ಕೊರಟಗೆರೆ : ತಾಲ್ಲೂಕಿನ ಇರಕಸಂದ್ರ ಕಾಲೋನಿಯ ಸರ್ಕಾರಿ ಪದವಿ ಪೂರ್ವ ಕಾಲೇಜು (ಪ್ರೌಢಶಾಲಾ ವಿಭಾಗ)ದಲ್ಲಿ ಕೊರಟಗೆರೆ ಪ್ರಾದೇಶಿಕ ಅರಣ್ಯ ಇಲಾಖೆಯ ವತಿಯಿಂದ ವನ ಮಹೋತ್ಸವ ಕಾರ್ಯಕ್ರಮವನ್ನು ಆಚರಣೆ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಸುಮಾರು 50ಕ್ಕೂ ಹೆಚ್ಚು ವಿವಿಧ ಜಾತಿಯ ಸಸಿಗಳನ್ನು ನೆಡಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸರ್ಕಾರಿ ಕಾಲೇಜಿನ ಪ್ರಾಂಶುಪಾಲರಾದ ಜಯಣ್ಣ ವಹಿಸಿಕೊಂಡಿದ್ದರು.
ಈ ಕಾರ್ಯಕ್ರಮದಲ್ಲಿ ಕೊರಟಗೆರೆ ವಲಯ ಅರಣ್ಯಾಧಿಕಾರಿಯಾದ ಹೆಚ್.ಎಂ.ಸುರೇಶ್, ಉಪ ವಲಯ ಅರಣ್ಯಧಿಕಾರಿ ನಾಗರಾಜು, ಗ್ರಾಮ ಪಂಚಾಯಿತಿ ಅಧ್ಯಕ್ಷೆಯಾದ ಲಿಂಗಮ್ಮ, ಎಸ್ ಡಿ ಎಂ ಸಿ ಅಧ್ಯಕ್ಷರಾದ ಈಶ್ವರ್,ಉಪಾದ್ಯಕ್ಷರಾದ ಕಿರಣ್ ಕುಮಾರ್, ತೋವಿನಕೆರೆಯ ಸ್ವಯಂ ಸೇವಾ ಸಂಸ್ಥೆಯ ವಸಂತಮ್ಮ, ಅರಣ್ಯ ಇಲಾಖೆಯ ಸಿಬ್ಬಂದಿಗಳಾದ ಚಾಂದ್ ಪಾಷಾ, ಮಂಜುನಾಥ್, ಸಾಮಾಜಿಕ ಅರಣ್ಯ ಇಲಾಖೆಯ ಅಧಿಕಾರಿಗಗಳು ಮತ್ತು ಶಾಲಾ ಕಾಲೇಜು ಮಕ್ಕಳು, ಸಾರ್ವಜನಿಕರು ಹಾಜರಿದ್ದರು.
ವರದಿ: ಮಂಜುಸ್ವಾಮಿ ಎಂ.ಎನ್., ಕೊರಟಗೆರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz