Author: admin

ಬೆಂಗಳೂರು: ಗ್ರಾಮೀಣ ಮತ್ತು ಪಾರಂಪರಿಕ ಕ್ರೀಡೆಗಳಿಗೆ ಹೆಚ್ಚಿನ ಆದ್ಯತೆ ನೀಡುವ ಯುವಕರಿಗೆ ಉತ್ತೇಜನ ನೀಡಬೇಕು ಎಂದು ಉಪಮುಖ್ಯಮಂತ್ರಿಗಳಾದ ಡಾ.ಜಿ.ಪರಮೇಶ್ವರ್ ತಿಳಿಸಿದರು. ವಿಧಾನ ಸೌಧದಲ್ಲಿ ಮಂಗಳವಾರ ನಡೆದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಮುಜರಾಯಿ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿ, ಸರ್ಕಾರದ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವಂತೆ ಸೂಚನೆ ನೀಡಿದರು. ಗ್ರಾಮೀಣ ಭಾಗದಲ್ಲಿ ಅನೇಕ ಪ್ರತಿಭಾವಂತ ಕ್ರೀಡಾಪಟುಗಳಿದ್ದು, ಅವರಿಗೆ ಸೂಕ್ತ ತರಬೇತಿ, ಆರ್ಥಿಕ ನೆರವು ಮತ್ತು ಸ್ಪರ್ಧಾತ್ಮಕ ಅವಕಾಶಗಳನ್ನು ಒದಗಿಸಿದರೆ ರಾಷ್ಟ್ರೀಯ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಲು ಸಾಧ್ಯವಾಗುತ್ತದೆ. ಅಲ್ಲದೆ, ರಾಜ್ಯದ ಸಾಂಪ್ರದಾಯಿಕ ಕ್ರೀಡೆಗಳನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ವಿಶೇಷ ಕಾರ್ಯಕ್ರಮಗಳನ್ನು ರೂಪಿಸಬೇಕು ಎಂದರು. ಕ್ರೀಡಾ ಕ್ಷೇತ್ರದಲ್ಲಿ ಅತ್ಯುನ್ನತ ಸಾಧನೆ ಮಾಡಿದ ಕ್ರೀಡಾಪಟುಗಳಿಗೆ ಸರ್ಕಾರದಿಂದ ನೀಡಲಾಗುವ ವಿವಿಧ ಪ್ರಶಸ್ತಿಗಳ ಕುರಿತು ಸಭೆಯಲ್ಲಿ ಚರ್ಚಿಸಿದರು. ಸಾಧಕರಿಗೆ ನೀಡಬೇಕಿರುವ ಕ್ರೀಡಾ ಪ್ರಶಸ್ತಿಗಳನ್ನು ಯಾವುದೇ ಕಾರಣಕ್ಕೂ ಬಾಕಿ ಉಳಿಸಬಾರದು. ಅರ್ಹ ಕ್ರೀಡಾಪಟುಗಳನ್ನು ಪಾರದರ್ಶಕವಾಗಿ ಗುರುತಿಸಿ, ಪ್ರಶಸ್ತಿಗಳನ್ನು ನೀಡುವ ಮೂಲಕ ಅವರ ಸಾಧನೆಯನ್ನು ಗೌರವಿಸುವ ಕೆಲಸವಾಗಬೇಕು.…

Read More

ತುಮಕೂರು: ಸಾರ್ವಜನಿಕರ ಬೇಡಿಕೆಯಂತೆ ಆಧುನಿಕ ಸೌಲಭ್ಯಗಳ ಜಿಲ್ಲಾಸ್ಪತ್ರೆ 18 ತಿಂಗಳಲ್ಲಿ ಜನಸೇವೆಗೆ ಸಿಗಲಿದೆ ಎಂದು ಉಪ ಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ತಿಳಿಸಿದ್ದಾರೆ. ತುಮಕೂರು ಜಿಲ್ಲಾ ಆಸ್ಪತ್ರೆ ಕಟ್ಟಡವನ್ನು ತೆರವುಗೊಳಿಸುವ ಕಾಮಗಾರಿಗೆ ಸೋಮವಾರ ಚಾಲನೆ ನೀಡಿ ಅವರು ಮಾತನಾಡಿದರು. ಪ್ರಸ್ತುತ ಸಾರ್ವಜನಿಕ ಆಸ್ಪತ್ರೆ ಸ್ವಾತಂತ್ರ್ಯ ಪೂರ್ವದಲ್ಲಿ ನಿರ್ಮಾಣವಾದ ಆಸ್ಪತ್ರೆಯಾಗಿದ್ದು, ಅತ್ಯಾಧುನಿಕ ಸೌಲಭ್ಯಗಳ ಆಸ್ಪತ್ರೆ ನಿರ್ಮಿಸುವಂತೆ ಸಾರ್ವಜನಿಕರಿಂದ ಬೇಡಿಕೆ ಇತ್ತು. ಈ ಹಿನ್ನೆಲೆಯಲ್ಲಿ ಇದೇ ಜಾಗದಲ್ಲಿ ಜಿಲ್ಲಾ ಆಸ್ಪತ್ರೆಯನ್ನು 131 ಕೋಟಿ ರೂ. ವೆಚ್ಚದಲ್ಲಿ ಆಸ್ಪತ್ರೆ ಕಟ್ಟಡ ನಿರ್ಮಾಣವಾಗಲಿದ್ದು, ಮುಂದಿನ 18 ತಿಂಗಳಲ್ಲಿ ಸಾರ್ವಜನಿಕ ಸೇವೆಗೆ ಲಭ್ಯವಾಗಲಿದೆ ಎಂದು ತಿಳಿಸಿದರು. 18 ತಿಂಗಳಿಗೆ ಮುನ್ನವೇ ಕಾಮಗಾರಿ ಪೂರ್ಣಗೊಳಿಸುವಂತೆ ಗುತ್ತಿಗೆದಾರರಿಗೆ ಸೂಚಿಸಲಾಗಿದೆ ಎಂದ ಅವರು, ಪಾರಂಪರಿಕ ಆಸ್ಪತ್ರೆ ಕಟ್ಟಡದ ಕಲ್ಲುಗಳನ್ನು ಹಾಗೂ ಇತರ ಸಾಮಗ್ರಿಗಳನ್ನು ಅತ್ಯಂತ ಜತನದಿಂದ ಬಳಸಿಕೊಳ್ಳುವಂತೆ ಈ ಹಿಂದೆ ಸಮಗ್ರವಾಗಿ ಯೋಚಿಸಿ ತೀರ್ಮಾನಿಸಲಾಗಿದೆ. ಹಿಂದಿನ ಕಲ್ಲುಗಳನ್ನು ಸದ್ಬಳಕೆ ಮಾಡಿಕೊಳ್ಳಲಾಗುವುದು ಎಂದು ತಿಳಿಸಿದರು. ಸೂರಜ್‌ ಗೆ ಸಂತಾಪ: ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ…

Read More

ತುಮಕೂರು: ಕೃಷಿಕ್ ಸರ್ವೋದಯ ಫೌಂಡೇಷನ್ (ರಿ) ವತಿಯಿಂದ ಐಬಿಪಿಎಸ್ ಸಂಸ್ಥೆ ನಡೆಸುವ ಪ್ರೊಬೆಷನರ್ ಆಫೀಸರ್ ಹುದ್ದೆಗಳಿಗೆ ಮಾರ್ಗದರ್ಶನ ಮತ್ತು ತರಬೇತಿ ನೀಡುವ ಸಲುವಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಉತ್ತಮ ಫಲಿತಾಂಶ ನೀಡಲು ನುರಿತ ವಿಷಯ ತಜ್ಞರಿಂದ ಜೂ.3ನೇ ವಾರದಲ್ಲಿ ಆನ್‌ ಲೈನ್ ಮತ್ತು ಆಫ್‌ ಲೈನ್ ತರಗತಿಗಳನ್ನು ಆರಂಭಿಸಲಾಗುವುದು. ಸಂಸ್ಥೆಯು ಸುಸಜ್ಜಿತ ಗ್ರಂಥಾಲಯ, ವೈ–ಫೈ ಇಂಟರ್ನೆಟ್ ಹಾಗೂ ಪುರುಷ ಅಭ್ಯರ್ಥಿಗಳಿಗೆ ರಿಯಾಯಿತಿ ದರದಲ್ಲಿ ಹಾಸ್ಟೆಲ್ ಸೌಲಭ್ಯಗಳನ್ನು ಒಳಗೊಂಡಿದೆ. ಅರ್ಹ ಅಭ್ಯರ್ಥಿಗಳು ಜೂ.15ರೊಳಗೆ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕೆಂದು ಪ್ರಕಟಣೆಯಲ್ಲಿ ತಿಳಿಸಿದೆ. ಹೆಚ್ಚಿನ ವಿವರಗಳಿಗೆ: ಕೇಂದ್ರ ಕಚೇರಿ, ಕೃಷಿಕ್ ಸರ್ವೋದಯ ಫೌಂಡೇಷನ್ (ರಿ), ನಂ:15, 2ನೇ ಮಹಡಿ, ಹೆಚ್.ಎ.ಎಲ್ ಹಳೆ ವಿಮಾನ ನಿಲ್ದಾಣ ರಸ್ತೆ, ಕೋಡಿಹಳ್ಳಿ ಬೆಂಗಳೂರು-08, ದೂರವಾಣಿ 9449146200 / 7625000990 / ನ್ನು ಸಂಪರ್ಕಿಸುವಂತೆ ತಿಳಿಸಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ:…

Read More

ತುಮಕೂರು: ವಿಶೇಷ ಚೇತನರ ಹಾಗೂ ಹಿರಿಯನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2026ನೇ ಸಾಲಿನ ವಿಶ್ವ ಹಿರಿಯನಾಗರಿಕರ ದಿನಾಚರಣೆ ಅಂಗವಾಗಿ ರಾಜ್ಯಾದ್ಯಂತ ಹಿರಿಯನಾಗರಿಕರ ಗುರುತಿನ ಚೀಟಿ ವಿಶೇಷ ಅಭಿಯಾನ ವನ್ನು ಹಮ್ಮಿಕೊಳ್ಳಲಾಗಿದೆ. ಹಿರಿಯರು ಗುರುತಿನ ಚೀಟಿ ಹೊಂದುವುದು ಕೇವಲ ಗುರುತಿನ ದಾಖಲೆ ಮಾತ್ರವಲ್ಲದೇ, ಜೀವನ ಮಟ್ಟವನ್ನು ಸುಧಾರಿಸಲು ಪ್ರಮುಖ ಪಾತ್ರ ವಹಿಸುತ್ತದೆ. ಗುರುತಿನ ಚೀಟಿ ಪಡೆಯುವುದರಿಂದ ವಿಮಾನ ಪ್ರಯಾಣ, ರೈಲ್ವೆ ಪ್ರಯಾಣ, ಬಸ್‌ ಪಾಸ್ ಹಾಗೂ ಬಸ್ ಪ್ರಯಾಣದ ದರದಲ್ಲಿ ರಿಯಾಯಿತಿ (ಬಿ.ಎಂ.ಟಿ.ಸಿ ಮತ್ತು ಕೆಎಸ್ ಆರ್‌ ಟಿಸಿ), ಆದಾಯ ತೆರಿಗೆಯಲ್ಲಿ ವಿನಾಯಿತಿ ಮತ್ತು ಹಿರಿಯನಾಗರಿಕರ ಪೋಷಣಾ ಭತ್ಯೆಯನ್ನು ಪಡೆಯಬಹುದಾಗಿದೆ. ಈಗಾಗಲೇ ಹಿರಿಯನಾಗರಿಕರ ಗುರುತಿನ ಚೀಟಿ ಹೊಂದಿರುವವರನ್ನು ಹೊರತುಪಡಿಸಿ ಜಿಲ್ಲೆಯ 60 ವರ್ಷ ಮೇಲ್ಪಟ್ಟ ಎಲ್ಲಾ ಹಿರಿಯನಾಗರಿಕರು ಆಧಾರ್ ಕಾರ್ಡ್‌ನಲ್ಲಿ ಕೆ.ವೈ.ಸಿ ಹೊಂದಿರುವ ಮೊಬೈಲ್‌ನೊಂದಿಗೆ, ಆಧಾರ್ ಕಾರ್ಡ್, ಪಾಸ್‌ಪೋರ್ಟ್ ಅಳತೆಯ ಫೋಟೋ, ರಕ್ತದ ಗುಂಪಿನ ದಾಖಲೆಯನ್ನು ತಮ್ಮ ಸಮೀಪದ ಗ್ರಾಮ ಒನ್, ಸಿ.ಎಸ್.ಸಿ ಕೇಂದ್ರ, ಕರ್ನಾಟಕ ಒನ್‌ಗೆ ಭೇಟಿ ನೀಡಿ, ಹಿರಿಯನಾಗರಿಕರ ಗುರುತಿನ…

Read More

ತುಮಕೂರು: ಅಮೃತಾ ಐಎನ್ಸಿ ಆಶ್ರಯದಲ್ಲಿ ನಗರದ ಗಾಜಿನ ಮನೆಯಲ್ಲಿ ಜೂನ್ 13 ಮತ್ತು 14ರಂದು ನಡೆಯಲಿರುವ ಆಟೋ ಎಕ್ಸ್ ಪೋ ಎಲೆಕ್ಟ್ರಾನಿಕ್ ಕಾರ್ ಮತ್ತು ಬೈಕ್ ಪ್ರದರ್ಶನ ಕಾರ್ಯಕ್ರಮದಲ್ಲಿ ವಾಹನ ಪ್ರಿಯರಿಗೆ ಹಾಗೂ ಹೊಸ ಕಾರು–ಬೈಕ್ ಖರೀದಿಸಲು ಬಯಸುವ ಗ್ರಾಹಕರಿಗೆ ಸುವರ್ಣಾವಕಾಶ ಒದಗಿಸುವ ಉದ್ದೇಶದಿಂದ ಮೂರನೇ ಆವೃತ್ತಿಯ ಆಟೋ ಎಕ್ಸ್ ಪೋ 2026 ಆಯೋಜಿಸಲಾಗಿದೆ ಎಂದು ಟಾಟಾ ಮೋಟಾರ್ಸ್ ಶ್ರೀ ಆಟೋ ಮಾಲೀಕ ಶ್ರೀನಿವಾಸ್ ಹಾಗೂ ಅಮೃತಾ ಐಎನ್ಸಿ ಸಂಸ್ಥೆಯ ಅಮೃತಾ ಹೇಳಿದರು. ನಗರದ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಆಟೋ ಎಕ್ಸ್ ಪೋದಲ್ಲಿ ಭಾರತೀಯ ಹಾಗೂ ಬಹುರಾಷ್ಟ್ರೀಯ ಕಂಪನಿಗಳ ಎಲೆಕ್ಟ್ರಿಕ್ ಕಾರುಗಳು, ಬೈಕ್‌ ಗಳು ವಾಹನಗಳು ಸೇರಿದಂತೆ ವಿವಿಧ ಮಾದರಿಯ ವಾಹನಗಳು ಒಂದೇ ವೇದಿಕೆಯಲ್ಲಿ ಪ್ರದರ್ಶನಗೊಳ್ಳಲಿವೆ. ವಾಹನಗಳ ಮಾರಾಟ, ಟೆಸ್ಟ್ ಡ್ರೈವ್, ಆನ್‌ಸ್ಪಾಟ್ ಬುಕಿಂಗ್ ಹಾಗೂ ಹಣಕಾಸು ಯೋಜನೆಗಳ ಮಾಹಿತಿ ಕೂಡ ಗ್ರಾಹಕರಿಗೆ ಲಭ್ಯವಾಗಲಿದೆ ಎಂದು ಹೇಳಿದರು. ಬೆಂಗಳೂರಿನ ಪ್ರಮುಖ ವಾಹನ ಸಂಸ್ಥೆಗಳು ಭಾಗವಹಿಸುತ್ತಿದ್ದು, ಸುಮಾರು 14ರಿಂದ 15…

Read More

ತುಮಕೂರು: ವಿಕಲಚೇತನರ ಹಾಗೂ ಹಿರಿಯನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಕೇಂದ್ರ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಮಂತ್ರಾಲಯ ನವದೆಹಲಿ ಇವರಿಂದ 2026ನೇ ಸಾಲಿನ ವಿಶ್ವ ವಿಕಲಚೇತನರ ದಿನಾಚರಣೆ ಅಂಗವಾಗಿ ವಿಕಲಚೇತನರ ಸಬಲೀಕರಣಕ್ಕಾಗಿ ವಿವಿಧ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆಗೈದ ವ್ಯಕ್ತಿ/ಸಂಸ್ಥೆಗಳಿಗೆ ರಾಷ್ಟ್ರ ಪ್ರಶಸ್ತಿ ನೀಡುವ ಸಲುವಾಗಿ ಆನ್‌ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಇಚ್ಛಿಸುವವರು ಜುಲೈ 31ರೊಳಗಾಗಿ ವೆಬ್‌ಸೈಟ್ http://www.depwd.gov.in ಅಥವಾ http://www.awards.gov.in ನಲ್ಲಿ ಅಗತ್ಯ ದಾಖಲಾತಿಗಳೊಂದಿಗೆ ಆನ್‌ ಲೈನ್ ಮೂಲಕ ಅರ್ಜಿ ಸಲ್ಲಿಸಿ, ಸ್ವೀಕೃತಿಯೊಂದಿಗೆ ಹಾರ್ಡ್ ಪ್ರತಿಯನ್ನು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯನಾಗರಿಕರ ಕಲ್ಯಾಣಾಧಿಕಾರಿಗಳ ಕಚೇರಿ, ಜಿಲ್ಲಾ ಬಾಲಭವನ ಆವರಣ, ಎಂ.ಜಿ.ರಸ್ತೆ, ತುಮಕೂರು ಇಲ್ಲಿಗೆ ಸಲ್ಲಿಸಬೇಕೆಂದು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯನಾಗರಿಕರ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

Read More

ತುಮಕೂರು: ರುಡ್‌ ಸೆಟ್ ಸಂಸ್ಥೆ ವತಿಯಿಂದ ಜುಲೈ 6 ರಿಂದ ಕೋಳಿ ಸಾಕಾಣಿಕೆ ಕುರಿತು 12 ದಿನಗಳ ಉಚಿತ ತರಬೇತಿ ನೀಡಲು ಉದ್ದೇಶಿಸಿದ್ದು, ತರಬೇತಿ ಪಡೆಯಲಿಚ್ಛಿಸುವ ಆಸಕ್ತ ಗ್ರಾಮೀಣ ನಿರುದ್ಯೋಗಿ ಯುವಕ/ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 18 ರಿಂದ 50 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಗ್ರಾಮೀಣ ಭಾಗದ ಬಿಪಿಎಲ್ ಕಾರ್ಡ್ ಹೊಂದಿದವರಿಗೆ ಆದ್ಯತೆ ನೀಡಲಾಗುವುದು. ತರಬೇತಿಯು ವಸತಿಯುತವಾಗಿದ್ದು, ತರಬೇತಿ ಅವಧಿಯಲ್ಲಿ ಉಚಿತ ಊಟದ ವ್ಯವಸ್ಥೆ ಕಲ್ಪಿಸಲಾಗುವುದು. ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು. ಅರ್ಜಿ ಸಲ್ಲಿಸಲು ಜೂನ್ 30 ಕಡೆಯ ದಿನವಾಗಿದೆ. ಆಸಕ್ತರು ಹೆಚ್ಚಿನ ಮಾಹಿತಿಗಾಗಿ ರುಡ್‌ ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಅಥವಾ ಮೊಬೈಲ್ ಸಂಖ್ಯೆ: 9241482541, 9481506564, 9740982585, 9113880324ನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್‌ಸೆಟ್ ಸಂಸ್ಥೆ ಬೆಂಗಳೂರು ಶಾಖೆಯ ನಿರ್ದೇಶಕ ರವಿಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ…

Read More

ಕಿರುತೆರೆಯ ಅತ್ಯಂತ ಜನಪ್ರಿಯ ಹಾಗೂ ದೊಡ್ಡ ರಿಯಾಲಿಟಿ ಶೋ ‘ಬಿಗ್ ಬಾಸ್ ಕನ್ನಡ’ ಸೀಸನ್ 13ರ ಆಡಿಷನ್ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಿದೆ. ಈ ಬಾರಿ ಸಾಮಾನ್ಯ ಜನರಿಗೂ ಬಿಗ್ ಬಾಸ್ ಮನೆಗೆ ಪ್ರವೇಶಿಸಲು ಕಲರ್ಸ್ ಕನ್ನಡ ವಾಹಿನಿ ಸುವರ್ಣಾವಕಾಶ ನೀಡಿದೆ. ಈಗಾಗಲೇ ಸಾವಿರಾರು ಆಕಾಂಕ್ಷಿಗಳು ತಮ್ಮ ಅದೃಷ್ಟ ಪರೀಕ್ಷಿಸಲು ಆಡಿಷನ್ ವಿಡಿಯೋಗಳನ್ನು ಸಿದ್ಧಪಡಿಸುತ್ತಿದ್ದಾರೆ. ಆದರೆ, ನೀವು ಮಾಡುವ ಒಂದು ಸಣ್ಣ ತಪ್ಪು ನಿಮ್ಮ ಬಿಗ್ ಬಾಸ್ ಕನಸನ್ನು ಭಂಗಗೊಳಿಸಬಹುದು! ನಿಮ್ಮ ಆಡಿಷನ್ ವಿಡಿಯೋ ತಿರಸ್ಕೃತ (Reject) ಆಗಬಾರದು ಎಂದರೆ ವಿಡಿಯೋ ಮಾಡುವಾಗ ಈ ಕೆಳಗಿನ ಪ್ರಮುಖ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕಾಗುತ್ತದೆ ಎಂದು ಕಲರ್ಸ್ ಕನ್ನಡ ವಾಹಿನಿ ತಿಳಿಸಿದೆ. 3 ನಿಮಿಷಗಳ ನಿಖರ ವಿಡಿಯೋ ಇರಲಿ: ವಾಹಿನಿ ನೀಡಿರುವ ಅಧಿಕೃತ ನಿಯಮದ ಪ್ರಕಾರ, ನಿಮ್ಮ ಆಡಿಷನ್ ವಿಡಿಯೋ ಕಡ್ಡಾಯವಾಗಿ 3 ನಿಮಿಷಗಳ ಕಾಲಾವಧಿಯದ್ದೇ ಆಗಿರಬೇಕು. ಅದಕ್ಕಿಂತ ತೀರಾ ಕಡಿಮೆ ಅಥವಾ ಅತಿ ಉದ್ದದ ವಿಡಿಯೋಗಳನ್ನು ಮಾಡಿದರೆ ಅವುಗಳನ್ನು ಪರಿಗಣಿಸುವುದಿಲ್ಲ. ಆದ್ದರಿಂದ ನಿಗದಿತ ಸಮಯದೊಳಗೇ…

Read More

ತುಮಕೂರು: ಜಿಲ್ಲೆಯ ಪಾವಗಡ ತಾಲೂಕಿನ ನಾಗರಮಿಕೆ ಹೋಬಳಿಯ ಕೆ.ಸೇವಾಲ್ ಪುರ ಗ್ರಾಮದಲ್ಲಿ ನೆಲೆಸಿರುವ ಶ್ರೀ ತೊಳಜಸತ್ತಿ (ಲಕ್ಷ್ಮೀ) ದೇವಾಲಯದ ನಾಲ್ಕನೇ ವರ್ಷದ ಅದ್ದೂರಿ ವಾರ್ಷಿಕೋತ್ಸವವು ಜೂನ್ 25 ರಂದು ಅತ್ಯಂತ ವಿಜೃಂಭಣೆಯಿಂದ ಜರುಗಲಿದೆ. ದೇವಾಲಯದ ವಾರ್ಷಿಕೋತ್ಸವದ ಅಂಗವಾಗಿ ಅಂದು ದಿನವಿಡೀ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಬೆಳಿಗ್ಗೆ 6:00 ಗಂಟೆಗೆ: ಜಗನ್ಮಾತೆಗೆ ವಿಶೇಷ ಅಭಿಷೇಕ ಹಾಗೂ ಮಹಾಮಂಗಳಾರತಿ ನೆರವೇರಲಿದೆ. ಸಂಜೆ 5:00 ಗಂಟೆಯಿಂದ: ದೇವಿಗೆ ವಿಶೇಷ ಪೂಜಾ ಕೈಂಕರ್ಯಗಳು ಆರಂಭವಾಗಲಿದ್ದು, ತದನಂತರ ಭಕ್ತಾದಿಗಳಿಗೆ ಮಹಾಪ್ರಸಾದ ವಿತರಣೆ ಏರ್ಪಡಿಸಲಾಗಿದೆ. ಈ ಶುಭ ಸಂದರ್ಭದಲ್ಲಿ ಕವಿತಾ ಡಾ.ಡಿ.ಪರಮೇಶ್ ನಾಯ್ಡು ಅವರ ಕುಟುಂಬಸ್ಥರು, ಕೆ.ಸೇವಾಲ್ ಪುರ ಗ್ರಾಮಸ್ಥರು ಹಾಗೂ ದೇವಾಲಯದ ಭಕ್ತ ಮಂಡಳಿಯವರು ಸುತ್ತಮುತ್ತಲಿನ ಗ್ರಾಮಗಳ ಸಾರ್ವಜನಿಕರಿಗೆ ಮತ್ತು ಭಕ್ತಾದಿಗಳಿಗೆ ಭಕ್ತಿಪೂರ್ವಕ ಸ್ವಾಗತ ಕೋರಿದ್ದಾರೆ. ಎಲ್ಲ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ, ದೇವಿಯ ಕೃಪೆಗೆ ಪಾತ್ರರಾಗಬೇಕಾಗಿ ಆಯೋಜಕರು ವಿನಂತಿಸಿದ್ದಾರೆ. ವರದಿ: ನಂದೀಶ್ ನಾಯ್ಕ ಪಿ., ಪಾವಗಡ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ…

Read More

ತಿಪಟೂರು : ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ 5/4 ಎನ್‌ ಸಿಸಿ ಕಂಪನಿಗೆ ಹೆಮ್ಮೆಯ ಕ್ಷಣವಾಗಿದ್ದು, ಕಾಲೇಜಿನ  ಎನ್‌ ಸಿಸಿ ಕೆಡೆಟ್‌ ಗಳಾದ ಮನೋಜ್ (ಅಂತಿಮ ವರ್ಷದ ಬಿಬಿಎ), ಅಜಯ್ (ದ್ವಿತೀಯ ವರ್ಷದ ಬಿಸಿಎ), ಅಭಿಷೇಕ್ -– (ಬಿ.ಕಾಂ.) ಈ ಮೂವರು ಭಾರತೀಯ ಸೇನೆಯಲ್ಲಿ ಅಗ್ನಿವೀರರಾಗಿ ಆಯ್ಕೆಯಾಗಿದ್ದಾರೆ. ಈ ಮಹತ್ವದ ಸಾಧನೆಯನ್ನು ಸಂಭ್ರಮಿಸಲು ಕಾಲೇಜಿನಲ್ಲಿ ಅಭಿನಂದನಾ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಮಾತನಾಡಿದ ಪ್ರಾಂಶುಪಾಲ ಡಾ.ಶಶಿಕುಮಾರ್. ಎಚ್.ಸಿ., ರಾಷ್ಟ್ರಸೇವೆ ಅತ್ಯುನ್ನತ ಕರ್ತವ್ಯವಾಗಿದೆ. ಈ ಯುವ ಅಗ್ನಿವೀರರು ತಮ್ಮ ಮುಂದಿನ ಪಯಣದಲ್ಲಿ ಧೈರ್ಯ, ಶಿಸ್ತು ಮತ್ತು ಸಮರ್ಪಣೆಯ ಮೌಲ್ಯಗಳನ್ನು ಸದಾ ಉಳಿಸಿಕೊಳ್ಳಲಿ. ರಾಷ್ಟ್ರಸೇವೆಯತ್ತ ಕೆಡೆಟ್‌ ಗಳು ತೋರಿದ ಸಮರ್ಪಣೆ, ಪರಿಶ್ರಮ ಮತ್ತು ಬದ್ಧತೆಯನ್ನು ಶ್ಲಾಘಿಸಿ ಅಭಿನಂದಿಸಿದರು. ಅಲ್ಲದೆ, ಭಾರತೀಯ ಸೇನೆಯಲ್ಲಿ ಅವರ ಮುಂದಿನ ವೃತ್ತಿಜೀವನ ಯಶಸ್ವಿ ಹಾಗೂ ಉಜ್ವಲವಾಗಿರಲೆಂದು ಶುಭ ಹಾರೈಸಿದರು. ಸಹಾಯಕ ಎನ್‌ ಸಿಸಿ ಅಧಿಕಾರಿ ಲೆಫ್ಟಿನೆಂಟ್ ಡಾ.ವಿರೂಪಾಕ್ಷ ಜೆ.ಡಿ. ಮಾತನಾಡಿ, ಈ ಕಾರ್ಯಕ್ರಮವು ಎಲ್ಲಾ ವಿದ್ಯಾರ್ಥಿಗಳು ಹಾಗೂ ಎನ್‌…

Read More