿ ಕಾರ್ಯಕ್ರಮ
    • ಬಳ್ಳಾರಿ: ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದ ಸಂಸದ ಈ.ತುಕಾರಾಮ್
    • ಬಳ್ಳಾರಿ: ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಿದರೆ ಜನರ ಅಭಿವೃದ್ಧಿ ಸಾಧ್ಯ: ಸಂಸದ ಈ.ತುಕಾರಾಮ್
    • ಗಿರೀಶ್ ಹೆಚ್.ಎನ್. ಅವರಿಗೆ ರಾಜ್ಯಪಾಲರಿಂದ ಡಾಕ್ಟರೇಟ್ ಪದವಿ ಪ್ರಧಾನ
    • ಶಿವಮೊಗ್ಗದಲ್ಲಿ ಶಾಲಾ ಬಾಲಕನ ಭೀಕರ ಹತ್ಯೆ: 7 ಅಪ್ರಾಪ್ತರ ಬಂಧನ, 15 ಲಕ್ಷ ರೂ. ಪರಿಹಾರ ಘೋಷಣೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಏ.12ರಂದು ರಾಮನಗರದಿಂದ ಜನತಾ ಜಲಧಾರೆಗೆ ಚಾಲನೆ
    ರಾಜ್ಯ ಸುದ್ದಿ April 11, 2022

    ಏ.12ರಂದು ರಾಮನಗರದಿಂದ ಜನತಾ ಜಲಧಾರೆಗೆ ಚಾಲನೆ

    By adminApril 11, 2022No Comments2 Mins Read
    jaladhare

    ಜಲಶ್ಯಾಮಲದಿಂದ ಸಸ್ಯಶಾಮಲ ಎಂಬ ಧ್ಯೇಯದೊಂದಿಗೆ ಜೆಡಿಎಸ್ ಹಮ್ಮಿಕೊಳ್ಳಲಿರುವ ಮಹತ್ವದ ಜನತಾ ಜಲಧಾರೆ ಕಾರ್ಯಕ್ರಮದ ಸಿದ್ಧತೆ ಪೂರ್ಣ ಗೊಂಡಿದ್ದು, ಏ.12ರಂದು ರಾಮನಗರದ ಚಾಮುಂಡೇಶ್ವರಿ ದೇವಾಲಯದಲ್ಲಿ ಚಾಲನೆ ನೀಡಲಾಗುತ್ತದೆ.

    ಚಾಮುಂಡೇಶ್ವರಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಮಾಜಿ ಪ್ರಧಾನಿ ಎಚ್.ಡಿ.ದೇವೇ ಗೌಡರು ಜನತಾ ಜಲಧಾರೆ ಯಾತ್ರಾ ರಥಗಳಿಗೆ ಚಾಲನೆ ನೀಡಲಿದ್ದಾರೆ.


    Provided by
    Provided by

    ಬೆಂಗಳೂರು ನಗರ, ಗ್ರಾಮಾಂತರ, ರಾಮನಗರ, ಮಂಡ್ಯ, ತುಮಕೂರು ಜಿಲ್ಲೆಯ ಜೆಡಿಎಸ್ ಜಿಲ್ಲಾಧ್ಯಕ್ಷರು, ಸಂಸದರು, ಮಾಜಿ ಸಂಸದರು, ಶಾಸಕರು, ಮಾಜಿ ಸಚಿವರು, ಶಾಸಕರು ಮುಂಬರುವ 2023ರ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳು ಹಾಗೂ ಪಕ್ಷದ ಮುಖಂಡರು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

    ವಿಶೇಷವಾಗಿ ವಿನ್ಯಾಸಗೊಳಿಸಿರುವ 15 ಗಂಗಾರಥಗಳು 31 ಜಿಲ್ಲೆಗಳ 184 ವಿಧಾನಸಭಾ ಕ್ಷೇತ್ರಗಳಲ್ಲಿ ಸಂಚರಿಸಲಿವೆ. ರಾಮನಗರದಿಂದ ವಿವಿಧ ಜಿಲ್ಲೆಗಳಿಗೆ ತೆರಳುವ ರಥಗಳು ಏ.16ರಂದು ನಿಗದಿ ಮಾಡಿರುವ ಸ್ಥಳಗಳಲ್ಲಿ ಜಲಸಂಗ್ರಹ ಮಾಡಲಿವೆ.15 ನದಿಗಳಿಂದ ಏಕಕಾಲದಲ್ಲಿ ಪವಿತ್ರ ಜಲವನ್ನು ಸಂಗ್ರಹ ಮಾಡಲಾಗುತ್ತದೆ. ಔರಾದ್ ತಾಲ್ಲೂಕಿನ ಮಾಂಜ್ರಾ, ಆಲಮಟ್ಟಿ , ತುಂಗಭದ್ರಾ ಅಣೆಕಟ್ಟೆ, ಕೆಆರ್ ಎಸ್, ಕಬಿನಿ, ಎತ್ತಿನ ಹೊಳೆ, ಮೇಕೆದಾಟು, ವಿಧುರಾಶ್ವತ್ಥ, ಕಾಳಿನದಿ, ಭಾಗಮಂಡಲ, ಸೌಪರ್ಣಿಕಾ, ರಾಮದೇವರ ಕಟ್ಟೆ, ಕಣಕುಂಬಿ, ಸೊನ್ನಭೀಮ ಬ್ರಿಡ್ಜ್ ಕಂ ಬ್ಯಾರೇಜ್‍ನಲ್ಲಿ ಜಲವನ್ನು ಸಂಗ್ರಹಿಸಲಾಗುತ್ತದೆ. ನದಿನೀರಿನ ಸದ್ಬಳಕೆ, ಜಲಾ ಶಯಗಳ ಅಭಿವೃದ್ಧಿ, ನೀರಾವರಿ ಯೋಜನೆಗಳ ವೇಗ ಹೆಚಚಿಸುವುದು, ಪ್ರತಿ ಜಿಲ್ಲೆಯಲ್ಲೂ ನೀರಿನ ಸಮಾನತೆ ಸೇರಿದಂತೆ ವಿವಿಧ ಆಶಯಗಳನ್ನು ಜನತಾ ಜಲಧಾರೆ ಹೊಂದಿದೆ. ಜನತಾ ಜಲಧಾರೆ ರಥ ಸಂಚರಿಸುವ ಮಾರ್ಗದಲ್ಲಿ ರಾಜ್ಯದ ನೀರಾವರಿ ಯೋಜನೆಗಳ ವಿಚಾರದಲ್ಲಿ ಸರ್ಕಾರಗಳ ವೈಫಲ್ಯ ಹಾಗೂ ಜೆಡಿಎಸ್ ಅಕಾರಕ್ಕೆ ಬಂದರೆ ಅನುಷ್ಠಾನ ಮಾಡುವ ಭರವಸೆ ಯೊಂದಿಗೆ ಪ್ರಚಾರ ಮಾಡಲಾಗುತ್ತದೆ. ಪ್ರತಿ ರಥಕ್ಕೂ ಜೆಡಿಎಸ್‍ ನ ಒಬ್ಬರು ನಾಯಕರು ಸಾರಥ್ಯ ವಹಿಸುವರು. 15 ನದಿಗಳಿಂದ ಕಳಶಗಳ ಮೂಲಕ ಜಲವನ್ನು ಸಂಗ್ರಹಿಸಿ ಮೆರವಣಿಗೆ ಮೂಲಕ ಬೆಂಗಳೂರಿಗೆ ತರಲಾಗುತ್ತದೆ. ಈ ರೀತಿ ತಂದ ಜಲವನ್ನು ಬ್ರಹ್ಮಕಳಶದಲ್ಲಿ ಸಂಗ್ರಹಿಸಿ ಜೆಡಿಎಸ್ ಕಚೇರಿಯಲ್ಲಿ ಪ್ರತಿಷ್ಠಾಪನೆ ಮಾಡಿ ಒಂದು ವರ್ಷ ಕಾಲ ಬೆಳಗ್ಗೆ, ಸಂಜೆ ಗಂಗಾಪೂಜೆ ಮಾಡಲಾಗುತ್ತದೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ.

    ಮೇ 8ರಂದು ಅರಮನೆ ಮೈದಾನದಲ್ಲಿ ದೊಡ್ಡ ಸಮಾವೇಶ ಮಾಡಿ ನೀರಾವರಿ ಯೋಜನೆಗಳ ಜಾರಿ ಬಗ್ಗೆ ಸಂಕಲ್ಪ ಮಾಡಲಾಗುತ್ತದೆ. ಕಳೆದ 75 ವರ್ಷಗಳಿಂದ ನೀರಾವರಿ ಯೋಜನೆ ವಿಚಾರದಲ್ಲಿ ಆಗಿರುವ ಅನ್ಯಾಯವನ್ನು ಜೆಡಿಎಸ್‍ಗೆ ಅಕಾರ ಕೊಟ್ಟ ಐದೇ ವರ್ಷದಲ್ಲಿ ಸರಿಪಡಿಸಲಾಗುವುದು ಎಂಬ ಭರವಸೆಯನ್ನು ಈಗಾಗಲೇ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ನೀಡಿದ್ದಾರೆ.

    ವರದಿ: ಆಂಟೋನಿ

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಶಿವಮೊಗ್ಗದಲ್ಲಿ ಶಾಲಾ ಬಾಲಕನ ಭೀಕರ ಹತ್ಯೆ: 7 ಅಪ್ರಾಪ್ತರ ಬಂಧನ, 15 ಲಕ್ಷ ರೂ. ಪರಿಹಾರ ಘೋಷಣೆ

    February 25, 2026

    ಕರ್ನಾಟಕದಲ್ಲಿ ಕಂದಾಯ ಕ್ರಾಂತಿ: ಇನ್ನು ಮುಂದೆ ‘ಸ್ವಯಂ ಚಾಲಿತ ಮ್ಯುಟೇಷನ್’ ವ್ಯವಸ್ಥೆ ಜಾರಿ: ಸಚಿವ ಕೃಷ್ಣಬೈರೇಗೌಡ ಹೇಳಿದ್ದೇನು?

    February 25, 2026

    ಅಗ್ನಿಶಾಮಕ ಇಲಾಖೆಯಲ್ಲಿ ಶೀಘ್ರವೇ 1,600 ಹುದ್ದೆಗಳ ಭರ್ತಿ: ಗೃಹ ಸಚಿವ ಡಾ.ಜಿ.ಪರಮೇಶ್ವರ ಘೋಷಣೆ

    February 25, 2026

    Leave A Reply Cancel Reply

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಕಾರವಾರ:  ಅಬಕಾರಿ ಇಲಾಖೆಯಿಂದ 90 ಲಕ್ಷ ಮೌಲ್ಯದ ಮದ್ಯಸಾರ, ವಾಹನ ವಶ

    February 26, 2026

    ಕಾರವಾರ: ಜೊಯಿಡಾ ತಾಲೂಕಿನ ರಾಮನಗರದಲ್ಲಿರುವ ಧಾರವಾಡ–ಗೋವಾ ರಾಷ್ಟ್ರೀಯ ಹೆದ್ದಾರಿಯ ಟೋಲ್ ಗೇಟ್ ಬಳಿ ಒಂದು ಟಾಟಾ ಕಂಪನಿಯ ಟ್ಯಾಂಕರ್ ನೋಂದಣಿ…

    ಕಾರವಾರ:  ಜನಗಣತಿ ಕಾರ್ಯ ಜವಾಬ್ದಾರಿಯಿಂದ ನಿರ್ವಹಿಸಿ: ಜಿಲ್ಲಾಧಿಕಾರಿ

    February 26, 2026

    ಧಾರವಾಡ: ಜಿಲ್ಲಾಮಟ್ಟದ 12 ನೇ ಜನತಾ ದರ್ಶನ,  ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಿದ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್

    February 26, 2026

    ಬಳ್ಳಾರಿ:   ಮಾ.1 ರಂದು ಶ್ರೀ ಜಗದ್ಗುರು ರೇಣುಕಾಚಾರ್ಯರ ಜಯಂತಿ ಕಾರ್ಯಕ್ರಮ

    February 26, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.