Subscribe to Updates
Get the latest creative news from FooBar about art, design and business.
- ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!
- ಮುಳ್ಳಯ್ಯನಗಿರಿಯಲ್ಲಿ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಟಿಟಿ: 13 ಪ್ರವಾಸಿಗರು ಅದೃಷ್ಟವಶಾತ್ ಪಾರು!
- ಥಿಯೇಟರ್ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ
- ರಾಜ್ಯದಲ್ಲಿ ಸಿಎಂ ಬದಲಾವಣೆ ಇಲ್ಲ: ಸ್ಪಷ್ಟನೆ ನೀಡಿದ ಆರ್.ವಿ.ದೇಶಪಾಂಡೆ
- ಇಂಧನ ದರ ಏರಿಕೆ: ರಾಜಕೀಯ ಮಾಡದೆ ವ್ಯಾಟ್ ಕಡಿಮೆ ಮಾಡಿ; ಸಿಎಂ ಸಿದ್ದರಾಮಯ್ಯಗೆ ಆರ್.ಅಶೋಕ್ ಒತ್ತಾಯ
- ಸಂಸ್ಕರಿಸದೆ ನದಿಗೆ ತ್ಯಾಜ್ಯ ಹರಿಸಿದರೆ ಕ್ರಿಮಿನಲ್ ಮೊಕದ್ದಮೆ: ಅರಣ್ಯ ಸಚಿವ ಈಶ್ವರ ಖಂಡ್ರೆ ಖಡಕ್ ಎಚ್ಚರಿಕೆ!
- ಬೇಸಿಗೆ ಕಾಲದಲ್ಲಿ ಲಿಂಬೆಹಣ್ಣುಗಳನ್ನು ದೀರ್ಘಕಾಲದವರೆಗೆ ತಾಜಾವಾಗಿಡುವುದು ಹೇಗೆ?
- ವಿಶ್ವದ ಅತ್ಯಂತ ದೊಡ್ಡ ಶಕ್ತಿ ತಾಯಿ: ಪರಿಷತ್ ಸದಸ್ಯ ಆರ್.ರಾಜೇಂದ್ರ ರಾಜಣ್ಣ
Author: admin
ಬೆಂಗಳೂರು: ಆ್ಯಂಬುಲೆನ್ಸ್ ಡಿಕ್ಕಿ ಹೊಡೆದ ಪರಿಣಾಮ ಮೂರು ಕಾರು ಮತ್ತು ಬೈಕ್ ನಡುವೆ ಸರಣಿ ಅಪಘಾತ ಸಂಭವಿಸಿದ ಘಟನೆ ಏ.26ರ ರಾತ್ರಿ 10:30ರ ಸುಮಾರಿಗೆ ನಡೆದಿದೆ. ಘಟನೆಯಲ್ಲಿ ಬೈಕ್ ಸವಾರನ ಕಾಲಿಗೆ ಹಾಗೂ ಕಾರು ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅದೃಷ್ಟವಶಾತ್ ಯಾರಿಗೂ ಪ್ರಾಣಾಪಾಯವಾಗಿಲ್ಲ. ಮಾರ್ಕೆಟ್ನಿಂದ ಗುಡ್ಡದಹಳ್ಳಿ ಮಾರ್ಗವಾಗಿ ಆಂಬ್ಯುಲೆನ್ಸ್ ಚಾಲಕ ಸಮಂತ್ ವೇಗವಾಗಿ ಆ್ಯಂಬುಲೆನ್ಸ್ ಚಲಾಯಿಸಿಕೊಂಡು ಬರುತ್ತಿದ್ದರು. ಈ ಸಂದರ್ಭದಲ್ಲಿ ನಿಯಂತ್ರಣ ಕಳೆದುಕೊಂಡ ಆ್ಯಂಬುಲೆನ್ಸ್ ಇತರ ವಾಹನಗಳಿಗೆ ಡಿಕ್ಕಿಯಾಗಿದೆ ಎಂದು ಹೇಳಲಾಗಿದೆ. ಗಾಯಾಳುಗಳನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಘಟನೆ ಸಂಬಂಧ ಬ್ಯಾಟರಾಯನಪುರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Bu0PpuFHlmt705QwiTL3vv ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA
ಬೆಂಗಳೂರು ಗ್ರಾಮಾಂತರ: ಹಾವು ಕಚ್ಚಿದ ಪರಿಣಾಮ 7 ವರ್ಷ ವಯಸ್ಸಿನ ಮಗು ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಕೋಳೂರು ಗ್ರಾಮದಲ್ಲಿ ನಡೆದಿದೆ. ಟಿ.ಹೊಸಹಳ್ಳಿ ಗ್ರಾಮದ ಅನುಷಾ (7) ಮೃತಪಟ್ಟ ಮಗುವಾಗಿದೆ. ಮಗುವಿನ ತಂದೆ ತಾಯಿ ಕೋಳೂರು ಗ್ರಾಮದ ತೋಟದ ಮನೆಯಲ್ಲಿ ಈ ಕುಟುಂಬ ಕೂಲಿ ಕೆಲಸ ಮಾಡಿಕೊಂಡಿತ್ತು. ಇದೇ ತೋಟದಲ್ಲಿ ಆಟವಾಡುತ್ತಿದ್ದ ವೇಳೆ ಮಗುವಿಗೆ ಹಾವು ಕಚ್ಚಿದೆ. ಮಗುವನ್ನು ತಕ್ಷಣವೇ ಕುಟುಂಬಸ್ಥರು ದೊಡ್ಡಬಳ್ಳಾಪುರ ಆಸ್ಪತ್ರೆಗೆ ಸಾಗಿಸಿದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮಗು ಮೃತಪಟ್ಟಿದೆ ಎಂದು ತಿಳಿದು ಬಂದಿದೆ. ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮಗುವಿನ ಸಾವಿನಿಂದ ಆಘಾತಗೊಂಡ ಪೋಷಕರ ರೋದನೆ ಮುಗಿಲುಮುಟ್ಟಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Bu0PpuFHlmt705QwiTL3vv ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA
ಬೆಂಗಳೂರು: ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನ ಯಶಸ್ವಿಯಾಗಿ ನಡೆದರೂ, ರಾಜಧಾನಿ ಬೆಂಗಳೂರಿನಲ್ಲೇ ಕಡಿಮೆ ಮತದಾನವಾಗಿರುವ ಹಿನ್ನೆಲೆ ಸಾರ್ವಜನಿಕರು ಬೆಂಗಳೂರಿನಲ್ಲಿ ಬ್ಯಾನರ್ ಹಾಕಿ ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆದಿದೆ. “ಚುನಾವಣಾ ಆಯೋಗ ಅಷ್ಟೊಂದು ಪ್ರಚಾರ ಮಾಡಿದ ನಂತರವೂ ಮತದಾನದಿಂದ ದೂರ ಉಳಿದು ಬದುಕಿದ್ದರೂ ಸತ್ತಂತೆ ವರ್ತಿಸಿದ ಬೆಂಗಳೂರು ನಗರದ ಸುಶಿಕ್ಷಿತ ಸತ ಪ್ರಜೆಗಳಿಗೆ ನಮ್ಮ ಶ್ರದ್ಧಾಂಜಲಿಗಳು” ಎಂದು ಬ್ಯಾನರ್ ನಲ್ಲಿ ಬರೆಯಲಾಗಿದೆ. ಮತದಾನ ಮಾಡುವ ಹಕ್ಕಿದ್ದರೂ ಮತ ಹಾಕಿಲ್ಲ. ಇವರು ಬದುಕಿದ್ದು ಸತ್ತಂತೆ ಎಂದು ಬ್ಯಾನರ್ ನಲ್ಲಿ ಆಕ್ರೋಶ ವ್ಯಕ್ತಪಡಿಸಲಾಗಿದೆ. ಪ್ರತಿಬಾರಿಯಂತೆ ಈ ಬಾರಿಯೂ ರಾಜಧಾನಿ ಬೆಂಗಳೂರಿನ ಮತದಾರರಲ್ಲಿ ನಿರುತ್ಸಾಹ ಮುಂದುವರೆದಿದ್ದು, ಮತದಾನ ಪ್ರಮಾಣ ನಿರೀಕ್ಷೆಯಂತೆ ಕಡಿಮೆ ಪ್ರಮಾಣದಲ್ಲಾಗಿದೆ. ಬೇರೆ ಕಡೆಗಳಲ್ಲಿ ಗ್ರಾಮೀಣ ಹಾಗೂ ನಗರ ಪ್ರದೇಶದಲ್ಲೂ ಜನರು ಉತ್ಸಾಹದಿಂದ ಮತಚಲಾಯಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Bu0PpuFHlmt705QwiTL3vv ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA
ಭಾರತದ 527 ಆಹಾರ ಪದಾರ್ಥಗಳಲ್ಲಿಅಪಾಯಕಾರಿ ಕ್ಯಾನ್ಸರ್ ಕಾರಕ ಎಥಿಲೀನ್ ಆಕ್ಸೆಡ್ ಪತ್ತೆಯಾಗಿರುವುದಾಗಿ ಯುರೋಪಿಯನ್ ಒಕ್ಕೂಟದ ಆಹಾರ ಸುರಕ್ಷತಾ ಪ್ರಾಧಿಕಾರ ತಿಳಿಸಿದೆ. ಇತ್ತೀಚಿಗಷ್ಟೇ ಸಿಂಗಪುರ ಮತ್ತು ಹಾಂಗ್ ಕಾಂಗ್ ಮಾರುಕಟ್ಟೆಗಳಲ್ಲಿ ಭಾರತದ ಆಹಾರ ಪದಾರ್ಥಗಳನ್ನು ಇದೇ ಕಾರಣವೊಡ್ಡಿ ನಿಷೇಧಿಸಲಾಗಿತ್ತು. ಸಂರಕ್ಷಿತ ಆಹಾರ ಪದಾರ್ಥಗಳಲ್ಲಿ ಇಥೈನಾಲ್ ಅಂಶವು ನಿಗದಿತ ಮಟ್ಟಕ್ಕಿಂತ ವಿಪರೀತ ಹೆಚ್ಚಾಗಿ ಬಳಕೆಯಾಗಿರುವುದರಿಂದ ಭಾರತ ಮೂಲದ ಆಹಾರ ಉತ್ಪಾದನಾ ಸಂಸ್ಥೆಗಳಿಗೆ ನಿರ್ಬಂಧದ ಆತಂಕ ಎದುರಾಗಿದೆ. ಈ ಹಿಂದೆ ಭಾರತದಿಂದ ರಫ್ತಾದ ಗಸಗಸೆ ಮತ್ತು ಒಣಹಣ್ಣು ಸಂಸ್ಕರಿತ ಬೀಜಗಳಲ್ಲಿ ವಿಷಕಾರಿ ಅಂಶ ರಾಸಾಯನಿಕಗಳು ಪತ್ತೆಯಾಗಿತ್ತು. ಈ ಕುರಿತು ಭಾರತೀಯ ಆಹಾರ ನಿಯಂತ್ರಣ ಪ್ರಾಧಿಕಾರದ ಅಧಿಕಾರಿಗಳು ಪ್ರತಿಕ್ರಿಯಿಸಿದ್ದು, ಈ ಕೂಡಲೇ ತ್ವರಿತ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ. ಭಾರತದಿಂದ ರಫ್ತಾಗುವ ಆಹಾರ ಪದಾರ್ಥಗಳನ್ನು ಗಾಮಾ ರೇ ಟೀಟ್ ಮೆಂಟ್ ರೀತಿಯ ಅತ್ಯುನ್ನತ ವಿಧಾನಗಳಿಂದ ಶುದ್ದೀಕರಿಸಲಾಗುವುದು ಎಂದಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ…
