Subscribe to Updates
Get the latest creative news from FooBar about art, design and business.
- ಬೆಳೆ ನಷ್ಟ ತಪ್ಪಿಸಲು ಫಸಲ್ ಬಿಮಾ ತಪ್ಪದೇ ನೋಂದಾಯಿಸಿ: ರೈತರಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮನವಿ
- ತುಮಕೂರು: ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ
- ಹಡಪದ ಅಪ್ಪಣ್ಣರ ತತ್ವಾದರ್ಶಗಳು ಸಮಾಜಕ್ಕೆ ದಾರಿದೀಪ: ತಹಶೀಲ್ದಾರ್ ಮೋಹನಕುಮಾರಿ
- ಸಂತಪೂರ ಗ್ರಾಮ ಪಂಚಾಯತಿಯಲ್ಲಿ ‘ನನ್ನ ಸ್ವತ್ತು ನನ್ನ ಹಕ್ಕು’ ಅಭಿಯಾನಕ್ಕೆ ಚಾಲನೆ
- ಡ್ರಗ್ಸ್ ಮುಕ್ತ ಕರ್ನಾಟಕಕ್ಕೆ ಸಂಕಲ್ಪ: ಕೊರಟಗೆರೆಯಲ್ಲಿ ಪೊಲೀಸ್ ಇಲಾಖೆಯಿಂದ ಬೃಹತ್ ಜಾಗೃತಿ ಅಭಿಯಾನ
- ಕುಣಿಗಲ್: ಗ್ರಾಮ ದೇವತೆ ಜಾತ್ರಾ ಮಹೋತ್ಸವದ ಜಮಾ–ಖರ್ಚು ವಿವರ ಘೋಷಣೆ
- ಬೀದರ್ ಜಿಲ್ಲೆಯನ್ನು ಬರಪೀಡಿತ ಎಂದು ಘೋಷಿಸಲು ಭಾಲ್ಕಿ ವಕೀಲರ ಸಂಘ ಆಗ್ರಹ
- ಬಡವರಿಗೆ ಮಾಡುವ ಸಹಾಯ ದೇವರಿಗೆ ಸಾಲ ಕೊಟ್ಟಂತೆ: ಇಮ್ಯಾನುವೆಲ್ ದರ್ಬಾರೆ
Author: admin
ತುಮಕೂರು: ನಗರದ ಬನಶಂಕರಿಯಲ್ಲಿ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ ಅಣ್ಣನೇ ತನ್ನ ಒಡಹುಟ್ಟಿದ ತಮ್ಮನನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ನಡೆದಿದೆ. ಅಚ್ಚರಿಯೆಂದರೆ, ಈ ಕೊಲೆ ಪ್ರಕರಣವನ್ನು ಮುಚ್ಚಿಹಾಕಲು ತಂದೆ ಮತ್ತು ಮಗ ಹೊಸ ಕಥೆ ಕಟ್ಟಿದ್ದರಾದರೂ, ವೈದ್ಯರ ಸಮಯಪ್ರಜ್ಞೆಯಿಂದ ಸತ್ಯ ಬಯಲಾಗಿದೆ. ತುಮಕೂರಿನ ಬನಶಂಕರಿ ನಿವಾಸಿಗಳಾದ ನವೀನ್ ಹಾಗೂ ಸ್ಟಾಲಿನ್ ಇಬ್ಬರು ಸಹೋದರರು. ಇವರ ನಡುವೆ ಯಾವುದೋ ವಿಷಯಕ್ಕೆ ಗಲಾಟೆ ನಡೆದಿದೆ. ಗಲಾಟೆ ತಾರಕಕ್ಕೇರಿ ಅಣ್ಣ ನವೀನ್, ತಮ್ಮ ಸ್ಟಾಲಿನ್ ಗೆ ಚಾಕುವಿನಿಂದ ಇರಿದಿದ್ದಾನೆ. ತೀವ್ರವಾಗಿ ಗಾಯಗೊಂಡಿದ್ದ ಸ್ಟಾಲಿನ್ ನನ್ನು ತಂದೆ ಜಾನ್ ಪಾಲ್ ಆಸ್ಪತ್ರೆಗೆ ದಾಖಲಿಸಿದ್ದರಾದರೂ, ಚಿಕಿತ್ಸೆ ಫಲಕಾರಿಯಾಗದೆ ಸ್ಟಾಲಿನ್ ಮೃತಪಟ್ಟಿದ್ದಾನೆ. ತನ್ನ ಮಗನೇ ಇನ್ನೊಬ್ಬ ಮಗನನ್ನು ಕೊಲೆ ಮಾಡಿದ್ದಾನೆ ಎಂಬ ವಿಷಯ ಯಾರಿಗೂ ತಿಳಿಯಬಾರದೆಂದು ತಂದೆ ಜಾನ್ ಪಾಲ್ ಸಂಚು ರೂಪಿಸಿದ್ದರು. ಸ್ಟಾಲಿನ್ ಮನೆಯಲ್ಲಿ ಕುಸಿದು ಬಿದ್ದಾಗ ಹೊಟ್ಟೆಗೆ ಗಾಯವಾಗಿದೆ ಎಂದು ಅವರು ವೈದ್ಯರಿಗೆ ಮತ್ತು ಪೊಲೀಸರಿಗೆ ತಪ್ಪು ಮಾಹಿತಿ ನೀಡಿದ್ದರು. ಆದರೆ, ಗಾಯದ ಸ್ವರೂಪವನ್ನು…
ತುಮಕೂರು: ಗುಣಮಟ್ಟದ ಹಾಲು ಶೇಖರಣೆ ಮಾಡುತ್ತಿರುವ ತುಮಕೂರು ಜಿಲ್ಲೆ ರಾಜ್ಯದಲ್ಲೇ ಪ್ರಥಮ ಸ್ಥಾನಗಳಿಸಿದೆ ಎಂದು ತುಮಕೂರು ಜಿಲ್ಲಾ ಹಾಲು ಒಕ್ಕೂಟದ ಅಧ್ಯಕ್ಷರು ಮತ್ತು ಪಾವಗಡ ಶಾಸಕರಾದ ಎಚ್.ವಿ.ವೆಂಕಟೇಶ್ ಹೇಳಿದರು. ತಾಲ್ಲೂಕಿನ ಅರೇಮಲ್ಲೇನಹಳ್ಳಿ ರಂಗನಾಥ ಸ್ವಾಮಿ ಬೆಟ್ಟದಲ್ಲಿ ತುಮಕೂರು ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘ, ಜಿಲ್ಲಾ ರೈತರ ಮತ್ತು ಎಂ.ಪಿ.ಸಿ.ಎಸ್ ನೌಕರರ ಮತ್ತು ಸಾಮಾನ್ಯ ಕಲ್ಯಾಣ ಟ್ರಸ್ಟ್ ಮಲ್ಲಸಂದ್ರ, ತುಮಕೂರು ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ, ಆದಿಚುಂಚನಗಿರಿ ಆಸ್ಪತ್ರೆ, ಸಿದ್ದಗಂಗಾ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಅರೇಮಲ್ಲೇನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ಸಹಯೋಗದಲ್ಲಿ ನಡೆದ ಆರೋಗ್ಯ ತಪಾಸಣಾ ಹಾಗೂ ರಕ್ತದಾನ ಶಿಬಿರ ಕಾರ್ಯಕ್ರಮದಲ್ಲಿ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಿಸಿ ಮಾತನಾಡಿದರು. ತಾಲೂಕಿನ ಹಾಲು ಸಹಕಾರ ಸಹಕಾರ ಸಂಘಗಳ ನಿರ್ದೇಶಕರೂ, ಹಾಲಿ ಕೆಎಂಎಫ್ ನ ನಿರ್ದೇಶಕರಾಗಿರುವ ಸಿ.ವಿ.ಮಹಲಿಂಗಯ್ಯನವರು ಹಾಲು ಸಹಕಾರ ಸಂಘದಲ್ಲಿ ಉತ್ತಮ ತಾಲೂಕಿನಲ್ಲಿ ಉತ್ತಮ ಹೆಸರುಗಳಿಸಿದ್ದಾರೆ. ಅವರನ್ನೇ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಕ್ಯಾಂಡಿಡೇಟ್ ಮಾಡಲು ಜಿಲ್ಲಾ ಉಸ್ತುವಾರಿ…
ನಮ್ಮ ತುಮಕೂರು: ಶ್ರೀ ಶಿವಕುಮಾರ್ ಸ್ವಾಮೀಜಿಯವರು ಕೇವಲ ಒಬ್ಬ ಸಂತನಲ್ಲ, ಬದಲಾಗಿ ನಮ್ಮ ರಾಷ್ಟ್ರದ ಆತ್ಮಕ್ಕೆ ಸ್ವರೂಪ ನೀಡಿದ ಮಹಾನ್ ಚೇತನ. ಅವರ ಭೌತಿಕ ಶರೀರ ಇಂದು ನಮ್ಮೊಂದಿಗಿಲ್ಲದಿದ್ದರೂ, ಅವರ ಅಧ್ಯಾತ್ಮಿಕ ಶಕ್ತಿ ಸಮಾಜವನ್ನು ಸದಾ ಮುನ್ನಡೆಸುತ್ತಿದೆ ಎಂದು ಭಾರತದ ರಾಷ್ಟ್ರಪತಿಗಳಾದ ದ್ರೌಪದಿ ಮುರ್ಮು ಸ್ಮರಿಸಿದರು. ನಡೆದಾಡುವ ದೇವರೆಂದೇ ಖ್ಯಾತರಾಗಿದ್ದ ಪರಮಪೂಜ್ಯ ಶ್ರೀ ಶ್ರೀ ಶ್ರೀ ಶಿವಕುಮಾರ್ ಸ್ವಾಮೀಜಿಯವರ 119ನೇ ಜನ್ಮದಿನೋತ್ಸವ ಹಾಗೂ ಗುರು ವಂದನಾ ಕಾರ್ಯಕ್ರಮದ ಅಂಗವಾಗಿ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದ ಅವರು ಮೊದಲು ಶ್ರೀ ಶಿವಕುಮಾರ್ ಸ್ವಾಮೀಜಿಯವರ ಗದ್ದುಗೆಗೆ ವಿಶೇಷ ಪೂಜೆ ಸಲ್ಲಿಸಿ ನಮನಗಳನ್ನು ಅರ್ಪಿಸಿದರು. ನಂತರ ಮಠದ ಆವರಣದಲ್ಲಿ ನಡೆದ ಸಭಾ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಅವರು, ಶ್ರೀಗಳ ಸಾಮಾಜಿಕ ಮತ್ತು ಶೈಕ್ಷಣಿಕ ಕ್ರಾಂತಿಯನ್ನು ಮುಕ್ತಕಂಠದಿಂದ ಶ್ಲಾಘಿಸಿದರು. ಸಿದ್ದಗಂಗಾ ಮಠವು ಸಾವಿರಾರು ಗ್ರಾಮೀಣ ಮಕ್ಕಳಿಗೆ ಉಚಿತವಾಗಿ ಶಿಕ್ಷಣ, ವಸತಿ ಮತ್ತು ಅನ್ನದಾಸೋಹವನ್ನು ನೀಡುತ್ತಿರುವುದು ಶ್ಲಾಘನೀಯ. “ಶಿಕ್ಷಣವೇ ಅಭಿವೃದ್ಧಿಯ ಕನ್ನಡಿ” ಎಂಬ ಶ್ರೀಗಳ ತತ್ವದಂತೆ ಮಠವು ಪ್ರಾಥಮಿಕ ಶಾಲೆಯಿಂದ…
ತುಮಕೂರು: ನಗರದ ಹೊರವಲಯದ ಅಂತರಸನಹಳ್ಳಿ ಕೆಳ ಸೇತುವೆ (Underpass) ಬಳಿ ಕಳೆದ ಒಂದು ವಾರದಿಂದ ಕಲುಷಿತ ನೀರು ರಸ್ತೆಯಲ್ಲೇ ಹರಿಯುತ್ತಿದ್ದು, ಸಾರ್ವಜನಿಕರು ಹಾಗೂ ವಾಹನ ಸವಾರರು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ಅಂತರಸನಹಳ್ಳಿ ಸೇತುವೆ ಬಳಿಯ ರಸ್ತೆ ಗುಂಡಿಗಳಲ್ಲಿ ಕೊಳಚೆ ನೀರು ನಿಂತು ಕೆಸರುಮಯವಾಗಿದೆ. ಇದರಿಂದಾಗಿ ಈ ಮಾರ್ಗದಲ್ಲಿ ಸಂಚರಿಸುವ ನೂರಾರು ವಾಹನಗಳು ಗಂಟೆಗಟ್ಟಲೆ ಸಂಚಾರ ದಟ್ಟಣೆಯಲ್ಲಿ ಸಿಲುಕಿಕೊಳ್ಳುವಂತಾಗಿದೆ. ಈ ಭಾಗದಲ್ಲಿ ತರಕಾರಿ, ಹಣ್ಣು ಮತ್ತು ಹೂವಿನ ಮಾರುಕಟ್ಟೆ ಇರುವುದರಿಂದ ಬೆಳಗಿನ ಜಾವದಿಂದಲೇ ರೈತರು ಮತ್ತು ವ್ಯಾಪಾರಿಗಳ ಓಡಾಟ ಹೆಚ್ಚಿರುತ್ತದೆ. ರಸ್ತೆಯ ಅವ್ಯವಸ್ಥೆಯಿಂದಾಗಿ ರೈತರು ಅಧಿಕಾರಿಗಳಿಗೆ ಶಾಪ ಹಾಕುತ್ತಾ ಸಂಚರಿಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಕೊರಟಗೆರೆ, ಮಧುಗಿರಿ ಕಡೆಗೆ ಸಂಚರಿಸುವ ಕೆಎಸ್ಆರ್ಟಿಸಿ, ಖಾಸಗಿ ಬಸ್ ಗಳು ಹಾಗೂ ಶಾಲಾ-ಕಾಲೇಜು ವಾಹನಗಳು ಇಲ್ಲಿನ ಟ್ರಾಫಿಕ್ ಜಾಮ್ನಿಂದಾಗಿ ಹೈರಾಣಾಗುತ್ತಿವೆ. ರಾಜಕಾಲುವೆ ಅತಿಕ್ರಮಣಗೊಂಡಿರುವುದು ಹಾಗೂ ಮಳೆ ನೀರು ಹರಿದು ಹೋಗಲು ಸಮರ್ಪಕ ವ್ಯವಸ್ಥೆ ಇಲ್ಲದಿರುವುದು ಈ ಸಮಸ್ಯೆಗೆ ಮೂಲ ಕಾರಣ ಎನ್ನಲಾಗಿದೆ. ಬೇಸಿಗೆ ಕಾಲದಲ್ಲೂ ರಸ್ತೆಯಲ್ಲಿ ನೀರು ನಿಂತಿರುವುದು…
ತುಮಕೂರು: ನಗರದ ಐತಿಹಾಸಿಕ ಸಿದ್ಧಗಂಗಾ ಮಠಕ್ಕೆ ಬುಧವಾರ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಭೇಟಿ ನೀಡಿದರು. ಈ ಸಂದರ್ಭದಲ್ಲಿ ಅವರು ಲಿಂಗೈಕ್ಯ ‘ನಡೆದಾಡುವ ದೇವರು’ ಶ್ರೀ ಶಿವಕುಮಾರ ಸ್ವಾಮೀಜಿಯವರ ಗದ್ದುಗೆಗೆ ಭಕ್ತಿಯಿಂದ ಪೂಜೆ ಸಲ್ಲಿಸಿ, ಗೌರವ ನಮನಗಳನ್ನು ಅರ್ಪಿಸಿದರು. ಗದ್ದುಗೆ ಪೂಜೆಯ ನಂತರ ರಾಷ್ಟ್ರಪತಿಗಳು ಮಠದ ಮಕ್ಕಳನ್ನು ಉದ್ದೇಶಿಸಿ ಮಾತನಾಡಿದರು. ಮಠದ ದಾಸೋಹ ಮತ್ತು ಶಿಕ್ಷಣ ಸೇವೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ರಾಜ್ಯಪಾಲ ಥಾವರಚಂದ್ ಗೆಹಲೋತ್, ಸಿದ್ಧಗಂಗಾ ಮಠದ ಈಗಿನ ಅಧ್ಯಕ್ಷರಾದ ಶ್ರೀ ಸಿದ್ಧಲಿಂಗ ಸ್ವಾಮೀಜಿ, ಕೇಂದ್ರ ಜಲ ಶಕ್ತಿ ಹಾಗೂ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು. ರಾಷ್ಟ್ರಪತಿಗಳ ಭೇಟಿಯ ಹಿನ್ನೆಲೆಯಲ್ಲಿ ಮಠದ ಆವರಣದಲ್ಲಿ ಬಿಗಿ ಪೊಲೀಸ್ ಭದ್ರತೆಯನ್ನು ಏರ್ಪಡಿಸಲಾಗಿತ್ತು. 3 ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳು, 8 ಡಿವೈಎಸ್ಪಿಗಳು, 29 ಸರ್ಕಲ್ ಇನ್ಸ್ಪೆಕ್ಟರ್ಗಳು ಸೇರಿದಂತೆ ಸುಮಾರು 1,181ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ಭದ್ರತೆಗಾಗಿ ನಿಯೋಜಿಸಲಾಗಿತ್ತು. ಮಠಕ್ಕೆ ಆಗಮಿಸುವ ಭಕ್ತರಿಗಾಗಿ ಬೆಳಿಗ್ಗೆಯಿಂದಲೇ…
ಸಂಪಾದಕೀಯ ಭಾರತದ ಆಧ್ಯಾತ್ಮಿಕ ಹಾಗೂ ಸಾಮಾಜಿಕ ಇತಿಹಾಸದಲ್ಲಿ ಕೆಲವರು ಮಾತ್ರ ತಮ್ಮ ಬದುಕಿನ ಮೂಲಕವೇ ಒಂದು ಯುಗವನ್ನು ರೂಪಿಸುತ್ತಾರೆ. ಅಂತಹ ಅಪರೂಪದ ಮಹನೀಯರಲ್ಲಿ ಪ್ರಮುಖರಾಗಿರುವ ಶಿವಕುಮಾರ ಸ್ವಾಮೀಜಿ ಅವರು, “ನಡೆದಾಡುವ ದೇವರು” ಎಂಬ ಗೌರವಕ್ಕೆ ಪಾತ್ರರಾಗಿರುವುದು ಅವರ ಸೇವೆಯ ಮಹತ್ವಕ್ಕೆ ಸಾಕ್ಷಿ. ಕಾಯಕಯೋಗಿಯಾಗಿ, ಅನ್ನ—ಅಕ್ಷರ–ಆಶ್ರಯ ದಾಸೋಹದ ಮಹಾನ್ ಹರಿಕಾರರಾಗಿದ್ದ ಅವರು, ತಮ್ಮ ಜೀವನದ ಪ್ರತಿಯೊಂದು ಕ್ಷಣವನ್ನೂ ಮಾನವ ಸೇವೆಗೆ ಅರ್ಪಿಸಿದರು. ಸಿದ್ಧಗಂಗಾ ಮಠದ ಅಂಗಳದಲ್ಲಿ ಸಾವಿರಾರು ವಿದ್ಯಾರ್ಥಿಗಳಿಗೆ ಅನ್ನ, ವಾಸಸ್ಥಳ ಮತ್ತು ಶಿಕ್ಷಣ ಒದಗಿಸುವ ಮೂಲಕ ಅವರು ನಿರ್ಮಿಸಿದ ಸೇವಾ ಪರಂಪರೆ, ಕೇವಲ ಒಂದು ಮಠದ ಕಾರ್ಯವಲ್ಲ– ಅದು ಒಂದು ಸಾಮಾಜಿಕ ಕ್ರಾಂತಿ. ಅವರ ಜೀವನವು ನಮಗೆ ಒಂದು ಮಹತ್ವದ ಪಾಠವನ್ನು ಕಲಿಸುತ್ತದೆ: ಸೇವೆ ಎಂದರೆ ಪ್ರಚಾರವಲ್ಲ, ಅದು ತ್ಯಾಗ. ಇಂದಿನ ಕಾಲದಲ್ಲಿ ನಾವು ಸೇವೆಯನ್ನೂ ಪ್ರದರ್ಶನದ ರೂಪದಲ್ಲಿ ಕಾಣುತ್ತಿರುವಾಗ, ಶಿವಕುಮಾರ ಸ್ವಾಮೀಜಿ ಅವರ ನಿಸ್ವಾರ್ಥ ಸೇವೆ ನಮಗೆ ನಿಜವಾದ ದಾರಿದೀಪವಾಗಿದೆ. ಅವರು ಯಾವುದೇ ಪ್ರಶಂಸೆಯನ್ನು ಬಯಸಲಿಲ್ಲ, ಯಾವುದೇ ಪ್ರಚಾರವನ್ನು ಅರಸಲಿಲ್ಲ.…
ತುಮಕೂರು: ತ್ರಿವಿಧ ದಾಸೋಹಿ, ಕರ್ನಾಟಕ ರತ್ನ ಲಿಂಗೈಕ್ಯ ಡಾ.ಶಿವಕುಮಾರ ಸ್ವಾಮೀಜಿಯವರ 119ನೇ ಜನ್ಮ ದಿನಾಚರಣೆಗೆ ಸಿದ್ಧಗಂಗಾ ಮಠವು ಸಂಪೂರ್ಣವಾಗಿ ಸಜ್ಜಾಗಿದೆ. ಬುಧವಾರ ನಡೆಯಲಿರುವ ಈ ಮಹೋತ್ಸವದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಭಾಗವಹಿಸುತ್ತಿರುವುದು ಈ ಬಾರಿಯ ಆಚರಣೆಯ ವಿಶೇಷತೆಯಾಗಿದೆ. ಜನ್ಮದಿನೋತ್ಸವದ ಅಂಗವಾಗಿ ಸಿದ್ಧಗಂಗಾ ಮಠದ ಆವರಣವನ್ನು ತಳಿರು ತೋರಣ ಮತ್ತು ಸ್ವಾಮೀಜಿಯವರ ಬೃಹತ್ ಕಟೌಟ್ಗಳಿಂದ ಶೃಂಗರಿಸಲಾಗಿದೆ. ನಾಡಿನ ಮೂಲೆ ಮೂಲೆಗಳಿಂದ ಸಹಸ್ರಾರು ಭಕ್ತರು ಈಗಾಗಲೇ ಮಠದತ್ತ ಆಗಮಿಸುತ್ತಿದ್ದು, ಎಲ್ಲೆಲ್ಲೂ ಶಿವಕುಮಾರ ಸ್ವಾಮೀಜಿಯವರ ನಾಮಸ್ಮರಣೆ ಮೊಳಗುತ್ತಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಬುಧವಾರ ಬೆಳಿಗ್ಗೆ 11 ಗಂಟೆಗೆ ಮಠಕ್ಕೆ ಆಗಮಿಸಲಿದ್ದು, ಮಧ್ಯಾಹ್ನ 12:30ರ ವರೆಗೆ ವೇದಿಕೆ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಈ ವೇಳೆ ಅವರು ಮಠದ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಲಿದ್ದಾರೆ. ರಾಷ್ಟ್ರಪತಿಗಳ ಭೇಟಿಯ ಹಿನ್ನೆಲೆಯಲ್ಲಿ ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು, ಸಂಚಾರ ವ್ಯವಸ್ಥೆಯಲ್ಲಿ ಕೆಲವು ಬದಲಾವಣೆಗಳನ್ನು ಮಾಡಲಾಗಿದೆ. ಬೆಳಿಗ್ಗೆ 10ರಿಂದ ಮಧ್ಯಾಹ್ನ 12:30ರ ವರೆಗೆ ಬಿ.ಎಚ್. ರಸ್ತೆಯಲ್ಲಿ ವಾಹನ ಸಂಚಾರ ನಿರ್ಬಂಧಿಸಲಾಗಿದೆ. ಭಕ್ತರು…
ಕೊರಟಗೆರೆ: ಸರ್ಕಾರವು ಕಳೆದ 26 ವರ್ಷಗಳಿಂದ ಪರವಾನಗಿ ಭೂಮಾಪಕರಿಂದ (Licensed Surveyors) ಕೆಲಸ ಮಾಡಿಸಿಕೊಳ್ಳುತ್ತಿದೆಯಾದರೂ, ಅವರಿಗೆ ಯಾವುದೇ ರೀತಿಯ ಕನಿಷ್ಠ ಸೌಲಭ್ಯ ಅಥವಾ ಉದ್ಯೋಗ ಭದ್ರತೆ ನೀಡದೆ ಅನ್ಯಾಯ ಮಾಡುತ್ತಿದೆ ಎಂದು ತಾಲ್ಲೂಕು ಪರವಾನಗಿ ಭೂಮಾಪಕರ ಸಂಘದ ಅಧ್ಯಕ್ಷ ಡಿ. ನಾರಾಯಣರಾಜು ಆರೋಪಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಭೂಮಾಪಕರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಸರ್ಕಾರದ ಗಮನ ಸೆಳೆದರು. ರೈತರು ಜಮೀನಿನ ಕ್ರಯ, ದಾನ ಸೇರಿದಂತೆ ವಿವಿಧ ಭೂಮಾಪನ ಕಾರ್ಯಗಳಿಗಾಗಿ ಸರ್ಕಾರಕ್ಕೆ ಸಾವಿರಾರು ರೂಪಾಯಿ ಶುಲ್ಕ ಪಾವತಿಸುತ್ತಾರೆ. ಆದರೆ, ಸರ್ಕಾರ ಈ ಶುಲ್ಕದ ಬಹುಭಾಗವನ್ನು (ಸುಮಾರು ಮುಕ್ಕಾಲು ಭಾಗ) ತನ್ನಲ್ಲೇ ಇಟ್ಟುಕೊಂಡು, ಕೆಲಸ ಮಾಡುವ ಭೂಮಾಪಕರಿಗೆ ಕೇವಲ ಕಾಲು ಭಾಗದಷ್ಟು ಮಾತ್ರ ನೀಡುತ್ತಿದೆ. ರೈತರ ಜಮೀನುಗಳಿಗೆ ತೆರಳಿ ಸರ್ವೆ ಮಾಡಲು ತಗಲುವ ಪ್ರಯಾಣ ವೆಚ್ಚವನ್ನು ಭೂಮಾಪಕರೇ ಭರಿಸಬೇಕಾಗಿದೆ. ಸರ್ಕಾರದಿಂದ ಯಾವುದೇ ಸಾರಿಗೆ ಸೌಲಭ್ಯ ಅಥವಾ ಭತ್ಯೆ ಸಿಗುತ್ತಿಲ್ಲ. ಕಳೆದ ಎರಡೂವರೆ ದಶಕಗಳಿಂದ ಸೇವೆ ಸಲ್ಲಿಸುತ್ತಿದ್ದರೂ, ಈ ಕೆಲಸಕ್ಕೆ ಯಾವುದೇ ಕಾಯಂ ಭದ್ರತೆ ಇಲ್ಲ.…
ಬಾಗಲಕೋಟೆ: ಮುಂಬರುವ ಚುನಾವಣೆಯ ಹಿನ್ನೆಲೆಯಲ್ಲಿ ಬಾಗಲಕೋಟೆಯಲ್ಲಿ ಕಾಂಗ್ರೆಸ್ ಪರ ಮತಬೇಟೆ ಆರಂಭಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಉಮೇಶ್ ಮೇಟಿ ಅವರ ಪರವಾಗಿ ಭರ್ಜರಿ ಪ್ರಚಾರ ನಡೆಸಿದರು. ಈ ಸಂದರ್ಭದಲ್ಲಿ ಅವರು ಸ್ಥಳೀಯರಿಗೆ ಹಲವು ಪ್ರಮುಖ ಭರವಸೆಗಳನ್ನು ನೀಡಿದ್ದಾರೆ. ತಾವು ಪ್ರಚಾರ ನಡೆಸಿದ ಕಡೆಯಲ್ಲೆಲ್ಲಾ ರೈತರು, ಮಹಿಳೆಯರು, ದಲಿತರು ಹಾಗೂ ಅಲ್ಪಸಂಖ್ಯಾತರು ಸೇರಿದಂತೆ ಎಲ್ಲಾ ವರ್ಗದ ಬಡ ಜನರು ಉಮೇಶ್ ಮೇಟಿ ಅವರನ್ನು ಗೆಲ್ಲಿಸುವ ಸಂಕಲ್ಪ ಮಾಡಿದ್ದಾರೆ ಎಂದು ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು ಮುಗಳೊಳ್ಳಿ ಸುತ್ತಮುತ್ತಲಿನ ಗ್ರಾಮಗಳ ಜನರು ಎದುರಿಸುತ್ತಿರುವ ರಸ್ತೆ ಸಮಸ್ಯೆಯ ಬಗ್ಗೆ ಗಮನಹರಿಸಿದ ಸಿಎಂ, ಅರಣ್ಯ ಇಲಾಖೆಯೊಂದಿಗೆ (Forest Department) ಚರ್ಚಿಸಿ ಬಾಕಿ ಇರುವ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸಿಕೊಡುವುದಾಗಿ ಭರವಸೆ ನೀಡಿದರು. ಈ ರಸ್ತೆ ನಿರ್ಮಾಣವಾಗುವುದರಿಂದ ಸುಮಾರು 10 ರಿಂದ 15 ಹಳ್ಳಿಗಳಿಗೆ ಉತ್ತಮ ಸಂಪರ್ಕ ವ್ಯವಸ್ಥೆ ಕಲ್ಪಿಸಿದಂತಾಗುತ್ತದೆ. ಈ ಕೆಲಸವನ್ನು ಕಾಂಗ್ರೆಸ್ ಸರ್ಕಾರವೇ ಮಾಡಲಿದೆ ಎಂದು ಅವರು ಜನರಿಗೆ ಖಾತರಿ ನೀಡಿದರು. ದಿವಂಗತ ಎಚ್.ವೈ. ಮೇಟಿ ಅವರ ಆತ್ಮಕ್ಕೆ…
ಮಂಡ್ಯ: ಇಸ್ರೇಲ್, ಇರಾನ್ ಮತ್ತು ಅಮೆರಿಕ ನಡುವೆ ನಡೆಯುತ್ತಿರುವ ಯುದ್ಧದ ಭೀತಿಯ ಹಿನ್ನೆಲೆಯಲ್ಲಿ, ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರು ಮಂಡ್ಯದಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಯುದ್ಧದ ಪರ ಇರುವ ರಾಷ್ಟ್ರಗಳ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧವು ಕೇವಲ ಮೂರು ದೇಶಗಳಿಗೆ ಸೀಮಿತವಾಗಿಲ್ಲ, ಇದು ಇಡೀ ಪ್ರಪಂಚಕ್ಕೆ ಯುದ್ಧದ ಭೀತಿಯನ್ನು ಹರಡಿದೆ ಎಂದು ವಾಟಾಳ್ ನಾಗರಾಜ್ ಕಳವಳ ವ್ಯಕ್ತಪಡಿಸಿದ್ದಾರೆ. ಈ ಯುದ್ಧದಲ್ಲಿ ಅಸಂಖ್ಯಾತ ಜನರು ಪ್ರಾಣ ಕಳೆದುಕೊಂಡಿದ್ದಾರೆ. ಮನುಷ್ಯತ್ವ ಮತ್ತು ಮಾನವ ಕುಲಕ್ಕೆ ಬೆಲೆಯೇ ಇಲ್ಲದಂತಾಗಿದೆ. ಯುದ್ಧದಿಂದಾಗಿ ದೇಶಗಳು ಆರ್ಥಿಕವಾಗಿ ಕುಸಿದು, ಬೆಲೆ ಏರಿಕೆ ಮತ್ತು ಅಸುರಕ್ಷಿತ ಭಾವನೆ ಮೂಡುತ್ತಿದೆ ಎಂದು ಅವರು ಹೇಳಿದ್ದಾರೆ. ಟ್ರಂಪ್ ನಿರ್ಧಾರಕ್ಕೆ ವಿರೋಧ: ಅಮೆರಿಕ ಅಧ್ಯಕ್ಷ ಟ್ರಂಪ್ ಅವರು ಈ ವಿಷಯದಲ್ಲಿ ಅತ್ಯಂತ ದುಡುಕಿನ ನಿರ್ಧಾರ ಕೈಗೊಂಡಿದ್ದಾರೆ. ಇರಾನ್ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ ಪ್ರಮುಖ ನಾಯಕರು ಹತರಾಗಿದ್ದು, ಇದಕ್ಕೆ ಪ್ರತಿಯಾಗಿ ಅಮೆರಿಕದ ಪ್ರಜೆಗಳು…