nammatumakuru

    Subscribe to Updates

    Get the latest creative news from FooBar about art, design and business.

    What's Hot

    ಹಾಡಹಗಲೇ ಚಿನ್ನದಂಗಡಿಗೆ ನುಗ್ಗಿದ ಕಳ್ಳರು: ಮಾಲಿಕನನ್ನು ಕಟ್ಟಿಹಾಕಿ ಕಳ್ಳತನಕ್ಕೆ ಯತ್ನ

    December 5, 2025

    ಡಿಸೆಂಬರ್ 12: ಕೆ.ಜೆ.ಕೆ. (KJK) ವಿದ್ಯಾರ್ಥಿಗಳಿಗಾಗಿ ಉದ್ಯೋಗ ಮೇಳ

    December 4, 2025

    ಕೆಟ್ಟು ನಿಂತ ಬಸ್: ವಿದ್ಯಾರ್ಥಿಗಳಿಂದ ಪರದಾಟ!

    December 4, 2025
    Facebook Twitter Instagram
    ಟ್ರೆಂಡಿಂಗ್
    • ಹಾಡಹಗಲೇ ಚಿನ್ನದಂಗಡಿಗೆ ನುಗ್ಗಿದ ಕಳ್ಳರು: ಮಾಲಿಕನನ್ನು ಕಟ್ಟಿಹಾಕಿ ಕಳ್ಳತನಕ್ಕೆ ಯತ್ನ
    • ಡಿಸೆಂಬರ್ 12: ಕೆ.ಜೆ.ಕೆ. (KJK) ವಿದ್ಯಾರ್ಥಿಗಳಿಗಾಗಿ ಉದ್ಯೋಗ ಮೇಳ
    • ಕೆಟ್ಟು ನಿಂತ ಬಸ್: ವಿದ್ಯಾರ್ಥಿಗಳಿಂದ ಪರದಾಟ!
    • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ: ಬಿಲ್ವಾರ್ಚನೆ ಪೂಜೆ ಮತ್ತು ಧಾರ್ಮಿಕ ಸಭಾ ಕಾರ್ಯಕ್ರಮ
    • ಪತ್ರಕರ್ತರ ರಕ್ಷಣೆ ಕಾಯ್ದೆ ಜಾರಿಗಾಗಿ ಧರಣಿ: ಜಾನಸನ್ ಘೋಡೆ
    • ಆಸ್ತಿ ಸಿಕ್ಕಿದ ಮೇಲೆ ತಂದೆಯನ್ನು ಮರೆತ ಮಗನಿಗೆ ತಕ್ಕಪಾಠ ಕಲಿಸಿದ ತಂದೆ!
    • ತುಮಕೂರು: ಡಿಸೆಂಬರ್ 5ರಂದು ವಿದ್ಯುತ್ ವ್ಯತ್ಯಯ
    • ನೇತ್ರ ಸಹಾಯಕರ ಹುದ್ದೆ: ಡಿ.9ರಂದು ನೇರ ಸಂದರ್ಶನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಚನ್ನಗುಂಡಿ ಕಾಲೋನಿಯ ಆಶ್ರಮ ಶಾಲೆ ಪದವಿ ಪೂರ್ವ ಶಿಕ್ಷಣದವರೆಗೆ ಮೇಲ್ದರ್ಜೆಗೆ ಏರಿಸಲಾಗಿದೆ: ಶಾಸಕ ಅನಿಲ್ ಚಿಕ್ಕಮಾದು
    ಜಿಲ್ಲಾ ಸುದ್ದಿ November 12, 2025

    ಚನ್ನಗುಂಡಿ ಕಾಲೋನಿಯ ಆಶ್ರಮ ಶಾಲೆ ಪದವಿ ಪೂರ್ವ ಶಿಕ್ಷಣದವರೆಗೆ ಮೇಲ್ದರ್ಜೆಗೆ ಏರಿಸಲಾಗಿದೆ: ಶಾಸಕ ಅನಿಲ್ ಚಿಕ್ಕಮಾದು

    By adminNovember 12, 2025No Comments2 Mins Read

    ಸರಗೂರು: ಚನ್ನಗುಂಡಿ ಕಾಲೋನಿಯ ಆಶ್ರಮ ಶಾಲೆಯನ್ನು ತಮ್ಮೆಲ್ಲರ ಆಶಯದಂತೆ ಹಂತಹಂತವಾಗಿ ಪದವಿ ಪೂರ್ವ ಶಿಕ್ಷಣದವರೆಗೆ ಮೇಲ್ದರ್ಜೆಗೆ ಏರಿಸಲಾಗಿದೆ,‌ ಇದರಿಂದ ಈ ಭಾಗದ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ ಎಂದು ಶಾಸಕ ಅನಿಲ್ ಚಿಕ್ಕಮಾದು ತಿಳಿಸಿದರು.

    ತಾಲ್ಲೂಕಿನ ಎಂ.ಸಿ.ತಳಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚನ್ನಗುಂಡಿ ಕಾಲೋನಿಯ ವಾಲ್ಮೀಕಿ ಮಹರ್ಷಿ ಗಿರಿಜನ ಆಶ್ರಮ ಶಾಲೆಯಲ್ಲಿ ಮಂಗಳವಾರದಂದು ಶಾಸಕರ ಅಧ್ಯಕ್ಷತೆಯಲ್ಲಿ ಸಭೆಯನ್ನು ನಡೆಸಿ ಹಾಡಿಯ ಮತ್ತು ಸಾರ್ವಜನಿಕರ ದೂರುಗಳಿಗೆ ಸ್ಪಂದಿಸಿ ನಂತರ ಮಾತನಾಡಿದರು.


    Provided by
    Provided by

    ಶಾಲೆಯ ಹೊಸ ಕಟ್ಟಡಗಳ ನಿರ್ಮಾಣಕ್ಕೆ ಕಾಮಗಾರಿಗಳಿಗೆ ಶಂಕುಸ್ಥಾಪನೆ ಮಾಡಲಾಗುವುದು, ಆದಿವಾಸಿ ಜನಾಂಗದ ವಸತಿ ರಹಿತರಿಗೆ ವಿಷೇಶ ಘಟಕ ಯೋಜನೆಯಡಿ ವಸತಿ ಮಂಜೂರು ಮಾಡಲು ಕ್ರಮ ವಹಿಸಲಾಗುವುದು ಎಂದರು.

    ಆದಿವಾಸಿಗಳಿಗೆ ಆರು ತಿಂಗಳು ನೀಡುತ್ತಿದ್ದ ಪೌಷ್ಟಿಕ ಆಹಾರದ ಕಿಟ್ ಗಳನ್ನು ವರ್ಷಪೂರ್ತಿ ನೀಡುವಂತೆ ಮುಖ್ಯ ಮಂತ್ರಿಗಳ ಗಮನ ಸೆಳೆದು ರಾಜ್ಯಾದ್ಯಾಂತ ಆದಿವಾಸಿಗಳಿಗೆ ವಿತರಿಸಲಾಗುತ್ತಿದೆ ಇದರ ಸದ್ಬಳಕೆಯನ್ನು ಮಾಡಿಕೊಂಡು ಆರೋಗ್ಯವಂತರಾಗಿ ಜೀವನ ನಡೆಸಬೇಕೆಂದರು ಎಂದರು.

    ಚನ್ನಗುಂಡಿ ಕಾಲೋನಿ, ಅಳಲಹಳ್ಳಿ ಕಾಲೋನಿ, ಯಶವಂತಪುರ, ಎತ್ತಿಗೆ ಗ್ರಾಮಗಳ ಸಿಸಿ ರಸ್ತೆ ಹಾಗೂ ಅಂಗನವಾಡಿ ಕೇಂದ್ರದ ನೂತನ ಕಟ್ಟಡಗಳ ನಿರ್ಮಾಣಕ್ಕೆ ಸದ್ಯದಲ್ಲೇ ಶಂಕುಸ್ಥಾಪನೆ ನೆರವೇರಿಸಲಾಗುವುದು. ಸಾರಿಗೆ ಸಮಸ್ಯೆನ್ನು ಶೀಘ್ರದಲ್ಲೇ ಪರಿಹರಿಸಲಾಗುವುದು ಎಂದು ತಿಳಿಸಿದರು.