ಕಾನ್ಪುರ: ಸ್ಕೂಟಿಯಲ್ಲಿ ಹೋಗುತ್ತಿದ್ದ ಮಹಿಳೆಯ ಮೊಬೈಲ್ ಸ್ಫೋಟಗೊಂಡು ಮಹಿಳೆ ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ ಬೆಳಕಿಗೆ ಬಂದಿದೆ. ಫರೂಕಾಬಾದ್ ಜಿಲ್ಲೆಯ ನಹ್ರೈಯಾ ಗ್ರಾಮದ ನಿವಾಸಿ ಪೂಜಾ (28) ಮೃತ ಮಹಿಳೆಯಾಗಿದ್ದಾರೆ. ಘಟನೆಯ ವಿವರ: ಮಹಿಳೆ ಸ್ಕೂಟಿಯಲ್ಲಿ ಕಾನ್ಪುರಕ್ಕೆ ತೆರಳುತ್ತಿದ್ದರು.ಈ ವೇಳೆಕಾನ್ಪುರ-ಅಲಿಗಢ ಹೆದ್ದಾರಿಯ ಚೌಬೆಪುರ ಪೊಲೀಸ್ ಠಾಣೆ ಪ್ರದೇಶದ ಮನ್ಪುರ್ ಗ್ರಾಮದ ಬಳಿಯ ಅವರ ಮೊಬೈಲ್ ಇದ್ದಕ್ಕಿದ್ದಂತೆ ಸ್ಫೋಟ ಆಗಿದೆ. ಸ್ಫೋಟ ಸಂಭವಿಸಿದ ತಕ್ಷಣ ಅವರ ಸ್ಕೂಟಿ ನಿಯಂತ್ರಣ ಕಳೆದುಕೊಂಡು ರಸ್ತೆಯ ಮಧ್ಯದಲ್ಲಿದ್ದ ಡಿವೈಡರ್ಗೆ ಡಿಕ್ಕಿ ಹೊಡೆದಿದೆ. ಸ್ಕೂಟಿ ಡಿವೈಡರ್ಗೆ ಡಿಕ್ಕಿ ಹೊಡೆದ ರಭಸಕ್ಕೆ ಮಹಿಳೆ ಹೆಲ್ಮೆಟ್ ಧರಿಸದ ಕಾರಣ ತಲೆಗೆ ಪೆಟ್ಟುಬಿದ್ದು ಮಹಿಳೆ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Bu0PpuFHlmt705QwiTL3vv ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA
ನಟಿ ಅನುಪಮಾ ಪರಮೇಶ್ವರನ್ ನಟನೆಯ ಹೊಸ ಸಿನಿಮಾ ಪರದಾ ಚಿತ್ರದ ಫಸ್ಟ್ ಲುಕ್ ಚಿತ್ರ ತಂಡ ಬಿಡುಗಡೆ ಮಾಡಿದೆ. ಫಸ್ಟ್ ಲುಕ್ ಗೆ ಫ್ಯಾನ್ಸ್ ಫಿದಾ ಆಗಿದ್ದಾರೆ. ಪಡ್ಡೆಹುಡುಗರ ಕ್ರಶ್ ಅನುಪಮಾ ಪರಮೇಶ್ವರನ್ ‘ಟಿಲ್ಲು ಸ್ಕ್ವೇರ್’ ಸಿನಿಮಾ ಸಕ್ಸಸ್ ಆದ ನಂತರ ಅವರಿಗೆ ಕೈ ತುಂಬಾ ಅವಕಾಶಗಳು ಬರುತ್ತಿವೆ. ಹಸಿ ಬಿಸಿ ಬೋಲ್ಡ್ ಸೀನ್ ಗಳಲ್ಲಿ ನಟಿಸಲ್ಲ ಎಂದು ಹೇಳಿದ್ದ ಅನುಪಮಾ ಪರಮೇಶ್ವರನ್ ಇದೀಗ ಮಾತು ಬದಲಾಯಿಸಿ, ಬೋಲ್ಡ್ ಪಾತ್ರಕ್ಕೆ ಬಣ್ಣ ಹಚ್ಚಲಿದ್ದಾರೆ. ಈ ಹಿಂದೆ ಬಂಡಿ ಸಿನಿಮಾ ಮಾಡಿದ್ದ ಪ್ರವೀಣ್ ಕಂಡ್ರೇಗುಲಾ ಪರದಾ ಸಿನಿಮಾವನ್ನು ನಿರ್ದೇಶನ ಮಾಡಲಿದ್ದಾರೆ. ದರ್ಶನಾ ರಾಜೇಂದ್ರನ್ ಮತ್ತು ಸಂಗೀತಾ ಪ್ರಮುಖ ಪಾತ್ರದಲ್ಲಿ ನಟಿಸಲಿದ್ದಾರೆ. ಶ್ರೀಧರ್ ಮುಕ್ಕುವ, ವಿಜಯ್ ಡೊಂಕದ ಹಾಗೂ ಶ್ರೀನಿವಾಸಲು ಈ ಚಿತ್ರವನ್ನು ಜಂಟಿಯಾಗಿ ನಿರ್ಮಾಣ ಮಾಡುತ್ತಿದ್ದಾರೆ. 40ರಿಂದ 60 ಲಕ್ಷ ರೂಪಾಯಿ ಸಂಭಾವನೆ ಪಡೆಯುತ್ತಿದ್ದ ಅನುಪಮಾ ಪರಮೇಶ್ವರನ್ ಒಂದೂವರೆ ಕೋಟಿ ರೂ.ವರೆಗೂ ಚಾರ್ಜ್ ಮಾಡುತ್ತಿದ್ದಾರಂತೆ, ಅಲ್ಲದೇ ತಮ್ಮ ಮುಂದಿನ ಚಿತ್ರಗಳಿಗೆ ದುಬಾರಿ ಸಂಭಾವನೆಗೆ…
ರಿಚರ್ಡ್ ಆಂಟನಿ ಚಿತ್ರದ ಸಿನಿಮಾ ಶೂಟಿಂಗ್ ಮೇ 1ರಿಂದ ಆರಂಭವಾಗಲಿದೆ ಎಂದು ನಟ ರಕ್ಷಿತ್ ಶೆಟ್ಟಿ ಮಾಹಿತಿ ನೀಡಿದ್ದಾರೆ. ನಿನ್ನೆ ಉಡುಪಿಯಲ್ಲಿ ಮತದಾನ ಮಾಡಿದ ಬಳಿಕ ಮಾಧ್ಯಮಗಳ ಜೊತೆಗೆ ಅವರು ಮಾತನಾಡುತ್ತಿದ್ದರು. ರಿಚರ್ಡ್ ಆಂಟನಿ ಸಿನಿಮಾವನ್ನು ರಕ್ಷಿತ್ ಶೆಟ್ಟಿ ನಟಿಸಿ ನಿರ್ದೇಶನ ಮಾಡುತ್ತಿದ್ದಾರೆ. ಕೆಲವೇ ದಿನಗಳಲ್ಲಿ ನಮ್ ಟೀಮ್ ಉಡುಪಿ ತಲುಪಲಿದೆ. ಮೇ 1 ರಿಂದ ಚಿತ್ರೀಕರಣ ಶುರು ಮಾಡುತ್ತೇವೆ ಎಂದು ಅವರು ಮಾಹಿತಿ ನೀಡಿದ್ದಾರೆ. 1980–90 ರ ದಶಕದಲ್ಲಿ ನಡೆಯುವ ಕಥೆಯನ್ನು ರಕ್ಷಿತ್ ಶೆಟ್ಟಿ ಹೇಳಲು ಹೊರಟಿದ್ದಾರೆ. ಈ ಸಿನಿಮಾದ ಶೇ.50ರಷ್ಟು ಶೂಟಿಂಗ್ ಉಡುಪಿಯಲ್ಲೇ ನಡೆಯಲಿದೆಯಂತೆ! ಇನ್ನೂ ಈ ಸಿನಿಮಾ ನಿರ್ಮಾಣವನ್ನು ಯಾವ ಸಂಸ್ಥೆ ಮಾಡಲಿದೆ ಎನ್ನುವ ಮಾಹಿತಿಯನ್ನು ಅವರು ನೀಡಲಿಲ್ಲ. ಇತ್ತೀಚೆಗೆ ಹೊಂಬಾಳೆ ಮತ್ತು ರಕ್ಷಿತ್ ನಡುವೆ ಬಿರುಕು ಮೂಡಿತ್ತು ಬೇರೊಂದು ಸಂಸ್ಥೆಯು ರಿಚರ್ಡ್ ಆಂಟನಿ ಚಿತ್ರವನ್ನು ನಿರ್ಮಾಣ ಮಾಡಲಿದೆ ಎನ್ನುವ ಸುದ್ದಿ ಹರಿದಾಡಿತ್ತು. ಆದ್ರೆ ಈ ಬಗ್ಗೆ ಹೊಂಬಾಳೆ ಫಿಲ್ಮ್ಸ್ ಆಪ್ತರು ಹೇಳುವಂತೆ, ‘ಸಿನಿಮಾ ಮುಹೂರ್ತಕ್ಕೆ ಹೊಂಬಾಳೆಯೇ…
