ಗಾಳಿಪಟ, ಗಣೇಶ ಮತ್ತೆ ಬಂದ, ಮನಸಾರೆ, ಕೃಷ್ಣ ನೀ ಲೇಟಾಗಿ ಬಾರೋ ಸೇರಿದಂತೆ ಹಲವು ಸಿನಿಮಾಗಳಲ್ಲಿ ನಟಿಸಿರುವ ಸುಂದರಿ ನೀತು ಇದೀಗ ಟಾರೋಕಾರ್ಟ್ ರೀಡಿಂಗ್, ಹೀಲಿಂಗ್, ಷಾಮನಿಸಂ ಸೇರಿದಂತೆ ಹಲವು ದೊಡ್ಡ ವಿದ್ಯೆಗಳನ್ನು ಕಲಿಯುತ್ತಿದ್ದಾರೆ.
ಈ ವಿದ್ಯೆಯಿಂದ ತಮ್ಮ ಜೀವನದಲ್ಲಿ ನಡೆಯುತ್ತಿರುವ ಘಟನೆ ಮಾತ್ರವಲ್ಲ ಇನ್ನಿತರರಿಗೂ ಸಹಾಯ ಮಾಡುತ್ತಿದ್ದಾರೆ.’ತಂದೆ ತೀರಿಕೊಂಡು ಒಂದು ವರ್ಷ ಆಮೇಲೆ ನಿದ್ರೆಯಲ್ಲಿ ಏನೋ ಕಪ್ಪು ಕಾಣಿಸುತ್ತಿದೆ ನಾನು ಗಾಬರಿ ಆಗುತ್ತಿದ್ದೀನಿ ಉಸಿರು ಗಟ್ಟುತ್ತಿದೆ. ಮಲಗಿ 10 ನಿಮಿಷಕ್ಕೆ ಈ ರೀತಿ ಆಗುತ್ತಿತ್ತು, ಇದನ್ನು ಮತ್ತೊಬ್ಬರ ಜೊತೆ ಚರ್ಚೆ ಮಾಡಿದರೆ ಭ್ರಮೆ ಎನ್ನುತ್ತಿದ್ದರು.
ಈ ಘಟನೆ ಬಗ್ಗೆ ಪ್ರಾಣಿಕ್ ಹೀಲರ್ ಜೊತೆ ಮಾತನಾಡಿದ ಮೇಲೆ ತಿಳಿಯಿತು. ಆ ಕಪ್ಪು ನನ್ನ ತಂದೆ ಅವರು ಸತ್ತ ಮೇಲೆ ಮುಕ್ತಿ ಸಿಕ್ಕಿಲ್ಲ ಎಂದು ತಿಳಿಯಿತು. ಗುರುವಾಯುರ್ ದೇವಸ್ಥಾನಕ್ಕೆ ಹೋಗಿ ಪೂಜೆ ಮಾಡಿದರೆ ಒಳ್ಳೆಯದಾಗುತ್ತದೆ ಎಂದರು. ಅಲ್ಲಿ ಪೂಜೆ ಮುಗಿಸಿದ ಮೇಲೆ ಮತ್ತೆ ಕಪ್ಪು ಕಾಣಿಸಿಕೊಳ್ಳಲಿಲ್ಲ. ಯಾವಾಗ ಕಪ್ಪು ಕಾಣಿಸಿಕೊಳ್ಳುವುದು ಸ್ಟಾಪ್ ಆಯ್ತು ಆಗ ನನಗೆ ತುಂಬಾ ಕನಸುಗಳು ಬರಲು ಶುರುವಾಗಿತ್ತು ಅದರಿಂದ ನಿದ್ರೆ ಮಾಡಲು ಶುರುವಾಗುತ್ತಿರಲಿಲ್ಲ’ ಎಂದು ಆರ್.ಜೆ.ರಾಜೇಶ್ ಯೂಟ್ಯೂಬ್ ಚಾನೆಲ್ ನಲ್ಲಿ ನೀತು ಶೆಟ್ಟಿ ಮಾತನಾಡಿದ್ದಾರೆ.
‘ಕನಸುಗಳು ಎಷ್ಟು ಡ್ರಮಾಟಿಕ್ ಆಗಿತ್ತು ಅಂದ್ರೆ ಭಯದಿಂದ ತಾಯಿ ಜೊತೆ ಮಲಗುವುದಕ್ಕೆ ಶುರು ಮಾಡಿದೆ. ಈ ಕನಸುಗಳ ಅರ್ಥ ತಿಳಿದುಕೊಳ್ಳಲು ನಾನು ವಿದ್ಯೆಯನ್ನು ಕಲಿತೆ. ಮೂಡ ನಂಬಿಕೆ ಮತ್ತು ಭಯದ ಮಾತುಗಳಿಗೆ ನಾನು ಬೀಳುವುದಿಲ್ಲ. ಕನಸು ಮತ್ತು ರಿಯಾಲಿಟಿ ನಡುವೆ ನಡೆದ ಘಟನೆಯನ್ನು ನಾನು ಹೇಳುತ್ತಿರುವುದು. ಷಾಮನಿಸಂ ಅನ್ನೋದು ವಿದ್ಯೆ ಇದು ಬರುತ್ತಿರುವುದು ನೆಟಿವ್ ಅಮೆರಿಕನ್ ಗಳಿಂದ. ಈ ವಿದ್ಯೆಯಲ್ಲಿ ಪ್ರತಿಯೊಂದಕ್ಕೂ ಜೀವನ ಇರುತ್ತೆ. ಒಂದು ಬಿಲ್ಡಿಂಗ್ ಗೂ ಜೀವನ ಇರುತ್ತದೆ. ಈ ನಿಮಗೆ ಯಾವುದರಿಂದ ಮಾಹಿತಿ ಬೇಕು ನೀವೇ ನೇರವಾಗಿ ಬಂದು ಕೇಳಿದರೆ ನಾವು ಅವರೊಟ್ಟಿಗೆ ಮಾತನಾಡಿ ಮೆಸೇಜ್ ನ ತಿಳಿಸುತ್ತೀನಿ. ನಮ್ಮನ್ನು ನಾವು ಎಂದೂ ಅನುಮಾನಿಸಬಾರದು ಎಂದು ಈ ವಿದ್ಯೆ ಹೇಳಿಕೊಟ್ಟಿದೆ’ ಎಂದು ನೀತು ಶೆಟ್ಟಿ ಹೇಳಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q


