nammatumakuru

    Subscribe to Updates

    Get the latest creative news from FooBar about art, design and business.

    What's Hot

    ತಿಪಟೂರಿನಲ್ಲಿ 2078ನೇ ಮದ್ಯವರ್ಜನ ಶಿಬಿರಕ್ಕೆ ಚಾಲನೆ: ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಪೂಜ್ಯ ಹೆಗ್ಗಡೆಯವರ ಕೊಡುಗೆ ಅನನ್ಯ: ಡಾ. ಶ್ರೀಧರ್

    July 1, 2026

    ಖಾಸಗಿ ಆಂಬುಲೆನ್ಸ್ ಸೇವೆ ಶುಲ್ಕ ನಿಯಂತ್ರಣಕ್ಕೆ ಜಿಲ್ಲಾಧಿಕಾರಿಗೆ ಕರವೇ ಮನವಿ

    July 1, 2026

    ಕೊರಟಗೆರೆ: ಮಾದಕ ವ್ಯಸನ ತಡೆಗೆ ‘ಸ್ವಾಸ್ಥ್ಯ ಸಂಕಲ್ಪ’ ಜಾಗೃತಿ

    July 1, 2026
    Facebook Twitter Instagram
    ಟ್ರೆಂಡಿಂಗ್
    • ತಿಪಟೂರಿನಲ್ಲಿ 2078ನೇ ಮದ್ಯವರ್ಜನ ಶಿಬಿರಕ್ಕೆ ಚಾಲನೆ: ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಪೂಜ್ಯ ಹೆಗ್ಗಡೆಯವರ ಕೊಡುಗೆ ಅನನ್ಯ: ಡಾ. ಶ್ರೀಧರ್
    • ಖಾಸಗಿ ಆಂಬುಲೆನ್ಸ್ ಸೇವೆ ಶುಲ್ಕ ನಿಯಂತ್ರಣಕ್ಕೆ ಜಿಲ್ಲಾಧಿಕಾರಿಗೆ ಕರವೇ ಮನವಿ
    • ಕೊರಟಗೆರೆ: ಮಾದಕ ವ್ಯಸನ ತಡೆಗೆ ‘ಸ್ವಾಸ್ಥ್ಯ ಸಂಕಲ್ಪ’ ಜಾಗೃತಿ
    • ಕೊರಟಗೆರೆಯಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ ಆರಂಭ ; ಜು.29ರವರೆಗೆ ಮನೆ-ಮನೆ ಭೇಟಿ
    • ಮತದಾರರ ಪಟ್ಟಿ ಪರಿಷ್ಕರಣೆಗೆ ಮನೆ–ಮನೆಗೆ ಭೇಟಿ ನೀಡುವ ಗಣತಿದಾರರಿಗೆ ಸಹಕರಿಸಲು ಮನವಿ
    • ಬೀದರ್‌: ರಾಡ್‌ನಿಂದ ಮಾರಣಾಂತಿಕ ಹಲ್ಲೆಗೈದು ಪತ್ನಿಯನ್ನು ಕೊಂದ ಪತಿ
    • ಬೀದರ್‌ | ಹೆದ್ದಾರಿಯಲ್ಲಿ ಬೈಕ್‌ ಗೆ ಕಾರು ಡಿಕ್ಕಿ: ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ‌, ಓರ್ವ ಗಂಭೀರ ಗಾಯ
    • ವೈದ್ಯರು – ಸಮಾಜದ ಜೀವನಾಡಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ರೈತರ ಮೇಲೆ ಅರಣ್ಯಾಧಿಕಾರಿ ದುಗ್ಗಪ್ಪ ದರ್ಪ: ದೌರ್ಜನ್ಯ ತಡೆಯಲು ಜನ ಪ್ರತಿನಿಧಿಗಳು ವಿಫಲ
    ಗುಬ್ಬಿ March 7, 2022

    ರೈತರ ಮೇಲೆ ಅರಣ್ಯಾಧಿಕಾರಿ ದುಗ್ಗಪ್ಪ ದರ್ಪ: ದೌರ್ಜನ್ಯ ತಡೆಯಲು ಜನ ಪ್ರತಿನಿಧಿಗಳು ವಿಫಲ

    By adminMarch 7, 2022No Comments2 Mins Read
    aranya

    ಗುಬ್ಬಿ: ತಾಲೂಕಿನ ರೈತರನ್ನು ಒಕ್ಕಲೆಬ್ಬಿಸುವ ಹುನ್ನಾರ ನಡೆಸುತ್ತಿರುವ ಗುಬ್ಬಿ ವಲಯ ಅರಣ್ಯಾಧಿಕಾರಿ ದುಗ್ಗಪ್ಪನವರ ದರ್ಪ ತಾಲೂಕಿನಲ್ಲಿ ಹೆಚ್ಚಾಗಿದ್ದು, ಇವರ ದರ್ಪದ ಆಡಳಿತವನ್ನು ನಿಯಂತ್ರಿಸುವಲ್ಲಿ ಜನಪ್ರತಿನಿಧಿಗಳು ವಿಫಲರಾಗಿರುವುದು ತಾಲೂಕಿನ ರೈತರ ದುರಾದೃಷ್ಟಕರವಾಗಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ತಾಲೂಕಿನ ಕಸಬಾ ಹೋಬಳಿ ಅಮ್ಮನಘಟ್ಟ ಗ್ರಾಮದ ಸರ್ವೆ ನಂಬರ್ 164ರಲ್ಲಿ ಸುಮಾರು     2-34 ಗುಂಟೆ ಜಮೀನನ್ನು ಬಡ ರೈತ ದೊಡ್ಡ ತಿಮ್ಮಯ್ಯ ಹೊಂದಿದ್ದು,  ಸುಮಾರು 30 – 40 ವರ್ಷಗಳಿಂದ ಈ ಜಮೀನನ್ನು ನಂಬಿ ಸಂಸಾರವನ್ನು ನಡೆಸುತ್ತಿದ್ದಾರೆ. ಈ ನಡುವೆ ಏಕಾಏಕಿ ಅರಣ್ಯಾಧಿಕಾರಿ ದುರ್ಗಪ್ಪ ಯಾವುದೇ ಮುನ್ಸೂಚನೆ ನೀಡದೆ ಸಿಬ್ಬಂದಿ ಹಾಗೂ ಪೊಲೀಸ್ ಸಿಬ್ಬಂದಿಯೊಡನೆ ಜಮೀನಿಗೆ ಧಾವಿಸಿ, ಅಲ್ಲಿ ಬೆಳೆದಿದ್ದ ಸುಮಾರು 50 ರಿಂದ 60 ಫಸಲು ಬಿಡುತ್ತಿರುವ ಅಡಿಕೆ ಮರ ಹಾಗೂ ಮೂವತ್ತು ವರ್ಷದಿಂದ ಕಾಪಾಡಿಕೊಂಡು ಬಂದಂತಹ 15 ತೆಂಗಿನ ಮರಗಳನ್ನು ಧರೆಗೆ ಉರುಳಿಸಿ ತನ್ನ ಅಹಂಕಾರವನ್ನು ಕುಟುಂಬದ ಮೇಲೆ ತೋರಿಸಿದ್ದು, ಬಡ ಕುಟುಂಬಗಳು ಇವರ ಆಡಳಿತದಿಂದ ಕಂಗಾಲಾಗಿದ್ದಾರೆ.

    ಈ ಕುರಿತು ಮಾಧ್ಯಮಗಳೊಂದಿಗೆ ತಮ್ಮ ಅಳಲನ್ನು ತೋಡಿಕೊಂಡ ದೊಡ್ಡ ತಿಮ್ಮಯ್ಯನವರ ಕುಟುಂಬ ನಾವು ಯಾವುದೇ ಒತ್ತುವರಿ ಮಾಡಿರುವುದಿಲ್ಲ. ಕಳೆದ ಎರಡು ತಿಂಗಳ ಹಿಂದೆ ಅರಣ್ಯ ಇಲಾಖೆಯ ಸಿಬ್ಬಂದಿ  ಸೇರಿ ಭೂಮಾಪನ ಅಳತೆ ನಡೆಸಿ ದುಗ್ಗಪ್ಪ ನವರ ಸಮ್ಮುಖದಲ್ಲೇ ಗಡಿ ಪ್ರದೇಶವನ್ನು ಗುರುತಿಸಿ ಕಲ್ಲನ್ನು ನೆಟ್ಟಿದ್ದು, ಕಲ್ಲಿನ ಮೇಲೆ ಅರಣ್ಯ ಇಲಾಖೆಯ ಸೀಮಿತ ಎಂದು ನಮೂದಿಸಿರುವುದು ಒಂದೆಡೆಯಾದರೆ ನಮ್ಮ ಜಮೀನನ್ನು ಹೊರತುಪಡಿಸಿ ಅರಣ್ಯ ಇಲಾಖೆಯ ಜಮೀನನ್ನು ಇಲ್ಲಿಯವರೆಗೂ ಒತ್ತುವರಿ ಮಾಡಿರುವುದಿಲ್ಲ ಎಂದು ರೈತ ಮಹಿಳೆ ಶಾರದಮ್ಮ ತಮ್ಮ ಅಳಲನ್ನು ತೋಡಿಕೊಂಡರು.

    ದೊಡ್ಡ ತಿಮ್ಮಯ್ಯನವರ ಮಗ ಆರ್.ಎಪ್. ಒ ದುಗ್ಗಪ್ಪ ನವರನ್ನು ಪರಿಪರಿಯಾಗಿ ಹೇಳಿದರೂ 30 ವರ್ಷಗಳಿಂದ ಬೆಳೆಸಿದ ಅಡಿಕೆ ತೆಂಗು ಮತ್ತು  ವೀಳ್ಯದೆಲೆ  ಅಂಬುಗಳನ್ನು ಮನುಷ್ಯತ್ವವಿಲ್ಲದೆ ಧರೆಗೆ ಉರುಳಿಸಿ ತಮ್ಮ ಅಧಿಕಾರವನ್ನು ನಮ್ಮ ಕುಟುಂಬದ ಮೇಲೆ ಸೇರಿಸಿಕೊಂಡಿರುವುದು ಯಾವ ನ್ಯಾಯ ಎಂದು ಪ್ರಶ್ನಿಸಿದ ಅವರು ಕೇವಲ ಒಂದು ದಿನ ಅವಧಿ ನೀಡಿ ನಮ್ಮ ಜಮೀನನ್ನು ಸರ್ಕಾರದ ಸರ್ವೇ ಪ್ರಕಾರ ಅಳತೆ ಮಾಡಿಸಿ ಅರಣ್ಯ ಜಮೀನು ಆದರೆ ಬಿಟ್ಟುಕೊಡುತ್ತೇವೆ ಎಂದು ಅಂಗಲಾಚಿ ಬೇಡಿದರೂ ಸಹ ಈತನ ಮನಸ್ಸು ಕರಗದೆ ತನ್ನ ತಾಯಿ ಹೆಂಡತಿ ಹಾಗೂ ತಂಗಿಯರನ್ನು ಹೀನ ಮಾನವಾಗಿ ಹೀಯಾಳಿಸಿ ನಮಗೆ ಅನ್ಯಾಯವೆಸಗಿದ್ದಾರೆ. ಎಂದು ದೂರಿದ ಅವರು ನನಗೆ ನ್ಯಾಯ ರಕಿಸಿಕೊಡುವಲ್ಲಿ ತಾಲೂಕು ಆಡಳಿತಕ್ಕೆ ಮೊರೆ ಹೋಗುತ್ತೇನೆ. ಒಂದು ವೇಳೆ ನ್ಯಾಯ ಸಿಗದಿದ್ದರೆ ನಾನು ಮತ್ತು ನನ್ನ ಕುಟುಂಬ ವಿಷ ಕುಡಿದು ಸಾಯುತ್ತೇವೆ ಎಂದು ಕಣ್ಣೀರು ಹಾಕಿದ್ದಾರೆ.