ನವದೆಹಲಿ: ಕೇಂದ್ರ ಸರ್ಕಾರದಿಂದ ತೆರಿಗೆ ಪಾಲು ಬಾರದ ಹಿನ್ನೆಲೆ ರಾಜ್ಯ ಸರ್ಕಾರದ ನಿರಂಗತರ ಹೋರಾಟದ ಬಳಿಕ ಇದೀಗ ಕೇಂದ್ರ ಸರ್ಕಾರ ಕರ್ನಾಟಕಕ್ಕೆ 3,454 ಕೋಟಿ ರೂ. ಬರ ಪರಿಹಾರ ಘೋಷಣೆ ಮಾಡಿದೆ. ಕರ್ನಾಟಕ ಮಾತ್ರವಲ್ಲದೆ ತಮಿಳುನಾಡಿಗೆ ಚಂಡಮಾರುತ ಹಾಗೂ ಪ್ರವಾಹ ಪರಿಹಾರವೆಂದು 275 ಕೋಟಿ ರೂ. ನೀಡಿದೆ. ಕಳೆದ ವರ್ಷ ಸೆಪ್ಟೆಂಬರ್ನಲ್ಲಿ ರಾಜ್ಯ ಸರ್ಕಾರ ಕೇಂದ್ರಕ್ಕೆ ಬರ ಪರಿಹಾರಕ್ಕಾಗಿ 18,174 ಕೋಟಿ ರೂ. ಹಣದ ಬೇಡಿಕೆ ಇಟ್ಟಿತ್ತು. ಕೇಂದ್ರ ಸರ್ಕಾರ ಬರ ಪರಿಹಾರ ಬಿಡುಗಡೆ ಮಾಡಿರದ ಹಿನ್ನೆಲೆ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್ನ ಮೊರೆ ಹೋಗಿತ್ತು. ಬಳಿಕ ಕೇಂದ್ರ ಸರ್ಕಾರ ಬರ ಪರಿಹಾರ ಬಿಡುಗಡೆ ಮಾಡುವುದಾಗಿ ಸುಪ್ರೀಂಕೋರ್ಟ್ಗೆ ಹೇಳಿತ್ತು. ಅದರಂತೆ ಇದೀಗ ಕೇಂದ್ರ ಸರ್ಕರ ಬರ ಪರಿಹಾರ ಘೋಷಣೆ ಮಾಡಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Bu0PpuFHlmt705QwiTL3vv ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA
ಪಾವಗಡ: ಕ್ಷುಲ್ಲಕ ಕಾರಣಕ್ಕೆ ನಡೆದ ಜಗಳದಲ್ಲಿ ವ್ಯಕ್ತಿಯೊಬ್ಬರು ಹತ್ಯೆಗೀಡಾದ ಘಟನೆ ಪಾವಗಡದ ಭೂಪೂರು ತಾಂಡಾದಲ್ಲಿ ನಡೆದಿದೆ. ಭೂಪೂರು ಗ್ರಾಮಕ್ಕೆ ಸೇರಿದ 40 ವರ್ಷದ ಗೋಪಾಲ ನಾಯ್ಕ್ ಎಂಬುವವರು ಚಾಕು ಇರಿತದಿಂದ ಮೃತಪಟ್ಟಿವರಾಗಿದ್ದಾರೆ.,ಮೃತರು ಪತ್ನಿ ಮತ್ತು ಇಬ್ಬರು ಪುತ್ರರು, ಇಬ್ಬರು ಪುತ್ರಿಯರು ಮತ್ತು ಸಂಬಂಧಿಕರನ್ನು ಅಗಲಿದ್ದಾರೆ.ವಿಷಯ ತಿಳಿದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ಘಟನೆಯಲ್ಲಿ ನಾಗರಾಜ ನಾಯ್ಕ, ಹೇಮಂತ್ ನಾಯ್ಕ್, ತರುಣ್ ನಾಯ್ಕ್, ಎಂಬುವವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಪಾವಗಡ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಆರೋಪಿಯನ್ನು ಪೋಲಿಸರು ಬಂಧಿಸಿ ಬಿಗಿ ಭದ್ರತೆಯೊಂದಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆಕೊಡಿಸಲಾಗುತ್ತದೆ. ತಿರುಮಣಿ ಗ್ರಾಮಾಂತರ ಪೋಲಿಸ್ ಠಾಣೆಯ ಸಿಪಿಐ ಗಿರೀಶ್ ಮತ್ತು ಪಾವಗಡ ಠಾಣೆಯ ಸಿಪಿಐ ಸುರೇಶ್ ಗಾಯಳುಗಳಿಂದ ಘಟನೆಯ ಬಗ್ಗೆ ಮಾಹಿತಿಯನ್ನು ಪಡೆದುಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ. ವರದಿ: ನಂದೀಶ್ ನಾಯ್ಕ ಪಿ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Bu0PpuFHlmt705QwiTL3vv ಯೂಟ್ಯೂಬ್ ಚಾನೆಲ್…
ಜನರು 5,000 ವರ್ಷಗಳಿಂದ ಚಹಾವನ್ನು ಕುಡಿಯುತ್ತಿದ್ದಾರೆ. ಇದು ನೀರಿನ ನಂತರ ಜಗತ್ತಿನಲ್ಲಿ ಎರಡನೇ ಅತಿ ಹೆಚ್ಚು ಸೇವಿಸುವ ಪಾನೀಯವಾಗಿದೆ. ಎಲ್ಲಾ ವಿಧದ ಚಹಾವು ಪ್ರಯೋಜನಗಳನ್ನು ನೀಡುತ್ತದೆ ಎಂಬುದಕ್ಕೆ ಯಾವುದೇ ಸ್ಪಷ್ಟ ಪುರಾವೆಗಳಿಲ್ಲದಿದ್ದರೂ, ಸಂಶೋಧಕರು ಇನ್ನೂ ಕಪ್ಪು ಚಹಾದ ಸಂಪೂರ್ಣ ಶಕ್ತಿ ಮತ್ತು ಆರೋಗ್ಯವನ್ನು ಸುಧಾರಿಸುವ ಹಲವಾರು ವಿಧಾನಗಳ ಬಗ್ಗೆ ಅಧ್ಯಯನಗಳ ಮೂಲಕ ಕಲಿಯುತ್ತಿದ್ದಾರೆ. ಕಪ್ಪು ಚಹಾವು ಪ್ರಪಂಚದಾದ್ಯಂತ ಅತ್ಯಂತ ಜನಪ್ರಿಯವಾದ ಚಹಾವಾಗಿದೆ. ಕ್ಯಾಮೆಲಿಯಾ ಸಿನೆನ್ಸಿಸ್ ಸಸ್ಯದ ಎಲೆಗಳನ್ನು ಬಳಸಿ ತಯಾರಿಸಿದ ನಾಲ್ಕು ವಿಧದ ಚಹಾಗಳಲ್ಲಿ ಇದು ಒಂದಾಗಿದೆ. ಇತರ ಚಹಾಗಳಿಗಿಂತ ಭಿನ್ನವಾಗಿ, ಕಪ್ಪು ಚಹಾ ಎಲೆಗಳು ವ್ಯಾಪಕವಾದ -ಆಕ್ಸಿಡೀಕರಣ ಪ್ರಕ್ರಿಯೆಗೆ ಒಳಗಾಗುತ್ತವೆ, ಎಲೆಗಳೊಳಗಿನ ಜೀವಕೋಶಗಳನ್ನು ಆಮ್ಲಜನಕಕ್ಕೆ ಒಡ್ಡುತ್ತವೆ. ಈ ಆಕ್ಸಿಡೀಕರಣವು ಕಪ್ಪು ಚಹಾಕ್ಕೆ ಹಸಿರು ಚಹಾಕ್ಕಿಂತ ವಿಭಿನ್ನ ಪ್ರಯೋಜನಗಳನ್ನು ನೀಡುತ್ತದೆ ಎಂದು ತಜ್ಞರು ನಂಬುತ್ತಾರೆ. ಚಹಾದ ಪ್ರಯೋಜನಗಳು ಪಾಲಿಫಿನಾಲ್ಗಳಿಂದ ಬರುತ್ತವೆ. ಅನೇಕ ದೀರ್ಘಕಾಲದ ಕಾಯಿಲೆಗಳ ವಿರುದ್ಧ ರಕ್ಷಣೆ ನೀಡುವ ಉತ್ಕರ್ಷಣ ನಿರೋಧಕಗಳು, ಕಪ್ಪು ಚಹಾವು ಥಿಯೋಫ್ಲಾವಿನ್ ಎಂಬ ಪಾಲಿಫಿನಾಲ್ಗಳ ಗುಂಪನ್ನು ಹೊಂದಿರುತ್ತದೆ.…