ಹಾಸ್ಯ ನಟ ಪೃಥ್ವಿರಾಜ್ ವಿರುದ್ಧ ವಿಜಯವಾಡದ ಕೌಟುಂಬಿಕ ನ್ಯಾಯಾಲಯ ಜಾಮೀನು ರಹಿತ ಬಂಧನ ವಾರಂಟ್ ಜಾರಿ ಮಾಡಿದೆ.
ವಿಜಯವಾಡದ ಶ್ರೀಲಕ್ಷ್ಮಿ 1984 ರಲ್ಲಿ ನಟ ಪೃಥ್ವಿರಾಜ್ ಅವರನ್ನು ವಿವಾಹವಾಗಿದ್ದರು. ಇಬ್ಬರಿಗೂ ಒಬ್ಬ ಮಗ ಮತ್ತು ಮಗಳು ಇದ್ದಾರೆ. ಪೃಥ್ವಿರಾಜ್ ತಮ್ಮ ಪತ್ನಿಯ ನಡುವಿನ ಘರ್ಷಣೆಯಿಂದ ಬೇರ್ಪಟ್ಟಿದ್ದಾರೆ. ಶ್ರೀಲಕ್ಷ್ಮಿ ತನ್ನ ಇಬ್ಬರು ಮಕ್ಕಳೊಂದಿಗೆ ಹುಟ್ಟಿದ ಮನೆಯಲ್ಲಿದ್ದಾರೆ. 2017ರಲ್ಲಿ ಶ್ರೀಲಕ್ಷ್ಮಿ ನ್ಯಾಯಾಲಯದ ಮೊರೆ ಹೋಗಿದ್ದು, ತನ್ನ ಪತಿ ಪೃಥ್ವಿರಾಜ್ಗೆ ತಿಂಗಳಿಗೆ 8 ಲಕ್ಷ ರೂ.ಗಳನ್ನು ಕಾನೂನಾತ್ಮಕವಾಗಿ ಜೀವನಾಂಶ ನೀಡುವಂತೆ ನ್ಯಾಯಾಲಯವನ್ನು ಕೋರಿದ್ದರು.
ಅದಕ್ಕೆ ನ್ಯಾಯಾಲಯವೂ ಒಪ್ಪಿಗೆ ಸೂಚಿಸಿದ್ದು, ಶ್ರೀಲಕ್ಷ್ಮಿ ಅವರ ಕಾನೂನು ಹೋರಾಟದ ವೆಚ್ಚವನ್ನೂ ಪೃಥ್ವಿರಾಜ್ ಭರಿಸಬೇಕೆಂದು ಕೋರ್ಟ್ ತೀರ್ಪು ನೀಡಿತ್ತು.
ಅದರಂತೆ ಪೃಥ್ವಿರಾಜ್ ಪ್ರತಿ ತಿಂಗಳು 10ನೇ ತಾರೀಖಿನೊಳಗೆ ಆಕೆಗೆ 8 ಲಕ್ಷ ರೂ. ಜೀವನಾಂಶವನ್ನು ಪಾವತಿಸಬೇಕು ಎಂದು ತೀರ್ಪು ನೀಡಿತ್ತು. ನ್ಯಾಯಾಲಯಕ್ಕೆ ಹಾಜರಾಗದ ಹಿನ್ನೆಲೆಯಲ್ಲಿ ನ್ಯಾಯಾಲಯವು ಅವರ ವಿರುದ್ಧ ಜಾಮೀನು ರಹಿತ ವಾರೆಂಟ್ ಹೊರಡಿಸಿದೆ.
ನ್ಯಾಯಾಲಯದ ಆದೇಶದಂತೆ ಪೃಥ್ವಿರಾಜ್ ಪತ್ನಿಗೆ 8 ಲಕ್ಷ ರೂ. ಜೀವನಾಂಶ ನೀಡಬೇಕಿದ್ದು, ನೀಡಿಲ್ಲ. ಅದೂ ಅಲ್ಲದೆ ನ್ಯಾಯಾಲಯಕ್ಕೆ ಹಾಜರಾಗದ ಕಾರಣ ಈ ಬಂಧನ ವಾರೆಂಟ್ ಜಾರಿ ಮಾಡಲಾಗಿದೆ ಎಂದು ತಿಳಿದುಬಂದಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296