Author: admin

ಆಂಧ್ರ ಪ್ರದೇಶದ ಕರ್ನೂಲಿನ ಬಳಿ  ಕಾರು ಅಪಘಾತದಲ್ಲಿ ಕರ್ನಾಟಕ ಮೂಲದ ನಟಿ ಪವಿತ್ರ ಜಯರಾಂ ನಿಧನರಾಗಿದ್ದು,  ಇಂದು ಬೆಳಿಗ್ಗೆ ನಟಿ ಪವಿತ್ರಾ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದ್ದು, ಪವಿತ್ರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇಂದು ಮುಂಜಾನೆ ಪವಿತ್ರಾ ಜಯರಾಮ್ ಅವರು ಕರ್ನಾಟಕದಿಂದ ಹೈದರಾಬಾದ್‌ ಗೆ ವಾಪಸ್ ಆಗುತ್ತಿದ್ದರು. ಮಾರ್ಗ ಮಧ್ಯೆ ಮಹೆಬೂಬ್‌ ನಗರ ಜಿಲ್ಲೆ ಭೂತ್‌ ಪುರ ಪುರಸಭೆ ವ್ಯಾಪ್ತಿಯ ಶೇರಿಪಲ್ಲಿ ಗ್ರಾಮದ ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ಅಪಘಾತ ಸಂಭವಿಸಿದೆ. ಪವಿತ್ರಾ ಜಯರಾಮ್ ಅವರು ಕುಟುಂಬ ಸಮೇತ ಕಾರಿನಲ್ಲಿ ಹೈದರಾಬಾದ್‌ ಗೆ ಹೋಗುತ್ತಿದ್ದಾಗ ಕಾರು ನಿಯಂತ್ರಣ ತಪ್ಪಿ ಡಿವೈಡರ್‌ ಗೆ ಡಿಕ್ಕಿ ಹೊಡೆದಿದೆ. ಜೊತೆಗೆ ಹೈದರಾಬಾದ್‌ ನಿಂದ ವನಪರ್ತಿಗೆ ಬರುತ್ತಿದ್ದ RTC ಬಸ್‌ ಗೂ ಡಿಕ್ಕಿಯಾಗಿದೆ. ರಸ್ತೆ ಅಪಘಾತದಲ್ಲಿ ಪವಿತ್ರ ಜಯರಾಮ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.  ಅಪಘಾತದ ವೇಳೆ ಪವಿತ್ರ ಅವರ ಕುಟುಂಸ್ಥರು ಹಾಗೂ ಆಕೆಯ ಸಹ ನಟರು ಇದ್ದರು ಎಂದು ಹೇಳಲಾಗಿದೆ. ಮೂಲತಃ ಮಂಡ್ಯ ತಾಲೂಕಿನ ಹನಕೆರೆಯ ಪವಿತ್ರಾ ಜಯರಾಂ ಕನ್ನಡ ರೋಬೋ ಫ್ಯಾಮಿಲಿ’…

Read More

ಬೆಂಗಳೂರು: ರಸ್ತೆ ಅಪಘಾತದಲ್ಲಿ ಖ್ಯಾತ ಕಿರುತೆರೆ ನಟಿಯೊಬ್ಬರು ಸಾವಿಗೀಡಾದ ಘಟನೆ ನಡೆದಿರುವುದು ವರದಿಯಾಗಿದೆ. ಕಿರುತೆರೆ ನಟಿ ಪವಿತ್ರಾ ಜಯರಾಂ(35) ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಆಂಧ್ರಪ್ರದೇಶದ ಕರ್ನೂಲು ಸಮೀಪ ನಡೆದ ಕಾರು ಅಪಘಾತದಲ್ಲಿ ಅವರು ಮೃತಪಟ್ಟಿರುವುದಾಗಿ ವರದಿಯಾಗಿದೆ. ಅವರು ಪ್ರಯಾಣಿಸುತ್ತಿದ್ದ ಕಾರು ಹಾಗೂ ಬಸ್‌ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದ ಪರಿಣಾಮ ನಟಿ ಪವಿತ್ರಾ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಮೂಲತಃ ಕನ್ನಡಿಗರಾದ ಪವಿತ್ರ ತೆಲುಗಿನ ʼತ್ರಿನಯನಿʼ ಧಾರವಾಹಿಯಲ್ಲಿ ನಟಿಸಿ ಅಪಾರ ಮನೆ ಮಂದಿಯ ಮನಗೆದ್ದಿದ್ದರು. ಕನ್ನಡದ ‘ರೋಬೋ ಫ್ಯಾಮಿಲಿ’ ಮೂಲಕ ಕಿರುತೆರೆಗೆ ಪ್ರವೇಶ ಪಡೆದಿದ್ದ ಅವರು, ಮೂಲತಃ ಮಂಡ್ಯ ತಾಲೂಕಿನ ಹನಕೆರೆಯವರು. ಕನ್ನಡದಲ್ಲಿ ಅವರು ʼರೋಬೋ ಫ್ಯಾಮಿಲಿʼ ಸೇರಿ ʼಜೋಕಾಲಿʼ, ʼನೀಲಿʼ, ʼರಾಧಾರಮಣʼ ಧಾರವಾಹಿಯಲ್ಲಿ ನಟಿಸಿದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ನವದೆಹಲಿ:  ಕಾಂಗ್ರೆಸ್ ಪಕ್ಷ 50 ಸ್ಥಾನ ಕೂಡ ಗಳಿಸಲ್ಲ. ವಿಪಕ್ಷ ಸ್ಥಾನವನ್ನು ಗಳಿಸಲ್ಲ ಎಂದು ಪ್ರಧಾನಿ ಮೋದಿ ಭವಿಷ್ಯ ನುಡಿದಿದ್ದಾರೆ. ಇದಕ್ಕೆ ಕಾಂಗ್ರೆಸ್ ಕೂಡ ಕೌಂಟರ್ ನೀಡಿದೆ. ಬಿಜೆಪಿ 180 ಸ್ಥಾನ ಕೂಡ ಗಳಿಸಲ್ಲ. ಮೋದಿ ಮತ್ತೊಮ್ಮೆ ಪ್ರಧಾನಿಯಾಗಲ್ಲ ಎಂದು ರಾಹುಲ್ ಗಾಂಧಿ ತಿರುಗೇಟು ನೀಡಿದ್ದಾರೆ. ಅಲ್ಲದೇ ನರೇಂದ್ರ ಮೋದಿ ಪ್ರಧಾನಿಯಲ್ಲ. ರಾಜನಂತೆ ವರ್ತಿಸ್ತಿದ್ದಾರೆ ಎಂದು ವ್ಯಂಗ್ಯ ಮಾಡಿದ್ದಾರೆ. ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿ, ಮೇಲಕ್ಕೆ ಏರಿದವರು ಕೆಳಗೆ ಇಳಿಯಲೇಬೇಕು. ಯಾರು ಯಾರನ್ನು ರಾಜಕೀಯವಾಗಿ ಸಮಾಧಿ ಮಾಡಲು ಸಾಧ್ಯವಿಲ್ಲ ಎಂದು ಕುಟುಕಿದ್ದಾರೆ. ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವ್ರಂತೂ, ಬಿಜೆಪಿಯ ಅಲಿಖಿತ ನಿಯಮದ ಪ್ರಕಾರ 75 ವರ್ಷ ಆದವರು ನಿವೃತ್ತಿ ಪಡೀಬೇಕು. ಅದರಂತೆ ಮೋದಿ 75 ವರ್ಷ ಆದ್ಮೇಲೆ ರಾಜಕೀಯ ನಿವೃತ್ತಿ ಪಡೀತಾರಾ ಎಂದು ಸವಾಲು ಹಾಕಿದ್ದಾರೆ. ಮೋದಿ ಮತ್ತೊಮ್ಮೆ ಗೆದ್ರೆ ಯುಪಿ ಸಿಎಂ ಯೋಗಿಯನ್ನು ಸೈಡ್‍ಲೈನ್ ಮಾಡ್ತಾರೆ. ಅಮಿತ್ ಶಾಗಾಗಿಯೇ ಮೋದಿ ವೋಟ್ ಕೇಳ್ತಿದ್ದಾರೆ ಎಂಬ ಬಾಂಬ್ ಸಿಡಿಸಿದ್ದಾರೆ. ಈ ಬೆನ್ನಲ್ಲೇ…

Read More

ಮಂಡ್ಯ: ರೇವಣ್ಣನಿಗೆ ಎದುರಾದ ಪರಿಸ್ಥಿತಿ ಕುಮಾರಸ್ವಾಮಿಯವಿರಗೂ ಎದುರಾಗಲಿದ್ದು, ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಅವರು ಜೈಲಿಗೆ ಹೋಗುವ ಕಾಲ ದೂರವಿಲ್ಲ ಎಂದು ಕಾಂಗ್ರೆಸ್ ಶಾಸಕ ಕದಲೂರು ಉದಯ್ ಹೇಳಿದ್ದಾರೆ. ಪ್ರಜ್ವಲ್‌ ಲೈಂಗಿಕ ಹಗರಣ ಮತ್ತು ಎಚ್‌.ಡಿ. ರೇವಣ್ಣ ಅಪಹರಣ ಪ್ರಕರಣದ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯಿಸಿದ ಅವರು, ಕುಮಾರಸ್ವಾಮಿ ಅವರು ಶೀಘ್ರದಲ್ಲೇ ಜೈಲಿಗೆ ಹೋಗಲಿದ್ದಾರೆ ಎಂದರು. ಕೆಲವೇ ದಿನಗಳಲ್ಲಿ ಮಹಿಳೆಯರು ಕುಮಾರಸ್ವಾಮಿ ವಿರುದ್ಧವೂ ದೂರು ಕೊಡುತ್ತಾರೆ. ಎಚ್‌ ಡಿಕೆ ವಿರುದ್ದ ದೂರು ದಾಖಲಾದ ಬಳಿಕ ಅವರೂ ಸಹ ಜೈಲಿಗೆ ಹೋಗುವ ಪರಿಸ್ಥಿತಿ ಬರಬಹುದು ಎಂದರು. ಬಿಜೆಪಿ ನಾಯಕರು ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಒತ್ತಾಯಿಸುತ್ತಿದ್ದಾರೆ. ಪ್ರಜ್ವಲ್‌ ರೇವಣ್ಣ ದೇಶದಿಂದ ಪರಾರಿಯಾಗಿದ್ದು, ವಿದೇಶಗಳಲ್ಲಿ ತಲೆಮರೆಸಿಕೊಂಡಿದ್ದಾನೆ ಎಂದು ಉದಯ್‌ ಪ್ರತಿಪಕ್ಷಗಳ ವಿರುದ್ದ ಹರಿಹಾಯ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಹೊಸಪೇಟೆ: ಹೊಸಪೇಟೆ ರೈಲು ನಿಲ್ದಾಣದ ಬಳಿ ರೈಲು ಬೋಗಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಮಹಿಳೆಯ ಮೃತದೇಹ ಪತ್ತೆಯಾದ ಆಘಾತಕಾರಿ ಘಟನೆ ನಡೆದಿದೆ. ನಾಲ್ಕೈದು ದಿನಗಳ ಹಿಂದೆ ರೈಲು ಬೋಗಿಯಲ್ಲಿ ಮಹಿಳೆ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಈ ಆಘಾತಕಾರಿ ಘಟನೆ ಹಲವು ಅನುಮಾನಗಳಿಗೆ ಕಾರಣವಾಗಿದೆ. ರೈಲು ಬೋಗಿಯಲ್ಲಿ ತುಂಬಾ ದುರ್ನಾಥ ಬಂದ ಹಿನ್ನೆಲೆಯಲ್ಲಿ ಪೊಲೀಸರು ರೈಲು ಬೋಗಿ ಪರಿಶೀಲನೆ ವೇಳೆ ಮಹಿಳೆ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಬಳ್ಳಾರಿ ರೈಲ್ವೆ ಪೊಲೀಸರು ಪ್ರಕರಣದ ತನಿಖೆ ನಡೆಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಬೀದರ್​: ಬೀದರ್ ಜಿಲ್ಲೆಯ ಬಸವಕಲ್ಯಾಣದ ಹೊರವಲಯದಲ್ಲಿರುವ ಪಾರ್ಕ್​​ವೊಂದರಲ್ಲಿ ಹಿಂದೂ ಯುವಕನ ಜೊತೆ ಮುಸ್ಲಿಂ ಸಮುದಾಯದ ಮಹಿಳೆ ಕುಳಿತಿದಕ್ಕೆ ಅದೇ ಕೋಮಿನ ಯುವಕರ ಗುಂಪೊಂದು ಹಲ್ಲೆ ನಡೆಸಿ, ನೈತಿಕ ಪೊಲೀಸ್​​ ಗಿರಿ ತೋರಿದ ಘಟನೆ ನಡೆದಿದೆ. ಅನೈತಿಕ ಸಂಬಂಧ ಶಂಕೆ ಹಿನ್ನೆಲೆ ಕೆಲ ಯುವಕರ ಗ್ಯಾಂಗ್ ಹಲ್ಲೆ ನಡೆಸಿರುವ ಆರೋಪ ಕೇಳಿ ಬಂದಿದೆ. ವ್ಯಕ್ತಿ ಆಟೋ ಚಾಲಕನಾಗಿದ್ದು, ಈತನ ಜೊತೆಗೆ ನೀನು ಅನೈತಿಕ ಸಂಬಂಧ ಇಟ್ಟುಕೊಂಡಿದ್ದೀಯಾ, ಮುಸ್ಲಿಮರ ಹೆಸರು ಹಾಳು ಮಾಡುತ್ತೀಯಾ ಎಂದು ಕೆಲ ಮುಸ್ಲಿಂ ಯುವಕರು ಅದೇ ಧರ್ಮದ ಮಹಿಳೆ ಮೇಲೆ ಹಲ್ಲೆ ಮಾಡಿದ್ದಾರೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಆನೇಕಲ್: ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಜಿಗಣಿಯಲ್ಲಿ ಪರೀಕ್ಷೆಯಲ್ಲಿ ಫೇಲ್​ ಆಗಿರುವ ವಿಚಾರ ಪೋಷಕರಿಗೆ ತಿಳಿಯುತ್ತದೆ ಎಂದು ಹೆದರಿದ ಇಂಜಿನಿಯರಿಂಗ್ ವಿದ್ಯಾರ್ಥಿ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಅಮೃತೇಶ್ ಪಾಂಡೆ (21) ಆತ್ಮಹತ್ಯೆ ಮಾಡಿಕೊಂಡ ಯುವಕನಾಗಿದ್ದಾನೆ. ಅಮೃತೇಶ್‌ ಪಾಂಡೆ ಮೂಲತಃ ಬಿಹಾರ ಮೂಲದವರಾಗಿದ್ದು, ಆರ್.ವಿ. ಕಾಲೇಜಿನಲ್ಲಿ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದ. ಅಮೃತೇಶ್, ಹಾಸ್ಟೆಲ್ ‌ನಲ್ಲಿ ಇದ್ದುಕೊಂಡು ಕಾಲೇಜಿಗೆ ಹೋಗಿ ಬರುತ್ತಿದ್ದ. ಮೂರನೇ ವರ್ಷದ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದ ಅಮೃತೇಶ್, ಎರಡು ವಿಷಯದಲ್ಲಿ ಫೇಲ್ ಆಗಿದ್ದ. ಇತ್ತೀಚೆಗೆ ಸರಿಯಾಗಿ ಕಾಲೇಜಿಗೂ ಹೋಗುತ್ತಿರಲಿಲ್ಲ ಎನ್ನಲಾಗಿದೆ. ಜಿಗಣಿ ಕೆರೆಯಲ್ಲಿ ಅಮೃತೇಶ್‌ ಮೃತದೇಹವು ತೇಲಿಕೊಂಡು ಬಂದಿದ್ದು, ಇದನ್ನು ಕಂಡ ಸ್ಥಳೀಯರು ಕೂಡಲೇ ಜಿಗಣಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ ಪೊಲೀಸರು ಸದ್ಯ ಮೃತದೇಹವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಜಿಗಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.…

Read More

ಚಿಕ್ಕೋಡಿ: ಯಮಕನಮರಡಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, 16,848 ಲೀಟರ್ ಅಕ್ರಮ ಮದ್ಯವನ್ನು ವಶಪಡಿಸಿಕೊಂಡಿದ್ದಾರೆ. ಗೋವಾದಿಂದ‌ ಆಂಧ್ರಕ್ಕೆ ಮದ್ಯವನ್ನು ಅಕ್ರಮ ಸಾಗಾಟ ಮಾಡುತ್ತಿದ್ದರು ಎನ್ನಲಾಗಿದೆ. ಹಾರ್ಡ್‌ವೇರ್ ವಸ್ತು ಸಾಗಾಟ ಮಾಡುತ್ತೇವೆ ಎಂದು ಲೈಸೆನ್ಸ್ ಪಡೆದು ಹಾರ್ಡ್‌ವೇರ್ ಬದಲಿಗೆ ಗೋವಾದ ಅಕ್ರಮ ಮದ್ಯ ಸಾಗಾಟ ಮಾಡಲಾಗುತ್ತಿತ್ತು. ಈ ಹಿನ್ನೆಲೆ ಒಟ್ಟು 28 ಲಕ್ಷ ರೂ. ಮೌಲ್ಯದ ಅಕ್ರಮ ಮದ್ಯವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತೋಷ್ ಹಲಗೆ, ಸದಾಶಿವ ಗೇರಡೆ ಎಂಬ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಈ ಕುರಿತು ಯಮಕನಮರಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಇತ್ತೀಚಿನ ದಿನಗಳಲ್ಲಿ ಕಲಬೆರಕೆಗಳ ಸಂಖ್ಯೆ ಹೆಚ್ಚುತ್ತಿದೆ. ಪ್ರತಿಯೊಂದರಲ್ಲೂ ಮೋಸ, ವಂಚನೆ, ಕಲಬೆರಕೆ ಆಗುತ್ತಿರುವುದು ನಿಜಕ್ಕೂ ಆಘಾತಕಾರಿ ಸಂಗತಿ. ಇದೀಗ ವಿಷಪೂರಿತ ರಾಸಾಯನಿಕ ಮಿಶ್ರಿತ ಮಾವಿನ ಹಣ್ಣುಗಳು ಮಾರುಕಟ್ಟೆಗೆ ಬರುತ್ತಿದ್ದು ಗ್ರಾಹಕರು ಹೆಚ್ಚಿನ ಎಚ್ಚರಿಕೆ ವಹಿಸಬೇಕಿದೆ. ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರೆಯ ಪುರಸಭೆ ಮತ್ತು ಆಹಾರ ಸುರಕ್ಷತೆ ಗುಣಮಟ್ಟ ತಪಾಸಣೆ ಜಂಟಿ ಅಧಿಕಾರಿಗಳು ಸಂತೆ ವ್ಯಾಪಾರಿಗಳು ಮತ್ತು ರಸ್ತೆ ಬದಿ ಹಣ್ಣು ವ್ಯಾಪಾರಿ ಮಳಿಗೆಗಳ ಮೇಲೆ ದಾಳಿ ಮಾಡಿದ್ದಾರೆ. ಈ ವೇಳೆ ಕೃತಕವಾಗಿ ಹಣ್ಣು ಮಾಡಿದ ರಾಸಾಯನಿಕ ಹಣ್ಣುಗಳ ರಾಶಿಯನ್ನು ಅಧಿಕಾರಿಗಳು ಪತ್ತೆ ಮಾಡಿದ್ದಾರೆ. ಮಾರಾಟಗಾರರಿಗೆ ಸೂಕ್ತ ಎಚ್ಚರಿಕೆಯನ್ನೂ ನೀಡಿದ್ದಾರೆ. ವ್ಯಾಪಾರಸ್ಥರು ತಾವು ಖರೀದಿ ಮಾಡುವ ಮೊದಲು ಕೃತಕವಾಗಿ ಹಣ್ಣಾಗುವ ರಾಸಾಯನಿಕವನ್ನು ಬಳಕೆ ಮಾಡಲಾಗಿದೆಯೇ ಎಂದು ಪರೀಕ್ಷೆ ಮಾಡಬೇಕು. ಬಳಿಕ ಅದನ್ನು ತಂದು ಗ್ರಾಹಕರಿಗೆ ತಂದು ನೀಡಬೇಕು ಎಂದು ಅಧಿಕಾರಿಗಳು ಮಾರಾಟಗಾರರಿಗೆ ಸೂಚನೆ ನೀಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ…

Read More

ಐಪಿಎಲ್‌ 2024ರ ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ಕೋಲ್ಕತ್ತಾ ನೈಟ್ ರೈಡರ್ಸ್, ಇಂದು ತವರು ನೆಲ ಈಡನ್ ಗಾರ್ಡನ್‌ ನಲ್ಲಿ ನಡೆದ 60ನೇ ಐಪಿಎಲ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು ಮಣಿಸಿ ಅಧಿಕೃತವಾಗಿ ಪ್ಲೇಆಫ್ ​ಗೆ ಎಂಟ್ರಿಕೊಟ್ಟಿದೆ. ಮಳೆ ಪೀಡಿತ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್, ಮುಂಬೈ ಇಂಡಿಯನ್ಸ್‌ ಗೆ ಗೆಲ್ಲಲು 158 ರನ್‌ಗಳ ಗುರಿಯನ್ನು ನೀಡಿದೆ. ಮಳೆಯಿಂದಾಗಿ ಪಂದ್ಯ ಎರಡು ಗಂಟೆ 15 ನಿಮಿಷ ತಡವಾಗಿ ಆರಂಭಗೊಂಡಿದ್ದು, ಓವರ್‌ ಗಳನ್ನು ಮೊಟಕುಗೊಳಿಸಲಾಯಿತು. ಪಂದ್ಯವನ್ನು ತಲಾ 16 ಓವರ್‌ ಆಡಿಸಲು ನಿರ್ಧರಿಸಲಾಯಿತು. ಮೊದಲು ಬ್ಯಾಟಿಂಗ್ ಮಾಡಿದ ಕೆಕೆಆರ್ 20 ಓವರ್ ‌ಗಳಲ್ಲಿ ಏಳು ವಿಕೆಟ್‌ ಗೆ 157 ರನ್ ಗಳಿಸಿತು. ಕೆಕೆಆರ್ ಪರ ವೆಂಕಟೇಶ್ ಅಯ್ಯರ್ 21 ಎಸೆತಗಳಲ್ಲಿ 6 ಬೌಂಡರಿ ಹಾಗೂ 2 ಸಿಕ್ಸರ್ ನೆರವಿನಿಂದ 42 ರನ್ ಗಳಿಸಿದರು. ಮುಂಬೈ ಪರ ವೇಗಿ ಜಸ್ಪ್ರೀತ್ ಬುಮ್ರಾ ಮತ್ತು ಅನುಭವಿ ಸ್ಪಿನ್ನರ್ ಅಮಿತ್ ಮಿಶ್ರಾ ತಲಾ ಎರಡು ವಿಕೆಟ್ ಪಡೆದರು. ನಮ್ಮತುಮಕೂರಿನ…

Read More