nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬೀದರ್: ಸಾರಿಗೆ ಬಸ್ ಪಲ್ಟಿ, ಇಬ್ಬರಿಗೆ ಗಾಯ; ತಪ್ಪಿದ ಭಾರೀ ಅನಾಹುತ

    May 21, 2025

    ತುಮಕೂರು: ಪ್ರಾದೇಶಿಕ ಅಸಮತೋಲನ ನಿವಾರಣೆಗಾಗಿ 37,661 ಕೋಟಿ ರೂ. ಬಿಡುಗಡೆ

    May 21, 2025

    ಸೂಟ್‌ ಕೇಸ್ ನಲ್ಲಿ ಯುವತಿಯ ಮೃತದೇಹ ಪತ್ತೆ

    May 21, 2025
    Facebook Twitter Instagram
    ಟ್ರೆಂಡಿಂಗ್
    • ಬೀದರ್: ಸಾರಿಗೆ ಬಸ್ ಪಲ್ಟಿ, ಇಬ್ಬರಿಗೆ ಗಾಯ; ತಪ್ಪಿದ ಭಾರೀ ಅನಾಹುತ
    • ತುಮಕೂರು: ಪ್ರಾದೇಶಿಕ ಅಸಮತೋಲನ ನಿವಾರಣೆಗಾಗಿ 37,661 ಕೋಟಿ ರೂ. ಬಿಡುಗಡೆ
    • ಸೂಟ್‌ ಕೇಸ್ ನಲ್ಲಿ ಯುವತಿಯ ಮೃತದೇಹ ಪತ್ತೆ
    • ರಾಜ್ಯದಿಂದ ಆಂಧ್ರಪ್ರದೇಶಕ್ಕೆ 6 ಕುಮ್ಕಿ ಆನೆಗಳ ಹಸ್ತಾಂತರ
    • ಡಾ.ಜಿ.ಪರಮೇಶ್ವರ್ ಒಡೆತನ ಸಿದ್ಧಾರ್ಥ ಶಿಕ್ಷಣ ಸಂಸ್ಥೆ ಮೇಲೆ ಇಡಿ ದಾಳಿ
    • ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲೆ: 1ರಿಂದ 5ನೇ ತರಗತಿಗೆ ಅರ್ಜಿ ಆಹ್ವಾನ
    • ಅಪ್ರೆಂಟಿಸ್ ತರಬೇತಿಗಾಗಿ ಅರ್ಜಿ ಆಹ್ವಾನ
    • ಬಿಜೆಪಿಯಲ್ಲಿ ಮತ್ತೆ ಆರಂಭವಾಯ್ತಾ ಮುಸುಕಿನ ಗುದ್ದಾಟ?
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಏ.12ರಂದು ರಾಮನಗರದಿಂದ ಜನತಾ ಜಲಧಾರೆಗೆ ಚಾಲನೆ
    ರಾಜ್ಯ ಸುದ್ದಿ April 11, 2022

    ಏ.12ರಂದು ರಾಮನಗರದಿಂದ ಜನತಾ ಜಲಧಾರೆಗೆ ಚಾಲನೆ

    By adminApril 11, 2022No Comments2 Mins Read
    jaladhare

    ಜಲಶ್ಯಾಮಲದಿಂದ ಸಸ್ಯಶಾಮಲ ಎಂಬ ಧ್ಯೇಯದೊಂದಿಗೆ ಜೆಡಿಎಸ್ ಹಮ್ಮಿಕೊಳ್ಳಲಿರುವ ಮಹತ್ವದ ಜನತಾ ಜಲಧಾರೆ ಕಾರ್ಯಕ್ರಮದ ಸಿದ್ಧತೆ ಪೂರ್ಣ ಗೊಂಡಿದ್ದು, ಏ.12ರಂದು ರಾಮನಗರದ ಚಾಮುಂಡೇಶ್ವರಿ ದೇವಾಲಯದಲ್ಲಿ ಚಾಲನೆ ನೀಡಲಾಗುತ್ತದೆ.

    ಚಾಮುಂಡೇಶ್ವರಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಮಾಜಿ ಪ್ರಧಾನಿ ಎಚ್.ಡಿ.ದೇವೇ ಗೌಡರು ಜನತಾ ಜಲಧಾರೆ ಯಾತ್ರಾ ರಥಗಳಿಗೆ ಚಾಲನೆ ನೀಡಲಿದ್ದಾರೆ.


    Provided by

    ಬೆಂಗಳೂರು ನಗರ, ಗ್ರಾಮಾಂತರ, ರಾಮನಗರ, ಮಂಡ್ಯ, ತುಮಕೂರು ಜಿಲ್ಲೆಯ ಜೆಡಿಎಸ್ ಜಿಲ್ಲಾಧ್ಯಕ್ಷರು, ಸಂಸದರು, ಮಾಜಿ ಸಂಸದರು, ಶಾಸಕರು, ಮಾಜಿ ಸಚಿವರು, ಶಾಸಕರು ಮುಂಬರುವ 2023ರ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳು ಹಾಗೂ ಪಕ್ಷದ ಮುಖಂಡರು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

    ವಿಶೇಷವಾಗಿ ವಿನ್ಯಾಸಗೊಳಿಸಿರುವ 15 ಗಂಗಾರಥಗಳು 31 ಜಿಲ್ಲೆಗಳ 184 ವಿಧಾನಸಭಾ ಕ್ಷೇತ್ರಗಳಲ್ಲಿ ಸಂಚರಿಸಲಿವೆ. ರಾಮನಗರದಿಂದ ವಿವಿಧ ಜಿಲ್ಲೆಗಳಿಗೆ ತೆರಳುವ ರಥಗಳು ಏ.16ರಂದು ನಿಗದಿ ಮಾಡಿರುವ ಸ್ಥಳಗಳಲ್ಲಿ ಜಲಸಂಗ್ರಹ ಮಾಡಲಿವೆ.15 ನದಿಗಳಿಂದ ಏಕಕಾಲದಲ್ಲಿ ಪವಿತ್ರ ಜಲವನ್ನು ಸಂಗ್ರಹ ಮಾಡಲಾಗುತ್ತದೆ. ಔರಾದ್ ತಾಲ್ಲೂಕಿನ ಮಾಂಜ್ರಾ, ಆಲಮಟ್ಟಿ , ತುಂಗಭದ್ರಾ ಅಣೆಕಟ್ಟೆ, ಕೆಆರ್ ಎಸ್, ಕಬಿನಿ, ಎತ್ತಿನ ಹೊಳೆ, ಮೇಕೆದಾಟು, ವಿಧುರಾಶ್ವತ್ಥ, ಕಾಳಿನದಿ, ಭಾಗಮಂಡಲ, ಸೌಪರ್ಣಿಕಾ, ರಾಮದೇವರ ಕಟ್ಟೆ, ಕಣಕುಂಬಿ, ಸೊನ್ನಭೀಮ ಬ್ರಿಡ್ಜ್ ಕಂ ಬ್ಯಾರೇಜ್‍ನಲ್ಲಿ ಜಲವನ್ನು ಸಂಗ್ರಹಿಸಲಾಗುತ್ತದೆ. ನದಿನೀರಿನ ಸದ್ಬಳಕೆ, ಜಲಾ ಶಯಗಳ ಅಭಿವೃದ್ಧಿ, ನೀರಾವರಿ ಯೋಜನೆಗಳ ವೇಗ ಹೆಚಚಿಸುವುದು, ಪ್ರತಿ ಜಿಲ್ಲೆಯಲ್ಲೂ ನೀರಿನ ಸಮಾನತೆ ಸೇರಿದಂತೆ ವಿವಿಧ ಆಶಯಗಳನ್ನು ಜನತಾ ಜಲಧಾರೆ ಹೊಂದಿದೆ. ಜನತಾ ಜಲಧಾರೆ ರಥ ಸಂಚರಿಸುವ ಮಾರ್ಗದಲ್ಲಿ ರಾಜ್ಯದ ನೀರಾವರಿ ಯೋಜನೆಗಳ ವಿಚಾರದಲ್ಲಿ ಸರ್ಕಾರಗಳ ವೈಫಲ್ಯ ಹಾಗೂ ಜೆಡಿಎಸ್ ಅಕಾರಕ್ಕೆ ಬಂದರೆ ಅನುಷ್ಠಾನ ಮಾಡುವ ಭರವಸೆ ಯೊಂದಿಗೆ ಪ್ರಚಾರ ಮಾಡಲಾಗುತ್ತದೆ. ಪ್ರತಿ ರಥಕ್ಕೂ ಜೆಡಿಎಸ್‍ ನ ಒಬ್ಬರು ನಾಯಕರು ಸಾರಥ್ಯ ವಹಿಸುವರು. 15 ನದಿಗಳಿಂದ ಕಳಶಗಳ ಮೂಲಕ ಜಲವನ್ನು ಸಂಗ್ರಹಿಸಿ ಮೆರವಣಿಗೆ ಮೂಲಕ ಬೆಂಗಳೂರಿಗೆ ತರಲಾಗುತ್ತದೆ. ಈ ರೀತಿ ತಂದ ಜಲವನ್ನು ಬ್ರಹ್ಮಕಳಶದಲ್ಲಿ ಸಂಗ್ರಹಿಸಿ ಜೆಡಿಎಸ್ ಕಚೇರಿಯಲ್ಲಿ ಪ್ರತಿಷ್ಠಾಪನೆ ಮಾಡಿ ಒಂದು ವರ್ಷ ಕಾಲ ಬೆಳಗ್ಗೆ, ಸಂಜೆ ಗಂಗಾಪೂಜೆ ಮಾಡಲಾಗುತ್ತದೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ.

    ಮೇ 8ರಂದು ಅರಮನೆ ಮೈದಾನದಲ್ಲಿ ದೊಡ್ಡ ಸಮಾವೇಶ ಮಾಡಿ ನೀರಾವರಿ ಯೋಜನೆಗಳ ಜಾರಿ ಬಗ್ಗೆ ಸಂಕಲ್ಪ ಮಾಡಲಾಗುತ್ತದೆ. ಕಳೆದ 75 ವರ್ಷಗಳಿಂದ ನೀರಾವರಿ ಯೋಜನೆ ವಿಚಾರದಲ್ಲಿ ಆಗಿರುವ ಅನ್ಯಾಯವನ್ನು ಜೆಡಿಎಸ್‍ಗೆ ಅಕಾರ ಕೊಟ್ಟ ಐದೇ ವರ್ಷದಲ್ಲಿ ಸರಿಪಡಿಸಲಾಗುವುದು ಎಂಬ ಭರವಸೆಯನ್ನು ಈಗಾಗಲೇ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ನೀಡಿದ್ದಾರೆ.

    ವರದಿ: ಆಂಟೋನಿ

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಸೂಟ್‌ ಕೇಸ್ ನಲ್ಲಿ ಯುವತಿಯ ಮೃತದೇಹ ಪತ್ತೆ

    May 21, 2025

    ರಾಜ್ಯದಿಂದ ಆಂಧ್ರಪ್ರದೇಶಕ್ಕೆ 6 ಕುಮ್ಕಿ ಆನೆಗಳ ಹಸ್ತಾಂತರ

    May 21, 2025

    ಭಾರೀ ಮಳೆಗೆ ಮನೆ ಮೇಲೆ ಗೋಡೆ ಕುಸಿದು ಮಹಿಳೆ ಸಾವು

    May 19, 2025
    Our Picks

    ಆಂಧ್ರಪ್ರದೇಶ ಕರ್ನೂಲ್ ಬಳಿ ಭೀಕರ ಅಪಘಾತ: ತುಮಕೂರು ಮೂಲದ ಮೂವರು ಸಾವು

    May 19, 2025

    ನ್ಯೂಸ್ ಪೇಪರ್ ನ್ನೇ ಡ್ರೆಸ್ ಮಾಡಿಕೊಂಡು, “ನನ್ನನ್ನು ಓದುವಿರಾ?” ಎಂದು ಕೇಳಿದ ನಟಿ ಪೂನಂ ಪಾಂಡೆ

    May 17, 2025

    ಆಪರೇಷನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ: ಯುವಕ ಅರೆಸ್ಟ್

    May 17, 2025

    ಮೌಂಟ್ ಎವರೆಸ್ಟ್ ನಿಂದ ಇಳಿಯುತ್ತಿದ್ದ ವೇಳೆ ಭಾರತೀಯ ಪರ್ವತಾರೋಹಿ ಸಾವು

    May 17, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಬೀದರ್: ಸಾರಿಗೆ ಬಸ್ ಪಲ್ಟಿ, ಇಬ್ಬರಿಗೆ ಗಾಯ; ತಪ್ಪಿದ ಭಾರೀ ಅನಾಹುತ

    May 21, 2025

    ಬೀದರ್: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಪಲ್ಟಿಯಾಗಿ ಕಂದಕಕ್ಕೆ ಉರುಳಿದ್ದು, ಇಬ್ಬರು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಬೀದರ್…

    ತುಮಕೂರು: ಪ್ರಾದೇಶಿಕ ಅಸಮತೋಲನ ನಿವಾರಣೆಗಾಗಿ 37,661 ಕೋಟಿ ರೂ. ಬಿಡುಗಡೆ

    May 21, 2025

    ಸೂಟ್‌ ಕೇಸ್ ನಲ್ಲಿ ಯುವತಿಯ ಮೃತದೇಹ ಪತ್ತೆ

    May 21, 2025

    ರಾಜ್ಯದಿಂದ ಆಂಧ್ರಪ್ರದೇಶಕ್ಕೆ 6 ಕುಮ್ಕಿ ಆನೆಗಳ ಹಸ್ತಾಂತರ

    May 21, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.