Subscribe to Updates
Get the latest creative news from FooBar about art, design and business.
- ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!
- ಮುಳ್ಳಯ್ಯನಗಿರಿಯಲ್ಲಿ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಟಿಟಿ: 13 ಪ್ರವಾಸಿಗರು ಅದೃಷ್ಟವಶಾತ್ ಪಾರು!
- ಥಿಯೇಟರ್ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ
- ರಾಜ್ಯದಲ್ಲಿ ಸಿಎಂ ಬದಲಾವಣೆ ಇಲ್ಲ: ಸ್ಪಷ್ಟನೆ ನೀಡಿದ ಆರ್.ವಿ.ದೇಶಪಾಂಡೆ
- ಇಂಧನ ದರ ಏರಿಕೆ: ರಾಜಕೀಯ ಮಾಡದೆ ವ್ಯಾಟ್ ಕಡಿಮೆ ಮಾಡಿ; ಸಿಎಂ ಸಿದ್ದರಾಮಯ್ಯಗೆ ಆರ್.ಅಶೋಕ್ ಒತ್ತಾಯ
- ಸಂಸ್ಕರಿಸದೆ ನದಿಗೆ ತ್ಯಾಜ್ಯ ಹರಿಸಿದರೆ ಕ್ರಿಮಿನಲ್ ಮೊಕದ್ದಮೆ: ಅರಣ್ಯ ಸಚಿವ ಈಶ್ವರ ಖಂಡ್ರೆ ಖಡಕ್ ಎಚ್ಚರಿಕೆ!
- ಬೇಸಿಗೆ ಕಾಲದಲ್ಲಿ ಲಿಂಬೆಹಣ್ಣುಗಳನ್ನು ದೀರ್ಘಕಾಲದವರೆಗೆ ತಾಜಾವಾಗಿಡುವುದು ಹೇಗೆ?
- ವಿಶ್ವದ ಅತ್ಯಂತ ದೊಡ್ಡ ಶಕ್ತಿ ತಾಯಿ: ಪರಿಷತ್ ಸದಸ್ಯ ಆರ್.ರಾಜೇಂದ್ರ ರಾಜಣ್ಣ
Author: admin
ಅಶ್ವಥ್ ನಗರದ ಪುಟ್ಟಯ್ಯ ಕಾಂಪೌಂಡ್ ಅಂಗನವಾಡಿ ಕೇಂದ್ರದಲ್ಲಿ ಅನಂತ್ನಾಗ್ ಅವರು ನೆನ್ನೆ ಮತ ಚಲಾಯಿಸಿದರು. ಬಳಿಕ ಮಾತನಾಡಿದ ಅವರು, ಮತದಾನ ಮಾಡದವರನ್ನ ಮತಪಟ್ಟಿಯಿಂದ ತೆಗೆದುಹಾಕಿ ಎಂದು ಒತ್ತಾಯಿಸಿದರು. ಕಳೆದ ಐದು ಚುನಾವಣೆಗಳಿಂದ ಇದರ ಬಗ್ಗೆಯೇ ಚರ್ಚೆ ಆಗುತ್ತಲೇ ಇದೆ. ಯಾರು ನಿರಂತರವಾಗಿ ಮತ ಹಾಕುವುದಿಲ್ಲವೋ ಅವರನ್ನ ಮತಪಟ್ಟಿಯಿಂದಲೇ ತೆಗೆದುಹಾಕಿ ಎಂದು ಅವರು ಒತ್ತಾಯಿಸಿದರು. ಅಲ್ಲಿ ಯೋಧರು ದೇಶಕ್ಕಾಗಿ ಪ್ರಾಣ ಕೊಡುತ್ತಿದ್ದಾರೆ. ಇವರು ಮನೆಯಿಂದ ಹೊರಬಂದು ಒಂದು ಓಟ್ ಮಾಡೋಕಾಗಲ್ವ? ಸ್ವಾತಂತ್ರ್ಯ ಬಂದು 75 ವರ್ಷ ಆಯ್ತು. ಇನ್ನೂ ಎಂಥಹ ಜಾಗೃತಿ ಬೇಕು?. ಇಲ್ಲಿ ಯುವಕರು, ಹಿರಿಯರು ಎನ್ನುವ ಪ್ರಶ್ನೆ ಇಲ್ಲ ಎಂದು ಅನಂತ್ ನಾಗ್ ಹೇಳಿದರು. ಎಲ್ಲರನ್ನೂ ಒಂದೇ ತರಹ ನೋಡಿ. 