nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಧುಗಿರಿ:  ಸೊಳ್ಳೆಗಳ ವಿಪರೀತ ಕಾಟಕ್ಕೆ ಬಳಲಿ ಬೆಂಡಾದ ಜನ

    November 17, 2025

    ಮಧುಗಿರಿ: ಬಿಜೆಪಿ ಒಬಿಸಿ ಮೋರ್ಚಾ ಸಭೆ

    November 17, 2025

    ಬೀದರ್ | ಕಬ್ಬು ಬೆಲೆ ನಿಗದಿಗೆ ಆಗ್ರಹಿಸಿ ರೈತನಿಂದ ಉರುಳು ಸೇವೆ

    November 17, 2025
    Facebook Twitter Instagram
    ಟ್ರೆಂಡಿಂಗ್
    • ಮಧುಗಿರಿ:  ಸೊಳ್ಳೆಗಳ ವಿಪರೀತ ಕಾಟಕ್ಕೆ ಬಳಲಿ ಬೆಂಡಾದ ಜನ
    • ಮಧುಗಿರಿ: ಬಿಜೆಪಿ ಒಬಿಸಿ ಮೋರ್ಚಾ ಸಭೆ
    • ಬೀದರ್ | ಕಬ್ಬು ಬೆಲೆ ನಿಗದಿಗೆ ಆಗ್ರಹಿಸಿ ರೈತನಿಂದ ಉರುಳು ಸೇವೆ
    • ನ.19ರಂದು ಎಲ್.ಜಿ.ಹಾವನೂರು ಪ್ರತಿಮೆ ಅನಾವರಣ
    • ತುಮಕೂರು | ನವೆಂಬರ್ 18ರಂದು ನಗರದಲ್ಲಿ ಸಹಕಾರ ಸಪ್ತಾಹ
    • ತುಮಕೂರು | ನ.30ರಂದು ರಾಪಿಡ್ ಚೆಸ್ ಟೂರ್ನಮೆಂಟ್
    • ಕಬ್ಬು ಬೆಳೆಗಾರರ ಸಮಸ್ಯೆ ಸೇರಿ ಹಲವು ಸಮಸ್ಯೆ ಬಗ್ಗೆ ಪ್ರಧಾನಿಗಳ ಜತೆ ಸಿಎಂ ಚರ್ಚೆ: ಸಚಿವ ಪರಮೇಶ್ವರ್
    • ಆಗ್ನೆಯ ಪದವೀಧರರ ಮತದಾರರರ ನೋಂದಣಿ: ನ.25ರಿಂದ ಡಿ.10ರವರೆಗೆ ಮುಂದೂಡಿಕೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅತಿಥಿ ಉಪನ್ಯಾಸಕರ ತುಮಕೂರು ಜಿಲ್ಲಾ ಸಮಾವೇಶ: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯ
    ರಾಜ್ಯ ಸುದ್ದಿ January 9, 2023

    ಅತಿಥಿ ಉಪನ್ಯಾಸಕರ ತುಮಕೂರು ಜಿಲ್ಲಾ ಸಮಾವೇಶ: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯ

    By adminJanuary 9, 2023No Comments2 Mins Read
    athiti upanyasaka

    ತುಮಕೂರಿನ ಪತ್ರಿಕಾ ಭವನದಲ್ಲಿ ಸರ್ಕಾರಿ ಪದವಿ ಪೂರ್ವ ಅತಿಥಿ ಉಪನ್ಯಾಸಕರ ಜಿಲ್ಲಾ ಸಮಾವೇಶ ರವಿವಾರ ಜರುಗಿತು.
    ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆ, ತಿಂಗಳಿಗೆ ರೂ. 20,000 ಗೌರವಧನ ನೀಡುವಂತೆ ಹಾಗೂ ವಾರಕ್ಕೆ 10 ಗಂಟೆಗಳಿಗಿಂತ ಹೆಚ್ಚು ಕಾರ್ಯಭಾರ ನೀಡುತ್ತಿರುವುದನ್ನು ವಿರೋಧಿಸಿ ಈ ಸಮಾವೇಶ ಜರುಗಿತು.

    ತುಮಕೂರು ಜಿಲ್ಲೆಯ ಎಲ್ಲಾ ತಾಲೂಕುಗಳಿಂದ ಪದವಿ ಪೂರ್ವ ಅತಿಥಿ ಉಪನ್ಯಾಸಕರು ಈ ಸಮಾವೇಶದಲ್ಲಿ ಭಾಗಿಯಾಗಿದ್ದರು.ಮುಖ್ಯ ಅತಿಥಿಗಳಾಗಿ ಆಗಮಿಸಿದ ದೊರೆರಾಜು ,ಪ್ರಗತಿಪರ ಚಿಂತಕರು ಹಾಗೂ ನಿವೃತ್ತ ಡಿಡಿಪಿಐ ಸಮಾವೇಶವನ್ನು ಕುರಿತು ಮಾತನಾಡಿ, ಇಂದು ಎಲ್ಲಾ ಸರ್ಕಾರಗಳು ಜನವಿರೋಧಿಯಾಗಿದ್ದು, ಅತಿಥಿ ಉಪನ್ಯಾಸಕರಿಗೆ ಯಾವುದೇ ರೀತಿಯ ನೆರವು ನೀಡುತ್ತಿಲ್ಲ.


    Provided by
    Provided by

    ಉಪನ್ಯಾಸಕರು ಬೀದಿಗಿಳಿದೇ ಸಮಸ್ಯೆಗಳ ವಿರುದ್ಧ ಹೋರಾಟ ಮಾಡಬೇಕಾದ ಸಂದರ್ಭ ಬಂದಿದೆ ಎಂದರು.
    ಸರ್ಕಾರಿ ಪದವಿ ಪೂರ್ವ ಅತಿಥಿ ಉಪನ್ಯಾಸಕರ ಸಂಘಟನೆಯ ರಾಜ್ಯ ಸಲಹೆಗಾರರಾದ ವಿಎನ್ ರಾಜಶೇಖರ್ ಮಾತನಾಡಿ, ವಾರಕ್ಕೆ ಕೇವಲ 10 ಗಂಟೆಗಳು ಮಾತ್ರ ಕಾರ್ಯಭಾರ ನೀಡಬೇಕೆಂದು ಪದವಿ ಪೂರ್ವ ಇಲಾಖೆಯ ಸುತ್ತೋಲೆ ಇದ್ದರೂ, ಪದವಿ ಪೂರ್ವ ಅತಿಥಿ ಉಪನ್ಯಾಸಕರಿಗೆ ವಾರಕ್ಕೆ 20 ಗಂಟೆಗಳಿಗಿಂತ ಹೆಚ್ಚು ಕಾರ್ಯಭಾರ ನೀಡುತ್ತಿರುವುದು ತುಮಕೂರಿನಲ್ಲಿ ಕಂಡು ಬಂದಿದೆ.

    ಈ ಕೂಡಲೇ ಪದವಿ ಪೂರ್ವ ಇಲಾಖೆ ಹಾಗೂ ಸರ್ಕಾರ ಈ ಶೋಷಣೆಯನ್ನು ನಿಲ್ಲಿಸಬೇಕಾಗಿದೆ. ಅತಿಥಿ ಉಪನ್ಯಾಸಕರಿಗೆ ಕನಿಷ್ಠ 20,000 ರೂ ನೀಡಬೇಕಾಗಿದೆ”, ಎಂದು ಈ ಬೇಡಿಕೆಗಳನ್ನು ಇಟ್ಟು ಹೋರಾಟ ಮುಂದುವರಿಸಿ ಎಂದು ಹೇಳಿದರು.
    ಈ ಸಂದರ್ಭದಲ್ಲಿ ಸರ್ಕಾರಿ ಪದವಿ ಪೂರ್ವ ಅತಿಥಿ ಉಪನ್ಯಾಸಕರ ಸಂಘಟನೆಯ ರಾಜ್ಯ ಕಾರ್ಯದರ್ಶಿ ರಾಜೇಶ್ ಭಟ್, ರಾಜ್ಯ ಅಧ್ಯಕ್ಷರಾದ ಪದ್ಮಪ್ರಭ ಇಂದ್ರ , ರಾಜ್ಯ ಜಂಟಿ ಕಾರ್ಯದರ್ಶಿ ಎಸ್ಜಿ ನಾಗರತ್ನ, AICUTA(NR) ಅಖಿಲ ಭಾರತ ಅಧ್ಯಕ್ಷರಾದ ಸುನೀತಾ, ಮತ್ತು ಪ್ರಗತಿಪರ ಹೋರಾಟಗಾರರಾದ ನಾಗಣ್ಣ ಉಪಸ್ಥಿತರಿದ್ದರು.

    ಇದೇ ಸಮಾವೇಶದಲ್ಲಿ ತುಮಕೂರು ಜಿಲ್ಲೆಯ ಪದವಿಪೂರ್ವ ಅತಿಥಿ ಉಪನ್ಯಾಸಕರ ಹೊಸ ಸಮಿತಿ ರಚನೆಯಾಯಿತು. ಜಿಲ್ಲಾ ಅಧ್ಯಕ್ಷರಾಗಿ ಸೋಮಶೇಖರ್, ಉಪಾಧ್ಯಕ್ಷರಾಗಿ ,ಭಾರತ ನಿತ್ಯಾನಂದ, ಜಿಲ್ಲಾ ಕಾರ್ಯದರ್ಶಿಯಾಗಿ ವಾಸು, ಖಜಾಂಚಿಯಾಗಿ ಕಾಂತರಾಜು ,ಜಂಟಿ ಕಾರ್ಯದರ್ಶಿಗಳು ಅನ್ಸರ ಅಹಮದ್ , ರಾಜೇಶ್ ಹಾಗೂ ಕಾರ್ಯಕಾರಿ ಸಮಿತಿಗೆ ಸೌಮ್ಯ ಶ್ವೇತಾ ಮಂಜುನಾಥ್ ಅಭಿಷೇಕ್ ಶಿವಕುಮಾರ್ ವೆಂಕಟೇಶ್ ಹರ್ಷಿತ ಹೇಮಂತ್ ಕುಮಾರ್ ಆಯ್ಕೆಯಾದರು.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಕಬ್ಬು ಬೆಳೆಗಾರರ ಸಮಸ್ಯೆ ಸೇರಿ ಹಲವು ಸಮಸ್ಯೆ ಬಗ್ಗೆ ಪ್ರಧಾನಿಗಳ ಜತೆ ಸಿಎಂ ಚರ್ಚೆ: ಸಚಿವ ಪರಮೇಶ್ವರ್

    November 16, 2025

    ವೃಕ್ಷ ಮಾತೆ ಸಾಲುಮರದ ತಿಮ್ಮಕ್ಕ ನಿಧನ

    November 14, 2025

    ಪ್ರತಿ ಟನ್ ಕಬ್ಬಿಗೆ ₹3,300 ದರ ನಿಗದಿಗೆ ತೀರ್ಮಾನ:  ಸಿಎಂ ಸಿದ್ದರಾಮಯ್ಯ

    November 8, 2025

    Comments are closed.

    Our Picks

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಮಧುಗಿರಿ

    ಮಧುಗಿರಿ:  ಸೊಳ್ಳೆಗಳ ವಿಪರೀತ ಕಾಟಕ್ಕೆ ಬಳಲಿ ಬೆಂಡಾದ ಜನ

    November 17, 2025

    ಮಧುಗಿರಿ:  ಮಧುಗಿರಿ ಪಟ್ಟಣದಲ್ಲಿ ಸೊಳ್ಳೆಯ ಕಾಟಕ್ಕೆ ಜನ ಬೇಸತ್ತಿದ್ದಾರೆ. ಪಟ್ಟಣದ ಎಲ್ಲೆಡೆಗಳಲ್ಲಿ  ಸೊಳ್ಳೆಗಳ ವಿಪರೀತ ಕಾಟಕ್ಕೆ ಜನ ಬಳಲಿ ಬೆಂಡಾಗಿದ್ದಾರೆ.…

    ಮಧುಗಿರಿ: ಬಿಜೆಪಿ ಒಬಿಸಿ ಮೋರ್ಚಾ ಸಭೆ

    November 17, 2025

    ಬೀದರ್ | ಕಬ್ಬು ಬೆಲೆ ನಿಗದಿಗೆ ಆಗ್ರಹಿಸಿ ರೈತನಿಂದ ಉರುಳು ಸೇವೆ

    November 17, 2025

    ನ.19ರಂದು ಎಲ್.ಜಿ.ಹಾವನೂರು ಪ್ರತಿಮೆ ಅನಾವರಣ

    November 17, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.