ಮಧುಗಿರಿ: ತಾಲೂಕು ವಿಕಾಸ ಸಮಿತಿ ವತಿಯಿಂದ ಕನ್ನಡ ರಾಜ್ಯೋತ್ಸವ ಹಾಗೂ ಪುನೀತ್ ಪುಣ್ಯ ಸ್ಮರಣೆ ಅಂಗವಾಗಿ ನವೆಂಬರ್ 13ರಂದು ಭಾನುವಾರ ರಾಜೀವ್ ಗಾಂಧಿ ಕ್ರೀಡಾಂಗಣದಲ್ಲಿ ಬೆಳಗೆ 10 ರಿಂದ 2 ಗಂಟೆವರೆಗೆ ಉಚಿತ ಆರೋಗ್ಯ ತಪಾಸಣೆ ಮತ್ತು ರಕ್ತದಾನ ಶಿಬಿರವನ್ನು ಆಯೋಜಿಸಲಾಗಿದೆ ಎಂದು ವಿಕಾಸ ಸಮಿತಿಯ ಅಧ್ಯಕ್ಷರಾದ ಭೀಮನಕುಂಟೆ ಹನುಮಂತೇಗೌಡ ತಿಳಿಸಿದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕನ್ನಡ ರಾಜ್ಯೋತ್ಸವ ಮತ್ತು ಕನ್ನಡ ರತ್ನ ಪುನೀತ್ ರಾಜಕುಮಾರ್ ಅವರ ಪುಣ್ಯ ಸ್ಮರಣೆ ಅಂಗವಾಗಿ ಉಚಿತವಾಗಿ ಆರೋಗ್ಯ ತಪಾಸಣೆ ಮತ್ತು ರಕ್ತದಾನ ಶಿಬಿರ ಆಯೋಜಿಸಲಾಗುತ್ತಿದೆ. ಆರೋಗ್ಯ ತಪಾಸಣೆಯನ್ನು ಸಿದ್ದಗಂಗಾ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆಯ ಮೂಲಕ ನಡೆಸಲಾಗುತ್ತದೆ. ಈ ತಪಾಸಣೆಯಲ್ಲಿ ಮಧುಮೇಹ ತಜ್ಞರು, ಮೂಳೆ ಮತ್ತು ಕೀಳು ತಜ್ಞರು ಹಾಗೂ ಜನರಲ್ ಸರ್ಜನ್ ಲಭ್ಯವಿರುತ್ತಾರೆ, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಮಾಧ್ಯಮ ಮೂಲಕ ಮನವಿ ಮಾಡಿದರು.
ಸಂಜೆ ಖ್ಯಾತ ಸಂಗೀತ ನಿರ್ದೇಶಕರಾದ ಅರ್ಜುನ್ ಜನ್ಯ ರವರ ನೇತೃತ್ವದಲ್ಲಿ ಸಂಗೀತ ರಸ ಸಂಜೆ ಕಾರ್ಯಕ್ರಮವನ್ನು ಆಯೋಜಿಸಲಾಗಿರುತ್ತದೆ ಎಂದು ಹೇಳಿದರು
ಸುದ್ದಿಗೋಷ್ಠಿಯಲ್ಲಿ ಮುಖಂಡರಾದ ರಾಜಣ್ಣ, ಕನ್ನಡ ಪರ ಸಂಘಟನೆಗಳ ಅಧ್ಯಕ್ಷರಾದ ಕರಾವೆ ಶಿವಕುಮಾರ್ ಎ, ಕರ್ನಾಟಕ ಪ್ರಜಾಪರ ವೇದಿಕೆ ಜಲಾಲ್ ಭಾಷಾ, ಕರುನಾಡ ವಿಜಯ ಸೇನೆ ತಿಮ್ಮರಾಜು, ಕನ್ನಡ ಜಾಗೃತಿ ವೇದಿಕೆ ರಾಘವೇಂದ್ರ, ನಾವು ಭಾರತೀಯರು ಸೈಯದ್ ಮುಜಮಿಲ್ , ರೋಹಿತ್ ಇನ್ನು ಹಲವರು ಇದ್ದರು.
ವರದಿ: ಅಬಿದ್ ಮಧುಗಿರಿ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz