ತುಮಕೂರು: ಅತಿಥಿ ಉಪನ್ಯಾಸಕರಿಗೆ ಆಗಿರುವ ಅನ್ಯಾಯವನ್ನು ಸರಿಪಡಿಸಿ, ಎಲ್ಲರನ್ನೂ ಸೇವೆಯಲ್ಲಿ ಮುಂದುವರಿಸುವಂತೆ ಎಸ್. ವರಲಕ್ಷ್ಮಿ ರಾಜ್ಯ ಸರ್ಕಾರವನ್ನು ಒತ್ತಾಯ ಮಾಡಿದರು.
ರಾಜ್ಯದಲ್ಲಿ 430 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಿದ್ದು, 1.80 ಲಕ್ಷ ವಿದ್ಯಾರ್ಥಿಗಳು ಪ್ರಸ್ತುತ ವ್ಯಾಸಂಗ ಮಾಡುತ್ತಿದ್ದಾರೆ. ಸರ್ಕಾರದ ಆದೇಶದಂತೆ ಅನ್ ಲೈನ್ ಅಪ್ಲಿಕೇಷನ್ ಐಡಿ ಪ್ರಕಾರ 14,106 ಅತಿಥಿ ಉಪನ್ಯಾಸಕರು ಇದ್ದಾರೆ . ಇನ್ನೂ ಹೆಚ್ಚಾಗಿರುವ ಕಾಲೇಜುಗಳಲ್ಲಿ ಹೊಸಬರನ್ನು ಆಯ್ಕೆ ಮಾಡಿಕೊಳ್ಳುವ ಸರ್ಕಾರದ ಸೂಚನೆ ಪ್ರಕಾರ ಅಂದಾಜು 3,000 ಜನ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳಲಾಗಿದೆ. ರಾಜ್ಯದಲ್ಲಿ ಒಟ್ಟು 17.106 ಅತಿಥಿ ಉಪನ್ಯಾಸಕರಾಗುತ್ತಾರೆ ಎಂದು ತಿಳಿಸಿದರು.
ಶಿಕ್ಷಣ ತಜ್ಞರು ಅತಿಥಿ ಉಪನ್ಯಾಸಕ ಸಂಘದ ಪ್ರತಿನಿಧಿಗಳನ್ನು ಯೋಜನಾ ಇಲಾಖೆ ಮತ್ತು ಉಪನ್ಯಾಸಕರ ಸಂಘಟನೆಗಳ ಪ್ರತಿನಿಧಿಗಳನ್ನೂಳಗೊಂಡ ಸಮಿತಿ ರಚಿಸುವ ಬದಲಿಗೆ ಕಾಲೇಜು ಶಿಕ್ಷಣ ಇಲಾಖೆಯ ಆಡಳಿತ ಮಂಡಳಿ ಮತ್ತು ಹಣಕಾಸು ಇಲಾಖೆಯ ಅಧಿಕಾರಿಗಳನ್ನು ಮಾತ್ರ ಬಳಸಿಕೊಂಡು ರಚಿಸಿದ ಸಮಿತಿ ನಿರೀಕ್ಷೆ ಪ್ರಾಕಾರ ಸಂಪೂರ್ಣ ಅತಿಥಿ ಉಪನ್ಯಾಸಕರನ್ನು ರಕ್ಷಣೆ ಮಾಡುವ ಬದಲಿಗೆ ಆತುರವಾಗಿ ಶಿಫಾರಸ್ಸು ನೀಡಿದೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.
ಸರ್ಕಾರ ಎಲ್ಲಾ ಅತಿಥಿ ಉಪನ್ಯಾಸಕರಿಗೂ ಬೇರೆ ರಾಜ್ಯಗಳಲ್ಲಿ ಕೊಟ್ಟಿರುವ ಹಾಗೆ ಸೇವಾ ನಿಯಮಾವಳಿ ಮಾರ್ಗಸೂಚಿಗಳನ್ನು ರಚಿಸಿ ಸೇವಾ ಭದ್ರತೆ ಕಲ್ಪಿಸಬೇಕು. ಅತಿಥಿ ಉಪನ್ಯಾಸಕರಿಗೆ ಶಾಸನಬದ್ಧ ಸೌಲಭ್ಯಗಳನ್ನು ತಾರತಮ್ಯವಿಲ್ಲದೆ ನೀಡಬೇಕು. ಅತಿಥಿ ಉಪನ್ಯಾಸಕರನ್ನು ಖಾಯಂಗೊಳಿಸಬೇಕು. ಖಾಯಂ ಮಾಡುವ ತನಕ ಕೃಪಾಂಕ ಮತ್ತು ಸೇವಾ ಹಿರಿತನ ಆಧಾರದಲ್ಲಿ ಬೇರೆ ಇಲಾಖೆಗಳಲ್ಲಿ ಮೀಸಲಾತಿ ಕೊಟ್ಟಿರುವ ಹಾಗೆ ಇಲ್ಲಿಯೂ ಶೇ.50 ಮೀಸಲಾತಿ ಕೊಡಬೇಕೆಂದು ಅವರು ಒತ್ತಾಯಿಸಿದರು.
ವರದಿ: ಯೋಗೀಶ್ ಮೆಳೆಕಲ್ಲಹಳ್ಳಿ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB