nammatumakuru

    Subscribe to Updates

    Get the latest creative news from FooBar about art, design and business.

    What's Hot

    ಹೈಕಮಾಂಡ್ ಸುಮ್ಮನೆ ಇದ್ರೆ ನಾವೇನು ಅರ್ಥ ಮಾಡಿಕೊಳ್ಳೋದು?” :  ಸಿಎಂ ಬದಲಾವಣೆ ಬಗ್ಗೆ ಗೃಹ ಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯೆ

    February 8, 2026

    ಸಿದ್ಧರಾಮಯ್ಯ ರಾಜ್ಯವನ್ನು ದಿವಾಳಿ ಮಾಡುತ್ತಿದ್ದಾರೆ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

    February 8, 2026

    ಸಿಎಂ ಸಿದ್ದರಾಮಯ್ಯ ಸುಳ್ಳಿನ ರಾಜ: ಕೇಂದ್ರ ಸಚಿವ ವಿ. ಸೋಮಣ್ಣ ವಾಗ್ದಾಳಿ

    February 8, 2026
    Facebook Twitter Instagram
    ಟ್ರೆಂಡಿಂಗ್
    • ಹೈಕಮಾಂಡ್ ಸುಮ್ಮನೆ ಇದ್ರೆ ನಾವೇನು ಅರ್ಥ ಮಾಡಿಕೊಳ್ಳೋದು?” :  ಸಿಎಂ ಬದಲಾವಣೆ ಬಗ್ಗೆ ಗೃಹ ಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯೆ
    • ಸಿದ್ಧರಾಮಯ್ಯ ರಾಜ್ಯವನ್ನು ದಿವಾಳಿ ಮಾಡುತ್ತಿದ್ದಾರೆ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ
    • ಸಿಎಂ ಸಿದ್ದರಾಮಯ್ಯ ಸುಳ್ಳಿನ ರಾಜ: ಕೇಂದ್ರ ಸಚಿವ ವಿ. ಸೋಮಣ್ಣ ವಾಗ್ದಾಳಿ
    • ಪಾವಗಡ: ಜಾತಿ ನಿಂದನೆ, ಆಯುಧ ತೋರಿಸಿ ಕೊಲೆ ಬೆದರಿಕೆ: ಇಬ್ಬರ ವಿರುದ್ಧ ದೂರು ದಾಖಲು
    • ತುಮಕೂರು ಕಾಂಗ್ರೆಸ್‌ ನಲ್ಲಿ ಭುಗಿಲೆದ್ದ ಆಕ್ರೋಶ: ‘ನಾಯಕರಿಂದಲೇ ಚುನಾವಣೆ ಗೆಲ್ಲಿಸಿಕೊಳ್ಳಿ’ ಎಂದು ಕಾರ್ಯಕರ್ತರ ಸವಾಲು
    • ಜೀತಕಾರ್ಮಿಕ ಪದ್ಧತಿ ನಿರ್ಮುಲನಾ ದಿನಾಚರಣೆ ದಿನಾಂಕ ಬದಲಿಸಲು ಒತ್ತಾಯ
    • ಸೈಬರ್ ಮೋಸದ ಜಾಲವನ್ನು ಭೇದಿಸಿದ ತುಮಕೂರು ಪೊಲೀಸರು: ಇಬ್ಬರು ಆರೋಪಿಗಳ ಬಂಧನ
    • ಮುಂದಿನ ಚುನಾವಣೆಯಲ್ಲೂ ಜೆಡಿಎಸ್–ಬಿಜೆಪಿ ಮೈತ್ರಿ ಮುಂದುವರಿಯುತ್ತಾ?: ಬಿ.ಎಸ್.ಯಡಿಯೂರಪ್ಪ ಹೇಳಿದ್ದೇನು?
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪರಿಶಿಷ್ಟರ ಸಮಸ್ಯೆ ಆಲಿಸದ ಡಿವೈಎಸ್‌ ಪಿ, ಪಿಎಸ್ ಐ: ಕುಂದುಕೊರತೆ ಸಭೆಗೆ ಆಗಮಿಸಿದ ಎಎಸ್ ಪಿ
    ಕುಣಿಗಲ್ October 15, 2025

    ಪರಿಶಿಷ್ಟರ ಸಮಸ್ಯೆ ಆಲಿಸದ ಡಿವೈಎಸ್‌ ಪಿ, ಪಿಎಸ್ ಐ: ಕುಂದುಕೊರತೆ ಸಭೆಗೆ ಆಗಮಿಸಿದ ಎಎಸ್ ಪಿ

    By adminOctober 15, 2025No Comments2 Mins Read
    kunigal

    ಕುಣಿಗಲ್‌: ಜಿಲ್ಲಾ ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿ ಪುರುಷೋತ್ತಮ್ ಮಂಗಳವಾರ ಕುಣಿಗಲ್ ಪೊಲೀಸ್ ಠಾಣೆಗೆ ಬಂದು ಪರಿಶಿಷ್ಟರ ಕುಂದುಕೊರತೆ ಆಲಿಸಿದರು.