    ಅರಣ್ಯವನ್ನು ಬೆಳೆಸಿ ಎಂದು ಸರ್ಕಾರವು ಕೋಟಿಗಟ್ಟಲೆ ಹಣವನ್ನು ಖರ್ಚು ಮಾಡುತ್ತಿದೆ. ಆದರೆ ಗುಬ್ಬಿ ತಾಲೂಕಿನ ಅರಣ್ಯಧಿಕಾರಿ ದುಗ್ಗಪ್ಪನ ದುರ್ವರ್ತನೆಯಿಂದ ಬೆಳೆದ ಮರಗಳನ್ನು ತಿಳಿಸುತ್ತಿರುವುದು ಎಷ್ಟು ಸಮಂಜಸ. ಈತನ ದೌರ್ಜನ್ಯಕ್ಕೆ ಈಗಾಗಲೇ ಸಾಕಷ್ಟು ರೈತರು ಬೇಸತ್ತಿದ್ದು ತಾಲೂಕಿನ ಹೋಬಳಿಯ ಹಂಗರಹಳ್ಳಿ ಗ್ರಾಮದ ರೈತರನ್ನು ಒಕ್ಕಲೆಬ್ಬಿಸಲು ಹೋಗಿ ಚೀಮಾರಿ ಹಾಕಿಸಿಕೊಂಡ ಘಟನೆ ನಡೆದಿದ್ದರೂ ಸಹ ಅರಣ್ಯ ಇಲಾಖೆಯ ಸ್ವತ್ತನ್ನು ಉಳಿಸುತ್ತೇನೆ ಎಂಬ ಭ್ರಮೆಯಿಂದ ಹೊರ ಬರುವುದು ಅಧಿಕಾರ ಕರ್ತವ್ಯವಾಗಬೇಕಿದೆ ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

    ಅರಣ್ಯ ಒತ್ತುವರಿ ಮತ್ತು ಪಟ್ಟ ಜಮೀನು ಸೇರಿ ಮೂರು ಎಕರೆ ಮೀರಿದ ಅರಣ್ಯ ಒತ್ತುವರಿದಾರರನ್ನು ಯಾವುದೇ ಕಾರಣಕ್ಕೂ ಒಕ್ಕಲೆಬ್ಬಿಸದಂತೆ ಸರ್ಕಾರ ಕಟ್ಟುನಿಟ್ಟಿನ ಆದೇಶ ಜಾರಿ ಮಾಡಿದೆ. ಅರಣ್ಯ ಅಧಿಕಾರಿಗಳು ಈ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸದ ಹಿನ್ನೆಲೆ ಹಾಗೂ ಅರಣ್ಯ ಒತ್ತುವರಿದಾರರಲ್ಲಿ ಮೂಡಿರುವ ಆತಂಕದ ಬಗ್ಗೆ ಅರಿತ ಸರ್ಕಾರವು ಒತ್ತುವರಿದಾರರ ಹಿತದೃಷ್ಟಿಯಿಂದ ರಾಜ್ಯದ ಎಲ್ಲಾ ಜಿಲ್ಲೆಗಳ ಅರಣ್ಯ ಒತ್ತುವರಿದಾರರನ್ನು ಮುಂದಿನ ಸೂಚನೆಯ ವರೆಗೂ ಒಕ್ಕಲೆಬ್ಬಿಸಿ ಬಾರದೆಂದು ಆದೇಶಿಸಿ 2016ರ ಜೂ.28 ರಂದು ಹಿಂದಿನ ಸುತ್ತೋಲೆಯಲ್ಲಿ ಉಲ್ಲೇಖಿಸಿದ ಎಲ್ಲ ಅಂಶಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಹೇಳಿದ್ದರು ಸರ್ಕಾರ ಕಟ್ಟುನಿಟ್ಟಿನ ಆದೇಶವನ್ನು ಉಲ್ಲಂಘಿಸಿ ತಾಲೂಕಿನ ರೈತರನ್ನು ಸಂಕಷ್ಟಕ್ಕೆ ಗುರಿ ಮಾಡಲು ಹೊರಟಿರುವ ದುಗ್ಗಪ್ಪನ ಅವರ ಮುಂದಿನ ನಡೆ ಏನು ಎಂಬುದನ್ನು ಕಾದುನೋಡಬೇಕಾಗಿದೆ.

    ವರದಿ: ಡಿ.ಮಂಜುನಾಥ್,  ಗುಬ್ಬಿ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB


    Provided by
    Provided by
    admin
    • Website

    Related Posts

    ಬಿಡದಿಯಲ್ಲಿ ಟೌನ್ ಶಿಪ್ ನಿರ್ಮಾಣದಲ್ಲಿ ಕಾಂಗ್ರೆಸ್ ಪಾಲುದಾರಿಕೆ: ಶಾಸಕರ ಎಂ.ಟಿ.ಕೃಷ್ಣಪ್ಪ ಆರೋಪ

    June 25, 2026

    ಗುಬ್ಬಿ ತಾಲ್ಲೂಕು ಆರೋಗ್ಯಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ ಡಾ.ವಿ.ಜಿ.ಕುಮಾರ್

    June 19, 2026

    ಚಿಲ್ಲರೆಗಳಿಗೆ ನಾನು ಹೆದರುವ ಮಗನೇ ಅಲ್ಲ ಕೀಳುಮಟ್ಟದ ರಾಜಕಾರಣ ನನಗೆ ಗೊತ್ತಿಲ್ಲ: ಶಾಸಕ ಎಸ್. ಆರ್.ಶ್ರೀನಿವಾಸ್ ತಿರುಗೇಟು

    May 24, 2026

    Leave A Reply Cancel Reply

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತಿಪಟೂರು

    ತಿಪಟೂರಿನಲ್ಲಿ 2078ನೇ ಮದ್ಯವರ್ಜನ ಶಿಬಿರಕ್ಕೆ ಚಾಲನೆ: ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಪೂಜ್ಯ ಹೆಗ್ಗಡೆಯವರ ಕೊಡುಗೆ ಅನನ್ಯ: ಡಾ. ಶ್ರೀಧರ್

    July 1, 2026

    ತಿಪಟೂರು: ವ್ಯಸನಮುಕ್ತ ಸಮಾಜದ ನಿರ್ಮಾಣಕ್ಕಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್…

    ಖಾಸಗಿ ಆಂಬುಲೆನ್ಸ್ ಸೇವೆ ಶುಲ್ಕ ನಿಯಂತ್ರಣಕ್ಕೆ ಜಿಲ್ಲಾಧಿಕಾರಿಗೆ ಕರವೇ ಮನವಿ

    July 1, 2026

    ಕೊರಟಗೆರೆ: ಮಾದಕ ವ್ಯಸನ ತಡೆಗೆ ‘ಸ್ವಾಸ್ಥ್ಯ ಸಂಕಲ್ಪ’ ಜಾಗೃತಿ

    July 1, 2026

    ಕೊರಟಗೆರೆಯಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ ಆರಂಭ ; ಜು.29ರವರೆಗೆ ಮನೆ-ಮನೆ ಭೇಟಿ

    July 1, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.