Author: admin

ಪತ್ನಿಗೆ ಇಂಗ್ಲಿಷ್​ ಬರಲ್ಲ ಎಂಬ ಕಾರಣಕ್ಕಾಗಿ ಪತಿ ಮಡದಿಯನ್ನೇ ಬೇಡ ಎಂದು ಹಠ ಹಿಡಿದಿದ್ದಾರೆ. ಇವರದ್ದು ಪ್ರೇಮವಿವಾಹ. ಅದೂ ಮೂರು ತಿಂಗಳ ಹಿಂದಷ್ಟೇ ಸಪ್ತಪದಿ ತುಳಿದಿದ್ದರು ಎನ್ನಲಾಗಿದೆ. ಮೂರು ತಿಂಗಳ ಹಿಂದಷ್ಟೇ ಪ್ರೀತಿಸಿ ವಿವಾಹವಾದ ಜೋಡಿ ಇದೀಗ ಇಲ್ಲಿನ ಕೌಟುಂಬಿಕ ಸಲಹಾ ಕೇಂದ್ರದ ಮೆಟ್ಟಿಲೇರಿದ್ದಾರೆ. ಇಬ್ಬರ ಮಧ್ಯೆ ಅಂತ ದೊಡ್ಡ ಸಮಸ್ಯೆಯೇನೂ ಇಲ್ಲದಿದ್ದರೂ ಸಂವಹನ ನಡೆಸಲು ಬೇಕಾದ ಭಾಷೆಯೇ ಇವರಿಗೆ ಅಡ್ಡಿಯಾಗಿದೆ. ಪತ್ನಿ ಹಿಂದಿಯಲ್ಲಿ ಪಂಟರ್​. ಪತಿಗೆ ಆಕೆ ಇಂಗ್ಲಿಷ್​ ನಲ್ಲೇ ಮಾತನಾಡಬೇಕು ಎಂಬ ಹಠ. ಇದೊಂದೇ ಕಾರಣ, ನವದಂಪತಿ ನಡುವೆ ದೊಡ್ಡ ಬಿರುಗಾಳಿಯನ್ನೇ ಎಬ್ಬಿಸಿದೆ. ಪ್ರೀತಿಯ ದ್ಯೋತಕ ತಾಜ್​ ಮಹಲ್​ ಇರುವ ಆಗ್ರಾದಲ್ಲಿ ಈ ಪ್ರಕರಣ ಬೆಳಕಿಗೆ ಬಂದಿದೆ. ಪ್ರೀತಿಸಿ ವಿವಾಹವಾಗಿದ್ದ ದಂಪತಿ ನಡುವೆ ಭಾಷೆ ಅಂತರ ಮೂಡಲು ಕಾರಣವಾಗಿದೆ. ಖಾಸಗಿ ಬ್ಯಾಂಕ್​ ನ ಉದ್ಯೋಗಿಯಾದ ಆತ, ತರಬೇತಿಗಾಗಿ ಆಗ್ರಾಕ್ಕೆ ಬಂದಾಗ ಯುವತಿ ಜೊತೆ ಪ್ರೇಮಾಂಕುರವಾಗಿತ್ತು. ಬಳಿಕ ಇಬ್ಬರೂ ಕುಟುಂಬಸ್ಥರನ್ನು ಒಪ್ಪಿಸಿ ಸಪ್ತಪದಿ ತುಳಿದಿದ್ದರು. ಸದ್ಯ ಭಾಷಾ ವಿವಾದದಿಂದ ಬೇಸತ್ತ…

Read More

ಹಣ, ಚಿನ್ನಾಭರಣ, ಬೆಳ್ಳಿ ಕಳ್ಳತನದ ಬಗ್ಗೆ ಕೇಳಿರುತ್ತೀರಾ. ಆದರೆ ಇಲ್ಲೊಬ್ಬಳು ಯುವತಿ ಕಬಾಬ್ ಕಳ್ಳತನ ಮಾಡಿ ಸಿಕ್ಕಿಬಿದ್ದಿದ್ದಾಳೆ. ಸ್ಟೈಲ್‌ ಆಗಿ ಡ್ರೆಸ್‌ ಮಾಡಿಕೊಂಡು ದುಬಾರಿ ಅಂಗಡಿಗಳನ್ನೇ ಹುಡುಕಿ ಶಾಪಿಂಗ್‌ ಮಾಡುತ್ತಿದ್ದ ಯುವತಿಯನ್ನು ಏಕಾಏಕಿ ಒಂದು ಅಂಗಡಿಯೊಳಗೆ ಒಬ್ಬ ವ್ಯಕ್ತಿ ಬಂದು ಲಾಕ್‌ ಮಾಡಿದ್ದಾನೆ. ಆಕೆ ಎಷ್ಟೇ ಕಿರುಚಾಡಿದರೂ ಕೂಗಾಡಿದರೂ ಸಹ ಬಾಗಿಲು ತೆರೆಯದೇ ಆಕೆ ಹಾಗೂ ಆಕೆ ಜೊತೆಗಿರುವವರನ್ನು ಒಳಗಡೆಯೇ ಲಾಕ್‌ ಮಾಡಿದ್ದಾನೆ. ಆಕೆಯ ವರ್ತನೆ ಹಾಗೂ ಆಕೆಯನ್ನು ಕೂಡಿ ಹಾಕಿರುವುದನ್ನು ಕಂಡು ಸ್ಥಳದಲ್ಲಿದ್ದವರು ಅಚ್ಚರಿಗೊಂಡಿದ್ದಾರೆ. ಹಾಗೂ ನಡೆದ ಅಸಲಿ ಸಂಗತಿಯನ್ನು ವಿಚಾರಿಸಿದ್ದಾರೆ ಎನ್ನಲಾಗಿದೆ.ಅಷ್ಟು ಸ್ಟೈಲಿಶ್‌ ಆಗಿದ್ದ ಯುವತಿಯನ್ನು ಕೂಡಿ ಹಾಕಿರುವುದರ ಹಿಂದಿನ ವಿಚಾರ ತಿಳಿದು ಅಚ್ಚರಿಗೊಂಡರೂ ಸಹ ಕೆಲವರು ಜೋರಾಗಿ ನಕ್ಕು ಅಲ್ಲಿಂದ ಹೊರಟಿದ್ದಾರೆ. ಈ ಯುವತಿ ಮೂಲತಃ ಪಾಕಿಸ್ತಾನದವಳು ಎಂದು ಉಲ್ಲೇಖಿಸಲಾಗಿದೆ. ಪಾಕಿಸ್ತಾನದ ಈ ಯುವತಿ ಲಂಡನ್​​ ನ ಶಾಪ್ ​ವೊಂದರಲ್ಲಿ ಚಿಕನ್ ಕಬಾಬ್​ ಕಳ್ಳತನ ಮಾಡಿ ಸಿಕ್ಕಿಹಾಕಿಕೊಂಡಿದ್ದಾಳೆ ಎನ್ನಲಾಗಿದೆ. ಲಂಡನ್ ನಲ್ಲಿನ ಅಂಗಡಿಯೊಂದರಲ್ಲಿ ಪಾಕಿಸ್ತಾನದ ಯುವತಿಯರು ವಸ್ತುಗಳನ್ನು…

Read More

ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ತಮ್ಮ ಪುತ್ರ ಕೆ.ಇ.ಕಾಂತೇಶ್ ಗೆ ಹಾವೇರಿ ಲೋಕಸಭೆ ಕ್ಷೇತ್ರದ ಟಿಕೆಟ್ ನಿರಾಕರಿಸಿದ್ದರಿಂದ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹಾಗೂ ಬಿಜೆಪಿ ವಿರುದ್ಧ ಮುನಿಸಿಕೊಂಡಿದ್ದು, ಇದೀಗ ಶಿವಮೊಗ್ಗದಲ್ಲಿ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ವಿರುದ್ಧ ಪಕ್ಷೇತ್ತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ. ಬಿಎಸ್ ವೈ ಕುಟುಂಬದಿಂದ ಬಿಜೆಪಿಯನ್ನು ಮುಕ್ತಗೊಳಿಸಬೇಕು ಎಂದು ಪಣತೊಟ್ಟಿರುವ ಈಶ್ವರಪ್ಪ ಕಳೆದ ವಾರ ತಮ್ಮ ನಾಮಪತ್ರವನ್ನೂ ಸಲ್ಲಿಕೆ ಮಾಡಿದ್ದರು. ಇದರ ಬೆನ್ನಲ್ಲೇ ಬಿ.ವೈ.ರಾಘವೇಂದ್ರ ಮುಂದಿನ ದಿನಗಳಲ್ಲಿ ಈಶ್ವರಪ್ಪ ನಾಮಪತ್ರ ವಾಪಸ್ ಪಡೆಯಲಿದ್ದಾರೆ ಎಂದು ಹೇಳಿಕೆ ನೀಡಿದ್ದರು. ಇದರ ಬೆನ್ನಲ್ಲೇ ಬ್ರಹ್ಮನೇ ಬಂದು ಹೇಳಿದರೂ ನಾನು ನಾಮಪತ್ರ ವಾಪಸ್ ಪಡೆಯುವುದಿಲ್ಲ ಎಂದು ಹೇಳಿದ್ದಾರೆ. ಈ ಹಿಂದೆ ಈಶ್ವರಪ್ಪರಿಗೆ ಹೈಕಮಾಂಡ್ ದೆಹಲಿಗೆ ಬರುವಂತೆ ಬುಲಾವ್ ನೀಡಿತ್ತು. ಆದರೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಈಶ್ವರಪ್ಪರ ಭೇಟಿಗೆ ಅವಕಾಶ ನೀಡದ ಹಿನ್ನೆಲೆಯಲ್ಲಿ ಬೇಸರದಿಂದ ಬಂದಿದ್ದ ಈಶ್ವರಪ್ಪ ನಂತರ ನಾನು ಶಿವಮೊಗ್ಗದಿಂದ ಸ್ಪರ್ಧಿಸೇ ತೀರುತ್ತೇನೆ ಎಂದು ಹಠ ತೊಟ್ಟಿದ್ದಾರೆ. ಇನ್ನು ಈಶ್ವರಪ್ಪ ಮನವೊಲಿಕೆ ಮಾಡುವ…

Read More

ಕೊಡಗಿನಲ್ಲಿ ಕಾಡುಪ್ರಾಣಿಗಳ ದಾಳಿ ಹೆಚ್ಚಾಗುತ್ತಿದೆ. ಇತ್ತೀಚೆಗೆ ಹುಲಿ ಸೆರೆಹಿಡಿಯಲು ಹೋಗಿದ್ದಾಗ ಕಾರ್ಯಾಚರಣೆಗೆ ಬಂದಿದ್ದ ಆನೆ ಭೀಮ ಮತ್ತು ಸಿಬ್ಬಂದಿ ಮೇಲೆ ಹೆಜ್ಜೇನು ದಾಳಿ ನಡೆಸಿತ್ತು. ನೆನ್ನೆ ಕೊಡಗಿನಲ್ಲಿ ಬೆಳ್ಳಂಬೆಳಗ್ಗೆ ಕಾಡಾನೆ ನಡೆಸಿದ ದಾಳಿಯಿಂದ ವಾಕಿಂಗ್‌ ಹೋಗಿದ್ದ ವ್ಯಕ್ತಿಯೊಬ್ಬರು ಕೊನೆಯುಸಿರೆಳೆದಿದ್ದಾರೆ. ಪೊನ್ನಂಪೇಟೆ ತಾಲ್ಲೂಕಿನ ಬೀರುಗ ಗ್ರಾಮದ ಚಾಮುಂಡಿಕೊಲ್ಲಿ ರಸ್ತೆಯಲ್ಲಿ ಘಟನೆ ನಡೆದಿದೆ. ಅಯ್ಯಮಾಡ ಮಾದಯ್ಯ (63) ಕಾಡಾನೆ ಕಾಲ್ತುಳಿತಕ್ಕೆ ಸಿಕ್ಕಿ ಸಾವನ್ನಪ್ಪಿದ್ದಾರೆ. ಇವರು ಮುಂಜಾನೆ ಎಂದಿನಂತೆ ರಸ್ತೆಯಲ್ಲಿ ವಾಕಿಂಗ್ ಹೋಗುತ್ತಿದ್ದಾಗ, ಕಾಫಿ ತೋಟದ ನಡುವಿನಿಂದ ನುಗ್ಗಿಬಂದ ಕಾಡಾನೆ ಏಕಾಏಕಿ ದಾಳಿ‌ ನಡೆಸಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ‌ ಭೇಟಿ ನೀಡಿದ್ದಾರೆ. ಗ್ರಾಮ ಹಾಗೂ ಸುತ್ತಮುತ್ತಲಲ್ಲಿ‌ ಆನೆಗಳ ಹಿಂಡು ಸಂಚಾರ ಮಾಡುತ್ತಿದೆ. ಇದರಿಂದ ಮನೆಯಿಂದ ಹೊರಬೀಳಲೂ ಭಯವಾಗುತ್ತಿದೆ. ಕಾಫಿ ತೋಟಗಳಲ್ಲಿ ಕಾಡಾನೆಗಳು ಬೀಡು ಬಿಟ್ಟಿದ್ದು, ತೋಟದ ಕೆಲಸ ಮಾಡಲು ಕೂಲಿ ಕಾರ್ಮಿಕರು ಭಯಭೀತಿಯಿಂದಾಗಿ ಬರುತ್ತಿಲ್ಲ. ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಅರಣ್ಯ ಇಲಾಖೆ ಸಿಬ್ಬಂದಿಯನ್ನು ಆಗ್ರಹಿಸಿದ್ದಾರೆ ಎಂದು ವರದಿ ತಿಳಿಸಿದೆ. ನಮ್ಮತುಮಕೂರಿನ ಕ್ಷಣ…

Read More

ಬೆಳಗಾವಿ: ನೂರಕ್ಕೂ ಹೆಚ್ಚು ಗೂಂಡಾಗಳ ಮೂಲಕ ನನ್ನ ಹತ್ಯೆಗೆ ಯತ್ನಿಸಿದ್ದಾರೆ ಎಂದು ಆರೋಪಿಸಿ,  ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮತ್ತು ಬೆಂಬಲಿಗರ ವಿರುದ್ಧ ಮಾಜಿ ಶಾಸಕ ಸಂಜಯ್ ಪಾಟೀಲ್ ಬೆಳಗಾವಿ ಶಹಾಪೂರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಅವಾಚ್ಛ ಶಬ್ಧಗಳಿಂದ ನಿಂದಿಸಿದ್ದು, ನನಗೆ ಜೀವ ಬೆದರಿಕೆ ಹಾಕಿದ್ದಾರೆ. ಗಾಜಿನ ಬಾಟಲ್​, ಕಲ್ಲುಗಳನ್ನು ಹಿಡಿದು ಮನೆಯೊಳಗೆ ನುಗ್ಗಲು ಯತ್ನಿಸಿದ್ದು, ಬೆಲೆಬಾಳುವ ವಸ್ತುಗಳನ್ನು ನಾಶ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಮ್ಮ ಅಧಿಕಾರ ದುರುಪಯೋಗ ಪಡಿಸಿಕೊಂಡಿದ್ದು, ಇದಕ್ಕೆಲ್ಲ ನೇರವಾಗಿ ಅವರೇ ಪ್ರಚೋದನೆ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ. ನಮ್ಮ ಸಿಬ್ಬಂದಿ ಮೇಲೂ ಹಲ್ಲೆ ಮಾಡಿದ್ದಾರೆ. ಹೀಗಾಗಿ ಪ್ರಚೋದನೆ ನೀಡಿದವರು ಮತ್ತು ನನ್ನ ಕೊಲೆಗೆ ಯತ್ನಿಸಿದವರು ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಆಯಿಷಾ ಸನದಿ, ಸುಜಯ್ ಜಾಧವ್, ಜಯಶ್ರೀ ಸೂರ್ಯವಂಶಿ, ಪ್ರಭಾವತಿ ಮಾಸ್ತಮರಡಿ, ರೋಹಿಣಿಬಾಬ್ಟೆ, ಮುಷ್ತಾಕ್ ಮುಲ್ಲಾ, ಸದ್ದಾಂ, ಶಂಕರಗೌಡ ಪಾಟೀಲ, ಸಂಗನಗೌಡ ಪಾಟೀಲ್, ಭಾರತಿ ಸೇರಿ ನೂರಕ್ಕೂ ಅಧಿಕ…

Read More

ಚರ್ಚ್‌ ಒಂದರಲ್ಲಿ ಧರ್ಮೋಪದೇಶ ಸಮಾರಂಭ ನಡೆಯುತ್ತಿದ್ದಾಗ ಉಪದೇಶ ಮಾಡುತ್ತಿದ್ದ ಬಿಷಪ್ ಮೇಲೆ ಏಕಾಏಕಿ ಕಿಡಿಗೇಡಿಗಳು ಚೂರಿಯಿಂದ ದಾಳಿ ನಡೆಸಿದ್ದಾರೆ. ಸ್ಥಳದಲ್ಲಿ ಹಲವರಿಗೆ ಕಿಡಿಗೇಡಿಗಳು ಇರಿದಿದ್ದಾರೆ ಎಂದು ಅಂತರಾಷ್ಟ್ರೀಯ ಮಾಧ್ಯಮಗಳ ವರದಿ ತಿಳಿಸಿದೆ. ಸೋಮವಾರ ರಾತ್ರಿ ಈ ಘಟನೆ ಸಿಡ್ನಿಯಲ್ಲಿ ನಡೆದಿದೆ. ಘಟನೆ ಸಂಬಂಧ ಓರ್ವನನ್ನು ಬಂಧಿಸಲಾಗಿದ್ದು, ತೀವ್ರ ವಿಚಾರಣೆ ನಡೆಸಲಾಗುತ್ತಿದೆ. ಸದ್ಯಕ್ಕೆ ಯಾವುದೇ ಪ್ರಾಣಾಪಾಯ ಬಗ್ಗೆ ವರದಿಯಾಗಿಲ್ಲ. ಗಾಯಗೊಂಡವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವೇಕ್ಲಿಯಲ್ಲಿರುವ ಕ್ರೈಸ್ಟ್ ದಿ ಗುಡ್ ಶೆಫರ್ಡ್ ಚರ್ಚ್‌ನಲ್ಲಿ ಬಿಷಪ್ ಲೈವ್‌ ನಲ್ಲಿ ಧರ್ಮೋಪದೇಶ ಮಾಡುತ್ತಿದ್ದ ಸಂದರ್ಭದಲ್ಲಿ ದಾಳಿ ನಡೆದಿದ್ದು, ಇದರ ವಿಡಿಯೋ ಈಗ ವೈರಲ್‌ ಆಗಿದೆ. ಬಿಷಪ್ ಆರೋಗ್ಯ ಸ್ಥಿತಿ ಗಂಭೀರವಿದ್ದು, ಗಾಯಗೊಂಡವರಲ್ಲಿ 60, 50, 30 ಮತ್ತು 20 ವರ್ಷ ವಯಸ್ಸಿನ ನಾಲ್ವರು ಪುರುಷರಾಗಿದ್ದು, ಅವರಿಗೂ ಚಿಕಿತ್ಸೆ ನೀಡಲಾಗುತ್ತಿದೆ. ಸಿಡ್ನಿಯ ವೆಸ್ಟ್‌ಫೀಲ್ಡ್ ಬೋಂಡಿ ಜಂಕ್ಷನ್ ಶಾಪಿಂಗ್ ಸೆಂಟರ್‌ನಲ್ಲಿ ಆರು ಮಂದಿಯನ್ನು ಇರಿದು ಕೊಂದ ಮೂರು ದಿನಗಳ ಅಂತರದಲ್ಲಿ ಈ ಘಟನೆ ನಡೆದಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ…

Read More

ಸರಗೂರು: ತಾಲ್ಲೂಕಿನ ಸಾಗರೆ ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿಯನ್ನು ಅದ್ದೂರಿಯಾಗಿ ಆಚರಿಸಲಾಯಿತು. ಅಂಬೇಡ್ಕರ್ ಜಯಂತಿ ಆಚರಣೆ ಹಿನ್ನೆಲೆ ಸಾಗರೆ ಗ್ರಾಮದಲ್ಲಿ ಸಡಗರ ಸಂಭ್ರಮ ನೆಲೆಸಿದ್ದು, ಎಲ್ಲೆಲ್ಲೂ ಹಬ್ಬದ ವಾತಾವರಣ ಸೃಷ್ಟಿಯಾಗಿದೆ. ಅಂಬೇಡ್ಕರ್ ಅವರ ಭಾವ ಚಿತ್ರವನ್ನು ಬೆಳ್ಳಿ ರಥದಲ್ಲಿ ಕೂರಿಸಿ ವಿಜೃಂಭಣೆಯಿಂದ ಆಚರಣೆ ಮಾಡಲಾಯಿತು. ಮನೆ ಮುಂಭಾಗದಲ್ಲಿ ರಂಗೋಲಿ ಹಾಗೂ ಮನೆಯ ಮುಂಭಾಗದಲ್ಲಿ ನೀಲಿ ಬಾವುಟವನ್ನು ಕಟ್ಟಿ, ಪಟಾಕಿ ಸಿಡಿಸಿ ಸಂಭ್ರಮಿಸಲಾಯಿತು. ಭಾನುವಾರ ಬೆಳಿಗ್ಗೆಯಿಂದ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡು, ನಂತರ ಕಬಿನಿ ಬಲದಂಡೆ ನಾಲೆಯಿಂದ ಪೂಜೆ ಸಲ್ಲಿಸಿ, ನಂತರ ವಿವಿಧ ಕಲಾ ತಂಡಗಳಿಂದ ಹಾಗೂ ವಾದ್ಯಗೋಷ್ಠಿ ಮೂಲಕ ಮೆರವಣಿಗೆಯಲ್ಲಿ ಸಾಗಿ ಭವನ ಹತ್ತಿರದಲ್ಲಿರುವ ಅಂಬೇಡ್ಕರ್ ರವರ ಪುತ್ಥಳಿಗೆ ಮಾಲಾರ್ಪಣೆ ಮಾಡಲಾಯಿತು. ಮೆರವಣಿಗೆಯಲ್ಲಿ ಶಾಲೆಯ ಮಕ್ಕಳು ಗ್ರಾಮದ ಯಜಮಾನರು ಹಾಗೂ ಮಹಿಳೆಯರು ಭಾಗಿಯಾಗಿದರು. ಮೆರವಣಿಗೆ ಮುನ್ನ ಗ್ರಾಮದಲ್ಲಿ ಅನ್ನದಾನ ನಡೆಸಲಾಯಿತು. ಈ ಸಂದರ್ಭದಲ್ಲಿ ಗ್ರಾಮದ ಯಜಮಾನರು ಹಾಗೂ ಸಂಘದ ಅಧ್ಯಕ್ಷ ಮತ್ತು ಸದಸ್ಯರು ಹಾಗೂ ಅಕ್ಕಪಕ್ಕದ ಗ್ರಾಮಸ್ಥರು ಕೂಡಾ ಭಾಗವಹಿಸಿದ್ದರು. ವರದಿ:…

Read More

ಕೊರಟಗೆರೆ : ಮಕ್ಕಳ ಬೇಸಿಗೆ ರಜೆಯ ದಿನಗಳನ್ನು ಕಳೆಯಲು ಮಕ್ಕಳ ಪ್ರತಿಭೆಯನ್ನ ಹೆಚ್ಚಿಸಲು ಇಂದೇ ನಿಮ್ಮ ಮಕ್ಕಳನ್ನ ಕೊರಟಗೆರೆಯ ಆರ್ ಆರ್ ಸಮ್ಮರ್ ಕ್ಯಾಂಪ್ ಗೆ ಸೇರಿಸಿ ಎಂದು ಟ್ರೈನಿಂಗ್ ಸ್ಕೂಲ್ ಶಿಕ್ಷಕಿ ವಿಜಯಲಕ್ಷ್ಮೀ ಸಲಹೆ ನೀಡಿದರು. ನಿಮ್ಮ ಮಕ್ಕಳಿಗೆ ಕರಾಟೆ, ಭರತನಾಟ್ಯ, ಭಗವದ್ಗೀತೆ ಶ್ಲೋಕ, ಯೋಗ, ಸ್ವಿಮ್ಮಿಂಗ್, ಸಂಗೀತ, ಡ್ಯಾನ್ಸ್, ಡ್ರಾಯಿಂಗ್ ಸೇರಿದಂತೆ ಇನ್ನು ಮುಂತಾದ ತರಬೇತಿಗಳನ್ನ ಈ ಶಾಲೆಯಲ್ಲಿ ನೀಡಲಾಗುತ್ತದೆ. ಮಕ್ಕಳಿಗೆ ಪ್ರತಿದಿನ ಒಂದೊಂದು ಸ್ಪರ್ಧೆಯನ್ನು ಏರ್ಪಡಿಸುತ್ತಾರೆ , ಮಕ್ಕಳಲ್ಲಿರುವ ಕಲೆಗಳನ್ನು ಹೊರತಂದು ಸ್ಪರ್ಧೆಯಲ್ಲಿ ವಿಜೇತರಾದ ಮಕ್ಕಳಿಗೆ ಬಹುಮಾನ ನೀಡಿ ಪ್ರೋತ್ಸಾಹಿಸುತ್ತಾರೆ ಎಂದು ಅವರು ಹೇಳಿದರು. ಮಕ್ಕಳ ಬುದ್ಧಿವಂತಿಕೆ, ಮಕ್ಕಳ ಕ್ರಿಯಾಶೀಲತೆ, ಚುರುಕುತನ ಒಳ್ಳೆಯ ವಾತಾವರಣದಲ್ಲಿ ಮಕ್ಕಳು ಆಟಗಳ ಜೊತೆ ಸಂಸ್ಕಾರವನ್ನ ಕಲಿಯುತ್ತಾರೆ. ಆದ್ದರಿಂದ ಕಡಿಮೆ ವೆಚ್ಚದಲ್ಲಿ ನಿಮ್ಮ ಮಕ್ಕಳಿಗೆ ಉತ್ತಮ ಕಲಿಕೆಗಳನ್ನ ಇಲ್ಲಿ ಕಲಿಸಿಕೊಡಲಾಗುವುದು ವಯೋಮಿತಿ 4 ರಿಂದ 15 ವರ್ಷದ ಒಳಗಿನ ಮಕ್ಕಳಿಗೆ ಏಪ್ರಿಲ್ 5 ರಿಂದ ಮೇ 10ರ ತನಕ ನಮ್ಮ ಕರಾಟೆ ಶಾಲೆಗೆ…

Read More

ಪಾವಗಡ: ಇತ್ತೀಚೆಗೆ ಪ್ರಕಟಗೊಂಡ ದ್ವಿತೀಯ ಪಿಯು ಫಲಿತಾಂಶದಲ್ಲಿ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದಲ್ಲಿ ಶೇಕಡಾ 92% ರಷ್ಟು ಅಂಕ ಪಡೆದು ಕಾಲೇಜಿಗೆ ಪ್ರಥಮ ಸ್ಥಾನಗಳಿಸಿದ ಶಾಂತಿ ನಗರದ ಮಾಧವಿ ರವರನ್ನು ಇಂದು ಹೆಲ್ಪ್ ಸೊಸೈಟಿ ಅಧ್ಯಕ್ಷರಾದ ಮಾನಂ ಶಶಿಕಿರಣ್ ಮತ್ತು ಬಳಗದವರು ಸನ್ಮಾನಿಸಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಹೆಲ್ಪ್ ಸೊಸೈಟಿ ಅಧ್ಯಕ್ಷರಾದ ಮಾನಂ ಶಶಿಕಿರಣ್, ಕನ್ನಡ ಮಾಧ್ಯಮದಲ್ಲಿ ಶಿಕ್ಷಣ ಪಡೆದು ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ಪ್ರಥಮ ಸ್ಥಾನ ಗಳಿಸಿರುವುದು ಅತೀ ಹೆಚ್ಚು ಸಂತೋಷ ಮತ್ತು ಹೆಮ್ಮೆ ಪಡುವ ವಿಚಾರ. ಇಂತಹ ಮಕ್ಕಳಿಗೆ ಮುಂದಿನ ಶಿಕ್ಷಣಕ್ಕೆ ನೆರವು ನೀಡಲು ನಮ್ಮ ಸಂಸ್ಥೆ ಒಂದು ಹೆಜ್ಜೆ ಮುಂದಿರುತ್ತದೆ ಎಂದು ತಿಳಿಸಿದರಲ್ಲದೇ ಮಾಧವಿ ರವರಿಗೆ ಶುಭಕೋರಿ ಅಭಿನಂದಿಸಿದರು. ಈ ವೇಳೆ ಸನ್ಮಾನ ಸ್ವೀಕರಿಸಿ ಮಾತನಾಡಿದ ಮಾಧವಿ, ಫಲಿತಾಂಶವನ್ನು ಗುರುತಿಸಿ ಶುಭಕೋರಿ ಅಭಿನಂದಿಸಿದ ಹೆಲ್ಪ್ ಸೊಸೈಟಿ ಅಧ್ಯಕ್ಷರಾದ ಮಾನಂ ಶಶಿಕಿರಣ್ ಅವರಿಗೆ ಮತ್ತು ಬಳಗದವರಿಗೆ ಧನ್ಯವಾದವುಗಳು ಎಂದರು. ಈ ಸಂದರ್ಭದಲ್ಲಿ…

Read More

ಸರಗೂರು: ತಾಲ್ಲೂಕಿನ ಪಟ್ಟಣಕ್ಕೆ ಚಾಮರಾಜನಗರ ಮೀಸಲು ಕ್ಷೇತ್ರದ ಲೋಕಸಭಾ ಅಭ್ಯರ್ಥಿಯಾದ ಬಾಲರಾಜು ಅವರ ಪುತ್ರ ಯೋಗಾಂಶು ಇಂದು ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರನ್ನು ಭೇಟಿ ಮಾಡಿ ಮತಯಾಚನೆ ಮಾಡಿದರು. ನಂತರ ಮಾತನಾಡಿದ ಅವರು, ಕಳೆದ ಐದು ವರ್ಷದಲ್ಲಿ ಪ್ರಧಾನ ಮಂತ್ರಿಯವರು ರಾಷ್ಟ್ರ ಹಾಗೂ ರಾಜ್ಯ ಅಭಿವೃದ್ಧಿಗಾಗಿ ಕೆಲಸ ಮಾಡಿಕೊಂಡು ಬಂದಿದ್ದಾರೆ. ಈ ಬಾರಿ ಕೂಡಾ ನರೇಂದ್ರ ಮೋದಿಯವರು ಮತ್ತೊಮ್ಮೆ ಪ್ರಧಾನಿಯಾಗುತ್ತಾರೆ. ಇನ್ನೂ ಅಭಿವೃದ್ಧಿ ಮಾಡುವ ಕನಸು ಕಂಡಿದ್ದಾರೆ ಎಂದರು. ಅದೇ ರೀತಿ ನಮ್ಮ ತಂದೆಯಾದ ಬಾಲರಾಜು ರವರನ್ನು ಗೆಲ್ಲಿಸಿಕೊಟ್ಟರೆ ಎಚ್.ಡಿ.ಕೋಟೆ ಮತ್ತು ಸರಗೂರು ತಾಲ್ಲೂಕಿನ ಗ್ರಾಮಗಳನ್ನು ಅಭಿವೃದ್ಧಿ ಪಡಿಸಲು ಅನುಕೂಲವಾಗುತ್ತದೆ ಎಂದು ಮನವಿ ಮಾಡಿಕೊಂಡರು. ಸಂಸದ ವಿ.ಶ್ರೀನಿವಾಸ ಪ್ರಸಾದ್ ರವರು ಕ್ಷೇತ್ರದ ಸಮಗ್ರ ಅಭಿವೃದ್ದಿಗೆ ಶ್ರಮಿಸಿದ್ದಾರೆ. ನೀರಾವರಿ, ಕುಡಿಯುವ ನೀರು, ಪ್ರಾಥಮಿಕ ಆರೋಗ್ಯ ಕೇಂದ್ರಗಳು, ರಸ್ತೆಗಳು ಸೇರಿದಂತೆ ಗ್ರಾಮೀಣ ಭಾಗದಲ್ಲಿ ಮೂಲಸೌಕರ್ಯಗಳನ್ನು ಒದಗಿಸಿದ್ದಾರೆ. ಕ್ಷೇತ್ರದ ಅಭಿವೃದ್ದಿಗಾಗಿ ಏ.26 ರಂದು ನಡೆಯುವ ಚುನಾವಣೆಯಲ್ಲಿ ನಮ್ಮ ಬಾಲರಾಜುರವರನ್ನು ಗೆಲ್ಲಿಸಬೇಕು ಎಂದು ಮನವಿ ಮಾಡಿದರು. ಈ…

Read More