    ಡಿವೈಎಸ್‌ ಪಿ ಮತ್ತು ಅಮೃತೂರು ಪಿಎಸ್‌ ಐ ದಲಿತರ ಸಮಸ್ಯೆಗಳಿಗೆ ಸ್ಪಂದಿಸದೆ ದಲಿತ ವಿರೋಧಿ ನೀತಿ ಅನುಸರಿಸುತ್ತಿದ್ದಾರೆ ಎಂದು ಆರೋಪಿಸಿ ಭಾನುವಾರ ಅಮೃತೂರು ಪೊಲೀಸ್ ಠಾಣಾ ವ್ಯಾಪ್ತಿಯ ಪರಿಶಿಷ್ಟರ ಕುಂದುಕೊರತೆ ಸಭೆಯನ್ನು ದಲಿತ ಮುಖಂಡರು ಬಹಿಷ್ಕರಿಸಿದ್ದರು. ಈ ಹಿನ್ನೆಲೆಯಲ್ಲಿ ಎಸ್‌ ಪಿ ಭೇಟಿ ನೀಡಿದ್ದರು.


    Provided by
    Provided by

    ಸಭೆಯಲ್ಲಿ ಮಾತನಾಡಿದ ದಲಿತ ಮುಖಂಡರು, ಇತ್ತೀಚೆಗೆ ತಾಲ್ಲೂಕಿನ ಹೆಗ್ಗಡತಿಹಳ್ಳಿ, ಚಾಕೇನಹಳ್ಳಿ, ಕೊಡವತ್ತಿ, ಹೊನ್ನಮಾಚನಹಳ್ಳಿ ಮತ್ತು ವಾಣಿಗೆರೆಗಳಲ್ಲಿ ನಡೆದಿರುವ ದಲಿತರ ಮೇಲಿನ ದೌರ್ಜನ್ಯಗಳಲ್ಲಿ ಡಿವೈಎಸ್‌ ಪಿ ಓಂಪ್ರಕಾಶ್ ಮತ್ತು ಅಮೃತೂರು ಪಿಎಸ್‌ ಐ ವರ್ತನೆಗಳನ್ನು ಖಂಡಿಸಿ ಮಾಹಿತಿ ನೀಡಿದರು.

    ಪೊಲೀಸ್ ಅಧಿಕಾರಿಗಳು ದಲಿತರೊಂದಿಗೆ ಸೌಜನ್ಯದಿಂದ ವರ್ತಿಸದೆ, ಪೂರ್ವಾಗ್ರಹ ಪೀಡಿತರಾಗಿ ವರ್ತಿಸುತ್ತಿದ್ದಾರೆ. ನ್ಯಾಯ ಕೇಳಲು ಹೋದವರಿಗೆ ಬೆದರಿಕೆ ಹಾಕಿ ಠಾಣೆಯಿಂದ ಹೊರಗಟ್ಟುತ್ತಿದ್ದಾರೆ ಎಂದು ದೂರಿದರು.

    ಸಮಸ್ಯೆಗಳನ್ನು ಆಲಿಸಿದ ಎಎಸ್‌ ಪಿ ಪುರುಷೋತ್ತಮ್, ಕೆಳ ಹಂತದ ಅಧಿಕಾರಿಗಳು ಸಮಸ್ಯೆಗಳಿಗೆ ಸ್ಪಂದಿಸುವ ಮನೋಭಾವ ತೋರದ ಕಾರಣ ಸಮಸ್ಯೆಗಳು ಹೆಚ್ಚಾಗಿದೆ. ಇನ್ನೂ ಡಿವೈಎಸ್‌ ಪಿ ಸ್ಥಳಗಳಿಗೆ ತೆರಳಿ, ಸಮಸ್ಯೆಗಳನ್ನು ಅರಿತು ಕಾರ್ಯನಿರ್ವಹಿಸಿದಾಗ ಸಮಸ್ಯೆಗಳು ಕಡಿಮೆಯಾಗುತ್ತದೆ. ಜನಸ್ನೇಹಿ ವರ್ತನೆ ರೂಢಿಸಿಕೊಳ್ಳಬೇಕು. ದಲಿತ ಮುಖಂಡರು ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ ಪರಿಹಾರ ಕಂಡುಕೊಳ್ಳಬೇಕಿದೆ. ಮುಂದಿನ ದಿನಗಳಲ್ಲಿ ಸಮಸ್ಯೆಯಲ್ಲಿರುವ ಪರಿಶಿಷ್ಟರ ಕಾಲೋನಿಗಳಿಗೆ ತೆರಳಿ ಸ್ಥಳದಲ್ಲೇ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಕಾರ್ಯಕ್ರಮ ರೂಪಿಸಲಾಗುವುದು. ಕಾನೂನು ಇರುವುದೇ ಸಮಸ್ಯೆಗಳನ್ನು ಬಗೆಹರಿಸಿ ಶಾಂತಿ, ವ್ಯವಸ್ಥಿತ ಸಮಾಜ ನಿರ್ಮಾಣಕ್ಕೆ ಎಂದರು.

