ತುಮಕೂರು: ತಾಲ್ಲೂಕು ಹೊನ್ನುಡಿಕೆ ಬಳಿಯ ಅರೇಹಳ್ಳಿ ಗ್ರಾಮದಲ್ಲಿ ಶುಕ್ರವಾರ ತಡರಾತ್ರಿ ಚಿರತೆ ದಾಳಿ ನಡೆಸಿದ್ದು, ಗ್ರಾಮದ ಹೊಸಮನೆ ವೆಂಕಟಪ್ಪ ಎನ್ನುವವರಿಗೆ ಸೇರಿದ ಮೂರು ಕುರಿಗಳು ಮೃತಪಟ್ಟಿವೆ.
ಶುಕ್ರವಾರ ರಾತ್ರಿ ಎಂದಿನಂತೆ ವೆಂಕಟಪ್ಪನವರು ತಮ್ಮ ಕುರಿಗಳನ್ನು ಮನೆಯ ಕಾಂಪೌಂಡ್ ನಲ್ಲಿ ಕಟ್ಟಿ ಹಾಕಿದ್ದು ಬೆಳಿಗ್ಗೆ ಎದ್ದು ನೋಡುವಷ್ಟರಲ್ಲಿ ಚಿರತೆ ದಾಳಿ ನಡೆಸಿರುವ ಬಗ್ಗೆ ತಿಳಿದಿದೆ.
ಇನ್ನು ಈ ಘಟನೆಯ ಬಗ್ಗೆ ಮಾಹಿತಿ ತಿಳಿಯುತ್ತಿದ್ಧಂತೆ ಅರೇಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ಭಯಭೀತರಾಗಿದ್ದು ಕೂಡಲೇ ಚಿರತೆಯನ್ಮು ಬಂಧಿಸಬೇಕೆಂದು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಆಗ್ರಹಿಸಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದ್ದಾರೆ.
ವರದಿ : ರಾಜೇಶ್ ರಂಗನಾಥ್
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB