Author: admin

ತುಮಕೂರು:  ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿ ಜಿಲ್ಲಾದ್ಯಂತ ಏಪ್ರಿಲ್ 26 ರಿಂದ ಜೂನ್ 4ರವರೆಗೆ ಜಾನುವಾರುಗಳಿಗಾಗಿ ಹಮ್ಮಿಕೊಳ್ಳಲಾಗುವ 7ನೇ ಸುತ್ತಿನ ಕಾಲುಬಾಯಿ ರೋಗ ಲಸಿಕಾ ಅಭಿಯಾನದಲ್ಲಿ ನಿಗಧಿತ ಗುರಿ ಸಾಧಿಸಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿ ನ್ಯಾಯಾಲಯ ಸಭಾಂಗಣದಲ್ಲಿ ಗುರುವಾರ ಜರುಗಿದ ಪೂರ್ವಭಾವಿ ಸಭೆ ನಡೆಸಿ ಮಾತನಾಡಿದ ಅವರು, ಕಾಲುಬಾಯಿ ರೋಗದ ಲಸಿಕೆಯನ್ನು ಜಾನುವಾರುಗಳಿಗೆ ಕಡ್ಡಾಯವಾಗಿ ಹಾಕಿಸುವ ಹಾಗೂ ಲಸಿಕೆಯನ್ನು ಉಚಿತವಾಗಿ ನೀಡುವ ಬಗ್ಗೆ ಪಶುಪಾಲಕರಲ್ಲಿ ಅರಿವು ಮೂಡಿಸಬೇಕು ಎಂದರಲ್ಲದೆ, ನಿಗಧಿತ ಗುರಿ ಸಾಧಿಸುವ ಮೂಲಕ ಲಸಿಕಾ ಅಭಿಯಾನವನ್ನು ಯಶಸ್ವಿಗೊಳಿಸಬೇಕೆಂದು ನಿರ್ದೇಶನ ನೀಡಿದರು. ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಸಹಾಯಕ ನಿರ್ದೇಶಕ(ತಾಂತ್ರಿಕ) ಡಾ.ನಾಗಮಣಿ ಮಾತನಾಡಿ, ಕಳೆದ ವರ್ಷ ಹಮ್ಮಿಕೊಂಡಿದ್ದ 6ನೇ ಸುತ್ತಿನ ಲಸಿಕಾ ಅಭಿಯಾನದಲ್ಲಿ 478624 ಜಾನುವಾರುಗಳಿಗೆ ಲಸಿಕೆ ನೀಡುವ ಮೂಲಕ ಶೇ. 96ರಷ್ಟು ಗುರಿ ಸಾಧಿಸಲಾಗಿತ್ತು. ಪ್ರಸಕ್ತ ವರ್ಷ ಜಿಲ್ಲೆಯಲ್ಲಿ 388209 ದನ ಹಾಗೂ 107969 ಎಮ್ಮೆ ಸೇರಿದಂತೆ ಒಟ್ಟು 496278…

Read More

ತುಮಕೂರು: ರಾಜ್ಯದ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ಏಪ್ರಿಲ್ 19ರಂದು ಬೆಳಿಗ್ಗೆ 10.45 ಗಂಟೆಗೆ ನಗರದ ಶ್ರೀದೇವಿ ಮೆಡಿಕಲ್ ಕಾಲೇಜಿನಲ್ಲಿ ನಡೆಯಲಿರುವ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಈ ಸಂದರ್ಭದಲ್ಲಿ ಕೇಂದ್ರ ವಲಯದ ಐ ಜಿ ಪಿ ಲಾಬುರಾಮ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ವಿ. ಅಶೋಕ್, ಕಾರ್ಯಕ್ರಮ ಆಯೋಜಕರು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

Read More

ತುಮಕೂರು:  ಕೊರಟಗೆರೆ ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆಯಿಂದ ಜಿಲ್ಲಾ ವ್ಯಾಪ್ತಿಯಲ್ಲಿರುವ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿಗೆ ಪ್ರವೇಶ ಕಲ್ಪಿಸಲು 5ನೇ ತರಗತಿಯಲ್ಲಿ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿಗೆ ಸೇರಿದ ಪ್ರತಿಭಾವಂತ ವಿದ್ಯಾರ್ಥಿಗಳಿಂದ ಆನ್‌ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಭರ್ತಿ ಮಾಡಿದ ಅರ್ಜಿಯನ್ನು ಮೇ 3ರೊಳಗಾಗಿ ಜಾಲತಾಣ www.sw.kar.nic.in ಮೂಲಕ ಸಲ್ಲಿಸಬಹುದಾಗಿದೆ. ನಿಗದಿತ ಅರ್ಜಿ ನಮೂನೆ ಹಾಗೂ ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರ ಕಚೇರಿ/ ಕೊರಟಗೆರೆ ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಕಚೇರಿ/ ಜಾಲತಾಣವನ್ನು ಸಂಪರ್ಕಿಸಬಹುದಾಗಿದೆ. ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳನ್ನು ಅರ್ಹತಾ ಪರೀಕ್ಷೆಯ ಮೂಲಕ ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು. ಅರ್ಹತಾ ಪರೀಕ್ಷೆಯನ್ನು ಮೇ 9ರಂದು ತುಮಕೂರು ನಗರದ ಜಿಲ್ಲಾ ಶಿಕ್ಷಣ ತರಬೇತಿ ಸಂಸ್ಥೆ(ಬ್ಯಾಂಕ್ ರಸ್ತೆ, ಡಿಸಿಸಿ ಬ್ಯಾಂಕ್ ಎದುರು)ಯಲ್ಲಿ ನಡೆಸಲಾಗುವುದು ಎಂದು ಕೊರಟಗೆರೆ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ(ಗ್ರೇಡ್–2) ಜಿ. ಯಮುನಾ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ…

Read More

ಕೊರಟಗೆರೆ: ಬಿಇಓ ನಟರಾಜು ಅವರ ಕಚೇರಿಗೆ ನುಗ್ಗಿ ಧಮ್ಕಿ ಹಾಕಿರುವ ಆರೋಪದಲ್ಲಿ  ಪ್ರಭಾರ ಮುಖ್ಯಶಿಕ್ಷಕ ದೇವರಾಜಯ್ಯ ಸೇರಿ 8 ಜನರ ಮೇಲೆ ಕೊರಟಗೆರೆ ಠಾಣೆಗೆ ಬಿಇಓ ನಟರಾಜು ದೂರು ನೀಡಿದ್ದಾರೆ. ಕೊರಟಗೆರೆ ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಬಿಇಓ ನಟರಾಜು ೀ ಸಂಬಂಧ ಸ್ಪಷ್ಟನೆ ನೀಡಿದ್ದಾರೆ. ಕೊರಟಗೆರೆ ತಾಲೂಕು ಕಸಬಾ ಹೋಬಳಿ ಹಂಚಿಹಳ್ಳಿ ಗ್ರಾಮ ಪಂಚಾಯಿತಿಯ ಕೆರೆಯಾಗಲಹಳ್ಳಿ ಪ್ರಾಥಮಿಕ ಪಾಠಶಾಲೆಯ ಪ್ರಭಾರ ಮುಖ್ಯಶಿಕ್ಷಕ ಎಸ್.ದೇವರಾಜಯ್ಯನನ್ನು  ಕರ್ತವ್ಯಲೋಪ, ಅನಧಿಕೃತ ಗೈರು, ಬೇಜವಾಬ್ದಾರಿ ವರದಿ ಆಧರಿಸಿ ಅಮಾನತು ಮಾಡಲಾಗಿದೆ. ಈ ಸಂಬಂಧ ಪ್ರಭಾರ ಮುಖ್ಯಶಿಕ್ಷಕ ಎಸ್.ದೇವರಾಜಯ್ಯ ಮತ್ತು ಇತರ 8 ಮಂದಿ ಬಿಇಓ ಕಚೇರಿಗೆ ನುಗ್ಗಿ, ಧಿಗ್ಭಂಧನ ಹಾಕಿ ಅಮಾನತು ರದ್ದುಪಡಿಸಿ ಅದೇ ಶಾಲೆಗೆ ಮತ್ತೆ ನೇಮಕ ಮಾಡುವಂತೆ ಧಮ್ಕಿ ಹಾಕಿದ್ದಾರೆ.  ಅಲ್ಲದೇ   ಮೇ 6 ರಂದು ವರ್ಗಾವಣೆ ಆಗ್ತಿಯಾ ಎಂದು ಬೆದರಿಕೆ ಹಾಕಿದ್ದಾರೆ ಎಂದು ಬಿಇಓ ನಟರಾಜು ಆರೋಪಿಸಿದ್ದಾರೆ. ಕರ್ತವ್ಯಲೋಪ, ಅನಧಿಕೃತ ಗೈರು, ಬೇಜವಾಬ್ದಾರಿ ವರದಿ ಆಧರಿಸಿ ಪ್ರಭಾರ ಮುಖ್ಯಶಿಕ್ಷಕ ದೇವರಾಜಯ್ಯರನ್ನು…

Read More

ತುಮಕೂರು:  14 ವರ್ಷದ  ಬಾಲಕಿಗೆ ಲೈಂಗಿಕ ದೌರ್ಜನ್ಯ ನಡೆಸಿ ಆಕೆಯನ್ನು ಗರ್ಭಾವತಿಯನ್ನಾಗಿಸಿದ ಅಪರಾಧಿಗೆ ಅಧಿಕ ಜಿಲ್ಲಾ ಸತ್ರ ನ್ಯಾಯಾಲಯ ಎಫ್ ಟಿಎಸ್ ಸಿ (ಪೋಕ್ಸೋ) ಜೀವಾವಧಿ ಶಿಕ್ಷೆ ಹಾಗೂ 3 ಲಕ್ಷ ರೂಪಾಯಿ ದಂಡ ವಿಧಿಸಿ ತೀರ್ಪು ನೀಡಿದೆ. ತುಮಕೂರು ಮಹಿಳಾ ಪೊಲೀಸ್  ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿತ್ತು. ಗುರುಸ್ವಾಮಿ ಎಂಬಾತ ಶಿಕ್ಷೆಗೊಳಗಾದ ಅಪರಾಧಿಯಾಗಿದ್ದಾನೆ. ಈತ ಬಾಲಕಿಯ ನೆರೆಯ ಮನೆಯ ಬಳಿ ವಾಸವಿದ್ದು, ಮನೆಯಲ್ಲಿ ಯಾರೂ ಇಲ್ಲದ ವೇಳೆ ಬಾಲಕಿ ಮೇಲೆ ಹಲವಾರು ಲೈಂಗಿಕ ದೌರ್ಜನ್ಯ ನಡೆಸಿದ್ದ. ಪರಿಣಾಮವಾಗಿ ಬಾಲಕಿ ಗರ್ಭಿಣಿಯಾಗಿದ್ದಳು. ಈ ಬಗ್ಗೆ ನೊಂದ ಬಾಲಕಿಯ ತಾಯಿ ತುಮಕೂರು ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಠಾಣೆಯ ಇನ್ಸ್ ಪೆಕ್ಟರ್ ವಿಜಯಲಕ್ಷ್ಮೀ ಎಸ್. ಪ್ರಕರಣದ ತನಿಖೆ ನಡೆಸಿದ್ದು, ತನಿಖಾಧಿಕಾರಿಯಾಗಿ ಸಹಕರಿಸಿದ ಪ್ರಭಾಕರ್ ಹೆಚ್. ಅವರು ಗುರುಸ್ವಾಮಿ ವಿರುದ್ಧ ದೋಷಾರೋಪಣಾಪಟ್ಟಿಯಲ್ಲಿ ಘನ ನ್ಯಾಯಾಲಯಕ್ಕೆ  ಸಲ್ಲಿಸಿದರು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ಅಭಿಯೋಜನೆ ಪರ ವಿಚಾರಣೆ ನಡೆಸಲಾದ ಸಾಕ್ಷಿಗಳಿಂದ ಗುರುಸ್ವಾಮಿ  ಮೇಲಿರುವ…

Read More

ಬೀದರ್:  ನಗರದಲ್ಲಿ ಏ.15 ರಂದು ರಾತ್ರಿ ಪತ್ರಕರ್ತರೊಬ್ಬರ ಮೇಲೆ ಕೈಮಾಡಿರುವ ಅರಣ್ಯ ಇಲಾಖೆ ಸಿಬ್ಬಂದಿ ವಿರುದ್ಧ ಕೂಡಲೇ ನಿಯಮಾನುಸಾರ ಶಿಸ್ತುಕ್ರಮ ಜರುಗಿಸಿ ವರದಿ ನೀಡುವಂತೆ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರು ಸೂಚಿಸಿದ್ದಾರೆ ಪತ್ರಕರ್ತರೊಬ್ಬರ ಮೇಲೆ ಅರಣ್ಯ ಸಿಬ್ಬಂದಿ ಕೈಮಾಡಿರುವ ವಿಡಿಯೋ ವೈರಲ್ ಆಗಿದ್ದು ಈ ಬಗ್ಗೆ ಮಾಧ್ಯಮಗಳಲ್ಲಿ ಸಚಿತ್ರ ವರದಿಗಳು ಪ್ರಕಟವಾಗಿವೆ ಎಂದು ತಿಳಿಸಿದ್ದಾರೆ. ಈ ಕುರಿತು ಗುರುವಾರ ಸಚಿವರು ಹೊರಡಿಸಿರುವ ಟಿಪ್ಪಣಿಯಲ್ಲಿ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳು (ಅರಣ್ಯ ಪಡೆ ಮುಖ್ಯಸ್ಥರು) ಅರಣ್ಯ ಭವನ ಬೆಂಗಳೂರು ಅವರಿಗೆ ನಿರ್ದೇಶನ ನೀಡಿದ್ದಾರೆ. ಪತ್ರಕರ್ತ ರವಿ ಭೂಸಂಡೆ ಅವರು ನೀಡಿದ ದೂರಿನ ಮೇರೆಗೆ ಅರಣ್ಯ ಇಲಾಖೆ ಸಿಬ್ಬಂದಿ ವಿರುದ್ಧ ನಿನ್ನೆ (ಏ.16) ಗಾಂಧಿಗಂಜ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವರದಿ: ಅರವಿಂದ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

Read More

ತುಮಕೂರು:  ಜಾತಿ ಗಣತಿ ವರದಿ ಅಗತ್ಯವಿರುವಂತಹುದು. ಜವಾಬ್ದಾರಿಯುತ ಸರಕಾರ ಬಂದಾಗ, ಬಡತನ ರೇಖೆಗಿಂತ ಕೆಳಗೆ ಇರುವ ಸಮುದಾಯಗಳನ್ನು ಮೇಲಕ್ಕೆ ಎತ್ತಲು ಸಹಕಾರಿ ಆಗಲಿದೆ. ನೂರಾರು ವಷಗಳಿಂದ ಸಾಂಸ್ಕೃತಿಕವಾಗಿ, ರಾಜಕೀಯವಾಗಿ ಅವಕಾಶ ವಂಚಿತರಾಗಿರುತ್ತಾರೆ ಅವರ ಅಭಿವೃದ್ಧಿಗೆ ಇಂತಹ ಜಾತಿ ಗಣತಿ ವರದಿಗಳು ಸಹಾಯ ಆಗಲಿದೆ ಎಂದು ಮಾಜಿ ವಿಧಾನ ಪರಿಷತ್ ಸದಸ್ಯ ಎಂ.ಆರ್.ಹುಲಿನಾಯ್ಕರ್ ತಮ್ಮ ಅಭಿಪ್ರಾಯ ವ್ಯಕ್ತ ಪಡಿಸಿದ್ದಾರೆ. ತುಮಕೂರಿನಲ್ಲಿ ಮಾತನಾಡಿರುವ ಅವರು, 2013ರಲ್ಲಿ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದ ವೇಳೆ ಜಾತಿ ಗಣತಿ ವರದಿ ತಯಾರಿಸಲು ಕಾಂತರಾಜ್‌ ಅವರ ನೇತೃತ್ವದಲ್ಲಿ ಆಯೋಗ ರಚನೆ ಮಾಡಲಾಗಿತ್ತು. ಕಾಂತರಾಜ್‌ ಅವರಿಗೆ ಜವಾಬ್ದಾರಿ ನೀಡಲಾಗಿತ್ತು. ಎಲ್ಲಾ ಜಿಲ್ಲೆಗಳಲ್ಲಿ ಸಂಬಂಧಪಟ್ಟ ಅಧಿಕಾರಿಗಳಿಂದ ವರದಿ ತಯಾರಿಸಲಾಗಿತ್ತು. ಬಿಜೆಪಿ ಸರಕಾರ ಬಂದ ನಂತರ ಜಯಪ್ರಕಾಶ್‌ ಅವರು ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾದ ನಂತರ ಜಾತಿ ಗಣತಿ ವರದಿ ತಯಾರಿಸಲು ಮತ್ತೊಮ್ಮೆ ಕೆಲಸ ಮಾಡಿದರು. ಸರಕಾರ ಕೂಡ ಅದನ್ನು ಪರಿಗಣಿಸಿತು. ಅವೈಜ್ಞಾನಿಕ ಎಂದು ತಿಳಿಸುತ್ತಿದ್ದಾರೆ ಸರಿಯಲ್ಲ , ನಾವು ಜಾತಿ ಗಣತಿಯನ್ನು ಒಪ್ಪಬೇಕಿದೆ…

Read More

ಬೀದರ್:  ಕರ್ತವ್ಯ ನಿರತ ಪತ್ರಕರ್ತ ರವಿ ಭೂಸಂಡೆ ಎಂಬುವರ ಮೇಲೆ ಅರಣ್ಯ ಇಲಾಖೆ ಅಧಿಕಾರಿಗಳು ನಡೆಸಿದ ಹಲ್ಲೆಯನ್ನು ಔರಾದ್ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳು ತೀವ್ರವಾಗಿ ಖಂಡಿಸಿದ್ದಾರೆ. ಈ ಸಂಬಂಧ ಔರಾದ್ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ಮೊಕ್ತೆದಾರ್ ನೇತೃತ್ವದಲ್ಲಿ ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಸರಿಗೆ ಬರೆದ ಹಕ್ಕೊತ್ತಾಯ ಪತ್ರವನ್ನು ತಹಶೀಲ್ದಾರ್ ಮಹೇಶ್ ಪಾಟೀಲ್ ಅವರಿಗೆ ಸಲ್ಲಿಸಿದರು. ಬೀದರ್ ನಗರದ ಚಿದ್ರಿ ರಸ್ತೆಯಲ್ಲಿ ಏ.15 ರಂದು ರಾತ್ರಿ ರವಿ ಭೂಸಂಡೆ ಅವರು ವರದಿಗಾಗಿ ಪೋಟೋ ತೆಗೆಯಲು ಹೋದ ವೇಳೆ ಪ್ರಾದೇಶಿಕ ಅರಣ್ಯ ಇಲಾಖೆ ಅಧಿಕಾರಿ ದಸ್ತಗಿರ ಉಪವಲಯ ಅರಣ್ಯಾಧಿಕಾರಿ ಶಾಂತಕುಮಾರ, ವಲಯ ಅರಣ್ಯಾಧಿಕಾರಿ ಗಜಾನಂದ, ಬೀಟ್ ವನಪಾಲಕ ಸಂಗಮೇಶ ಸೇರಿದಂತೆ ಇನ್ನೂ ಮೂರಾಲ್ಕು ಜನರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದರು. ನಾನು ಪತ್ರಕರ್ತ ಎಂದು ರವಿ ಭೂಸಂಡೆ ಅವರು ಹೇಳಿದರೂ, ಮತ್ತಷ್ಟು ಅತಿರೇಕಕ್ಕೆರಿದ ಅಧಿಕಾರಿಗಳು ರವಿ ಅವರನ್ನು ಕಪಾಳಮೋಕ್ಷ ಮಾಡಿ ದರ್ಪ ಮೆರೆದಿದ್ದು ಅಲ್ಲದೆ, ಅವಾಚ್ಯ…

Read More

ತುಮಕೂರು:  ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಟಿ.ವಿ.ಎಸ್. ಎಲೆಕ್ಟ್ರಾನಿಕ್ಸ್ ಹಾಗೂ ಮೆಡ್‌ ಪ್ಲಸ್ ಸಂಸ್ಥೆಯ ಸಹಯೋಗದಲ್ಲಿ ನಿರುದ್ಯೋಗಿಗಳಿಗೆ ಉದ್ಯೋಗ ನೀಡುವ ಸಂಬಂಧ ಏಪ್ರಿಲ್ 19ರಂದು ನೇರ ಸಂದರ್ಶನ ಏರ್ಪಡಿಸಲಾಗಿದೆ. ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಅಂದು ಬೆಳಿಗ್ಗೆ 10 ಗಂಟೆಗೆ ನೇರ ಸಂದರ್ಶನ ನಡೆಯಲಿದ್ದು, ಎಸ್.ಎಸ್.ಎಲ್.ಸಿ., ಪಿ.ಯು.ಸಿ, ಯಾವುದೇ ಪದವಿ, ಡಿ.ಫಾರ್ಮ ಹಾಗೂ ಬಿ. ಫಾರ್ಮ ಪಾಸಾದ ಅಭ್ಯರ್ಥಿಗಳು ತಮ್ಮ ಬಯೋಡೇಟಾದೊಂದಿಗೆ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 0816-2278488, ಮೊ.ಸಂ. 9071021143, 9513136642ನ್ನು ಸಂಪರ್ಕಿಸಬೇಕೆಂದು ಉದ್ಯೋಗಾಧಿಕಾರಿ ಕಿಶೋರ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

Read More

ತುಮಕೂರು:  ಜಿಲ್ಲೆಯಲ್ಲಿ ಚುರುಕಾಗಿ ನಡೆಯುತ್ತಿರುವ ವಿವಿಧ ರೈಲ್ವೆ ಯೋಜನೆ ಕಾಮಗಾರಿಗಳಲ್ಲಿ ಗುಣ್ಣಮಟ್ಟವನ್ನು ಕಾಯ್ದುಕೊಳ್ಳಬೇಕೆಂದು ಕೇಂದ್ರ ರೈಲ್ವೆ ಹಾಗೂ ಜಲ ಶಕ್ತಿ ರಾಜ್ಯ ಖಾತೆ ಸಚಿವ ವಿ. ಸೋಮಣ್ಣ ಅಧಿಕಾರಿಗಳಿಗೆ ಸೂಚನೆ ನೀಡಿದರು. ಸುಮಾರು 6 ಕೋಟಿ ರೂ. ವೆಚ್ಚದಲ್ಲಿ ಬಿಲ್ಲೇಪಾಳ್ಯ ಗೇಟ್ ಲೆವೆಲ್ ಕ್ರಾಸಿಂಗ್ ನಂ. 50, 7.88 ಕೋಟಿ ರೂ. ವೆಚ್ಚದಲ್ಲಿ ಬಂಡಿಹಳ್ಳಿ ಗೇಟ್ ಬಳಿ ಎಲ್.ಸಿ. ನಂ.60ರ ಬದಲಿಗೆ ರಸ್ತೆ ಕೆಳ ಸೇತುವೆ ನಿರ್ಮಾಣಕ್ಕೆ ಬಂಡಿಹಳ್ಳಿಯಲ್ಲಿ ಬುಧವಾರ ಶಂಕುಸ್ಥಾಪನೆ ಹಾಗೂ 6.37 ಕೋಟಿ ರೂ ವೆಚ್ಚದಲ್ಲಿ ಡಿ–ರಾಂಪುರ ಗೇಟ್ ಬಳಿ ಎಲ್.ಸಿ. ನಂ. 62 ಬದಲಿಗೆ ರಸ್ತೆ ಕೆಳ ಸೇತುವೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಜನಸಾಮಾನ್ಯರ ಭದ್ರತೆ ಹಾಗೂ ಸುಗಮ ಸಂಚಾರಕ್ಕಾಗಿ ರೈಲ್ವೆ ಗೇಟ್‌ಗಳ ಮೇಲ್ಸೇತುವೆ ಹಾಗೂ ಕೆಳ ಸೇತುವೆ ನಿರ್ಮಾಣ ಕಾಮಗಾರಿಗಳನ್ನು ಆದ್ಯತೆ ಮೇಲೆ ಕೈಗೆತ್ತಿಕೊಳ್ಳಲಾಗಿದೆ ಎಂದು ತಿಳಿಸಿದರು. ಜಿಲ್ಲೆಯಲ್ಲಿ ರೈಲ್ವೆ ಕಾಮಗಾರಿಗಳಿಗೆ ಸುಮಾರು 650 ಕೋಟಿ ರೂ. ವೆಚ್ಚದಲ್ಲಿ 20 ರೈಲ್ವೆ ಗೇಟ್ ಮೇಲ್ಸೇತುವೆ/ಕೆಳ ಸೇತುವೆಗಳನ್ನು…

Read More