ಸರಗೂರು: ಚನ್ನಗುಂಡಿ ಕಾಲೋನಿಯ ಆಶ್ರಮ ಶಾಲೆಯನ್ನು ತಮ್ಮೆಲ್ಲರ ಆಶಯದಂತೆ ಹಂತಹಂತವಾಗಿ ಪದವಿ ಪೂರ್ವ ಶಿಕ್ಷಣದವರೆಗೆ ಮೇಲ್ದರ್ಜೆಗೆ ಏರಿಸಲಾಗಿದೆ, ಇದರಿಂದ ಈ ಭಾಗದ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ ಎಂದು ಶಾಸಕ ಅನಿಲ್ ಚಿಕ್ಕಮಾದು ತಿಳಿಸಿದರು.
ತಾಲ್ಲೂಕಿನ ಎಂ.ಸಿ.ತಳಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚನ್ನಗುಂಡಿ ಕಾಲೋನಿಯ ವಾಲ್ಮೀಕಿ ಮಹರ್ಷಿ ಗಿರಿಜನ ಆಶ್ರಮ ಶಾಲೆಯಲ್ಲಿ ಮಂಗಳವಾರದಂದು ಶಾಸಕರ ಅಧ್ಯಕ್ಷತೆಯಲ್ಲಿ ಸಭೆಯನ್ನು ನಡೆಸಿ ಹಾಡಿಯ ಮತ್ತು ಸಾರ್ವಜನಿಕರ ದೂರುಗಳಿಗೆ ಸ್ಪಂದಿಸಿ ನಂತರ ಮಾತನಾಡಿದರು.
ಶಾಲೆಯ ಹೊಸ ಕಟ್ಟಡಗಳ ನಿರ್ಮಾಣಕ್ಕೆ ಕಾಮಗಾರಿಗಳಿಗೆ ಶಂಕುಸ್ಥಾಪನೆ ಮಾಡಲಾಗುವುದು, ಆದಿವಾಸಿ ಜನಾಂಗದ ವಸತಿ ರಹಿತರಿಗೆ ವಿಷೇಶ ಘಟಕ ಯೋಜನೆಯಡಿ ವಸತಿ ಮಂಜೂರು ಮಾಡಲು ಕ್ರಮ ವಹಿಸಲಾಗುವುದು ಎಂದರು.
ಆದಿವಾಸಿಗಳಿಗೆ ಆರು ತಿಂಗಳು ನೀಡುತ್ತಿದ್ದ ಪೌಷ್ಟಿಕ ಆಹಾರದ ಕಿಟ್ ಗಳನ್ನು ವರ್ಷಪೂರ್ತಿ ನೀಡುವಂತೆ ಮುಖ್ಯ ಮಂತ್ರಿಗಳ ಗಮನ ಸೆಳೆದು ರಾಜ್ಯಾದ್ಯಾಂತ ಆದಿವಾಸಿಗಳಿಗೆ ವಿತರಿಸಲಾಗುತ್ತಿದೆ ಇದರ ಸದ್ಬಳಕೆಯನ್ನು ಮಾಡಿಕೊಂಡು ಆರೋಗ್ಯವಂತರಾಗಿ ಜೀವನ ನಡೆಸಬೇಕೆಂದರು ಎಂದರು.
ಚನ್ನಗುಂಡಿ ಕಾಲೋನಿ, ಅಳಲಹಳ್ಳಿ ಕಾಲೋನಿ, ಯಶವಂತಪುರ, ಎತ್ತಿಗೆ ಗ್ರಾಮಗಳ ಸಿಸಿ ರಸ್ತೆ ಹಾಗೂ ಅಂಗನವಾಡಿ ಕೇಂದ್ರದ ನೂತನ ಕಟ್ಟಡಗಳ ನಿರ್ಮಾಣಕ್ಕೆ ಸದ್ಯದಲ್ಲೇ ಶಂಕುಸ್ಥಾಪನೆ ನೆರವೇರಿಸಲಾಗುವುದು. ಸಾರಿಗೆ ಸಮಸ್ಯೆನ್ನು ಶೀಘ್ರದಲ್ಲೇ ಪರಿಹರಿಸಲಾಗುವುದು ಎಂದು ತಿಳಿಸಿದರು.
ಇತ್ತೀಚೆಗೆ ಹುಲಿ ದಾಳಿಗೆ ಒಳಗಾದ ಕುಟುಂಬಗಳಿಗೆ ಭೇಟಿ ನೀಡಿ ಸಾಂತ್ವನ ಹೇಳಿ ಧೈರ್ಯ ತುಂಬಿ ಸರ್ಕಾರದಿಂದ ಸೂಕ್ತ ಪರಿಹಾರ ದೊರಕುವಂತೆ ಮಾಡಿದ್ದೇನೆ. ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಅರಣ್ಯ ಸಚಿವರಾದ ಈಶ್ವರ್ ಖಂಡ್ರೆರವರೊಂದಿಗೆ ಈ ವಿಚಾರವಾಗಿ ಸುದೀರ್ಘವಾಗಿ ಮಾತನಾಡಿ, ಅರಣ್ಯದ ಅಂಚಿನಲ್ಲಿ ಇಪಿಟಿ, ರೈಲ್ವೆ ಬ್ಯಾರಿಕೇಡ್, ಜಾಲರಿ ಅಳವಡಿಸುವಂತೆ ಮನವಿ ಮಾಡಿದ್ದೇನೆ, ಕಾಡಿನಿಂದ ಪ್ರಾಣಿಗಳು ಹೊರ ಬರಲು ಹಾಗೂ ಅವುಗಳನ್ನು ತಡೆಗಟ್ಟಲು ವೈಜ್ಞಾನಿಕ ಕಾರಣ ಮತ್ತು ಪರಿಹಾರವನ್ನು ತಿಳಿಸುವಂತೆ ಮೇಲಾಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಲಾಗಿದೆ, ಇದೆಲ್ಲವೂ ಹತೋಟಿಗೆ ಬಂದ ನಂತರ ಸರ್ಕಾರದ ನಿರ್ದೇಶನದಂತೆ ಸಫಾರಿ ಪ್ರಾರಂಭಿಸಲಾಗುವುದು. ಸಾರ್ವಜನಿಕರು ಜಾಗೃತರಾಗಬೇಕು, ಕಾಡು ಪ್ರಾಣಿಗಳು ಹೊರಬಂದಾಗ ಹತ್ತಿರ ಹೋಗದೆ, ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತರಬೇಕು, ಕಾರ್ಯಾಚರಣೆ ವೇಳೆ ಹತ್ತಿರ ಹೋಗದೆ ಇಲಾಖಾಧಿಕಾರಿಗಳಿಗೆ ಸಹಕರಿಸುವಂತೆ ಮನವಿ ಮಾಡಿದರು.
ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತಿ ಸದಸ್ಯರಾದ ಚಿಕ್ಕಕ್ಯಾತ, ಪ್ರಕಾಶ್ ಚಂದ್ರ, ಶಿವಲಿಂಗಯ್ಯ ಯಶವಂತಪುರ, ಹಾದನೂರು ಪ್ರಕಾಶ್, ಮುಖಂಡರಾದ ಅಣ್ಣಯ್ಯಸ್ವಾಮಿ, ಮನುಗನಹಳ್ಳಿ ಗುರುಸ್ವಾಮಿ, ಬೀರ್ವಾಳು ಚಿಕ್ಕಣ್ಣ, ಸೌಮ್ಯ ಮಂಜುನಾಥ್, ವೆಂಕಟರಾಮು, ನಾಗೇಂದ್ರ, ಪುಟ್ಟಸ್ವಾಮಿ, ಶಿವಮೂರ್ತಿ, ಶಶಿಪಾಟೀಲ್, ಸಿದ್ದರಾಮು, ಅಶ್ರಫಲಿ, ಜಯಕುಮಾರ್, ಅಶೋಕ್. ರೇವಣ್ಣ, ಬಿ.ಸೋಮಣ್ಣ, ನಂದೀಶ್, ಸೋಮ, ಕೃಷ್ಣ, ಮಾಣ್ಬಾ, ಪದ್ಮ, ಗೀತಾ, ರಾಧ, ಶಿವಮ್ಮ, ಲಕ್ಷ್ಮಿಬಾಯಿ, ಸರಸ್ವತಿ, ಪರಿಶಿಷ್ಟ ಪಂಗಡ ಸಹಾಯಕ ನಿರ್ದೇಶಕ ಮಹೇಶ್, ಮ್ಯಾನೇಜರ್ ನಾಗರಾಜು, ಇನ್ನೂ ಮುಖಂಡರು ಹಾಗೂ ಶಾಲೆಯ ಶಿಕ್ಷಕರು ಮತ್ತಿತರರು ಹಾಜರಿದ್ದರು.
ವರದಿ: ಹಾದನೂರು ಚಂದ್ರ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