    ಡಿವೈಎಸ್‌ಪಿ ಓಂ ಪ್ರಕಾಶ್ ಮಾತನಾಡಿ, ಕಾನೂನು ಪ್ರಕಾರ ಕಾರ್ಯನಿರ್ವಹಿಸುವಾಗ ಕೆಲವರಿಗೆ ಅನುಕೂಲವಾಗಿದೆ. ಕೆಲವರಿಗೆ ಅನಾನುಕೂಲವಾಗಿದೆ ಎಂದರು.

    ತಾಲ್ಲೂಕಿನಲ್ಲಿ ಹತ್ತುಹದಿನೈದು ವರ್ಷದಿಂದ ಬೇರುಬಿಟ್ಟಿರುವ ಪೊಲೀಸರನ್ನು ಮೊದಲು ವರ್ಗಾವಣೆ ಮಾಡಿ ಎಂದು ದಲಿತ ಮುಖಂಡ ಬಿ.ಜಿ.ಶ್ರೀನಿವಾಸ್‌ ಆಗ್ರಹಿಸಿದರು.

    ಸಿಪಿಐ ಮಾಧ್ಯನಾಯಕ್‌, ನವೀನ್ ಗೌಡ ಹಾಗೂ ದಲಿತ್ ನಾರಾಯಣ್, ರಾಮಲಿಂಗಯ್ಯ, ರಾಜು, ಮಡಕೆಹಳ್ಳಿ ರಾಮಕೃಷ್ಣ, ಪ್ರಶಾಂತ್ಕವಿ, ಬಿ.ಜಿ ಗಂಗಾಧರ್, ರಾಮಚಂದ್ರಯ್ಯ ಶ್ರೀನಿವಾಸ್‌ ಹಾಜರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಕಾಟಾಚಾರಕ್ಕೆ ಯೋಜನೆ ತಯಾರಿಸಿ ಕಾಮಗಾರಿ: ಅಧಿಕಾರಿಗಳ ವಿರುದ್ಧ ಶಾಸಕ ಡಾ.ಹೆಚ್.ಡಿ.ರಂಗನಾಥ್ ಕಿಡಿ

    January 22, 2026

    ಜನವರಿ 17: ವಿದ್ಯಾ ಚೌಡೇಶ್ವರಿ ಅಮ್ಮನವರ ವರ್ಧಂತಿ ಮಹೋತ್ಸವ

    January 16, 2026

    ಕುಣಿಗಲ್‌ ನಲ್ಲಿ ಕಸಾಪ ಭವನದ ಗ್ರಂಥಾಲಯ ಲೋಕಾರ್ಪಣೆ:  “ರಾಜಕೀಯ ಸ್ವಾರ್ಥಕ್ಕೆ ಧರ್ಮ, ಜಾತಿಗಳ ಕಂದಕ ಸೃಷ್ಟಿ”

    December 27, 2025

    Leave A Reply Cancel Reply

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಹೈಕಮಾಂಡ್ ಸುಮ್ಮನೆ ಇದ್ರೆ ನಾವೇನು ಅರ್ಥ ಮಾಡಿಕೊಳ್ಳೋದು?” :  ಸಿಎಂ ಬದಲಾವಣೆ ಬಗ್ಗೆ ಗೃಹ ಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯೆ

    February 8, 2026

    ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಸದ್ದು ಮಾಡುತ್ತಿರುವ ಮುಖ್ಯಮಂತ್ರಿ ಬದಲಾವಣೆ ಹಾಗೂ ಅಧಿಕಾರ ಹಂಚಿಕೆ ವಿಚಾರವಾಗಿ ಗೃಹ ಸಚಿವ ಡಾ. ಜಿ.…

    ಸಿದ್ಧರಾಮಯ್ಯ ರಾಜ್ಯವನ್ನು ದಿವಾಳಿ ಮಾಡುತ್ತಿದ್ದಾರೆ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

    February 8, 2026

    ಸಿಎಂ ಸಿದ್ದರಾಮಯ್ಯ ಸುಳ್ಳಿನ ರಾಜ: ಕೇಂದ್ರ ಸಚಿವ ವಿ. ಸೋಮಣ್ಣ ವಾಗ್ದಾಳಿ

    February 8, 2026

    ಪಾವಗಡ: ಜಾತಿ ನಿಂದನೆ, ಆಯುಧ ತೋರಿಸಿ ಕೊಲೆ ಬೆದರಿಕೆ: ಇಬ್ಬರ ವಿರುದ್ಧ ದೂರು ದಾಖಲು

    February 8, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.