    ಇತ್ತೀಚೆಗೆ ಹುಲಿ ದಾಳಿಗೆ ಒಳಗಾದ ಕುಟುಂಬಗಳಿಗೆ ಭೇಟಿ ನೀಡಿ ಸಾಂತ್ವನ ಹೇಳಿ ಧೈರ್ಯ ತುಂಬಿ ಸರ್ಕಾರದಿಂದ ಸೂಕ್ತ ಪರಿಹಾರ ದೊರಕುವಂತೆ ಮಾಡಿದ್ದೇನೆ. ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಅರಣ್ಯ ಸಚಿವರಾದ ಈಶ್ವರ್ ಖಂಡ್ರೆರವರೊಂದಿಗೆ ಈ ವಿಚಾರವಾಗಿ ಸುದೀರ್ಘವಾಗಿ ಮಾತನಾಡಿ,  ಅರಣ್ಯದ ಅಂಚಿನಲ್ಲಿ ಇಪಿಟಿ, ರೈಲ್ವೆ ಬ್ಯಾರಿಕೇಡ್, ಜಾಲರಿ ಅಳವಡಿಸುವಂತೆ ಮನವಿ ಮಾಡಿದ್ದೇನೆ, ಕಾಡಿನಿಂದ ಪ್ರಾಣಿಗಳು ಹೊರ ಬರಲು ಹಾಗೂ ಅವುಗಳನ್ನು ತಡೆಗಟ್ಟಲು ವೈಜ್ಞಾನಿಕ ಕಾರಣ ಮತ್ತು ಪರಿಹಾರವನ್ನು ತಿಳಿಸುವಂತೆ ಮೇಲಾಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಲಾಗಿದೆ, ಇದೆಲ್ಲವೂ ಹತೋಟಿಗೆ ಬಂದ ನಂತರ ಸರ್ಕಾರದ ನಿರ್ದೇಶನದಂತೆ ಸಫಾರಿ ಪ್ರಾರಂಭಿಸಲಾಗುವುದು. ಸಾರ್ವಜನಿಕರು ಜಾಗೃತರಾಗಬೇಕು, ಕಾಡು ಪ್ರಾಣಿಗಳು ಹೊರಬಂದಾಗ ಹತ್ತಿರ ಹೋಗದೆ, ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತರಬೇಕು, ಕಾರ್ಯಾಚರಣೆ ವೇಳೆ ಹತ್ತಿರ ಹೋಗದೆ ಇಲಾಖಾಧಿಕಾರಿಗಳಿಗೆ ಸಹಕರಿಸುವಂತೆ ಮನವಿ ಮಾಡಿದರು.

    ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತಿ ಸದಸ್ಯರಾದ ಚಿಕ್ಕಕ್ಯಾತ, ಪ್ರಕಾಶ್ ಚಂದ್ರ, ಶಿವಲಿಂಗಯ್ಯ ಯಶವಂತಪುರ, ಹಾದನೂರು ಪ್ರಕಾಶ್, ಮುಖಂಡರಾದ ಅಣ್ಣಯ್ಯಸ್ವಾಮಿ, ಮನುಗನಹಳ್ಳಿ ಗುರುಸ್ವಾಮಿ, ಬೀರ್ವಾಳು ಚಿಕ್ಕಣ್ಣ, ಸೌಮ್ಯ ಮಂಜುನಾಥ್, ವೆಂಕಟರಾಮು, ನಾಗೇಂದ್ರ, ಪುಟ್ಟಸ್ವಾಮಿ, ಶಿವಮೂರ್ತಿ, ಶಶಿಪಾಟೀಲ್, ಸಿದ್ದರಾಮು, ಅಶ್ರಫಲಿ, ಜಯಕುಮಾರ್, ಅಶೋಕ್. ರೇವಣ್ಣ, ಬಿ.ಸೋಮಣ್ಣ, ನಂದೀಶ್, ಸೋಮ, ಕೃಷ್ಣ, ಮಾಣ್ಬಾ, ಪದ್ಮ, ಗೀತಾ, ರಾಧ, ಶಿವಮ್ಮ, ಲಕ್ಷ್ಮಿಬಾಯಿ, ಸರಸ್ವತಿ, ಪರಿಶಿಷ್ಟ ಪಂಗಡ ಸಹಾಯಕ ನಿರ್ದೇಶಕ ಮಹೇಶ್, ಮ್ಯಾನೇಜರ್ ನಾಗರಾಜು, ಇನ್ನೂ ಮುಖಂಡರು ಹಾಗೂ ಶಾಲೆಯ ಶಿಕ್ಷಕರು ಮತ್ತಿತರರು ಹಾಜರಿದ್ದರು.

    ವರದಿ: ಹಾದನೂರು ಚಂದ್ರ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಕೆಟ್ಟು ನಿಂತ ಬಸ್: ವಿದ್ಯಾರ್ಥಿಗಳಿಂದ ಪರದಾಟ!

    December 4, 2025

    ಪತ್ರಕರ್ತರ ರಕ್ಷಣೆ ಕಾಯ್ದೆ ಜಾರಿಗಾಗಿ ಧರಣಿ: ಜಾನಸನ್ ಘೋಡೆ

    December 4, 2025

    ನಕಲಿ ಜಾತಿ ಪ್ರಮಾಣ ಪತ್ರ: ರವೀಂದ್ರ ಸ್ವಾಮಿ ವಿರುದ್ಧ ಅಟ್ರಾಸಿಟಿ ಪ್ರಕರಣ ದಾಖಲಿಸಿ ಗಡೀಪಾರು ಮಾಡಿ: ಮಾರುತಿ ಬೌದ್ಧೆ

    December 3, 2025

    Leave A Reply Cancel Reply

    Our Picks

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಗುಬ್ಬಿ

    ಹಾಡಹಗಲೇ ಚಿನ್ನದಂಗಡಿಗೆ ನುಗ್ಗಿದ ಕಳ್ಳರು: ಮಾಲಿಕನನ್ನು ಕಟ್ಟಿಹಾಕಿ ಕಳ್ಳತನಕ್ಕೆ ಯತ್ನ

    December 5, 2025

    ಚೇಳೂರು: ಗ್ರಾಮದ ಮಹಾಲಕ್ಷ್ಮಿ ಬ್ಯಾಂಕರ್ ಮತ್ತು ಜ್ಯುವೆಲ್ಲರ್ಸ್ ಗೆ ಕಳ್ಳರು ನುಗ್ಗಿ ಕಳ್ಳತನಕ್ಕೆ ಯತ್ನಿಸಿರುವ ಘಟನೆ ಡಿಸೆಂಬರ್ 4ರಂದು ಬೆಳಗ್ಗೆ…

    ಡಿಸೆಂಬರ್ 12: ಕೆ.ಜೆ.ಕೆ. (KJK) ವಿದ್ಯಾರ್ಥಿಗಳಿಗಾಗಿ ಉದ್ಯೋಗ ಮೇಳ

    December 4, 2025

    ಕೆಟ್ಟು ನಿಂತ ಬಸ್: ವಿದ್ಯಾರ್ಥಿಗಳಿಂದ ಪರದಾಟ!

    December 4, 2025

    ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ: ಬಿಲ್ವಾರ್ಚನೆ ಪೂಜೆ ಮತ್ತು ಧಾರ್ಮಿಕ ಸಭಾ ಕಾರ್ಯಕ್ರಮ

    December 4, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.