Author: admin

ಸರಗೂರು: ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಬೆಳಕುಣಿ ಗ್ರಾಮದ ದಲಿತ ಸಮುದಾಯದ ಪ್ರತಿಭಾನ್ವಿತ ವಿದ್ಯಾರ್ಥಿನಿ ಹಾಗೂ ರಾಜ್ಯಮಟ್ಟದ ಕಬಡ್ಡಿ ಆಟಗಾರ್ತಿ , ಅಪ್ರಾಪ್ತ ಬಾಲಕಿಯ ಮೇಲಿನ ಅತ್ಯಾಚಾರ ಮತ್ತು ಭೀಕರ ಕೊಲೆಯನ್ನು ಖಂಡಿಸಿ, ಸರಗೂರು ಪಟ್ಟಣದಲ್ಲಿ ಶನಿವಾರ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ಮಹಿಳಾ ಘಟಕದ ವತಿಯಿಂದ ತೀವ್ರ ಪ್ರತಿಭಟನೆ ನಡೆಸಲಾಯಿತು. ಪಟ್ಟಣದ ಮಿನಿ ವಿಧಾನಸೌಧ ಕಚೇರಿಯ ಮುಂಭಾಗದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು ವಿವಿಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ತಹಶೀಲ್ದಾರ್ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು. ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ದಸಂಸ (ಅಂಬೇಡ್ಕರ್ ವಾದ) ಮಹಿಳಾ ಜಿಲ್ಲಾ ಸಂಚಾಲಕಿ ಕೋಟೆ ಅನುಷಾ ಅವರು, “ಉದಯೋನ್ಮುಖ ಕ್ರೀಡಾಪಟುವಾಗಿದ್ದ ಅಪ್ರಾಪ್ತ ಬಾಲಕಿಯನ್ನು ಕಿಡಿಗೇಡಿಗಳು ಅತ್ಯಾಚಾರ ಮಾಡಿ ಕೊಲೆ ಮಾಡಿರುವುದು ಅತ್ಯಂತ ನಿಕೃಷ್ಟ ಕೃತ್ಯವಾಗಿದೆ. ಬಂಧಿತನಾಗಿರುವ ಆರೋಪಿಯು ಯಾವುದೇ ಕಾರಣಕ್ಕೂ ಕಾನೂನಿನ ಕಣ್ಣಿನಿಂದ ತಪ್ಪಿಸಿಕೊಳ್ಳದಂತೆ ಆತನಿಗೆ ಮರಣದಂಡನೆ ಶಿಕ್ಷೆ ವಿಧಿಸಲು ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು,” ಎಂದು ಆಗ್ರಹಿಸಿದರು. ಮಹಿಳಾ ಘಟಕದ…

Read More

ಸರಗೂರು: ಕಾಂಗ್ರೆಸ್ ಪಕ್ಷದ ಅಸ್ತಿತ್ವವನ್ನು ಉಳಿಸಲು ಮತ್ತು ಬಲಪಡಿಸಲು ದಶಕಗಳಿಂದ ಮಾಜಿ ಸಂಸದ ದಿವಂಗತ ಆರ್. ಧ್ರುವನಾರಾಯಣ್ ಅವರೊಂದಿಗೆ ಹೆಗಲಿಗೆ ಹೆಗಲು ಕೊಟ್ಟು ಶ್ರಮಿಸಿರುವ ಎಚ್.ಡಿ. ಕೋಟೆ ವಿಧಾನಸಭಾ ಕ್ಷೇತ್ರದ ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಈ ಬಾರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನೇತೃತ್ವದ ಸರ್ಕಾರದಲ್ಲಿ ಸಚಿವ ಸ್ಥಾನ ನೀಡಬೇಕು ಎಂದು ಆರ್ಯ ಈಡಿಗ ಸಮಾಜದ ಯುವ ಮುಖಂಡ ಆರ್ಯ ಮಹೇಶ್ ಕಾಂಗ್ರೆಸ್ ಹಿರಿಯ ನಾಯಕರಿಗೆ ಒತ್ತಾಯಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪಕ್ಷದ ಕಷ್ಟದ ಕಾಲದಲ್ಲೂ ತ್ಯಾಗ ಮತ್ತು ಸತ್ಯನಿಷ್ಠೆಯಿಂದ ಕಾರ್ಯನಿರ್ವಹಿಸಿದ ಗೌರವ ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಲ್ಲುತ್ತದೆ. ಎಚ್.ಡಿ. ಕೋಟೆ ಮತ್ತು ಸರಗೂರು ಎರಡು ತಾಲೂಕುಗಳ ಜನರ ಹಿತಕ್ಕಾಗಿ ನಿರಂತರವಾಗಿ ಶ್ರಮಿಸುತ್ತಿರುವ ಇಂತಹ ಜನಪರ ನಾಯಕರಿಗೆ ಸಚಿವ ಸಂಪುಟದಲ್ಲಿ ಸ್ಥಾನ ನೀಡಲೇಬೇಕು ಎಂದರು. “ಶಾಸಕ ಅನಿಲ್ ಚಿಕ್ಕಮಾದು ಅವರ ರಾಜಕೀಯ ಜೀವನ ಅತ್ಯಂತ ಶುದ್ಧ ಮತ್ತು ಪ್ರಾಮಾಣಿಕತೆಗೆ ಮಾದರಿಯಾಗಿದೆ. ತಾಲೂಕಿನ ಸಮಗ್ರ ಅಭಿವೃದ್ಧಿಗೆ ಅವರು…

Read More

ಸರಗೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ನೇತೃತ್ವದ ನೂತನ ಸಚಿವ ಸಂಪುಟದಲ್ಲಿ ಎಚ್.ಡಿ. ಕೋಟೆ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಸ್ಥಳೀಯವಾಗಿ ‘ಅಭಿವೃದ್ಧಿಕಾರ’ ಎಂದೇ ಗುರುತಿಸಿಕೊಂಡಿರುವ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ಸಿಗುವ ಸಾಧ್ಯತೆ ದಟ್ಟವಾಗಿದೆ ಎಂದು ಎಸ್ಸಿ ಎಸ್ಟಿ ಸಮಿತಿಯ ಸದಸ್ಯ ವೇಣುಗೋಪಾಲ್ ತಿಳಿಸಿದ್ದಾರೆ. ರಾಜ್ಯದ ಗಡಿ ಭಾಗವಾಗಿರುವ ಹಿಂದುಳಿದ ತಾಲೂಕು ಎಚ್.ಡಿ.ಕೋಟೆಗೆ ಇದುವರೆಗೆ ಯಾವುದೇ ಸಚಿವ ಸ್ಥಾನ ಸಿಕ್ಕಿಲ್ಲ. ಈ ಬಾರಿ ಸ್ಥಳೀಯರಿಗೆ ಅವಕಾಶ ನೀಡುವ ಸಂದರ್ಭ ಬಂದರೆ ಹಲವು ಮಹತ್ವದ ವಿಷಯಗಳು ಚರ್ಚೆಗೆ ಬರಲಿವೆ. ನಾಯಕ ಸಮಾಜದ ಲೆಕ್ಕಾಚಾರದಲ್ಲಿ ಸಚಿವ ಸ್ಥಾನದ ಹಂಚಿಕೆಯಾಗುವುದಾದರೆ, ಮೈಸೂರು ಜಿಲ್ಲೆಯಲ್ಲಿ ನಾಯಕ ಸಮಾಜದಿಂದ ಆಯ್ಕೆಯಾಗಿರುವ ಏಕೈಕ ಶಾಸಕ ಅನಿಲ್ ಚಿಕ್ಕಮಾದು ಮಾತ್ರ. ಹೀಗಾಗಿ ನಾಯಕ ಸಮಾಜಕ್ಕೆ ಪ್ರಾತಿನಿಧ್ಯ ನೀಡುವ ಸಂದರ್ಭದಲ್ಲಿ ಇವರ ಹೆಸರೇ ಮುಂಚೂಣಿಗೆ ಬರಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು. ಎಚ್.ಡಿ. ಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸುದೀರ್ಘ ಇತಿಹಾಸವಿದೆ. ಕಾಂಗ್ರೆಸ್ ಅವಧಿಯಲ್ಲಿ ಈ ಕ್ಷೇತ್ರದಲ್ಲಿ ಹೆಚ್ಚಿನ ಪ್ರಮಾಣದಲ್ಲಿ…

Read More

ಸರಗೂರು: ಎಚ್.ಡಿ.ಕೋಟೆ ವಿಧಾನಸಭಾ ಕ್ಷೇತ್ರದಿಂದ ಸತತ ಎರಡು ಬಾರಿ ಶಾಸಕರಾಗಿ ಆಯ್ಕೆಯಾಗಿ ದಾಖಲೆ ನಿರ್ಮಿಸಿರುವ ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಪ.ಪಂ. ಸದಸ್ಯ ಹಾಗೂ ನಾಯಕ ಸಮಾಜದ ತಾಲ್ಲೂಕು ಉಪಾಧ್ಯಕ್ಷ ಶ್ರೀನಿವಾಸ ಒತ್ತಾಯಿಸಿದರು. ಕ್ಷೇತ್ರದ ಅಭಿವೃದ್ಧಿ ದೃಷ್ಟಿಯಿಂದ ಅನೀಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಬೇಕು. ಆ ನಿಟ್ಟಿನಲ್ಲಿ ಕೇಂದ್ರ ಹಾಗೂ ರಾಜ್ಯ ಕಾಂಗ್ರೆಸ್ ನಾಯಕರು ಅನೀಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಲು ಮುಂದಾಗಬೇಕು ಎಂದು ಒತ್ತಾಯಿಸಿದರು. ಮಾಜಿ ಸಂಸದ ಹಾಗೂ ಕಾಯಕಲೋಗಿ ರಾಜ್ಯದ ಮೋದಲನೇ ಸಂಸದ ಎಂಬ ಹೆಗ್ಗಳಿಕೆ ಪಡೆದಿರುವ ದಿ.ಆರ್.ದ್ರುವನಾರಯಣ್ ರವರ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಟ್ಟ ಅಭಿಮಾನಿಯಾಗಿರುವ  ಶಾಸಕ ಅನಿಲ್ ಚಿಕ್ಕಮಾದು ಚುನಾವಣೆಗಳಲ್ಲಿ  ಮಾಜಿ ಶಾಸಕ ಬೀಚನಹಳ್ಳಿ ಚಿಕ್ಕಣ್ಣ, ಜಯಪ್ರಕಾಶ್,ಕೃಷ್ಣನಾಯಕ ಸೇರಿದಂತೆ ಅನೇಕ ಘಟಾನುಘಟಿಗಳನ್ನು ಸೋಲಿಸಿದ್ದಾರೆ. ನಮ್ಮ ಹಳೆ ಮೈಸೂರು ಭಾಗದದಲ್ಲಿ ನಾಯಕ ಸಮಾಜದ ನಾಯಕರಿಗೆ ಯಾವುದೇ ಸಚಿವ ಸ್ಥಾನ ನೀಡಿಲ್ಲ.ಅವರಿಗೆ ಸಚಿವ ಸ್ಥಾನ ನೀಡಿ ಯಾವುದೇ ಭಾಗದ…

Read More

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಭಾರಿ ಕುತೂಹಲ ಮೂಡಿಸಿದ್ದ ನಾಯಕತ್ವ ಬದಲಾವಣೆ ಪ್ರಕ್ರಿಯೆ ಕೊನೆಗೂ ಅಂತಿಮ ಹಂತಕ್ಕೆ ತಲುಪಿದೆ. ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ ಬೆನ್ನಲ್ಲೇ, ಕೆಪಿಸಿಸಿ ಅಧ್ಯಕ್ಷ ಹಾಗೂ ಹಾಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಕಾಂಗ್ರೆಸ್ ಶಾಸಕಾಂಗ ಪಕ್ಷದ (CLP) ನೂತನ ನಾಯಕನಾಗಿ ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ. ವಿಧಾನಸೌಧದಲ್ಲಿ ನಡೆದ ಮಹತ್ವದ ಸಿಎಲ್‌ಪಿ ಸಭೆಯಲ್ಲಿ ನಿರ್ಗಮಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಅಧಿಕೃತವಾಗಿ ಡಿ.ಕೆ. ಶಿವಕುಮಾರ್ ಅವರ ಹೆಸರನ್ನು ಶಾಸಕಾಂಗ ಪಕ್ಷದ ನಾಯಕ ಸ್ಥಾನಕ್ಕೆ ಪ್ರಸ್ತಾಪಿಸಿದರು. ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ. ವೇಣುಗೋಪಾಲ್ ಮತ್ತು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರ ಸಮ್ಮುಖದಲ್ಲಿ ಈ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾದ ತಕ್ಷಣವೇ ಡಿ.ಕೆ. ಶಿವಕುಮಾರ್ ಅವರು ಹಿರಿಯ ನಾಯಕರೊಂದಿಗೆ ಲೋಕಭವನಕ್ಕೆ ತೆರಳಿ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರನ್ನು ಭೇಟಿ ಮಾಡಿದರು. ಶಾಸಕರ ಬೆಂಬಲ ಪತ್ರವನ್ನು ಹಸ್ತಾಂತರಿಸಿ ಹೊಸ ಸರ್ಕಾರ ರಚನೆಗೆ…

Read More

ತುಮಕೂರು: ಚಿಕ್ಕನಾಯಕನಹಳ್ಳಿ ತಾಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮೆಟ್ರಿಕ್ ಪೂರ್ವ(5 ರಿಂದ 10ನೇ ತರಗತಿ) ಹಾಗೂ ಮೆಟ್ರಿಕ್ ನಂತರ(ಪಿ.ಯು.ಸಿ. ಮತ್ತು ಸಮಾನಾಂತರ ಕೋರ್ಸ್ ವಿದ್ಯಾರ್ಥಿಗಳಿಗೆ ಮಾತ್ರ) ಬಾಲಕ/ಬಾಲಕಿಯರ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಆನ್‌ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವ ಪ್ರವರ್ಗ-1, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ವಿದ್ಯಾರ್ಥಿಯ ಕುಟುಂಬದ ವಾರ್ಷಿಕ ವರಮಾನ 2.50 ಲಕ್ಷ ಹಾಗೂ ಪ್ರವರ್ಗ–2ಎ, 2ಬಿ, 3ಎ, 3ಬಿ ವಿದ್ಯಾರ್ಥಿಯ ಕುಟುಂಬದ ವಾರ್ಷಿಕ ವರಮಾನ 1 ಲಕ್ಷ ರೂ. ಮಿತಿಯೊಳಗಿರಬೇಕು. ಅರ್ಹ ಮೆಟ್ರಿಕ್ ಪೂರ್ವ ವಿದ್ಯಾರ್ಥಿಗಳು ಜೂನ್ 8ರೊಳಗಾಗಿ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿಗಳು ಜೂನ್ 15ರೊಳಗಾಗಿ ತಮ್ಮ ಅರ್ಜಿಯನ್ನು ಜಾಲತಾಣ: https://shp.karnataka.gov.in/bcwd ಮೂಲಕ ಸಲ್ಲಿಸಬಹುದಾಗಿದೆ. ತಾಲೂಕುವಾರು ವಿದ್ಯಾರ್ಥಿ ನಿಲಯಗಳ ವಿವರ, ವಿದ್ಯಾರ್ಥಿ ನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ, ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಜಾಲತಾಣ: https://bcwd.karnataka.gov.in/ ಅನ್ನು ಸಂಪರ್ಕಿಸಬಹುದಾಗಿದೆ. ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಗಳಾದಲ್ಲಿ ಇ–ಅಂಚೆ:…

Read More

ತುಮಕೂರು: ಪರಿಸರ ಸಂರಕ್ಷಣೆ ಮತ್ತು ವನ್ಯಜೀವಿಗಳ ಬದುಕುಳಿಯುವಿಕೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ, ವಿವಿಧ ಸಂಘ–ಸಂಸ್ಥೆಗಳ ಒಕ್ಕೂಟದ ವತಿಯಿಂದ ಮೇ 31, ಭಾನುವಾರದಂದು ಬೆಳಿಗ್ಗೆ 7:00 ಗಂಟೆಗೆ ನಾಮದ ಚಿಲುಮೆಯಲ್ಲಿ ಜಲಸೇವೆ ಮತ್ತು ಪ್ಲಾಸ್ಟಿಕ್ ಮುಕ್ತ ಸ್ವಚ್ಛತಾ ಆಂದೋಲನ ಕಾರ್ಯಕ್ರಮವನ್ನು ಹಮ್ಮಿ ಕೊಳ್ಳಲಾಗಿದೆ. ಈ ಕಾರ್ಯಕ್ರಮವು ಭಾರತ ಸೇವಾದಳ, ಐಕ್ಯ ಫೌಂಡೇಶನ್, ಯೂತ್ ಫಾರ್ ಸೇವಾ ತುಮಕೂರು ಶಾಖೆ ನವಿಲು ಫೌಂಡೇಶನ್, ಭಾವೈಕ್ಯ ಯುವಜನ ಸಂಘ, ಪ್ರೇರಣಾ ಡಿಸೇಬಲ್ಡ್ ವೆಲ್ಫೇರ್ ಟ್ರಸ್ಟ್(ರಿ), ಕಲಾ ಕಲ್ಪಂ(ರಿ) ಹಾಗೂ ಸಮಾನ ಮನಸ್ಕರ ಒಕ್ಕೂಟದ ಸಂಘಟನೆಗಳ ಸಹಯೋಗದಲ್ಲಿ ನಡೆಯಲಿದೆ. ಎಲ್ಲಾ ಸಂಘ–ಸಂಸ್ಥೆಗಳು, ಒಕ್ಕೂಟಗಳು, ತಂಡಗಳು ಮತ್ತು ಜನಪ್ರತಿನಿಧಿಗಳ ಸಮಾನ ಮನಸ್ಸಿನ ಸಹಕಾರದೊಂದಿಗೆ ಈ ಕಾರ್ಯಕ್ರಮವನ್ನು ಸಂಘಟಿಸಿ, ನೇತೃತ್ವ ವಹಿಸಲಾಗುತ್ತಿದೆ. ಅರಣ್ಯದ ಪ್ರಾಣಿ-ಪಕ್ಷಿಗಳಿಗೆ ನೀರು ಒದಗಿಸುವುದು ಮತ್ತು ನಮ್ಮ ನೈಸರ್ಗಿಕ ತಾಣಗಳನ್ನು ಪ್ಲಾಸ್ಟಿಕ್ ಮುಕ್ತವಾಗಿಸುವುದು ಈ ಆಂದೋಲನದ ಮುಖ್ಯ ಉದ್ದೇಶವಾಗಿದೆ. ಪರಿಸರದ ಮೇಲೆ ಕಾಳಜಿ ಇರುವವರು, ಆಸಕ್ತಿಯುಳ್ಳವರು ಮತ್ತು ಸಮಯಾವಕಾಶ ಇರುವ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಪರಿಸರವನ್ನು ಉಳಿಸುವ…

Read More

ತಿಪಟೂರು: ಶ್ರೀ ನೇತಾಜಿ ಯೋಗ ಶಿಕ್ಷಣ ಮತ್ತು ಸಾಂಸ್ಕೃತಿಕ ಟ್ರಸ್ಟ್ ಹಾಗೂ ಶ್ರೀ ನೇತಾಜಿ ಪತ್ತಿನ ಸಹಕಾರ ಸಂಘ ಸಹಯೋಗದೊಂದಿಗೆ ನಗರದ ನೇತಾಜಿ ಸಹಕಾರಿಯ ಭವನದ ಸಭಾಂಗಣದಲ್ಲಿ 30 ದಿನಗಳ ಕಾಲ ಉಚಿತ ಯೋಗಾಸನ ಪ್ರಾಣಾಯಾಮ ಧ್ಯಾನ ಶಿಬಿರವನ್ನು ಜೂನ್ 01ರಿಂದ 30ರವರೆಗೆ ಬೆಳಿಗ್ಗೆ 5:30 ರಿಂದ 7ಗಂಟೆಯವರೆಗೆ ನಡೆಯುತ್ತದೆ. ಟ್ರಸ್ಟ್ ಅಧ್ಯಕ್ಷ ಕೆ.ಎಂ.ರಾಜಣ್ಣ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ನಗರದಲ್ಲಿ ವಾಸಿಸುವ ಸಾರ್ವಜನಿಕರ ಮತ್ತು ಮಹಿಳೆಯರ ಜೀವನದಲ್ಲಿ ಅತಿ ಚಿಕ್ಕ ವಯಸ್ಸಿಗೆ ಆಹಾರ ಪದ್ಧತಿಯ ಬದಲಾವಣೆಯಲ್ಲಿ ಬಿ.ಪಿ, ಶುಗರ್, ಕೀಲು ನೋವು, ಶ್ವಾಸಕೋಶ, ಹೃದಯದ ತೊಂದರೆ, ಮೂತ್ರಪಿಂಡದ ಖಾಯಿಲೆ ಸೇರಿದಂತೆ ಹಲವು ಕಾಯಿಲೆಗಳಿಗೆ ತುತ್ತಾಗಿ, ಮಾನಸಿಕ ಒತ್ತಡ ಮುಂತಾದ ರೋಗಗಳಿಗೆ ಯೋಗಾಭ್ಯಾಸ ಉತ್ತಮವಾಗಿದ್ದು, ಮನುಷ್ಯನ ಜೀವ ಮತ್ತು ದೇಹಕ್ಕೆ ಉತ್ತಮ ವ್ಯಾಯಾಮವಾಗಿದೆ ಆದ್ದರಿಂದ ನಗರ ಮತ್ತು ತಾಲೂಕಿನ ಸಾರ್ವಜನಿಕರು ಈ ಉಚಿತ ಶಿಬಿರದಲ್ಲಿ ಪಾಲ್ಗೊಳ್ಳುವಂತೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ…

Read More

ತುಮಕೂರು: ನೇರಳೆಹಣ್ಣು ಕೀಳಲು ಹೋದ ಒಂದೇ ಕುಟುಂಬದ ಮೂವರು ಮಕ್ಕಳು ಧಾರುಣವಾಗಿ ಸಾವನ್ನಪ್ಪಿರುವ ಘಟನೆ ಪಾವಗಡ ತಾಲ್ಲೂಕಿನ ನಾರೆನಾಗೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ಮೃತ ಮಕ್ಕಳನ್ನು ನಾರೆನಾಗೇನಹಳ್ಳಿ ಗ್ರಾಮದ ಕಲ್ಪನ ಹಾಗೂ ಅಜಯ್ ರೆಡ್ಡಿ ಎಂಬುವರ ಮಕ್ಕಳಾದ ಸುಗುಣಕರರೆಡ್ಡಿ (10), ಧನುಷ್ ರೆಡ್ಡಿ (8) ಹಾಗೂ ದೇವಿ ಅವರ ಪುತ್ರನಾದ ಸುದರ್ಶನರೆಡ್ಡಿ (10) ಎಂದು ಗುರುತಿಸಲಾಗಿದೆ. ಈ ಚಿಕ್ಕ ಮಕ್ಕಳು ಮಧ್ಯಾಹ್ನದ ವೇಳೆ ಗ್ರಾಮದ ಸಮೀಪವಿರುವ ತೋಟವೊಂದರಲ್ಲಿ ನೇರಳೆ ಮರಗಳ ಬಳಿ ಹೋಗಿದ್ದಾರೆ. ಮರದಲ್ಲಿದ್ದ ಹಣ್ಣು ತಿಂದ ಬಳಿಕ ನೀರು ಕುಡಿಯಲು ಶೇಖರಣೆ ಮಾಡಿದ್ದ ವಾಟರ್ ಟ್ಯಾಂಕ್ ಬಳಿ ಹೋಗಿ ಅಲ್ಲಿ ಕಾಲು ಜಾರಿ ವಾಟರ್ ಟ್ಯಾಂಕ್‌ ನೊಳಕ್ಕೆ ಬಿದ್ದು ಸಾವನ್ನಪ್ಪಿದ್ದಾರೆ. ಈ ಮೂವರು ಮಕ್ಕಳ ಸುದ್ದಿ ತಿಳಿದ ಗ್ರಾಮಸ್ಥರು ಮಕ್ಕಳ ಮುಖವನ್ನು ನೋಡಿ ಕಣ್ಣೀರಿಟ್ಟರು. ಇನ್ನು ಮಕ್ಕಳ ಹೆತ್ತ ತಂದೆ ತಾಯಿಗಳ ಗೋಳು ಹೇಳತೀರದಾಗಿತ್ತು. ಈ ಬಗ್ಗೆ ರೊದ್ದಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೈಕ್‌ ಗಳ ಡಿಕ್ಕಿ ಸಾವು: ಎರಡು ದ್ವಿಚಕ್ರ…

Read More

ತುಮಕೂರು: ಹಾಲೆನಹಳ್ಳಿ ಪಂಚಾಯಿತಿಯ ಮುಗಿಲು ಯುವಜನ ಸಂಘದ ವತಿಯಿಂದ ಹೊಸ ಬಡಾವಣೆಯಲ್ಲಿರುವ ಮಕ್ಕಳಿಗೆ ಮೊಬೈಲ್ ಬಳಕೆ, ಪರಿಣಾಮ ಕುರಿತು ಅರಿವು ಮೂಡಿಸುವ ಕಿರುಚಿತ್ರ ಪ್ರದರ್ಶನವನ್ನು ಆಯೋಜಿಸಲಾಗಿತ್ತು. ಕಿರು ಚಿತ್ರವನ್ನು ವೀಕ್ಷಿಸಿದ ನಂತರ ಮಕ್ಕಳೊಂದಿಗೆ ಮೊಬೈಲ್ ಅನ್ನು ಸಕಾರಾತ್ಮಕವಾಗಿ ಬಳಸುವುದು ಹೇಗೆ ಹಾಗೂ ಗೇಮ್ ಗಳಿಗೆ ಹೆಚ್ಚು ಅಡಿಕ್ಟಾಗುವುದರಿಂದ ದೈಹಿಕ ಮತ್ತು ಮಾನಸಿಕವಾಗಿ ಆಗುವ ತೊಂದರೆಗಳ ಕುರಿತು ಚರ್ಚೆ ಮಾಡಲಾಯಿತು. ಮೊಬೈಲ್ ಬಳಸುವಾಗ ಸಾಮಾಜಿಕ ಜಾಲತಾಣಗಳಾದ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್‌ಗಳನ್ನು ವಹಿಸಬೇಕಾದ ಎಚ್ಚರಿಕೆಗಳ ಕುರಿತು ಮಕ್ಕಳೊಂದಿಗೆ ಸಂವಾದ ನಡೆಸಲಾಯಿತು. ಈ ಕಾರ್ಯಕ್ರಮದಲ್ಲಿ ಮುಗಿಲು ಯುವಜನ ಸಂಘದ ಶಹತಾಜ್, ಲಕ್ಷ್ಮಿ, ಲಿಖಿತ, ಅಂಕಿತ, ಅಮೀನಾ, ರಮ್ಯಾ, ವಿದ್ಯಾ, ಮಮತಾ ಹಾಗೂ ನವ್ಯದಿಶ ಸಂಸ್ಥೆಯ ಸಿಎಂಎಸ್ ಗೌಡ, ಅಶ್ವಿನಿ ಎಂ., ಮಕ್ಕಳು ಇದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

Read More