Subscribe to Updates
Get the latest creative news from FooBar about art, design and business.
- ಉಗ್ರ ಹೋರಾಟ ಮಾಡ್ತೇವೆ ಎಂದ ಯಶ್ ತಾಯಿ ಪುಷ್ಪಾ: ಏಕಾಏಕಿ ಆಕ್ರೋಶಗೊಂಡಿದ್ದೇಕೆ?
- AI ಸಿ.ಸಿ. ಟಿವಿಯ ಸಹಾಯದಿಂದ ಆಟೋದಲ್ಲಿ ಕಳೆದು ಹೋದ ಬೆಲೆ ಬಾಳುವ ಬಟ್ಟೆ ಮರಳಿ ಪಡೆದ ವ್ಯಕ್ತಿ!
- ಶಿಕ್ಷಕರು ಮನೆ–ಮನೆಗಳಲ್ಲಿ ಬೇಡುವ ಪರಿಸ್ಥಿತಿ ವಿಷಾದನೀಯ: ಶ್ರೀ ಹನುಮಂತನಾಥ ಸ್ವಾಮೀಜಿ
- ಕೆ.ಎನ್.ರಾಜಣ್ಣ ಬೆಂಬಲಿಗರಿಂದ ಹೈಡ್ರಾಮಾ: ಸಂಪುಟದಿಂದ ವಜಾಗೊಂಡ ಬೆನ್ನಲ್ಲೇ ಬಂದ್ ಗೆ ಕರೆ
- ಕೆ.ಎನ್.ರಾಜಣ್ಣ ವಜಾ, ನನಗೂ ನೋವಾಗಿದೆ ಎಂದ ಡಿಸಿಎಂ ಡಿ.ಕೆ.ಶಿವಕುಮಾರ್
- ಉಪೇಂದ್ರ ಬುದ್ಧಿವಂತ ನಿರ್ದೇಶಕರಿಗೆಲ್ಲಾ ದೊಡ್ಡ ಸ್ಪೂರ್ತಿ: ರಜನಿಕಾಂತ್
- ಬೀದರ್: ಡಾ.ಅಂಬೇಡ್ಕರ್ ಗೆ ಅವಮಾನ ಆರೋಪ: ಪ್ರಕರಣ ದಾಖಲು
- ಕೆ.ಎನ್.ರಾಜಣ್ಣ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಲ್ಲ, ಸಂಪುಟದಿಂದಲೇ ಕಿತ್ತೆಸೆದ ಹೈಕಮಾಂಡ್!
Author: admin
ಯಶ್ ತಾಯಿ ಪುಷ್ಪಾ ಅರುಣ್ ಕುಮಾರ್ ನಿರ್ಮಾಣದ ‘ಕೊತ್ತಲವಾಡಿ’ಸಿನಿಮಾ ಆಗಸ್ಟ್ 1ರಂದು ರಿಲೀಸ್ ಆಯಿತು. ಇದೀಗ ಚಿತ್ರದ ಬಗ್ಗೆ ನೆಗೆಟಿವ್ ವಿಮರ್ಶೆ ಹಂಚುವವರ ವಿರುದ್ಧ ಪುಷ್ಪಾ ಆಕ್ರೋಶ ವ್ಯಕ್ತಪಡಿಸಿದ್ದು, ಕ್ರಮಕ್ಕೆ ಒತ್ತಾಯಿಸಿದ್ದಾರೆ. ಯೂಟ್ಯೂಬ್ ಚಾನೆಲ್ ವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿರುವ ಅವರು, ನಮ್ಮ ಸಿನಿಮಾದ ಪ್ರಚಾರ ನೋಡಿ ಕೆಲವರು ನೆಗೆಟಿವ್ ಟಾಕ್ ಹಬ್ಬಿಸಿದ್ದರು. ಸಿನಿಮಾ ಮಾಡುವವರಿಗೆ ನಿಜಕ್ಕೂ ಕಷ್ಟ ಇದೆ. ಇಲ್ಲಿ ನೂರು ತೊಂದರೆ ಇದೆ. ಮುಖ್ಯಮಂತ್ರಿ ಎದುರು ಹೋಗ್ತೀನಿ. ಇದನ್ನು ತಡೆಯಿರಿ ಎಂದು ಕೇಳುತ್ತೇನೆ. ಇದು ಸರ್ಕಾರದ ಕೆಲಸ’ ಎಂದು ಪುಷ್ಪಾ ಹೇಳಿದ್ದಾರೆ. ಸಿನಿಮಾ ನೋಡಿ ಬರೆದರೆ ತೊಂದರೆ ಇಲ್ಲ. ಆದರೆ, ಸುಮಾರು ಜನರು ಸಿನಿಮಾ ನೋಡದೇ ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಳ್ಳುತ್ತಿದ್ದಾರೆ. ಇದರಿಂದ ಅನೇಕರಿಗೆ ತೊಂದರೆ ಆಗುತ್ತಿದೆ. ನಾವು ದೂರು ತೆಗೆದುಕೊಂಡು ಬಂದಾಗ ಇದನ್ನು ಸ್ವೀಕರಿಸಬೇಕು. ಇಲ್ಲವಾದಲ್ಲಿ ರಾಕ್ ಲೈನ್ ವೆಂಕಟೇಶ್ಗೆ ಹೇಳಿ ಉಗ್ರ ಹೋರಾಟ ಮಾಡುತ್ತೇವೆ’ ಎಂದಿದ್ದಾರೆ. ಕನ್ನಡ ಸಿನಿಮಾ ಓಡದೇ ಇರುವುದಕ್ಕೆ ಇಂತಹ ಕುತಂತ್ರಗಳೇ ಕಾರಣ ಎಂದಿರುವ…
ಬೀದರ್: ಆಟೋದಲ್ಲಿ ಬಿಟ್ಟು ಹೋದ ಬೆಲೆಬಾಳುವ ಬಟ್ಟೆಗಳನ್ನು AI ಸಿ.ಸಿ. ಟಿವಿಯ ಸಹಾಯದ ಮೂಲಕ ವಾರಿಸುದಾರರಿಗೆ ತಲುಪಿಸಿರುವ ಘಟನೆ ಬೀದರ್ ಜಿಲ್ಲೆಯಲ್ಲಿ ನಡೆದಿದೆ. ಬೀದರ್ ನಿವಾಸಿಯೊಬ್ಬರು ರಿಲಯನ್ಸ್ ಟ್ರೇಂಡ್ಸ್ ನಲ್ಲಿ 10 ಸಾವಿರ ರೂಪಾಯಿ ಬೆಲೆಬಾಳುವ ಬಟ್ಟೆಗಳನ್ನು ಖರೀದಿಸಿದ್ದರು. ಬಳಿಕ ಆಟೋವೊಂದರಲ್ಲಿ ಗುಂಪಾದಿಂದ ಬೀದರ್ ನ ಗುರುದ್ವಾರ್ ಕಮಾನವರೆಗೆ ಪ್ರಯಾಣಿಸಿದ್ದು, ಆಟೋ ದಿಂದ ಇಳಿಯುವ ವೇಳೆ ಬಟ್ಟೆಯ ಬ್ಯಾಗ್ ನ್ನು ಆಟೋದಲ್ಲೇ ಮರೆತು ಬಿಟ್ಟಿದ್ದರು. ಸ್ವಲ್ಪ ಸಮಯದ ಬಳಿಕ ತಾವು ಖರೀದಿಸಿರುವ ಬಟ್ಟೆ ಆಟೋದಲ್ಲೇ ಮರೆತುಬಿಟ್ಟಿರುವುದು ಅರಿವಾಗಿದೆ. ಅವರು ತಕ್ಷಣವೇ ಬೀದರದ AI ಸಿ.ಸಿ ಟಿವಿ ಕಮಾಂಡ ಸೆಂಟರ್ ಗೆ ಆಗಮಿಸಿ ಮಾಹಿತಿ ನೀಡಿದ್ದಾರೆ. AI ಸಿ.ಸಿ ಟಿವಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಹರ್ಷವರ್ಧನ ಡಾ.ಬಿ.ಆರ್ ಅಂಬೇಡ್ಕರ ವೃತ್ತದ ಹತ್ತಿರ ವಾಹನ ಸಂಚರಿಸುತ್ತಿದ್ದನ್ನು ಗಮನಿಸಿ , ಸಂಚಾರಿ ಠಾಣೆ ಪೊಲೀಸ್ ಸಿಬ್ಬಂದಿ ಶ್ರೀಕಾಂತ್ ಅವರ ಸಹಾಯದ ಮೂಲಕ ಆಟೋವನ್ನು ಪತ್ತೆ ಹಚ್ಚಿದ್ದಾರೆ. ಬಳಿಕ ಬೀದರ ಜಿಲ್ಲಾ ಪೊಲೀಸ್ ಅಧಿಕ್ಷಕರ ಕಛೇರಿ ಸಿ.ಸಿ ಟಿವಿ…
ಕೊರಟಗೆರೆ: ರಾಜ್ಯದ ಬಹುತೇಕ ಕಡೆಗಳಲ್ಲಿ ನಮ್ಮ ಸರ್ಕಾರಿ ಕನ್ನಡ ಶಾಲೆಗಳು ಮುಚ್ಚುತ್ತಿವೆ, ಈ ಸರ್ಕಾರಿ ಶಾಲೆಯಲ್ಲಿ ಕರ್ತವ್ಯ ನಿರ್ವಹಿಸುವಂತಹ ಶಿಕ್ಷಕರು ಗ್ರಾಮಗಳಲ್ಲಿ ಮನೆ –ಮನೆಗೆ ತೆರಳಿ ಮಕ್ಕಳನ್ನು ಶಾಲೆಗೆ ಬನ್ನಿ ಎಂದು ಬೇಡಿಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಿದ್ದು ವಿಷಾದನೀಯ ಎಂದು ಎಲೆರಾಂಪುರ ಕುಂಚಿಟಿಗರ ಮಹಾಸಂಸ್ಥಾನ ಮಠದ ಪೀಠಾದ್ಯಕ್ಷ ಡಾ.ಶ್ರೀ ಹನುಮಂತನಾಥ ಸ್ವಾಮೀಜಿ ತಿಳಿಸಿದರು. ಅವರು ತಾಲೂಕಿನ ಗೊರವನಹಳ್ಳಿ ಶ್ರೀ ಮಹಾಲಕ್ಷ್ಮಿ ಸಮುದಾಯ ಭವನದಲ್ಲಿ ಗೊರವನಹಳ್ಳಿ ಮಹಾಲಕ್ಷ್ಮಿ ಚಾರಿಟಬಲ್ ಟ್ರಸ್ಟ್ ವತಿಯಿಂದ ಏರ್ಪಡಿಸಿದ್ದ ತಾಲೂಕಿನ ೪೪ ಪ್ರೌಢಶಾಲೆಗಳ ಎಸ್.ಎಸ್.ಎಲ್.ಸಿ ಮತ್ತು ೧೧ ಪಿಯು ಕಾಲೇಜುಗಳ ೨೦೨೪–೨೫ ನೇ ಸಾಲಿನ ಪರೀಕ್ಷೇಯಲ್ಲಿ ಉತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದ ದಿವ್ಯ ಸಾನಿದ್ಯವಹಿಸಿ ಮಾತನಾಡಿ ಪೋಷಕರು ತಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸಿದರೆ ತಮ್ಮ ಕರ್ತವ್ಯ ಮುಗಿಯಿತು ಎಂದು ಕೊಂಡಿದ್ದಾರೆ ಇದು ಸರಿಯಲ್ಲ ಇಂದು ಮಕ್ಕಳು ಕೇವಲ ೧೦ ನೇ ತರಗತಿಯ ವರೆಗೆ ಪೋಷಕರ ಮತ್ತು ಶಿಕ್ಷರ ಹಿಡಿತದಲ್ಲಿ ಮಕ್ಕಳು ಇರುತ್ತಾರೆ ನಂತರ ಅವರ…
ತುಮಕೂರು: ಕೆ.ಎನ್.ರಾಜಣ್ಣ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸಿರುವ ಸಂಬಂಧ ಮಧುಗಿರಿಯಲ್ಲಿ ರಾಜಣ್ಣ ಬೆಂಬಲಿಗರು ಸರ್ಕಾರದ ನಿರ್ಧಾರದ ವಿರುದ್ಧ ಆಕ್ರೋಶ ಹೊರಹಾಕಿದ್ದು, ಬೀದಿಗಿಳಿದು ಹೋರಾಟ ಆರಂಭಿಸಿದ್ದಾರೆ. ಪ್ರತಿಭಟನೆ ವೇಳೆ ಬೆಂಬಲಿಗನೊಬ್ಬ ಪೆಟ್ರೋಲ್ ಸುರಿದುಕೊಂಡು ಹೈಡ್ರಾಮಾ ಸೃಷ್ಟಿಸಿದ ಘಟನೆ ನಡೆಯಿತು. ಮಧುಗಿರಿಯಲ್ಲಿ ಕಾಂಗ್ರೆಸ್ ಮುಖಂಡರು ಇಂದು ಬಂದ್ ಗೆ ಕರೆ ನೀಡಿದ್ದಾರೆ. ಮಧ್ಯಾಹ್ನ 1 ಗಂಟೆಯಿಂದ ಸ್ವಯಂಪ್ರೇರಿತ ಬಂದ್ ಆಚರಿಸಲು ಸೂಚನೆ ನೀಡಲಾಗಿದೆ. ಅಲ್ಲದೇ ರಾಜಣ್ಣ ಅವರನ್ನ ವಜಾ ಮಾಡಿರುವುದು ತುಮಕೂರಿಗೆ ನಷ್ಟ ಅಂತ ರಾಜಣ್ಣ ಬೆಂಬಲಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಧುಗಿರಿಯ ಎಲ್ಲಾ ಅಂಗಡಿ, ಮುಂಗಟ್ಟು ಬಂದ್ ಮಾಡಲು ತೀರ್ಮಾನಿಸಲಾಗಿದೆ ಎನ್ನಲಾಗಿದೆ. ಮಧುಗಿರಿಯಲ್ಲಿ ರಾಜಣ್ಣ ಪರ ಪ್ರತಿಭಟನೆ ಜೋರಾಗಿದೆ ಬೆಂಬಲಿಗರು ಬಸ್ ತಡೆಯುವ ಮೂಲಕ ಸಾರ್ವಜನಿಕರಿಗೆ ತೊಂದರೆಯುಂಟು ಮಾಡಿದ್ದು, ರಾಜಣ್ಣ ಅವರ ಫೋಟೊ ಹಿಡಿದು ಬಸ್ ಕೆಳಗೆ ಮಲಗಿ ಹೈಡ್ರಾಮ ಸೃಷ್ಟಿಸಿದ್ದಾರೆ. ರಾಜ್ಯ ಸರ್ಕಾರ ಬಂದ್ ನಡೆಸಲು ಅವಕಾಶ ನೀಡುತ್ತಾ? ರಾಜಕೀಯ ಏರಿಳಿತದ ಕಾರಣಕ್ಕೆ ಸಾರ್ವಜನಿಕರು ಬಂದ್ ನಿಂದ ಅನಗತ್ಯವಾಗಿ ತೊಂದರೆಗೀಡಾಗಬೇಕೇ? ಎನ್ನುವ ಪ್ರಶ್ನೆಗಳು…
ಬೆಂಗಳೂರು: ಕೆ.ಎನ್.ರಾಜಣ್ಣ ಅವರ ವಜಾ ಪಕ್ಷದ ತೀರ್ಮಾನ. ಇದರ ಹೊರತಾಗಿ ಬೇರೆ ವಿಚಾರ ನನಗೆ ತಿಳಿದಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ವಿಧಾನಸೌಧದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಇದರಿಂದ ನನಗೂ ನೋವಾಗಿದೆ. ರಾಜಣ್ಣ ಅವರು ನನ್ನ ಒಳ್ಳೆಯ ಸ್ನೇಹಿತರು, ಆಪ್ತರು. ಕಳೆದ 25 ವರ್ಷಗಳಿಂದ ಜೊತೆಯಲ್ಲಿ ರಾಜಕಾರಣ ಮಾಡಿಕೊಂಡು ಬಂದಿದ್ದೇವೆ ಎಂದರು. ನನಗೆ ತಿಳಿದಿರುವಂತೆ ಸಚಿವ ಸಂಪುಟದಿಂದ ರಾಜಣ್ಣ ಅವರ ವಜಾ ಪಕ್ಷದ ತೀರ್ಮಾನ. ಇದರ ಹೊರತಾಗಿ ಬೇರೆ ವಿಚಾರ ನನಗೆ ತಿಳಿದಿಲ್ಲ. ಈ ಬಗ್ಗೆ ಮುಖ್ಯಮಂತ್ರಿಯವರ ಬಳಿ ಕೇಳಿದೆ. ಅವರು ತಮಗೆ ಬಂದ ಮಾಹಿತಿ ನೀಡಿದ್ದಾರೆ. ನನಗೆ ಬೇರೆ ಯಾವುದೇ ವಿಚಾರ ಗೊತ್ತಿಲ್ಲ ಎಂದು ಅವರು ಹೇಳಿದರು. ಯಾವ ಕಾರಣಕ್ಕೆ ರಾಜಣ್ಣ ಅವರನ್ನು ವಜಾ ಮಾಡಲಾಯಿತು ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಇದರ ಬಗ್ಗೆ ನನಗೆ ಗೊತ್ತಿಲ್ಲ. ಏನೂ ಮಾಡಲು ಆಗುವುದಿಲ್ಲ. ಇದು ಪಕ್ಷದ ತೀರ್ಮಾನ ಎಂದರು. ರಾಜೀನಾಮೆ ತೆಗೆದುಕೊಳ್ಳಬಹುದಿತ್ತು, ಆದರೆ ವಜಾ ಮಾಡಿದ್ದು ಅವಮಾನ ಮಾಡಿದಂತೆ ಅಲ್ಲವೇ…
ಚೆನ್ನೈ: ಉಪೇಂದ್ರ ಅವರು ಭಾರತದ ಅತ್ಯಂತ ಬುದ್ಧಿವಂತ ನಿರ್ದೇಶಕರಿಗೆಲ್ಲಾ ದೊಡ್ಡ ಸ್ಪೂರ್ತಿ ಎಂದು ಸೂಪರ್ ಸ್ಟಾರ್ ರಜನಿಕಾಂತ್ ಹೇಳಿದ್ದಾರೆ. ಕೂಲಿ ಚಿತ್ರದ ಆಡಿಯೋ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ರಜನಿಕಾಂತ್, ನಮ್ಮ ಸಿನಿಮಾದಲ್ಲಿ ಉಪೇಂದ್ರ ಅವರು ಒಂದು ಪಾತ್ರ ಮಾಡಿದ್ದಾರೆ. ಭಾರತದ ಅತ್ಯಂತ ಬುದ್ಧಿವಂತ ನಿರ್ದೇಶಕರಿಗೆಲ್ಲಾ ಉಪೇಂದ್ರ ಅವರೇ ದೊಡ್ಡ ಸ್ಪೂರ್ತಿ. ಮಲಯಾಳಂ, ಹಿಂದಿ, ತೆಲುಗು, ತಮಿಳು ಎಲ್ಲಾ ಭಾಷೆಯವರಿಗೂ ಉಪೇಂದ್ರ ಸ್ಪೂರ್ತಿ. ಅಂತಹ ದೊಡ್ಡ ಡೈರೆಕ್ಟರ್. ಅವರಿಗೆ ನಟನಾಗಬೇಕು ಎಂದು ಇಷ್ಟವಿರಲಿಲ್ಲ. ಅವರು ಮೂಲತಃ ನಿರ್ದೇಶಕರು ಎಂದು ಹೇಳಿದ್ದಾರೆ. ಅವರು ‘ಓಂ’ ಎಂಬ ಒಂದು ಸಿನಿಮಾವನ್ನು ಶಿವರಾಜ್ ಕುಮಾರ್ ಗೆ ಮಾಡಿದ್ದಾರೆ. ನನಗೆ ಇಲ್ಲಿ ‘ಬಾಷಾ’ ಸಿನಿಮಾ ಹೇಗೋ, ಅಲ್ಲಿ (ಕರ್ನಾಟಕದಲ್ಲಿ) ಅದಕ್ಕಿಂತಲೂ 10 ಪಟ್ಟು ದೊಡ್ಡ ಸಿನಿಮಾ ‘ಓಂ’. ಆದಾದ ಮೇಲೆ ಅವರು ಮಾಡಿರುವ ಒಂದೊಂದು ಪಾತ್ರಗಳು ಡಿಫರೆಂಟ್. ಈಗ ಲೋಕೇಶ್ ಕನಕರಾಜ್ ನಾನ್ ಲೀನಿಯರ್ ಅಂತೇನೋ ಟೆಕ್ನಿಕ್ ಬಳಸುತ್ತಾರಲ್ವಾ? ಅದನ್ನು ಉಪೇಂದ್ರ ಅಂದೇ ಮಾಡಿದ್ದಾರೆ” ಎಂದು ರಜನಿಕಾಂತ್ ಹೇಳಿದರು.…
ಬೀದರ್: ಡಾ.ಅಂಬೇಡ್ಕರ್ ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಲಾಗಿದೆ ಎಂದು ಆರೋಪಿಸಿ ದೂರು ನೀಡಿದ ಹಿನ್ನೆಲೆಯಲ್ಲಿ ಯುವಕನೊರ್ವನ ಮೇಲೆ ಶನಿವಾರ ಪ್ರಕರಣ ದಾಖಲಾಗಿದೆ ಎಂದು ತಿಳಿದುಬಂದಿದೆ. ಹುಮ್ನಾಬಾದ್ ತಾಲೂಕಿನ ಕುಮಾರ ಚಿಂಚೋಳಿ ಗ್ರಾಮದ ನಿವಾಸಿ ರಾಜಕುಮಾರ್ ರಂಜೇರಿ ಎನ್ನುವ ಯುವಕ ಶಿವು ಎಂಬ ವ್ಯಕ್ತಿಗೆ ಜಾತಿನಿಂದನೆ ಮತ್ತು ಆತನ ಕುಟುಂಬಸ್ಥರಿಗೆ ಅವಾಚ್ಯ ಶಬ್ದಗಳಿಂದ ಬೈದಿದ್ದಾನೆ. ಹಾಗೆಯೇ ಶಿವು ಎಂಬಾತ ದಲಿತ ಕುಟುಂಬಕ್ಕೆ ಸೇರಿದ್ದರಿಂದ ಡಾ.ಅಂಬೇಡ್ಕರ್ ಹಾಗೂ ಅವರು ಬರೆದ ಸಂವಿಧಾನಕ್ಕೂ ಕೂಡ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಇದರ ವಿರುದ್ದ ಮುಕೇಶ್ ಪಾಂಡೆ ಎನ್ನುವವರು ದೂರು ನೀಡಿದ್ದು, ಡಾ.ಅಂಬೇಡ್ಕರ್ ಹಾಗೂ ಅವರು ಬರೆದ ಸಂವಿಧಾನಕ್ಕೆ ಅವಮಾನ ಮಾಡಿರುವ ಯುವಕನ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ತಿಳಿಸಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಹುಮ್ನಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ ಎಂದು ತಿಳಿದು ಬಂದಿದೆ. ವರದಿ: ಅರವಿಂದ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು…
ಬೆಂಗಳೂರು: ಕರ್ನಾಟಕ ಸಿಎಂ ಸಿದ್ದರಾಮಯ್ಯ ಸಂಪುಟದಿಂದ ಕೆ.ಎನ್.ರಾಜಣ್ಣ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿತ್ತು. ಆದರೆ ಅವರನ್ನು ಸಂಪುಟದಿಂದ ವಜಾ ಮಾಡಲಾಗಿತ್ತು. ಇದರ ಬೆನ್ನಲ್ಲೇ ಮೊದಲ ಪ್ರತಿಕ್ರಿಯೆ ನೀಡಿರುವ ಕೆ.ಎನ್.ರಾಜಣ್ಣ, ತಮ್ಮ ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ ಎಂದಿದ್ದಾರೆ. ಮತಕಳವು ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅಭಿಯಾನದ ವಿರುದ್ಧ ಹೇಳಿಕೆ ಕೊಟ್ಟ ಕೆ.ಎನ್.ರಾಜಣ್ಣ ತಲೆ ದಂಡ ಆಗಿದ್ದು, ಸಂಪುಟದಿಂದ ಕೆ.ಎನ್.ರಾಜಣ್ಣ ಅವರನ್ನು ವಜಾ ಮಾಡಲಾಗಿದೆ. ಈ ಬೆಳವಣಿಗೆ ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದೆ. ನಿಮ್ಮ ಮುಂದೆ ಮಾಜಿ ಸಚಿವನಾಗಿ ಮಾತಾಡುತ್ತಿದ್ದೇನೆ. ಆದರೆ ನನ್ನ ವಜಾ ಹಿಂದೆ ಅತೀ ದೊಡ್ಡ ಷಡ್ಯಂತ್ರ ಅಡಗಿದೆ. ಈ ಪಿತೂರಿ, ಷಡ್ಯಂತ್ರದ ಹಿಂದೆ ಯಾರೆಲ್ಲಾ ಇದ್ದಾರೆ, ಏನು ಮಾಡಿದ್ದಾರೆ ಅನ್ನೋದು ಗೊತ್ತು. ನನ್ನ ಬಳಿ ಇರುವ ಈ ಷಡ್ಯಂತ್ರ ವಿವರಗಳನ್ನು ಮುಂದಿನ ದಿನಗಳಲ್ಲಿ ತಿಳಿಸುತ್ತೇನೆ ಎಂದಿದ್ದಾರೆ. ರಾಜ್ಯಪಾಲರ ಕಚೇರಿಯಿಂದ ವಜಾಗೊಳಿಸಿರುವ ಡ್ರಾಫ್ಟ್ ಬಂದಿರುವ ಮಾಹಿತಿ ಇದೆ. ಇದು ಹೈಕಮಾಂಡ್ ನಿರ್ಧಾರವಾಗಿದೆ. ಪಕ್ಷ ತೆಗೆದುಕೊಂಡ ನಿರ್ಧಾರಕ್ಕೆ ಬದ್ಧನಾಗಿದ್ದೇನೆ…
ಮುಂಬೈ: 15 ವರ್ಷದ ಶಾಲಾ ಬಾಲಕಿಯ ಮೇಲೆ ಐವರು ಕಾಮುಕರು ಸುಮಾರು 3 ತಿಂಗಳುಗಳಿಂದ ಹಲವು ಬಾರಿ ಅತ್ಯಾಚಾರ ಎಸಗಿರುವ ಘಟನೆ ಮುಂಬೈಯ ಕಲಾಚೌಕಿ ಪ್ರದೇಶದಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ 25 ವರ್ಷದ ಯುವಕ ಸೇರಿದಂತೆ ನಾಲ್ವರು ಬಾಲಾಪರಾಧಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯೊಬ್ಬನ ಗೆಳತಿ ಸಂತ್ರಸ್ತ ಬಾಲಕಿಯ ಮನೆಗೆ ಬಂದು, ತನ್ನ ಗೆಳೆಯನೊಂದಿಗೆ ಸಂಬಂಧ ಹೊಂದಿರುವ ಬಗ್ಗೆ ಪ್ರಶ್ನಿಸಿದಾಗ ವಿಚಾರ ಬೆಳಕಿಗೆ ಬಂದಿದೆ. ಪೋಷಕರು ಬಾಲಕಿಯ ಮೊಬೈಲ್ ಪರಿಶೀಲಿಸಿದ ವೇಳೆ ವಿಡಿಯೋಗಳು ಮತ್ತು ಸಂದೇಶಗಳು ಪತ್ತೆಯಾಗಿವೆ, ಇದರಿಂದ ಆತಂಕಗೊಂಡ ಪೋಷಕರು ಪೊಲೀಸರಿಗೆ ದೂರು ನೀಡಿದ್ದಾರೆ. ಬಾಲಕಿಯ ಪೋಷಕರು ಸಲ್ಲಿಸಿದ ದೂರಿನ ಆಧಾರದ ಮೇಲೆ, ಐದು ಜನರ ವಿರುದ್ಧ ಸಾಮೂಹಿಕ ಅತ್ಯಾಚಾರ ಮತ್ತು ಭಾರತೀಯ ನ್ಯಾಯ ಸಂಹಿತಾ(ಬಿಎನ್ಎಸ್) ಕಾಯ್ದೆ ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ(ಪೋಕ್ಸೊ) ಕಾಯ್ದೆಯ ಇತರ ಸಂಬಂಧಿತ ನಿಬಂಧನೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್…
ಬೆಂಗಳೂರು: ನಟಿ ರನ್ಯಾ ರಾವ್ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಕಡ್ಡಾಯ ರಜೆಯಲ್ಲಿದ್ದ ಪೊಲೀಸ್ ಮಹಾನಿರ್ದೇಶಕ ಕೆ. ರಾಮಚಂದ್ರ ರಾವ್ ಅವರನ್ನು ರಾಜ್ಯ ಸರ್ಕಾರ ಮರುನೇಮಕ ಮಾಡಿದೆ. ಡಿಜಿಪಿ ರಾವ್ ಅವರನ್ನು ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯದ ಪೊಲೀಸ್ ಮಹಾನಿರ್ದೇಶಕರ ಹುದ್ದೆಗೆ ಮೇಲ್ದರ್ಜೆಗೇರಿಸಲಾಗಿದೆ. ಅಧಿಸೂಚನೆಯಲ್ಲಿ ರಾಜ್ಯ ಸರ್ಕಾರವು ಡಿಜಿಪಿ (ಡಿಸಿಆರ್ಇ) ಐಪಿಎಸ್ (ವೇತನ) ನಿಯಮಗಳು 2016ರ ನಿಯಮ 12ರ ಅಡಿಯಲ್ಲಿ ಸಿಐಡಿ, ವಿಶೇಷ ಘಟಕಗಳು ಮತ್ತು ಆರ್ಥಿಕ ಅಪರಾಧಗಳ ಮಹಾನಿರ್ದೇಶಕ ಹುದ್ದೆಗೆ ಸಮಾನವಾಗಿದೆ ಎಂದು ಹೇಳಿದೆ. ಚಿನ್ನ ಕಳ್ಳಸಾಗಣೆ ಪ್ರಕರಣ ಸಂಬಂಧ ನಟಿ ರನ್ಯಾ ರಾವ್ ಅವರ ಬಂಧನದ ನಂತರ ಕಳೆದ ಮಾರ್ಚ್ನಲ್ಲಿ ಡಿಜಿಪಿ ರಾಮಚಂದ್ರ ರಾವ್ ಅವರನ್ನು ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತಾ ನೇತೃತ್ವದ ರಾಜ್ಯ ಸರ್ಕಾರ ನೇಮಿಸಿದ ತನಿಖಾ ಸಮಿತಿಯು ಪ್ರಶ್ನಿಸಿತ್ತು. ಪೊಲೀಸ್ ಪ್ರೋಟೋಕಾಲ್ ಸೇವೆಗಳ ದುರುಪಯೋಗ ಮತ್ತು ಪ್ರಕರಣದಲ್ಲಿ ಡಿಜಿಪಿ ರಾವ್ ಅವರ ಸಂಭಾವ್ಯ ಪಾತ್ರವನ್ನು ತನಿಖೆ ಮಾಡಲು ಗೌರವ್ ಗುಪ್ತಾ ಸಮಿತಿಯನ್ನು ರಚಿಸಲಾಗಿತ್ತು. ಹೀಗಾಗಿ ಮಾರ್ಚ್…