ಶಿರಸಿ: ಅತಿಕ್ರಮಣವಾಗಿರುವ ಮನೆ ಖಾಲಿ ಮಾಡಿಸಲು ಹೋದ ಸಂದರ್ಭದಲ್ಲಿ ಅರಣ್ಯ ಅಧಿಕಾರಿಯ ಕೈ ಬೆರಳು ಕತ್ತರಿಸಿದ ಘಟನೆ ಸಿದ್ದಾಪುರದ ಗವಿನಗುಡ್ಡದಲ್ಲಿ ನಡೆದಿದೆ.
ವಿ ಟಿ ನಾಯ್ಕ ಗಾಯಗೊಂಡ ಅರಣ್ಯ ಇಲಾಖೆ ಅಧಿಕಾರಿ. ಮಹಾಬಲೇಶ್ವರ ಚಂದು ಮರಾಠಿ ಹಲ್ಲೆ ನಡೆಸಿದ ಆರೋಪಿ. ಇವರು ಹೊಸದಾಗಿ ನಿರ್ಮಾಣ ಮಾಡಿಕೊಂಡಿದ್ದ ಮನೆಯನ್ನು ತೆರವುಗೊಳಿಸುವಂತೆ ಅರಣ್ಯ ಇಲಾಖೆ ಅಧಿಕಾರಿಗಳು ಸೂಚನೆ ನೀಡಿದ್ದರು.
ಇದೇ ವಿಚಾರವಾಗಿ ಗಲಾಟೆ ನಡೆದಿದೆ. ಈ ವೇಳೆ ಅರಣ್ಯ ಅಧಿಕಾರಿಯ ಕೈ ಬೆರಳನ್ನು ಮಹಾಬಲೇಶ್ವರ ಕತ್ತರಿಸಿದ್ದಾನೆ. ಸಿದ್ದಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ಬಂಧಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz


