nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸರಗೂರು: ಅನಂತನಾಥ ತೀರ್ಥಂಕರರ ಜಿನ ಚೈತ್ಯಾಲಯದ 131ನೇ ವಾರ್ಷಿಕ ಪೂಜಾ ಮಹೋತ್ಸವ

    June 22, 2026

    ‘ಚಂದ್ರಗಿರಿ’ ಸಸ್ಪೆನ್ಸ್ ಥ್ರಿಲ್ಲರ್ ಚಿತ್ರದ ಮೊದಲ ಹಂತದ ಶೂಟಿಂಗ್ ಕಂಪ್ಲೀಟ್!

    June 22, 2026

    ಶ್ರವಣ ಸಮಸ್ಯೆ ನಿವಾರಣೆಗೆ ಮಾನವೀಯ ಸ್ಪಂದನೆ: ತುಮಕೂರಿನಲ್ಲಿ ಉಚಿತ ತಪಾಸಣೆ, ಶ್ರವಣ ಯಂತ್ರಕ್ಕೆ 40% ಸಹಾಯಧನ

    June 22, 2026
    Facebook Twitter Instagram
    ಟ್ರೆಂಡಿಂಗ್
    • ಸರಗೂರು: ಅನಂತನಾಥ ತೀರ್ಥಂಕರರ ಜಿನ ಚೈತ್ಯಾಲಯದ 131ನೇ ವಾರ್ಷಿಕ ಪೂಜಾ ಮಹೋತ್ಸವ
    • ‘ಚಂದ್ರಗಿರಿ’ ಸಸ್ಪೆನ್ಸ್ ಥ್ರಿಲ್ಲರ್ ಚಿತ್ರದ ಮೊದಲ ಹಂತದ ಶೂಟಿಂಗ್ ಕಂಪ್ಲೀಟ್!
    • ಶ್ರವಣ ಸಮಸ್ಯೆ ನಿವಾರಣೆಗೆ ಮಾನವೀಯ ಸ್ಪಂದನೆ: ತುಮಕೂರಿನಲ್ಲಿ ಉಚಿತ ತಪಾಸಣೆ, ಶ್ರವಣ ಯಂತ್ರಕ್ಕೆ 40% ಸಹಾಯಧನ
    • ತುಮಕೂರಿನಲ್ಲಿ ಉಚಿತ ಶ್ರವಣ ತಪಾಸಣೆ, ಶ್ರವಣ ಯಂತ್ರಗಳಿಗೆ ಶೇ.40ರಷ್ಟು ಸಹಾಯಧನ | ಜೂ.27ರಂದು ಕಾರ್ಯಕ್ರಮ
    • ಮಕ್ಕಳಿಗೆ ಅಸಾಧಾರಣ ಜಿಲ್ಲಾ ಮಟ್ಟದ ಪ್ರಶಸ್ತಿ: 10 ಸಾವಿರ ನಗದು ಬಹುಮಾನಕ್ಕೆ ಅರ್ಜಿ ಸಲ್ಲಿಸಿ
    • 20 ಜೋಡಿಗಳ ಸಾಮೂಹಿಕ ವಿವಾಹ: 10 ಸಾವಿರ ಗ್ರಂಥ ದಾಸೋಹಕ್ಕೆ ಚಾಲನೆ | ಬದುಕಿನ ವಿಕಾಸಕ್ಕೆ ಧರ್ಮವೇ ಅಡಿಪಾಯ: ಶ್ರೀರಂಭಾಪುರಿ ಜಗದ್ಗುರು
    • ಜೂನ್ 24 ರಂದು ಟಾಟಾ ಪವರ್ ಖಾಸಗೀಕರಣ ವಿರೋಧಿಸಿ ಬೃಹತ್ ಪ್ರತಿಭಟನೆ
    • ‘ಪ್ರತಿಯೊಂದು ಮಠವೂ ಪುಸ್ತಕ ದಾಸೋಹ ನಡೆಸಲಿ’: ಸಿದ್ದರಬೆಟ್ಟದ ರಂಭಾಪುರಿ ಶಾಖಾ ಮಠದ ವಾರ್ಷಿಕೋತ್ಸವದಲ್ಲಿ ಹುಲಿಕಲ್ ನಟರಾಜ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಆಸ್ಪತ್ರೆಯಲ್ಲಿ ಅಮಾನವೀಯವಾಗಿ ವರ್ತಿಸಿದರೆ ಕೆಲಸದಿಂದ ವಜಾ: ಸಚಿವ ಸುಧಾಕರ್ ಎಚ್ಚರಿಕೆ
    ರಾಜ್ಯ ಸುದ್ದಿ November 5, 2022

    ಆಸ್ಪತ್ರೆಯಲ್ಲಿ ಅಮಾನವೀಯವಾಗಿ ವರ್ತಿಸಿದರೆ ಕೆಲಸದಿಂದ ವಜಾ: ಸಚಿವ ಸುಧಾಕರ್ ಎಚ್ಚರಿಕೆ

    By adminNovember 5, 2022No Comments2 Mins Read
    sudhakar

    Provided by
    Provided by

    ಆಸ್ಪತ್ರೆಗಳಲ್ಲಿ ವೈದ್ಯರು, ವೈದ್ಯಾಧಿಕಾರಿಗಳು ಅಮಾನವೀಯವಾಗಿ ನಡೆದುಕೊಂಡರೆ ಕೇವಲ ಅಮಾನತಲ್ಲ, ಕೆಲಸದಿಂದಲೇ ವಜಾ ಮಾಡಲಾಗುವುದು. ಈ ಕುರಿತು ವಜಾ ಮಾಡಲು ಕಾನೂನಿನಲ್ಲಿ ಬದಲಾವಣೆ ತರಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಚರ್ಚಿಸಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ತಿಳಿಸಿದ್ದಾರೆ.

    ತುಮಕೂರು ಜಿಲ್ಲಾಸ್ಪತ್ರೆಯಲ್ಲಿ ತಾಯಿ ಹಾಗೂ ನವಜಾತ ಶಿಶುಗಳ ಮರಣದ ದುರ್ಘಟನೆ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ ಅಧಿವೇಶನದಲ್ಲೇ ಕಾನೂನು ತಿದ್ದುಪಡಿ ತರಲು ಅಧಿಕಾರಿಗಳೊಂದಿಗೆ ಚರ್ಚಿಸಲಾಗುವುದು ಎಂದರು.

    ನತದೃಷ್ಟ ಹೆಣ್ಣುಮಗಳನ್ನು ಬಾಲಕಿಯರ ಮಂದಿರಕ್ಕೆ ದಾಖಲಿಸಲಾಗಿದೆ. ಆಕೆಗೆ ಸರ್ಕಾರದಿಂದಲೇ 5 ಲಕ್ಷ ರೂ. ಎಫ್‌ಡಿ ಇರಿಸಲು ಕ್ರಮ ವಹಿಸಲಾಗಿದೆ. ಹಾಗೆಯೇ ಆಕೆಯ ಶೈಕ್ಷಣಿಕ ಭವಿಷ್ಯವನ್ನೂ ರೂಪಿಸಲಾಗುವುದು. ಈ ಘಟನೆಯಲ್ಲಿ ಅಮಾನವೀಯವಾಗಿ ನಡೆದುಕೊಂಡ ವೈದ್ಯರು, ಸಿಬ್ಬಂದಿಗೆ ಹಾಗೂ ಜಿಲ್ಲಾ ಸರ್ಜನ್‌ ಗೆ, ಆಡಳಿತ ವೈಫಲ್ಯ ಎಂದು ಪರಿಗಣಿಸಿ ಕಾರಣ ಕೇಳಿ ನೋಟಿಸ್‌ ನೀಡಲಾಗಿದೆ. ಕರ್ತವ್ಯದಲ್ಲಿರುವ ವೈದ್ಯರಿಗೆ ಕೂಡ ಪ್ರಕರಣದ ಗಂಭೀರತೆ ಬಗ್ಗೆಯೂ ತಿಳಿಸಲಾಗಿದೆ. ಹಾಗೆಯೇ ಅವರಿಗೂ ಶೋಕಾಸ್‌ ನೋಟಿಸ್‌ ನೀಡಿ 24 ಗಂಟೆಯೊಳಗೆ ಉತ್ತರ ನೀಡಲು ಸೂಚಿಸಲಾಗಿದೆ ಎಂದು ತಿಳಿಸಿದರು.

    ಈ ರೀತಿಯ ಘಟನೆ ಎಂದೂ ಮರುಕಳಿಸಬಾರದು. ಅದಕ್ಕಾಗಿ ಎಲ್ಲಾ ಕ್ರಮಗಳನ್ನು ವಹಿಸಲಾಗಿದೆ. ಯಾವುದೇ ರೋಗಿ ತುರ್ತು ಪರಿಸ್ಥಿತಿಯಲ್ಲಿ ಆಸ್ಪತ್ರೆಗೆ ಬಂದಾಗ ಯಾವ ದಾಖಲೆಗಳೂ ಮುಖ್ಯವಲ್ಲ. ತಾಯಿ ಕಾರ್ಡ್‌, ಆಧಾರ್‌ ಕಾರ್ಡ್‌ಗಳನ್ನು ಚಿಕಿತ್ಸೆ ನೀಡಿದ ಬಳಿಕವೂ ಕೇಳಬಹುದು. ಈ ಬಗ್ಗೆ ಹಿಂದಿನಿಂದಲೂ ಸೂಚನೆ ಇದೆ. ಖಾಸಗಿ ಆಸ್ಪತ್ರೆಗಳಲ್ಲಿ 76 ತುರ್ತು ಸೇವೆಗಳನ್ನು ಜೋಡಿಸಲಾಗಿದೆ. ಸರ್ಕಾರಿ ಆಸ್ಪತ್ರೆಯಲ್ಲಿ ಈ ಸೇವೆಗಳು ಇಲ್ಲವಾದರೆ, ಖಾಸಗಿ ಆಸ್ಪತ್ರೆಯಲ್ಲಿ ಆ ಸೇವೆ ಪಡೆಯಬಹುದು. ಆಗ ಸರ್ಕಾರವೇ ವೆಚ್ಚ ಭರಿಸುತ್ತದೆ ಎಂದರು.


    Provided by
    Provided by

    ಕರಾಳ ಘಟನೆ

    ಎಲ್ಲಾ ಸೌಲಭ್ಯಗಳು ಇದ್ದರೂ, ಆರೋಗ್ಯ ಸಿಬ್ಬಂದಿ ಮಾಡಿದ ಕೆಲಸದಿಂದ ಸರ್ಕಾರಕ್ಕೆ ಮುಜುಗರವಾಗಿದೆ. ಇದು ಇಡೀ ಮಾನವ ಸಂಕುಲಕ್ಕೆ ಕರಾಳ ದಿನವಾಗಿದೆ. ಇದಕ್ಕಾಗಿ ನಾನು ಬಹಳ ವಿಷಾದ, ಸಹಾನುಭೂತಿ ವ್ಯಕ್ತಪಡಿಸುತ್ತೇನೆ ಎಂದರು.

    ಈ ಕುಟುಂಬದ ಸಂಬಂಧಿಕರನ್ನು ಪತ್ತೆ ಮಾಡಲು 36 ಗಂಟೆಗಳಿಂದ ಪೊಲೀಸರು ಶ್ರಮಿಸುತ್ತಿದ್ದಾರೆ. ಆದರೆ ಯಾರೂ ಇನ್ನೂ ಮುಂದೆ ಬಂದಿಲ್ಲ. ಇಂತಹ ಪರಿಸ್ಥಿತಿ ಇದ್ದರೂ, ಸಂಪೂರ್ಣ ಜವಾಬ್ದಾರಿಯನ್ನು ಸರ್ಕಾರವೇ ವಹಿಸಿಕೊಳ್ಳಲಿದೆ ಎಂದರು.

    ಗರ್ಭಿಣಿ ಯಾವುದೇ ರಾಜ್ಯದವರಾಗಿದ್ದರೂ, ದಾಖಲೆ ಇಲ್ಲದಿದ್ದರೂ ಆಸ್ಪತ್ರೆಗೆ ಬಂದಾಗ ಚಿಕಿತ್ಸೆ ನೀಡಿ ಹೆರಿಗೆ ಮಾಡಿಸಬೇಕಿತ್ತು. ಮಾನವೀಯತೆಯಿಂದ ಅವರೊಂದಿಗೆ ನಡೆದುಕೊಳ್ಳಬೇಕಿತ್ತು.ಇಲ್ಲಿ ದಾಖಲೆ ಮುಖ್ಯವಲ್ಲ, ಜೀವ ಮುಖ್ಯ. ಕೆಲವರಿಂದ ಆದ ಈ ಘಟನೆಯಿಂದ ಇಡೀ ವ್ಯವಸ್ಥೆಗೆ ಕೆಟ್ಟ ಹೆಸರು ಬಂದಿದೆ ಎಂದು ಬೇಸರ ವ್ಯಕ್ತಪಡಿಸಿದರು.

    ಸಿದ್ದರಾಮಯ್ಯಗೆ ಬಹಿರಂಗ ಸವಾಲು

    ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದಾಗ ಮೈಸೂರು ಜಿಲ್ಲೆಯಲ್ಲಿ ಎಷ್ಟು ಶಿಶುಗಳು ಸತ್ತಿವೆ ಎಂದು ದಾಖಲೆ ನೀಡುತ್ತೇನೆ. ಆಗ ಸಿದ್ದರಾಮಯ್ಯನವರು ಅಥವಾ ಆಗಿನ ಆರೋಗ್ಯ ಸಚಿವರು ರಾಜೀನಾಮೆ ನೀಡಲಿಲ್ಲ. ಇಂತಹ ವಿಚಾರದಲ್ಲೂ ರಾಜಕೀಯ ಮಾಡುತ್ತಾರೆಂದರೆ ಇವರು ರಾಜಕೀಯ ನಾಯಕರು ಮಾತ್ರವಲ್ಲ, ಒಬ್ಬ ಉತ್ತಮ ಮಾನವನಾಗಲೂ ಸಾಧ್ಯವಿಲ್ಲ. ಇಷ್ಟು ಕೆಳ ಹಂತಕ್ಕೆ ಹೋಗಿ ಅವರು ತೀರ್ಮಾನ ಮಾಡಬಾರದು. ಇದರಲ್ಲೂ ರಾಜಕೀಯ ಮಾಡಬಾರದು ಎಂದರು.

    ಸಿದ್ದರಾಮಯ್ಯನವರು ಸಿಎಂ ಆಗಿದ್ದಾಗ, ಎಷ್ಟು ಆಸ್ಪತ್ರೆಗಳಲ್ಲಿ ಎಷ್ಟು ಸಾವುಗಳಾಗಿವೆ ಎಂಬ ದಾಖಲೆಗಳನ್ನು ನೀಡುತ್ತೇನೆ. ಅವರು ಕೂಡ ವಿರೋಧ ಪಕ್ಷದ ನಾಯಕರ ಸ್ಥಾನಕ್ಕೆ ರಾಜೀನಾಮೆ ನೀಡುವುದಾದರೆ, ನಾನು ಕೂಡ ಆರೋಗ್ಯ ಸಚಿವನ ಸ್ಥಾನಕ್ಕೆ ನೀಡುತ್ತೇನೆ. ಇದು ಬಹಿರಂಗ ಸವಾಲು ಎಂದರು.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

     

    admin
    • Website

    Related Posts

    ಮಹಿಳೆಯರು ಸೌಲಭ್ಯಗಳನ್ನು ಬಳಸಿಕೊಂಡು ಅಭಿವೃದ್ಧಿ ಹೊಂದಲು ಡಾ.ಅಕ್ಕೈ ಪದ್ಮಶಾಲಿ ಕರೆ

    June 20, 2026

    ಕರ್ನಾಟಕ ವಿಧಾನ ಪರಿಷತ್ ಚುನಾವಣೆ ವೇಳೆ ನಡೆದ ಹಲವು ಸ್ವಾರಸ್ಯಕರ ಘಟನೆಗಳು ಇಲ್ಲಿವೆ!

    June 18, 2026

    “ಹೌದು ನಾನು ಏಜೆಂಟ್, ಆದರೆ ಮಾಫಿಯಾ ಕಮಿಷನ್ ಏಜೆಂಟ್ ಅಲ್ಲ”: ಸಿಎಂ ಡಿಕೆಶಿಗೆ ಆರ್. ಅಶೋಕ್ ತಿರುಗೇಟು

    June 11, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಸರಗೂರು: ಅನಂತನಾಥ ತೀರ್ಥಂಕರರ ಜಿನ ಚೈತ್ಯಾಲಯದ 131ನೇ ವಾರ್ಷಿಕ ಪೂಜಾ ಮಹೋತ್ಸವ

    June 22, 2026

    ಸರಗೂರು: ಪಟ್ಟಣದ ಜೈನ ಸಮಾಜದ 1008 ಅನಂತನಾಥ ತೀರ್ಥಂಕರರ ನೂತನ ಜಿನ ಚೈತ್ಯಾಲಯದ 131ನೇ ವಾರ್ಷಿಕ ಪೂಜಾ ಹಾಗೂ ಧಾಮಸಂಪ್ರೋಕ್ಷಣೆ…

    ‘ಚಂದ್ರಗಿರಿ’ ಸಸ್ಪೆನ್ಸ್ ಥ್ರಿಲ್ಲರ್ ಚಿತ್ರದ ಮೊದಲ ಹಂತದ ಶೂಟಿಂಗ್ ಕಂಪ್ಲೀಟ್!

    June 22, 2026

    ಶ್ರವಣ ಸಮಸ್ಯೆ ನಿವಾರಣೆಗೆ ಮಾನವೀಯ ಸ್ಪಂದನೆ: ತುಮಕೂರಿನಲ್ಲಿ ಉಚಿತ ತಪಾಸಣೆ, ಶ್ರವಣ ಯಂತ್ರಕ್ಕೆ 40% ಸಹಾಯಧನ

    June 22, 2026

    ತುಮಕೂರಿನಲ್ಲಿ ಉಚಿತ ಶ್ರವಣ ತಪಾಸಣೆ, ಶ್ರವಣ ಯಂತ್ರಗಳಿಗೆ ಶೇ.40ರಷ್ಟು ಸಹಾಯಧನ | ಜೂ.27ರಂದು ಕಾರ್ಯಕ್ರಮ

    June 22, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.