ವಿಧಾನಸಭೆಯ ವಿಪಕ್ಷ ನಾಯಕರಾಗಿ ಆಯ್ಕೆಯಾಗಿರುವ ಆರ್. ಅಶೋಕ್ ಅವರ ನಾಮಫಲಕವನ್ನು ಕಿತ್ತು ಹಾಕಬೇಕು ಎಂದು ಯಲಹಂಕ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಎಸ್. ಆರ್. ವಿಶ್ವನಾಥ್ ಆಗ್ರಹಿಸಿದ್ದಾರೆ. ಇಂದು ಸದನದಲ್ಲಿ ಆರ್. ಅಶೋಕ್ ವಿರುದ್ಧ ಮೊಗಸಾಲೆಯಲ್ಲಿ ಮಾತನಾಡುತ್ತಾ ಕುಳಿತಿದ್ದ ಅವರು, ಮೊದಲು ಆರ್. ಅಶೋಕ್ ನಾಮಫಲಕ ಕಿತ್ತು ಹಾಕಬೇಕು ಎಂದು ಕಿಡಿಕಾರಿದ ಪ್ರಸಂಗ ನಡೆಸಿದೆ.
ಪ್ರತಿಪಕ್ಷ ನಾಯಕ್ ಆರ್. ಅಶೋಕ್ ಮತ್ತು ಶಾಸಕ ಎಸ್. ಆರ್. ವಿಶ್ವನಾಥ್ ಮಧ್ಯೆ ಅಸಮಾಧಾನ ಮುಂದುವರೆದಿದ್ದು, ಆರ್. ಅಶೋಕ್ ಕೊಠಡಿಗೆ ಹೋಗಲು ವಿಶ್ವನಾಥ್ ಮತ್ತೆ ನಿರಾಕರಿಸಿದ್ದಾರೆ.
ಸದನದಲ್ಲಿ ಮುಂದಿನ ಕಾರ್ಯತಂತ್ರಗಳ ಬಗ್ಗೆ ಆರ್ ಅಶೋಕ್ ಕಚೇರಿಯಲ್ಲಿ ಕ್ಲೋಸ್ ಡೋರ್ ಮೀಟಿಂಗ್ ನಡೆಯುತ್ತಿದ್ದ ಸಂದರ್ಭ ಶಾಸಕ ಮುನಿರತ್ನ ವಿಶ್ವನಾಥ್ ಅವರನ್ನು ಅಶೋಕ್ ಕೊಠಡಿಗೆ ಕರೆದೊಯ್ಯಲು ಕೈ ಹಿಡಿದುಕೊಂಡರು. ಈ ವೇಳೆ ವಿಶ್ವನಾಥ್ ಅಶೋಕ್ ಹೆಸರಿನ ನಾಮಫಲಕ ಇರೋವರೆಗೂ ನಾನು ಆ ಕೊಠಡಿಗೆ ಬರೋದಿಲ್ಲ ಎಂದರು


