ತುಮಕೂರು: ಶ್ರಮ ಜೀವಿಗಳಾದ ಸ್ಲಂ ಜನರನ್ನು ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ನಿರ್ಲಕ್ಷಿಸುತ್ತಲೇ ಬಂದಿದ್ದು, ನಮ್ಮ ಅಸ್ತಿತ್ವವನ್ನು ನಾವು ಉಳಿಸಿಕೊಳ್ಳಬೇಕಾದರೆ ಸಂಘಟಿತರಾಗಬೇಕು ಎಂದು ಸ್ಲಂ ಜನಾಂದೋಲನ ಕರ್ನಾಟಕ ರಾಜ್ಯ ಸಂಚಾಲಕ ಎ.ನರಸಿಂಹಮೂರ್ತಿ ಹೇಳಿದರು.
ತುಮಕೂರಿನ ಕ್ಯಾತ್ಸಂದ್ರ ಎಳ್ಳರಬಂಡೆ 34 ನೇ ವಾರ್ಡ್ ನಲ್ಲಿ ಸ್ಲಂ ಜನಾಂದೋಲನ ಕರ್ನಾಟಕ ಮತ್ತು ತುಮಕೂರು ಜಿಲ್ಲಾ ಕೊಳಗೇರಿ ನಿವಾಸಿಗಳ ಹಿತರಕ್ಷಣಾ ಸಮಿತಿಯಿಂದ ಸ್ಲಂ ಶಾಖಾ ಸಮಿತಿಯ ನಾಮಫಲಕವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕಳೆದ 20 ವರ್ಷಗಳಿಂದ ಸಮಿತಿಯು ಜಿಲ್ಲೆಯಲ್ಲಿ ಹೋರಾಟ ಮಾಡುವ ಮೂಲಕ ಸ್ಲಂ ನಿವಾಸಿಗಳಿಗೆ ನ್ಯಾಯ ದೊರಕಿಸುತ್ತಿದೆ.ಸರ್ಕಾರದ ಸೌಲಭ್ಯ ಪಡೆದುಕೊಳ್ಳುವ ಮೂಲಕ ಸ್ಲಂ ಪ್ರದೇಶಗಳನ್ನು ಉತ್ತಮೀಕರಣ ಮಾಡಬೇಕಿದೆ ಎಂದು ಅವರು ಕರೆ ನೀಡಿದರು.
ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಕಾರ್ಮಿಕ ಮುಖಂಡರಾದ ಸೈಯದ್ ಮುಜೀಬ್, ಅಭಿವೃದ್ಧಿ ಹೆಸರಿನಲ್ಲಿ ಸರ್ಕಾರ ನಡೆಸುತ್ತಿರುವ ರಸ್ತೆ ಸೇರಿದಂತೆ ವಿವಿಧ ಕಾಮಗಾರಿಗಳು ಬಡವರು ವಾಸಿಸುವ ಪ್ರದೇಶದಿಂದಲೇ ಹಾದುಹೋಗುತ್ತದೆ. ಶ್ರೀಮಂತರ ಪ್ರದೇಶದಲ್ಲಿ ರಸ್ತೆ ಹೋಗುವುದಿದ್ದರೆ, ರಸ್ತೆಯನ್ನು ತುಂಡರಿಸಿ ಬಡವರ ಪ್ರದೇಶದ ಕಡೆಗೆ ತಿರುಗಿಸುತ್ತಾರೆ. ಬಡವರಿರುವ ಪ್ರದೇಶವನ್ನು ರಕ್ಷಿಸಲು ಇವರಿಗೆ ಮನಸ್ಸು ಬರುವುದಿಲ್ಲ ಎಂದು ಬಡವರು ಹಾಗೂ ಶ್ರೀಮಂತರ ನಡುವಿನ ತಾರತಮ್ಯವನ್ನು ವಿರೋಧಿಸಿ ಬೇಸರ ವ್ಯಕ್ತಪಡಿಸಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB