Author: admin

ಸನ್ನಿ ಲಿಯೋನ್ ಫೋಟೋಗಳಿಗಾಗಿ, ವೀಡಿಯೋಗಳಿಗಾಗಿ ಇಂಟರ್ನೆಟ್‌ ನಲ್ಲಿ ಹುಡುಕುವವರ ಸಂಖ್ಯೆ ಕಡಿಮೆಯೇನಿಲ್ಲ.ಅಂಥ ಸನ್ನಿ ಲಿಯೋನ್ ಈಗ ಸಿನಿಮಾ ನಟಿಯಾಗಿ ಬದಲಾಗುತ್ತಿದ್ದಾರೆ. ಒಂದಾದ ಮೇಲೆ ಮತ್ತೊಂದರಂತೆ ಸಿನಿಮಾಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಸನ್ನಿ ಮೊದಲು ಹಾಟ್ ಸ್ಟಾರ್ ಪಟ್ಟದಲ್ಲಿದ್ದರು. ಈಗ ನಟಿಯಾಗಿ ಬದಲಾಗಿದ್ದಾರೆ. ಭಾರತದಲ್ಲಿ ನಾರ್ತ್–ಸೌತ್ ಬೇಧವಿಲ್ಲದೇ ಸನ್ನಿ ಲಿಯೋನ್ ಸಿನಿಮಾಗಳಲ್ಲಿ ಸಿಕ್ಕ ಆಫರ್ ಬಿಟ್ಟುಕೊಡದೇ ನಟಿಸುತ್ತಿದ್ದಾರೆ. ಏಕೆಂದರೆ, ಸನ್ನಿ ಲಿಯೋನ್ ಅವರಿಗೆ ಈಗ ತಮ್ಮ ಇಮೇಜ್ ಇನ್ನೂ ಹೆಚ್ಚು ಬದಲಿಸಿಕೊಳ್ಳಬೇಕಿದೆ. ಈಗಾಗಲೇ ಬ್ಲೂ ಫಿಲಂ ನಟಿ ಇಮೇಜ್‌ ನಿಂದ ಹೊರಬಂದಿರುವ ನಟಿ ಸನ್ನಿ ಲಿಯೋನ್, ಎಲ್ಲರಂತೆ ನಟಿ ಪಟ್ಟಕ್ಕೆ ಲಗ್ಗೆ ಇಟ್ಟಾಗಿದೆ. ಇನ್ನೇನಿದ್ದರೂ ಅವರ ಗುರಿ ‘ಕಲಾವಿದೆ’ ಪಟ್ಟ ಎನ್ನಲಾಗಿದೆ. ಕೆನಡಾದಲ್ಲಿ ಬಡ ಕುಟುಂಬದಲ್ಲಿ ಜನಿಸಿದ್ದ ಸನ್ನಿ ಲಿಯೋನ್ ಅವರು ತಾವು ಶ್ರೀಮಂತೆ ಆಗಲು ವಯಸ್ಕರ ಸಿನಿಮಾ ನಟಿಯಾಗಿ ಬದಲಾದರು ಎನ್ನಲಾಗಿದೆ. ಆದರೆ, ಒಂದು ಹಂತದಲ್ಲಿ ದುಡ್ಡು ಎಲ್ಲವೂ ಅಲ್ಲ, ಜೀವನ ಹಾಗೂ ಸಮಾಜದಲ್ಲಿ ಗೌರವ ಮುಖ್ಯ ಎನಿಸಿತಂತೆ. ಈ ಕಾರಣಕ್ಕೆ ಅದೊಂದು ಚಿನ…

Read More

ಆಗಸ್ಟ್‌ ಎಂದರೆ ಏನೋ ಸಂಭ್ರಮ, ಏಕೆಂದರೆ ಆ ಮಾಸದಿಂದ ಅಲ್ವೇ ಹಬ್ಬಗಳು ಶುರುವಾಗುವುದು. ನಾಗರ ಪಂಚಮಿ, ಕೃಷ್ಣ ಜನ್ಮಾಷ್ಟಮಿ, ವರಲಕ್ಷ್ಮಿ ವ್ರತ ಹೀಗೆ ಸಾಲು ಸಾಲು ಹಬ್ಬಗಳ ಮಾಸವಿದು. ಇದರ ಜೊತೆಗೆ ವ್ರತಗಳು, ಶ್ರಾವಣ ಸೋಮವಾರ, ರಕ್ಷಾ ಬಂಧನ, ಸ್ನೇಹಿತರ ದಿನ ಹೀಗೆ ಹಲವು ಆಚರಣೆಗಳಿಂದಾಗಿ ಈ ಮಾಸ ತುಂಬಾನೇ ವಿಶೇಷವಾಗಿದೆ. ಈ ಮಾಸದಲ್ಲಿ ಬರುವ ಹಬ್ಬಗಳು, ವ್ರತಗಳ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ: ನಾಗ ಪಂಚಮಿ : ಆಗಸ್ಟ್ 9ಕ್ಕೆ ಆಚರಿಸಲಾಗುವುದು ಸ್ವಾತಂತ್ರ್ಯ ದಿನಾಚರಣೆ: ಆಗಸ್ಟ್ 15 ವರಲಕ್ಷ್ಮಿ ವ್ರತ ಅರಂಭ: ಆಗಸ್ಟ್‌ 16 ರಕ್ಷಾ ಬಂಧನ: ಆಗಸ್ಟ್ 19 ಕೃಷ್ಣ ಜನ್ಮಾಷ್ಟಮಿ: ಆಗಸ್ಟ್ 26 ಆಗಸ್ಟ್‌ನಲ್ಲಿ ಈ ಪ್ರಮುಖ ಹಬ್ಬಗಳ ಜೊತೆಗೆ ಈ ವ್ರತಗಳಿವೆ, ಈ ದಿನಗಳು ತುಂಬಾನೇ ವಿಶೇಷವಾಗಿದೆ: ಆಗಸ್ಟ್‌ 1: ಪ್ರದೋಷ ವ್ರತ ಆಗಸ್ಟ್‌ 4: ಭೀಮನ ಅಮವಾಸ್ಯೆ ಆಗಸ್ಟ್‌ 4: ಫ್ರೆಂಡ್‌ಶಿಪ್ ಡೇ (ಸ್ನೇಹಿತರ ದಿನ) ಆಗಸ್ಟ್‌ 5: ಶ್ರಾವಣ ಸೋಮವಾರ ಆಗಸ್ಟ್‌ 8:…

Read More

ತಮಿಳಿನ ಖ್ಯಾತ ನ್ಯೂಸ್ ಆ್ಯಂಕರ್ ಬ್ಲಡ್ ಕ್ಯಾನ್ಸರ್ ನಿಂದಾಗಿ ಸಾವನಪ್ಪಿದ್ದಾರೆ. ಕಳೆದ ಒಂದು ವರ್ಷದಿಂದ ಚಿಕಿತ್ಸೆ ಪಡೆಯುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೇ ಇಂದು ಸಾವನಪ್ಪಿದ್ದಾರೆ. ತಮಿಳಿನ ಖಾಸಗಿ ದೂರದರ್ಶನದಲ್ಲಿ ವಾರ್ತಾ ವಾಚಕಿಯಾಗಿ ಕೆಲಸ ಮಾಡುತ್ತಿದ್ದ ಸೌಂದರ್ಯ ಅಮುದಮೊಳಿ ಅವರು ಬ್ಲಡ್ ಕ್ಯಾನ್ಸರ್ ನಿಂದ ಬಳಲುತ್ತಿದ್ದು, ಕಳೆದ ಒಂದು ವರ್ಷದಿಂದ ಚಿಕಿತ್ಸೆ ಪಡೆಯುತ್ತಿದ್ದರೂ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ ಸಾವನ್ನಪ್ಪಿದ್ದಾರೆ. ಜನಪ್ರಿಯ ಟಿವಿ ಚಾನೆಲ್‌ ಗಳಾದ ಸತ್ಯಂ, ಪಾಲಿಮರ್ ಮತ್ತು ನ್ಯೂಸ್ ತಮಿಳಿನಲ್ಲಿ ಕೆಲಸ ಮಾಡಿದ್ದಾರೆ. ಕಳೆದ ವರ್ಷ ಸೌಂದರ್ಯ ಅವರ ಆರೋಗ್ಯ ಹದಗೆಟ್ಟಿತ್ತು. ಬಳಿಕ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಯಾವುದೇ ಪ್ರಗತಿ ಕಂಡಿಲ್ಲ. ವೈದ್ಯರ ಸಲಹೆಯಂತೆ ಕ್ಯಾನ್ಸರ್ ತಪಾಸಣೆಗೆ ಒಳಗಾಗಿದ್ದರು. ಈ ವೇಳೆ ಅವರಿಗೆ ರಕ್ತ ಕ್ಯಾನ್ಸರ್ ನಾಲ್ಕನೆ ಹಂತದಲ್ಲಿರುವ ಬಗ್ಗೆ ತಿಳಿದು ಬಂದಿತ್ತು, ಬಳಿಕ ಚಿಕಿತ್ಸೆಗೆ ಒಳಗಾಗಿದ್ದರು. ಈ ನಡುವೆ ಚಿಕಿತ್ಸೆ ಗೆ ಆರ್ಥಿಕ ಸಮಸ್ಯೆಯಾದಾಗ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಆರ್ಥಿಕ ನೆರವಿಗೆ ಮನವಿ ಮಾಡಿದ್ದರು. ಈ…

Read More

ದೇಶದ ರಾಷ್ಟ್ರಪತಿಗಳ ನಿವಾಸವಾದ ರಾಷ್ಟ್ರಪತಿ ಭವನದ ಕೆಲ ಸಭಾಂಗಣಗಳ ಹೆಸರನ್ನು ಬದಲಿಸಲಾಗಿದೆ. ವಿದ್ಯುಕ್ತ ಕಾರ್ಯಕ್ರಮಗಳು ನಡೆಯುವ ದರ್ಬಾರ್‌ ಹಾಲ್‌ ಹಾಗೂ ಅಶೋಕ ಹಾಲ್‌ ಗಳಿಗೆ ‘ಗಣತಂತ್ರ ಮಂಟಪ’ ಮತ್ತು ‘ಅಶೋಕ ಮಂಟಪ’ ಎಂದು ಗುರುವಾರ ಮರುನಾಮಕರಣ ಮಾಡಲಾಗಿದೆ. ರಾಷ್ಟ್ರಪತಿ ಭವನದ ವಾತಾವರಣವನ್ನು ಭಾರತದ ಸಾಂಸ್ಕೃತಿಕ ಮೌಲ್ಯಗಳು ಮತ್ತು ನೈತಿಕತೆಯನ್ನು ಪ್ರತಿಬಿಂಬಿಸುವಂತೆ ಮಾಡುವ ಉದ್ದೇಶವಿದೆ ಎಂದು ರಾಷ್ಟ್ರಪತಿಗಳ ಸಚಿವಾಲಯ ಹೇಳಿಕೆ ಬಿಡುಗಡೆ ಮಾಡಿದೆ. ರಾಷ್ಟ್ರ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುವ ದರ್ಬಾರ್ ಹಾಲ್, ಬ್ರಿಟಿಷರ ದರ್ಬಾರಿಗೆ ಹೆಸರು ಪಡೆದಿತ್ತು. ಆದರೆ ಭಾರತ ಗಣತಂತ್ರ ದೇಶವಾದ ಬಳಿಕ ತನ್ನ ಪ್ರಾಮುಖ್ಯತೆ ಕಳೆದುಕೊಂಡಿತ್ತು. ಈಗ ಅದಕ್ಕೆ ಹೊಂದಿಕೆಯಾಗುವಂತೆ ಗಣತಂತ್ರ ಮಂಟಪ ಎಂದು ಹೆಸರಿಸಲಾಗಿದೆ. ಅಂತೆಯೇ ಅಶೋಕ ಹಾಲ್ ಎಂಬ ಆಂಗ್ಲ ಪದವನ್ನು ಅಶೋಕ ಮಂಟಪ ಎಂದು ಬದಲಿಸಲಾಗಿದೆ. ಇದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೂ ಸಂತಸ ತಂದಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149…

Read More

ರಾಜ್ಯ ಮಲೆನಾಡು ಭಾಗದಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಮರಗಳು, ವಿದ್ಯುತ್‌ ಕಂಬಗಳು ಧರೆಗುರುಳುತ್ತಿವೆ. ಇದರಿಂದಾಗಿ ನಿರಂತರವಾಗಿ ವಿದ್ಯುತ್‌ ಸಂಪರ್ಕ ಕಡಿತಗೊಂಡಿದೆ.ಈ ಹಿನ್ನೆಲೆಯಲ್ಲಿ ಕೆಲವರು ಇದನ್ನೇ ಒಂದು ಬ್ಯುಸಿನೆಸ್‌ ಮಾಡಿಕೊಂಡಿದ್ದಾರೆ. ಭಾರೀ ಗಾಳಿಗೆ ವಿದ್ಯುತ್ ತಂತಿಯ ಮೇಲೆ ಮರಗಳು ಬಿದ್ದು ಮಲೆನಾಡಿನ ಕೆಲ ಗ್ರಾಮಗಳ ಜನರು ಕತ್ತಲಲ್ಲಿ ಕಳೆಯುವಂತಾಗಿದೆ. ಕಳೆದ ಮೂರ್ನಾಲ್ಕು ದಿನಗಳಿಂದ ಮೊಬೈಲ್ ಚಾರ್ಜ್ ಇಲ್ಲದೆ ಸಾರ್ವಜನಿಕರು ಪರದಾಡುತ್ತಿದ್ದಾರೆ. ಇದನ್ನೇ ಬಂಡವಾಳವಾಗಿ ಇಟ್ಟುಕೂಂಡ ಅಂಗಡಿಯೊಂದರಲ್ಲಿ ಜನರೇಟರ್ ಆನ್ ಮಾಡಿ ಮೊಬೈಲ್ ಚಾರ್ಜ್ ಮಾಡಿಕೊಡುತ್ತಿದ್ದಾರೆ. ಒಂದು ಮೊಬೈಲ್ ಫುಲ್ ಚಾರ್ಜ್ ಮಾಡಲು 60 ರೂ. ಹಾಗೂ ಹಾಲ್ಫ್ ಚಾರ್ಜ್ ಮಾಡಲು 40 ರೂ. ಪಡೆದುಕೊಳ್ಳುತ್ತಿದ್ದಾರೆ ಎನ್ನಲಾಗಿದೆ. ಗ್ರಾಮದ ಶಾಮಿಯಾನ ಅಂಗಡಿಯಲ್ಲಿ ಜನರೇಟರ್ ಆನ್ ಮಾಡಿ ಮೊಬೈಲ್ ಚಾರ್ಜಿಂಗ್ ಮಾಡಿಕೊಡುವ ಕೆಲಸ ನಡೆಯುತ್ತಿದೆ.ಕೇಳಿದಷ್ಟು ಹಣ ಕೊಟ್ಟು ಮೊಬೈಲ್‌ ಚಾರ್ಜ್‌ ಮಾಡಿಸಿಕೊಳ್ಳಲು ಜನರು ಸಾಲುಗಟ್ಟಿ ನಿಂತಿದ್ದಾರೆ.ಸುಮಾರು 2,000 ವಿದ್ಯುತ್‌ ಕಂಬಗಳು ನೆಲಕ್ಕುರುಳಿವೆ ಎಂದು ತಿಳಿದುಬಂದಿದೆ. 120 ಕೋಟಿ ರೂಪಾಯಿಗೂ ಹೆಚ್ಚು ಹಾನಿಯಾಗಿದೆ ಎಂದು ತಿಳಿದುಬಂದಿದೆ. ಒಂದು…

Read More

ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಆಪ್ತರ ಜೊತೆ ತೆರಳಿ ದರ್ಶನ್ ಬಿಡುಗಡೆಗಾಗಿ ಹರಕೆ ಸಲ್ಲಿಸಿದ್ದಾರೆ ಎನ್ನಲಾಗಿದೆ. ಉಡುಪಿ ಜಿಲ್ಲೆ ಬೈಂದೂರು ತಾಲೂಕಿನ ಕೊಲ್ಲೂರಿಗೆ ರಾತ್ರಿ ಆಗಮಿಸಿದ ಅವರು, ದೇವಿಯ ದರ್ಶನ ಮಾಡಿದ್ದಾರೆ. ದೇವಸ್ಥಾನದಲ್ಲಿ  ಬೆಳಗ್ಗೆ ದರ್ಶನ್‌ ಬಿಡುಗಡೆ ಸಂಬಂಧ ನವ ಚಂಡಿಕಾ ಹೋಮ ನಡೆದಿದೆ. ಮುಂಜಾನೆ ದೇಗುಲದಲ್ಲಿ ದರ್ಶನ್ ಬಿಡುಗಡೆಗಾಗಿ ಈ ಹೋಮ ನಡೆದಿದೆ ಎಂದು ವರದಿಗಳಿಂದ ತಿಳಿದು ಬಂದಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296 ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

Read More

ಪ್ರಸಿದ್ಧ ಶ್ರೀ ಗುರುದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾದಲ್ಲಿ ನೇಮಕಗೊಂಡಿರುವ ಅರ್ಚಕರಿಗೆ ನಿಯಮಾನುಸಾರ ಪರಿಶೀಲಿಸಿ ವೇತನ ನಿಗದಿಪಡಿಸುವಂತೆ ಜಿಲ್ಲಾಧಿಕಾರಿಗೆ ಸೂಚಿಸುವುದಾಗಿ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗರೆಡ್ಡಿ ಭರವಸೆ ನೀಡಿದ್ದಾರೆ ಎಂದು ವಿಧಾನ ಪರಿಷತ್ ಶಾಸಕ ಡಾ.ಸಿ.ಟಿ.ರವಿ ತಿಳಿಸಿದ್ದಾರೆ. ವಿಧಾನ ಪರಿಷತ್ತಿನ ಕಲಾಪದಲ್ಲಿ ನಡೆದ ಕಲಾಪದಲ್ಲಿ ಶೂನ್ಯ ವೇಳೆಯಲ್ಲಿ ತಾನು ಈ ವಿಷಯ ಪ್ರಸ್ತಾಪಿಸಿ ಗಮನ ಸೆಳೆದಾಗ, ಸಚಿವರು ಈ ಬಗ್ಗೆ ಲಿಖಿತ ಉತ್ತರ ನೀಡಿದ್ದಾರೆ ಎಂದು ಗುರುವಾರ ಮಾಹಿತಿ ನೀಡಿದ್ದಾರೆ. ಶ್ರೀ ಗುರುದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾ ಸಂಸ್ಥೆಯು ಧಾರ್ಮಿಕ ದತ್ತಿ ಇಲಾಖೆಯ ‘ಎ’ ವರ್ಗದ ಸಂಯುಕ್ತ ಧಾರ್ಮಿಕ ಸಂಸ್ಥೆಯಾಗಿದ್ದು, ಹಲವು ಹೋರಾಟಗಳ ನಂತರ ನ್ಯಾಯಾಲಯದ ನಿರ್ದೇಶನದ ಮೇರೆಗೆ ಏಪ್ರಿಲ್ ೧, ೨೦೨೩ ರಂದು ದೇವಾಲಯಕ್ಕೆ ಅರ್ಚಕರ ನೇಮಕ ಆದಾಗಿನಿಂದ ಇಂದಿನವರೆಗೆ ಅರ್ಚಕರಿಗೆ ವೇತನ ನಿಗದಿಪಡಿಸಿರುವುದಿಲ್ಲ. ಈ ಬಗ್ಗೆ ಹಿಂದಿನ ಅಧಿವೇಶನದಲ್ಲಿ ಈ ವಿಷಯವನ್ನು ತಾನೇ ಪ್ರಸ್ತಾಪಿಸಿದ್ದಾಗ ಜಿಲ್ಲಾಧಿಕಾರಿಗಳಿಂದ ವರದಿ ಪಡೆದು ಅರ್ಚಕರಿಗೆ ವೇತನ ನಿಗಧಿಪಡಿಸಲು ಕ್ರಮಕೈಗೊಳ್ಳಲಾಗುವುದೆಂದು ಇಲಾಖೆ ಸಚಿವರು…

Read More

ಮಾಜಿ ಪ್ರಧಾನಿಯೂ ಆಗಿರುವ ರಾಜ್ಯಸಭಾ ಸದಸ್ಯ ಹೆಚ್‌.ಡಿ ದೇವೇಗೌಡ ಹಾಗೂ ಕೇಂದ್ರ ಸಚಿವ ಹೆಚ್‌.ಡಿ.ಕುಮಾರಸ್ವಾಮಿ ಅವರಿಂದು ಪ್ರಧಾನಿ ನರೇಂದ್ರ ಮೋದಿ ಅವರನ್ನ ಭೇಟಿ ಮಾಡಿದ್ದಾರೆ. ದೆಹಲಿಯ ಲೋಕಕಲ್ಯಾಣ ಮಾರ್ಗದಲ್ಲಿರುವ ಪ್ರಧಾನಿಯವರ ನಿವಾಸದಲ್ಲಿ ಭೇಟಿಯಾಗಿ, ಹಲವು ಮಹತ್ವದ ವಿಚಾರಗಳನ್ನ ಚರ್ಚಿಸಿದ್ದಾರೆ. ಈ ಮಾಹಿತಿಯನ್ನು ಸ್ವತಃ ಮೋದಿ ಅವರೇ ತಮ್ಮ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ದೆಹಲಿಯ ಲೋಕಕಲ್ಯಾಣ ಮಾರ್ಗದಲ್ಲಿ ಮಾಜಿ ಪ್ರಧಾನಿ ಹೆಚ್‌.ಡಿ.ದೇವೇಗೌಡ ಜೀ ಅವರನ್ನು ಭೇಟಿಯಾಗಿರುವುದು ಗೌರವದ ಸಂಗತಿ. ವಿವಿಧ ವಿಚಾರಗಳ ಬಗ್ಗೆ ಅವರಿಗಿರುವ ಬುದ್ಧಿವಂತಿಕೆ ಹಾಗೂ ಅವರ ಆಳವಾದ ದೃಷ್ಟಿಕೋನ ಅತ್ಯಂತ ಮೌಲ್ಯಯುತವಾಗಿದೆ ಎಂದು ಬರೆದುಕೊಂಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296 ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

Read More

ಪೀಣ್ಯ ಫ್ಲೈಓವರ್ ಮೇಲೆ ಭಾರೀ ವಾಹನಗಳ ಸಂಚಾರಕ್ಕೆ ವಿಧಿಸಲಾಗಿದ್ದ ನಿರ್ಬಂಧ ತೆರವುಗೊಳಿಸಲಾಗಿದ್ದು, ಜುಲೈ 29ರಿಂದ ಎಲ್ಲಾ ವಾಹನಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್ ನೀಡಲಾಗಿದೆ. ಪೀಣ್ಯ ಫ್ಲೈಓವರ್‍ನ ಕೆನ್ನಮೆಟಲ್ ಅಪ್ಪರ್ ರ್ಯಾಂಪ್‍ನಿಂದ ಎಸ್.ಆರ್.ಎಸ್.ಡೌನ್ ರ್ಯಾಂಪ್‍ವರೆಗಿನ ಪ್ರೆಸ್ಟ್ರೆಸ್ಡ್ ಕೇಬಲ್‍ಗಳ ಬದಲಿ ಕಾಮಗಾರಿಯ ಕಾರಣದಿಂದ ಭಾರೀ ವಾಹನಗಳ ಸಂಚಾರಕ್ಕೆ ನಿಷೇಧ ವಿಧಿಸಿ 2022ರ ಫೆಬ್ರವರಿಯಲ್ಲಿ ಆದೇಶಿಸಲಾಗಿತ್ತು. ಕಾಮಗಾರಿ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಎಲ್ಲಾ ವಾಹನಗಳ ಸಂಚಾರಕ್ಕೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಗ್ರೀನ್ ಸಿಗ್ನಲ್ ನೀಡಿದೆ. ಅದರನ್ವಯ ಜುಲೈ 29ರಿಂದ ಸಂಚಾರಕ್ಕೆ ಮುಕ್ತಗೊಳಿಸಿ ಬೆಂಗಳೂರು ಸಂಚಾರ ಪೊಲೀಸ್ ಇಲಾಖೆಯಿಂದ ಆದೇಶಿಸಲಾಗಿದೆ. ನೂತನವಾಗಿ ಪ್ರೆಸ್ಟ್ರೆಸ್ಡ್ ಕೇಬಲ್‍ಗಳ ಅಳವಡಿಕೆ ಕಾರ್ಯ ಪೂರ್ಣಗೊಂಡ ಹಿನ್ನೆಲೆಯಲ್ಲಿ ಹಾಗೂ ಸಾರ್ವಜನಿಕರಿಂದ ಬೇಡಿಕೆ ಬಂದ ಕಾರಣ ಬೃಹತ್ ವಾಹನಗಳ ಓಡಾಟಕ್ಕೆ ಅನುಮತಿ ನೀಡಲಾಗಿದೆ. ಆದರೆ, ಗ್ರೌಟಿಂಗ್ ಕಾಮಗಾರಿಯ ಸಲುವಾಗಿ ಜು.29ರಿಂದ ಪ್ರತಿ ಶುಕ್ರವಾರ ಮುಂಜಾನೆ 6ರಿಂದ ಶನಿವಾರ ಮುಂಜಾನೆ 6 ಗಂಟೆಯವರೆಗೆ ಭಾರೀ ವಾಹನಗಳ ಸಂಚಾರವನ್ನು ನಿರ್ಬಂಧಿಸಿ ಉಳಿದ ಎಲ್ಲ ದಿನಗಳಲ್ಲಿ ಭಾರೀ ವಾಹನ ಅವಕಾಶ ನೀಡಲಾಗಿದೆ.…

Read More

ಬುಡಕಟ್ಟು ಮಹಿಳೆಯರಿಗೆ ಸಿಂಧೂರ ಹಚ್ಚಬೇಡಿ ಮತ್ತು ಮಂಗಳಸೂತ್ರ ಧರಿಸಬೇಡಿ ಎಂದು ಹೇಳಿದ್ದಕ್ಕಾಗಿ ರಾಜಸ್ಥಾನದ ಶಿಕ್ಷಣ ಇಲಾಖೆ ಮಹಿಳಾ ಶಿಕ್ಷಕಿ ಮೇನಕಾ ದಾಮೋರ್ ಅವರನ್ನು ಅಮಾನತುಗೊಳಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ರಾಜಸ್ಥಾನ ನೀತಿ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ಮತ್ತು ಶಿಕ್ಷಣ ಇಲಾಖೆಯ ವರ್ಚಸ್ಸಿಗೆ ಧಕ್ಕೆ ತಂದಿದ್ದಕ್ಕಾಗಿ ಶಿಕ್ಷಕಿಯ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ. ಜುಲೈ 19 ರಂದು ಬನ್ಸ್ವಾರಾದ ಮಂಗರ್ ಧಾಮ್ನಲ್ಲಿ ನಡೆದ ಮೆಗಾ ರ್ಯಾಲಿಯಲ್ಲಿ, ಬುಡಕಟ್ಟು ಮಹಿಳೆಯರು ಪಂಡಿತರು ಹೇಳುವುದನ್ನು ಅನುಸರಿಸಬಾರದು ಎಂದು ದಾಮೋರ್ ಹೇಳಿದ್ದರು. “ಬುಡಕಟ್ಟು ಕುಟುಂಬಗಳು ಸಿಂಧೂರವನ್ನು ಅನ್ವಯಿಸುವುದಿಲ್ಲ, ಅವರು ಮಂಗಳಸೂತ್ರವನ್ನು ಧರಿಸುವುದಿಲ್ಲ. ಬುಡಕಟ್ಟು ಸಮಾಜದ ಮಹಿಳೆಯರು ಮತ್ತು ಹುಡುಗಿಯರು ಶಿಕ್ಷಣದತ್ತ ಗಮನ ಹರಿಸಬೇಕು. ಇಂದಿನಿಂದ, ಎಲ್ಲಾ ಉಪವಾಸಗಳನ್ನು ಆಚರಿಸುವುದನ್ನು ನಿಲ್ಲಿಸಿ. ನಾವು ಹಿಂದೂಗಳಲ್ಲ ಎಂದಿದ್ದರು.  ದಾಮೋರ್ ಅವರ ಹೇಳಿಕೆಗೆ ಬುಡಕಟ್ಟು ಸಮಾಜದ ಮಹಿಳೆಯರು ಆಕ್ಷೇಪ ವ್ಯಕ್ತಪಡಿಸಿದ್ದರು. ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕರು ಈ ಬಗ್ಗೆ ಕ್ರಮ ಕೈಗೊಂಡು ಶಿಕ್ಷಕಿಯನ್ನು ಅಮಾನತುಗೊಳಿಸಿದ್ದಾರೆ. ಮೇನಕಾ ದಾಮೋರ್ ಆದಿವಾಸಿ…

Read More