ಕೊರಟಗೆರೆ: ತಾಲ್ಲೂಕಿನ ಚನ್ನರಾಯನದುರ್ಗ ಹೋಬಳಿಯ ಮರೇನಾಯಕನಹಳ್ಳಿ ಗ್ರಾಮದ ಸರ್ಕಾರಿ ಶಾಲೆ ಆವರಣದಲ್ಲಿ ಆಯುಷ್ ಇಲಾಖೆ, ಬೆಂಗಳೂರು ಜಿಲ್ಲಾ ಪಂಚಾಯಿತಿ, ತುಮಕೂರು ಮತ್ತು ಜಿಲ್ಲಾ ಆಯುಷ್ ಕಚೇರಿ ಇವರ ವತಿಯಿಂದ ನುರಿತ ವೈದ್ಯರ ತಂಡದಿಂದ ಉಚಿತ ಆಯುಷ್ ಆರೋಗ್ಯ ಶಿಬಿರವನ್ನು ಆಯೋಜಿಸಲಾಗಿತ್ತು.
ಈ ಶಿಬಿರದಲ್ಲಿ ಆರೋಗ್ಯ ಸಮಸ್ಯೆಗಳಾದ ರಕ್ತದೊತ್ತಡ, ಮಧುಮೇಹ, ಅಸ್ತಮಾ, ಕಿಡ್ನಿ ಸಮಸ್ಯೆ, ಥೈರಾಯ್ಡ್, ಶ್ವಾಸ ಸಂಬಂಧಿ ಹಾಗೂ ಹೃದಯ ಸಂಬಂಧಿ ಸಮಸ್ಯೆ ಇನ್ನು ಮುಂತಾದ ಕಾಯಿಲೆಗಳಿಗೆ ಉಚಿತವಾಗಿ ಔಷಧಿ ವಿತರಣೆ ಮಾಡಿ ಸೂಕ್ತ ಚಿಕಿತ್ಸೆ ನೀಡುವುದರ ಮೂಲಕ ಹಾಗೂ ಸಲಹೆಗಳನ್ನು ತಿಳಿಸಿಕೊಡಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಅಯುಷ್ ಅಧಿಕಾರಿ ಡಾ. ಗುರುಪ್ರಸಾದ್, ಡಾ. ಜಯಶ್ರೀ, ಸಿ ಆರ್ ಪಿ ಮೋಹನ್ ಚಾರ್, ಪಿಡಿಓ ವಿಜಯ ಕುಮಾರಿ, ಮುಖ್ಯ ಶಿಕ್ಷಕಿ ಸರೋಜಾ ಬಾಯಿ, ಶಿಕ್ಷಕರಾದ ನರಸಿಂಹಮೂರ್ತಿ,ಎಸ್ ಡಿ ಎಂ ಸಿ ಅಧ್ಯಕ್ಷ ನಂಜಪ್ಪ,ಗ್ರಾಮ ಪಂಚಾಯಿತಿ ಸದಸ್ಯರಾದ ಪ್ರೇಮ ಕುಮಾರ್, ಶ್ರೀನಿವಾಸ್,ಕಾಂಗ್ರೆಸ್ ಮುಖಂಡ ಅರವಿಂದ್, ಮಾಜಿ ಗ್ರಾಮ ಪಂಚಾಯಿತಿ ಸದಸ್ಯ ಹುಲಿರಾಮಯ್ಯ, ಮುದ್ದರಂಗಪ್ಪ. ಲೋಕೇಶ್ ಮತ್ತು ಊರಿನ ಗ್ರಾಮಸ್ಥರು ಸಾರ್ವಜನಿಕರು ಹಾಜರಿದ್ದರು.
ವರದಿ: ಮಂಜುಸ್ವಾಮಿ. ಎಂ. ಎನ್., ಕೊರಟಗೆರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB