Subscribe to Updates
Get the latest creative news from FooBar about art, design and business.
- ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!
- ಮುಳ್ಳಯ್ಯನಗಿರಿಯಲ್ಲಿ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಟಿಟಿ: 13 ಪ್ರವಾಸಿಗರು ಅದೃಷ್ಟವಶಾತ್ ಪಾರು!
- ಥಿಯೇಟರ್ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ
- ರಾಜ್ಯದಲ್ಲಿ ಸಿಎಂ ಬದಲಾವಣೆ ಇಲ್ಲ: ಸ್ಪಷ್ಟನೆ ನೀಡಿದ ಆರ್.ವಿ.ದೇಶಪಾಂಡೆ
- ಇಂಧನ ದರ ಏರಿಕೆ: ರಾಜಕೀಯ ಮಾಡದೆ ವ್ಯಾಟ್ ಕಡಿಮೆ ಮಾಡಿ; ಸಿಎಂ ಸಿದ್ದರಾಮಯ್ಯಗೆ ಆರ್.ಅಶೋಕ್ ಒತ್ತಾಯ
- ಸಂಸ್ಕರಿಸದೆ ನದಿಗೆ ತ್ಯಾಜ್ಯ ಹರಿಸಿದರೆ ಕ್ರಿಮಿನಲ್ ಮೊಕದ್ದಮೆ: ಅರಣ್ಯ ಸಚಿವ ಈಶ್ವರ ಖಂಡ್ರೆ ಖಡಕ್ ಎಚ್ಚರಿಕೆ!
- ಬೇಸಿಗೆ ಕಾಲದಲ್ಲಿ ಲಿಂಬೆಹಣ್ಣುಗಳನ್ನು ದೀರ್ಘಕಾಲದವರೆಗೆ ತಾಜಾವಾಗಿಡುವುದು ಹೇಗೆ?
- ವಿಶ್ವದ ಅತ್ಯಂತ ದೊಡ್ಡ ಶಕ್ತಿ ತಾಯಿ: ಪರಿಷತ್ ಸದಸ್ಯ ಆರ್.ರಾಜೇಂದ್ರ ರಾಜಣ್ಣ
Author: admin
ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪದ ವಿಡಿಯೋಗಳ ಕುರಿತ ತನಿಖೆಗೆ ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡ ರಚಿಸಲು ತೀರ್ಮಾನಿಸಿದೆ. ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಅವರ ದೂರಿಗೆ ಮೇರೆಗೆ ಸಿಎಂ ಸಿದ್ದರಾಮಯ್ಯ ಅವರು ಎಸ್ ಐಟಿ ರಚನೆ ಮಾಡಿ, ತನಿಖೆ ಮಾಡುವಂತೆ ಆದೇಶಿಸಿದೆ. ಇದರ ಬೆನ್ನಲ್ಲೇ ಪ್ರಜ್ವಲ್ ರೇವಣ್ಣ ಅವರು ವಿದೇಶಕ್ಕೆ ಪರಾರಿಯಾಗಿದ್ದಾರೆ ಎಂದು ವರದಿಯಾಗಿದೆ. ಏಪ್ರಿಲ್ 26ರಂದು ಮತದಾನ ಚಲಾಯಿಸಿದ ಪ್ರಜ್ವಲ್, ಏಪ್ರಿಲ್ 27ರ ಮುಂಜಾನೆ 3 ಗಂಟೆಗೆ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದ ಮೂಲಕ ಜರ್ಮನಿಯ ಫ್ರಾಂಕ್ಫರ್ಟ್ಗೆ ತೆರಳಿದ್ದಾರೆ ಎನ್ನಲಾಗಿದೆ. ಪೆನ್ಡ್ರೈವ್ ವೈರಲ್ ಆಗಿರುವ ಹಿನ್ನಲೆ ಮುಜುಗರದಿಂದ ತಪ್ಪಿಸಿಕೊಳ್ಳಲು ವಿದೇಶಕ್ಕೆ ಪರಾರಿಯಾಗಿದ್ದಾರಾ? ಅಥವಾ ಪೂರ್ವ ನಿಯೋಜಿತ ಕಾರ್ಯಕ್ರಮದ ನಿಮಿತ್ತ ವಿದೇಶಕ್ಕೆ ಹೋದರಾ? ಎನ್ನುವ ಕುರಿತು ಚರ್ಚೆಗಳು ಆರಂಭವಾಗಿವೆ. ಪ್ರಜ್ವಲ್ ವಿರುದ್ಧ ಕೇಳಿಬಂದಿರುವ ಲೈಂಗಿಕ ದೌರ್ಜನ್ಯ ಆರೋಪಗಳ ಕುರಿತು ತನಿಖೆಗೆ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ(ಎಡಿಜಿಪಿ) ನೇತೃತ್ವದಲ್ಲಿ ಎಸ್ಐಟಿಯನ್ನು ರಾಜ್ಯ ಸರ್ಕಾರ ರಚಿಸಿದೆ. ಪ್ರಸ್ತುತ…
ಭಾರೀ ಸುಂಟರಗಾಳಿಯಿಂದಾಗಿ ಐವರು ಮೃತಪಟ್ಟಿದ್ದು, 33 ಮಂದಿ ಗಾಯಗೊಂಡಿರುವ ಘಟನೆ ದಕ್ಷಿಣ ಚೀನಾದ ಗುವಾಂಗ್’ಝನಲ್ಲಿ ನಡೆದಿದೆ. ಚೀನಾದ ಸರ್ಕಾರಿ ಮಾಧ್ಯಮ ಪ್ರಕಾರ, 19 ಮಿಲಿಯನ್ ಜನರಿರುವ ಗುವಾಂಗ್ ಝ ನಗರದಲ್ಲಿ, ಮೂರರ ತೀವ್ರತೆಯಲ್ಲಿ ಸುಂಟರಗಾಳಿ ಅಪ್ಪಳಿಸಿದೆ. 141 ಕಾರ್ಖಾನೆ ಕಟ್ಟಡಗಳು ಹಾನಿಗೊಳಗಾಗಿವೆ. ಆದರೆ ಯಾವುದೇ ವಸತಿ ಮನೆಗಳು ಕುಸಿದಿಲ್ಲ ಎಂದು ತಿಳಿಸಿದೆ. ಸುಂಟರಗಾಳಿಯ ನಂತರ ದಕ್ಷಿಣ ಚೀನಾದಲ್ಲಿ ಭಾರೀ ಮಳೆ ಸುರಿದಿದ್ದು, ಮಾರಣಾಂತಿಕ ಪ್ರವಾಹ ಉಂಟಾಗಿದೆ. ಪ್ರವಾಹದಲ್ಲಿ ಸಿಲುಕಿದ್ದ ಲಕ್ಷಾಂತರ ಜನರನ್ನು ರಕ್ಷಣೆ ಮಾಡಲಾಗಿದೆ. 127 ಮಿಲಿಯನ್ ಜನರಿಗೆ ಆರ್ಥಿಕ ಶಕ್ತಿ ನೆಲೆಯಾಗಿರುವ ಗುವಾಂಗ್ ಡಾಂಗ್ ಪ್ರಾಂತ್ಯವು ವ್ಯಾಪಕ ಪ್ರವಾಹವನ್ನು ಕಂಡಿದೆ. ಈ ಪ್ರದೇಶದಲ್ಲಿ 110,000 ಕ್ಕೂ ಹೆಚ್ಚು ಜನರನ್ನು ಸ್ಥಳಾಂತರ ಮಾಡಲಾಗಿದೆ. ಈ ವಾರದ ಆರಂಭದಲ್ಲಿ ಗುವಾಂಗ್ ಡಾಂಗ್ ನಲ್ಲಿ ಪ್ರವಾಹದಿಂದಾಗಿ ಕನಿಷ್ಠ 4 ಜನರು ಸಾವನ್ನಪ್ಪಿದ್ದಾರೆ ಎಂದು ರಾಜ್ಯ ಮಾಧ್ಯಮ ವರದಿ ಮಾಡಿದೆ. ಇನ್ನೂ, ಚೀನಾದ ಹವಾಮಾನ ಸಂಸ್ಥೆಯು ತಿಂಗಳ ಅಂತ್ಯದವರೆಗೆ ಭಾರೀ ಮಳೆ ಮತ್ತು ಬಲವಾದ ಬಿರುಗಾಳಿ…
ಮಣಿಪುರದಲ್ಲಿ ಮತ್ತೆ ಮರು ಮತದಾನಕ್ಕೆ ಸಿದ್ಧತೆ ಆರಂಭಗೊಂಡಿದೆ. ಹೊರ ಮಣಿಪುರ ಲೋಕಸಭಾ ಕ್ಷೇತ್ರದಲ್ಲಿ ಸಂಘರ್ಷ ಹಾಗೂ ಮತಗಟ್ಟೆ ವಶಪಡಿಸಿಕೊಂಡ ಆರು ಬೂತ್ ಗಳಲ್ಲಿ ಮರು ಮತದಾನ ನಡೆಯಲಿದೆ. ಮಂಗಳವಾರ ಬೆಳಗ್ಗೆ 7ರಿಂದ ಸಂಜೆ 4ರವರೆಗೆ ಮತದಾನ ನಡೆಯಲಿದೆ. ಇದೇ ತಿಂಗಳ 26ರಂದು ನಡೆದ ಮತದಾನದ ವೇಳೆ ಸಂಘರ್ಷ ಹಾಗೂ ಮತಗಟ್ಟೆ ವಶವಾಗಿತ್ತು. ಮೊದಲ ಹಂತದಲ್ಲಿ ಚುನಾವಣೆ ನಡೆದ ಇನ್ನರ್ ಮಣಿಪುರ ಲೋಕಸಭಾ ಕ್ಷೇತ್ರದ ಎಲ್ಲಾ 11 ಬೂತ್ಗಳಲ್ಲಿ ಸಂಘರ್ಷದಿಂದಾಗಿ ಮರು ಮತದಾನ ಮಾಡಬೇಕಾಯಿತು. ಮತದಾನದ ಸಮಯದಲ್ಲಿ, ಮಣಿಪುರವು ಗುಂಡಿನ ದಾಳಿ ಮತ್ತು ವ್ಯಾಪಕ ಹಿಂಸಾಚಾರದಿಂದ ಮುಳುಗಿತು. ದಾಳಿಕೋರರು ಮತಗಟ್ಟೆ ಸಾಮಗ್ರಿಗಳನ್ನೂ ಧ್ವಂಸಗೊಳಿಸಿದ್ದಾರೆ. ಇವಿಎಂಗಳಿಗೂ ಹಾನಿಯಾಗಿದೆ. ಇಂದು ಮರು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ ಮತಗಟ್ಟೆಗಳಲ್ಲಿ ಬಿಗಿ ಭದ್ರತೆ ಏರ್ಪಡಿಸಲಾಗಿದೆ. ಇನ್ನರ್ ಮಣಿಪುರ ಮತ್ತು ಔಟರ್ ಮಣಿಪುರ ಎರಡು ಲೋಕಸಭಾ ಕ್ಷೇತ್ರಗಳಲ್ಲಿ ಶೇ.72ರಷ್ಟು ಮತದಾನವಾಗಿದೆ. ಬೂತ್ಗಳನ್ನು ವಶಪಡಿಸಿಕೊಳ್ಳಲಾಗಿದೆ ಮತ್ತು ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ 47 ಮತಗಟ್ಟೆಗಳಲ್ಲಿ ಮರು ಮತದಾನ ನಡೆಸುವಂತೆ ಕಾಂಗ್ರೆಸ್…
ಮುಂಬೈ ಭಯೋತ್ಪಾದನಾ ದಾಳಿ ಪ್ರಕರಣದಲ್ಲಿ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಆಗಿದ್ದ ಉಜ್ವಲ್ ನಿಕಮ್ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿದ್ದಾರೆ. ಉಜ್ವಲ್ ಅವರು ಮುಂಬೈ ನಾರ್ತ್ ಸೆಂಟ್ರಲ್ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವರ್ಷಾ ಗಾಯಕ್ವಾಡ್ ಅವರನ್ನು ಎದುರಿಸಲಿದ್ದಾರೆ. ಉಜ್ವಲ್ 1993ರ ಮುಂಬೈ ಸ್ಫೋಟ, ಗುಲ್ಶನ್ ಕುಮಾರ್ ಹತ್ಯೆ, ಪ್ರಮೋದ್ ಮಹಾಜನ್ ಹತ್ಯೆ ಮತ್ತು 2013ರ ಮುಂಬೈ ಸಾಮೂಹಿಕ ಅತ್ಯಾಚಾರ ಪ್ರಕರಣಗಳಂತಹ ಹಲವು ಪ್ರಕರಣಗಳಲ್ಲಿ ವಕೀಲರಾಗಿದ್ದರು. 2016ರಲ್ಲಿ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ಉತ್ತರ ಮಧ್ಯದಲ್ಲಿ ಹಾಲಿ ಸಂಸದೆಯಾಗಿದ್ದ ಪೂನಂ ಮಹಾಜನ್ ಅವರಿಗೆ ಸ್ಥಾನ ನಿರಾಕರಿಸಿದ ನಂತರ ಉಜ್ವಲ್ ನಿಕಮ್ ಅವರನ್ನು ಅಭ್ಯರ್ಥಿಯಾಗಿ ನಾಮನಿರ್ದೇಶನ ಮಾಡಲಾಯಿತು. ಪೂನಂ ಬಿಜೆಪಿ ನಾಯಕ ದಿವಂಗತ ಪ್ರಮೋದ್ ಮಹಾಜನ್ ಅವರ ಪುತ್ರಿ. ಈ ಬಾರಿ ಪೂನಂ ಗೆಲುವಿನ ಸಾಧ್ಯತೆ ಇಲ್ಲ ಎಂಬ ಮೌಲ್ಯಮಾಪನವೇ ಸೀಟು ಬದಲಾವಣೆಗೆ ಕಾರಣವಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್…
ತುಮಕೂರು: ರಾಜ್ಯದಲ್ಲಿ ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ಮುಗಿದ ಹಿನ್ನೆಲೆಯಲ್ಲಿ ತುಮಕೂರಿನ ಸ್ಟ್ರಾಂಗ್ ರೂಂನಲ್ಲಿ 18 ಅಭ್ಯರ್ಥಿಗಳ ಭವಿಷ್ಯ ಭದ್ರವಾಗಿದೆ. ತುಮಕೂರು ವಿಶ್ವವಿದ್ಯಾಲಯದ ವಿಜ್ಞಾನ ಕಾಲೇಜು ಹಾಗೂ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಸ್ಟ್ರಾಂಗ್ ರೂಂ ಸ್ಥಾಪನೆ ಮಾಡಲಾಗಿದೆ. ನಿನ್ನೆ ರಾತ್ರಿ 1,846 ಮತಗಟ್ಟೆಗಳಿಂದ ಡಿಮಸ್ಟರಿಂಗ್ ಸೆಂಟರ್ ಗೆ ಮತಪೆಟ್ಟಿಗೆಗಳನ್ನು ತರಲಾಗಿತ್ತು. ಸ್ಟ್ರಾಂಗ್ ರೂಮ್ ನಲ್ಲಿಯೇ ಮೊಕ್ಕಾಂ ಹೂಡಿರುವ ಭದ್ರತಾ ಪಡೆ ಮತ್ತು ಪೊಲೀಸರು ಹಗಲಿರುಳು ಕಾವಲು ಕಾಯುತ್ತಿದ್ದಾರೆ. ಪ್ರತಿ ಸ್ಟ್ರಾಂಗ್ ರೂಂ ನಲ್ಲೂ ಸಿಸಿ ಕ್ಯಾಮೆರಾ ಅಳವಡಿಕೆ ಮಾಡಲಾಗಿದ್ದು ಸ್ಟ್ರಾಂಗ್ ರೂಂ ಸುತ್ತ ಮುತ್ತ ಖಾಕಿ ಹದ್ದಿನಕಣ್ಣು ಇರಿಸಲಾಗಿದೆ. ಸ್ಟ್ರಾಂಗ್ ರೂಂಗೆ ಎಸ್ ಪಿ – 1, ಡಿವೈಎಸ್ಪಿ – 1 ಸಿಪಿಐ – 22, ಪಿಎಸ್ ಐ- 440ಪಿಸಿ ಗಳಿಂದ ಭದ್ರತೆ ವ್ಯವಸ್ಥೆ ಮಾಡಲಾಗಿದೆ.ಕೆಎಸ್ ಆರ್ ಪಿ ತುಕಡಿ, ಸೇರಿದಂತೆ ಒಟ್ಟು 100 ಮಂದಿ ಪೊಲೀಸರ ನಿಯೋಜನೆ ಮಾಡಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಬಿಗಿಭದ್ರತೆ ಮಾಡಲಾಗಿದೆ.…
ತುಮಕೂರು: ಆಕಸ್ಮಿಕವಾಗಿ ಬೆಂಕಿ ತಗುಲಿ ಸುಟ್ಟು ಭಸ್ಮವಾದ 10 ಗುಡಿಸಲುಗಳಿಗೆ ಎಲೆರಾಮಪುರ ಮಠದ ಶ್ರೀ ಹನುಮಂತನಾಥ ಸ್ವಾಮೀಜಿ ಭೇಟಿ ನೀಡಿ ನೊಂದವರಿಗೆ ಸಾಂತ್ವನ ಹೇಳಿದರು. ಗುಡಿಸಲಿನಲ್ಲಿದ್ದ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡ ಪರಿಣಾಮ 10 ಗುಡಿಸಲು ಸುಟ್ಟು ಭಸ್ಮವಾದ ಘಟನೆ ಶುಕ್ರವಾರ ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ಚಿಂಪುಗಾನಹಳ್ಳಿಯಲ್ಲಿ ನಡೆದಿತ್ತು. ಅದೃಷ್ಟವಶಾತ್ ಯಾರಿಗೂ ಪ್ರಾಣಹಾನಿ ಸಂಭವಿಸಿಲ್ಲ. ಆದರೆ ಗುಡಿಸಲಿನಲ್ಲಿದ್ದ ದಿನಸಿ, ಬಟ್ಟೆ, ಇತರ ವಸ್ತುಗಳು ಭಸ್ಮವಾಗಿದೆ. ಗುಡಿಸಲಿನಲ್ಲಿ ವಾಸ ಮಾಡುತ್ತಿರುವ ಕುಟುಂಬಗಳಿಗೆ ಶಾಶ್ವತ ಸೂರು ಕಲ್ಪಿಸಿ ಕೊಡಲು ಸಚಿವ ಪರಮೇಶ್ವರ ಅವರೊಂದಿಗೆ ಮಾತುಕತೆ ನಡೆಸಿರುವುದಾಗಿ ಅವರು ಇದೇ ವೇಳೆ ತಿಳಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Bu0PpuFHlmt705QwiTL3vv ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA
ನವದೆಹಲಿ: ಕಿರುತೆರೆಯ ಜನಪ್ರಿಯ ಧಾರಾವಾಹಿ ನಟಿ ಕೃಷ್ಣ ಮುಖರ್ಜಿ ಅವರಿಗೆ ಮೇಕಪ್ ರೂಂನಲ್ಲಿ ನಿರ್ಮಾಪಕರು ಕಿರುಕುಳ ನೀಡಿದ್ದಾರೆ ಎಂದು ನೋವನ್ನು ಹಂಚಿಕೊಂಡಿರುವ ಪೋಸ್ಟ್ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿವೆ. ನಾಗಿನ್ 3, ಕುಚ್ ತೋ ಹೈ, ನಾಗಿನ್ ಏಕ್ ನಯಾ ರಂಗ್ ಮೇ, ಶುಭ್ ಸೌಗನ್ ಮುಂತಾದ ಕಾರ್ಯಕ್ರಮಗಳು ಮತ್ತು ಧಾರಾವಾಹಿಗಳು ಕೃಷ್ಣ ಮುಖರ್ಜಿಯವರು ಜನಪ್ರಿಯತೆ ಗಳಿಸಿದರು. ಇವರು ಇತ್ತೀಚೆಗೆ ಕಾರ್ಯಕ್ರಮದ ನಿರ್ಮಾಪಕರ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದು, ನನ್ನ ಕೊನೆಯ ಕಾರ್ಯಕ್ರಮ “ಶುಭ್ ಶಗುನ್” ಮಾಡಲು ಪ್ರಾರಂಭಿಸಿದಾಗ ನನ್ನ ಕೆಟ್ಟ ಸಮಯ ಪ್ರಾರಂಭವಾಯಿತು. ಅದು ನನ್ನ ಜೀವನದ ಅತ್ಯಂತ ಕೆಟ್ಟ ನಿರ್ಧಾರ. ಆ ಕಾರ್ಯಕ್ರಮ ಮಾಡಲು ನಾನು ಎಂದಿಗೂ ಬಯಸಲಿಲ್ಲ ಆದರೆ ನಾನು ಇತರರ ಮಾತನ್ನು ಕೇಳಿ ಒಪ್ಪಂದಕ್ಕೆ ಸಹಿ ಹಾಕಿದೆ. ಪ್ರೊಡಕ್ಷನ್ ಹೌಸ್ ಮತ್ತು ನಿರ್ಮಾಪಕ ನನಗೆ ಹಲವು ಬಾರಿ ಕಿರುಕುಳ ನೀಡಿದ್ದಾರೆ”ಎಂದು ಅವರು ಪೋಸ್ಟ್ ನಲ್ಲಿ ಬರೆದಿದ್ದಾರೆ. ಕೃಷ್ಣ ಒಂದು ವರ್ಷ ಕಠಿಣ ಸಮಯವನ್ನು…
ಕಲಬುರಗಿ: ಕೇಂದ್ರ ಸರ್ಕಾರದಿಂದ ಬಿಡುಗಡೆಗೊಂಡಿರುವ ಬರ ಪರಿಹಾರ ಮೊತ್ತ ಬಹಳ ಕಡಿಮೆಯಾಗಿದೆ. ನಾವು ಕೇಳಿದ್ದು 18,172 ಕೋಟಿ ರೂಪಾಯಿ. ಕಳೆದ ಸೆಪ್ಟೆಂಬರ್ ತಿಂಗಳಲ್ಲಿನಲ್ಲಿಯೇ ಕೇಳಿದ್ದೆವು. ಕರ್ನಾಟಕದಲ್ಲಿ ಬರದಿಂದ ಆಗಿರುವ ಒಟ್ಟು ಬೆಳೆ ನಷ್ಟ 35 ಸಾವಿರ ಕೋಟಿ ರೂಪಾಯಿಗಳಷ್ಟು. ರಾಜ್ಯದ 48 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ನಷ್ಟವಾಗಿದೆ. ಎನ್ ಡಿಆರ್ ಎಫ್ ನಿಯಮ ಪ್ರಕಾರ ನಾವು ಕೇಳಿದಷ್ಟು ಹಣವನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಕಲಬುರಗಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬರ ಪರಿಹಾರ ಮೊತ್ತ ಬಿಡುಗಡೆಯ ಬಗ್ಗೆ ಕೇಂದ್ರ ಸಚಿವರುಗಳಾದ ಅಮಿತ್ ಶಾ, ನಿರ್ಮಲಾ ಸೀತಾರಾಮನ್ ಅವರೆಲ್ಲ ಸುಳ್ಳು ಹೇಳಿದ್ದರು. ಕರ್ನಾಟಕ ಸರ್ಕಾರ ವಿಳಂಬವಾಗಿ ಮನವಿ ಕೊಟ್ಟಿದೆ ಎಂದರು. ನಂತರ ಚುನಾವಣಾ ನೀತಿ ಸಂಹಿತೆ ಜಾರಿಯಾಯಿತು ಎಂದು ಹೇಳಿ ಪರಿಹಾರ ವಿಳಂಬವಾಗುತ್ತಿದೆ ಎಂದು ಸುಳ್ಳು ಹೇಳಿಕೊಂಡು ಬಂದರು. ಬರಗಾಲಕ್ಕೆ ಬದಲು 5 ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ಹಣ ಕೇಳುತ್ತಿದ್ದಾರೆ ಎಂದು ಹಣಕಾಸು ಸಚಿವೆ ನಿರ್ಮಲಾ…
ಚಿತ್ರ ವಿಚಿತ್ರ ಉಡುಗೆ ತೊಟ್ಟು ಸೋಷಿಯಲ್ ಮೀಡಿಯಾದಲ್ಲಿ ಸೆನ್ಷೆಷನ್ ಮೂಡಿಸುವಲ್ಲಿ ಉರ್ಫಿ ಜಾವೇದ್ ಗೆ ಯಾರೂ ಸರಿಸಾಟಿ ಇರಲಿಕ್ಕಿಲ್ಲ. ಇನ್ ಸ್ಟಾಗ್ರಾಂನಲ್ಲಿ ಸದಾ ಭಿನ್ನವಾದ ಫೋಟೋಶೂಟ್, ವಿಡಿಯೋಗಳನ್ನು ಹಂಚಿಕೊಳ್ಳುತ್ತ ಅಭಿಮಾನಿಗಳ ಹೃದಯದಲ್ಲಿ ಉರ್ಫಿ ಕಿಚ್ಚು ಮೂಡಿಸ್ತಾರೆ. ಇದೀಗ ಉರ್ಫಿ ಜಾವೇದ್ ಹಂಚಿಕೊಂಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಒಂದು ಎದೆಗೆ ಹೂವಿನ ಅಲಂಕಾರದ ವಸ್ತ್ರ ಧರಿಸಿದ್ದರೆ, ಇನ್ನೊಂದು ಎದೆಯನ್ನು ಕೈಯಿಂದ ಮುಚ್ಚಿಕೊಂಡು ಉರ್ಫಿ ಫೋಟೋ ಶೇರ್ ಮಾಡಿಕೊಂಡಿದ್ದಾರೆ. ಈಕೆ ಪ್ರದರ್ಶಿಸಿದ ವಿನೂತನ ಉಡುಗೆಯನ್ನು ಕಾಥಿ ಆಟ್ಲಿಯರ್ ವಿನ್ಯಾಸ ಮಾಡಿದ್ದಾರೆ. ಈಕೆಗೆ ಮೇಕಪ್ ಕುದ್ರಾತನಂದ್ ಸ್ಟೈಲಿಂಗ್ ಮಾಡಿದ್ದಾರೆ. ಕೇಶವಿನ್ಯಾಸ ರಾಣಿಸಾಹು ಮಾಡಿದ್ದಾರೆ. ಮೇಕಪ್ ಸ್ವತಃ ಉರ್ಫಿ ಮಾಡಿದ್ದಾರೆ. ಈ ವಿಡಿಯೋ ನೋಡಿ ನೆಟ್ಟಿಗರು ಬಗೆಬಗೆಯ ಕಾಮೆಂಟ್ ಮಾಡಿದ್ದಾರೆ. ಬಹುತೇಕ ಕಾಮೆಂಟ್ ಗಳು ನೆಗೆಟಿವ್ ಶೇಡ್ ನಲ್ಲೇ ಇವೆ. ಇನ್ನು ಕೆಲವರು ಈಕೆಯ ಫ್ಯಾಷನ್ ಅಭಿರುಚಿಗೆ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149ನಂಬರ್…
ಪ್ರಧಾನಿ ಮೋದಿಯವರಂತೆ ಕಾಣುವ ಈ ವ್ಯಕ್ತಿ ಯಾರು ಗೊತ್ತಾ? ಇವರು ಕೂಡ ಗುಜರಾತ್ ನವರೇ ಆಗಿದ್ದಾರೆ. ಇವರು ಗುಜರಾತ್ ನ ಆನಂದ್ ನಲ್ಲಿ ತುಳಸಿ ಪಾನಿ ಪುರಿ ಸ್ಟಾಲ್ ನಡೆಸಿಕೊಂಡು ಜೀವನ ಸಾಗಿಸುವವರಾಗಿದ್ದಾರೆ. ಈ ವ್ಯಕ್ತಿಯ ಹೆಸರು ಅನಿಲ್ ಭಾಯಿ ಠಕ್ಕರ್. ಠಕ್ಕರ್ 71 ವರ್ಷ ವಯಸ್ಸಿನವರಾಗಿದ್ದಾರೆ. ಅವರನ್ನು ಸ್ಥಳೀಯರು ಪಿಎಂ ಮೋದಿ ಎಂದು ಕರೆಯುತ್ತಾರೆ ಏಕೆಂದರೆ ಅವರ ಸೈಡ್ ಪ್ರೊಫೈಲ್ ಮತ್ತು ನೋಟದಿಂದ ಪ್ರಧಾನಿಯಂತೆಯೇ ಕಾಣುತ್ತಾರೆ. ಅವರ ಹೇರ್ ಸ್ಟೈಲ್ ಮತ್ತು ಬಿಳಿ ಗಡ್ಡ ಕೂಡ ಪ್ರಧಾನಿ ಮೋದಿಯವರನ್ನೇ ಹೋಲುವಂತದಾಗಿದೆ ಎಂದು ಜನ ಹೇಳುತ್ತಾರೆ. ಇವರ ಪೋಟೋ ಲೋಕಸಭೆ ಚುನಾವಣೆಗೆ ಮತದಾನ ಪ್ರಾರಂಭವಾಗುತ್ತಿದ್ದಂತೆ ವೈರಲ್ ಆಗಿದೆ. ಇವರು ಮೂಲತಃ ಜುನಾಗಢ್ ನವರಾಗಿದ್ದಾರೆ. ಅವರು 18 ನೇ ವಯಸ್ಸಿನಿಂದಲೂ ಚಾಟ್ ‘ತುಳಸಿ ಪಾನಿ ಪುರಿ ಸೆಂಟರ್’ ನಲ್ಲಿ ಮಾರಾಟ ಮಾಡುತ್ತಿದ್ದಾರೆ. ಅಂಗಡಿಯನ್ನು ಅವರ ತಾತ ಪ್ರಾರಂಭಿಸಿದರು. ನಂತರ ಠಕ್ಕರ್ ಅಂಗಡಿಯನ್ನು ಮುಂದುವರಿಸಿಕೊಂಡು ಬಂದಿದ್ದಾರೆ. ಠಕ್ಕರ್ ಹೇಳುವಂತೆ “ಪ್ರಧಾನಿ ಮೋದಿಯೊಂದಿಗಿನ ನನ್ನ ಹೋಲಿಕೆಯಿಂದಾಗಿ…