75 ವರ್ಷಗಲ್ಲಿ ಆಗದ ಕೆಲಸ ಮುಂದೆ ಬರುವ ಸರ್ಕಾರ ಮಾಡಬೇಕು”ಎಂದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಇವಿಎಂ–ವಿವಿ ಪ್ಯಾಟ್ ತಾಳೆಯ ಅರ್ಜಿಯನ್ನು ಸುಪ್ರೀಂಕೋರ್ಟ್ ತಿರಸ್ಕರಿಸಿರುವುದು ವಿಪಕ್ಷಗಳಿಗೆ ಭಾರೀ ಮುಖಭಂಗವಾಗಿದೆ ಎಂದು ಪ್ರಧಾನಿ ನರೇಂದ್ರಮೋದಿ ಅವರು ತಿಳಿಸಿದ್ದಾರೆ. ಮತಪತ್ರ ವ್ಯವಸ್ಥೆ ಮರುಜಾರಿಗೆ ಒತ್ತಾಯಿಸುವ ಮೂಲಕ ಕಾಂಗ್ರೆಸ್ ಮತಗಟ್ಟೆ ವಶದಂತಹ ಅಕ್ರಮ ಎಸಲು ಬಯಸಿತ್ತು. ಆದರೆ ಸುಪ್ರೀಂಕೋರ್ಟ್ ನೀಡಿದ ತೀರ್ಪಿನಿಂದಾಗಿ ವಿಪಕ್ಷಗಳಿಗೆ ಹಿನ್ನಡೆಯಾಗಿದೆ ಎಂದರು. ಚುನಾವಣಾ ಅಕ್ರಮ ತಡೆಯಲು ಮತ್ತು ಪಾರದರ್ಶಕತೆ ಕಾಯ್ದಕೊಳ್ಳಲು ವಿದ್ಯುನ್ಮಾನ ಮತಯಂತ್ರಗಳಲ್ಲಿ ಚಲಾವಣೆಯಾದ ಮತಗಳ ಪರಿಶೀಲನೆಗೆ ವಿವಿಪ್ಯಾಟ್ ವ್ಯವಸ್ಥೆ ಒದಗಿಸಲಾಗಿದೆ. ಆದರೆ ಇದರಲ್ಲಿ ದೋಷಗಳಿದ್ದು ಚಲಾವಣೆಯಾದ ಎಲ್ಲ ವಿವಿಪ್ಯಾಟ್ ಚೀಟಿಗಳ ಪರಿಶೀಲಿನೆಗೆ ಅವಕಾಶ ನೀಡಬೇಕೆಂದು ವಿಪಕ್ಷಗಳು ಅರ್ಜಿಗಳನ್ನು ಸಲ್ಲಿಸಲಾಗಿತ್ತು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಈ ಬಾರಿಯ ಲೋಕಸಭಾ ಚುನಾವಣೆಯಲ್ಲೂ ಸಿಲಿಕಾನ್ ಸಿಟಿಯ ಮತದಾರರು ಮತದಾನಕ್ಕೆ ನಿರುತ್ಸಾಹ ತೋರಿದ್ದಾರೆ. ಬೆಂಗಳೂರು ಕೇಂದ್ರ, ಬೆಂಗಳೂರು ಉತ್ತರ ಮತ್ತು ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರಗಳ ಅರ್ಧದಷ್ಟು ಮತದಾರರು ಮತವನ್ನೇ ಚಲಾಯಿಸಿಲ್ಲ. ಈ ಮೂರು ಕ್ಷೇತ್ರಗಳಲ್ಲಿ ಬರೋಬ್ಬರಿ 79,91,410 ಮತದಾರರಿದ್ದಾರೆ. ಈ ಪೈಕಿ ಅರ್ಧದಷ್ಟು ಮಂದಿ ತಮ್ಮ ಹಕ್ಕನ್ನು ಚಲಾಯಿಸಿಲು ನಿರುತ್ಸಾಹ ತೋರಿದ್ದಾರೆ. ರಾಜ್ಯ ಚುನಾವಣಾ ಆಯೋಗ ಹಾಗೂ ಬಿಬಿಎಂಪಿ ಮತದಾನ ಹೆಚ್ಚಳಕ್ಕೆ ಹಲವು ಜಾಗೃತಿ ಕಾರ್ಯಕ್ರಮಗಳನ್ನು ಮಾಡಿದರೂ ಫಲ ಸಿಕ್ಕಿಲ್ಲ. ಸರ್ಕಾರಿ, ಖಾಸಗಿ ಕಂಪನಿಗಳ ಉದ್ಯೋಗಿಗಳು ಹಾಗೂ ಕಾರ್ಮಿಕರಿಗೆ ಮತದಾನ ಮಾಡಲು ರಜೆ ನೀಡಿದರೂ, ಮತದಾರ ಮಾತ್ರ ಮತಗಟ್ಟೆಯ ಹತ್ತಿರ ಸುಳಿಯಲಿಲ್ಲ. 2014 ಮತ್ತು 2019ರ ಲೋಕಸಭಾ ಚುನಾವಣೆಗೆ ಹೋಲಿಸಿದರೆ, ಈ ಬಾರಿಯೂ ಕಡಿಮೆ ಮತದಾನವಾಗಿದೆ. ಬೆಂಗಳೂರು ಉತ್ತರ ಕ್ಷೇತ್ರದಲ್ಲಿ 2014ರಲ್ಲಿ 56.53 ರಷ್ಟು, 2019ರಲ್ಲಿ 54.76ರಷ್ಟು ಹಾಗೂ 2024ರಲ್ಲಿ 54.42ರಷ್ಟು ಮತದಾನವಾಗಿದೆ. ಬೆಂಗಳೂರು ಕೇಂದ್ರದಲ್ಲಿ 2014ರಲ್ಲಿ 55.64 ರಷ್ಟು, 2019ರಲ್ಲಿ 54.32ರಷ್ಟು ಹಾಗೂ 2024ರಲ್ಲಿ 52.81ರಷ್ಟು ಮತದಾರರು ಮತದಾನ…
ತುಮಕೂರು: ಪಿಯುಸಿ ಉತ್ತರ ಪತ್ರಿಕೆಗಳ ಮರುಮೌಲ್ಯಮಾಪನದ ಫಲಿತಾಂಶ ಹೊರಬಿದ್ದಿದ್ದು, ವಾಣಿಜ್ಯ ವಿಭಾಗದಲ್ಲಿ ಗ್ಯಾಸ್ ಸಿಲಿಂಡರ್ ವಿತರಕನ ಪುತ್ರಿ ರಾಜ್ಯಕ್ಕೆ 3ನೇ ಸ್ಥಾನ ಗಳಿಸಿದ್ದಾರೆ. ತುಮಕೂರಿನ ವಿದ್ಯಾವಾಹಿನಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಪವಿತ್ರಾ ಜಿ.ಬಿ. ಅವರು ಮರುಮೌಲ್ಯಮಾಪನದಲ್ಲಿ ಮೊದಲಿಗಿಂತ 4 ಅಂಕಗಳನ್ನು ಹೆಚ್ಚು ಪಡೆದಿದ್ದಾರೆ. ಈ ಮೂಲಕ ಒಟ್ಟು 595 ಅಂಕಗಳನ್ನು ಪಡೆದು ರಾಜ್ಯಕ್ಕೆ 3ನೇ ಸ್ಥಾನ ಪಡೆದಿದ್ದಾರೆ. ಮೊದಲಿಗೆ ಪ್ರಕಟಗೊಂಡ ಫಲಿತಾಂಶದಲ್ಲಿ ಪವಿತ್ರಾ 591 ಅಂಕಗಳನ್ನು ಪಡೆದಿದ್ದರು. ಕನ್ನಡದಲ್ಲಿ 99, ವ್ಯವಹಾರ ಅಧ್ಯಯನದಲ್ಲಿ 95 ಅಂಕಗಳು ಬಂದಿದ್ದವು. ಈ ಎರಡು ವಿಷಯಗಳನ್ನು ಮರುಮೌಲ್ಯಮಾಪನಕ್ಕೆ ಹಾಕಿದಾಗ ಕನ್ನಡದಲ್ಲಿ 1. ವ್ಯವಹಾರ ಅಧ್ಯಯನದಲ್ಲಿ 3 ಅಂಕಗಳು ಹೆಚ್ಚುವರಿಯಾಗಿ ಬಂದಿವೆ. ಇದರೊಂದಿಗೆ ಒಟ್ಟು 595 ಅಂಕಗಳನ್ನು ಪಡೆದು ವಾಣಿಜ್ಯ ವಿಭಾದಲ್ಲಿ ರಾಜ್ಯಕ್ಕೆ 3ನೇ ಸ್ಥಾನ ಬಂದಿದ್ದಾರೆ. ಪವಿತ್ರಾ ಅವರ ತಂದೆ ಬಸವರಾಜು ಸಿಲಿಂಡರ್ ವಿತರಕರಾಗಿ ಕೆಲಸ ಮಾಡುತ್ತಿದ್ದಾರೆ. ತಾಯಿ ಗೃಹಿಣಿಯಾಗಿದ್ದಾರೆ. ಪುತ್ರಿಯ ಸಾಧನೆಗೆ ತಂದೆ ಹಾಗೂ ಕಾಲೇಜಿನ ಉಪನ್ಯಾಸಕರು ಸಂತಸ ವ್ಯಕ್ತಪಡಿಸಿದ್ದಾರೆ. ನಮ್ಮತುಮಕೂರಿನ ಕ್ಷಣ…
ಉತ್ತರ ಪ್ರದೇಶ : ವಾಹನ ಚಲಾಯಿಸುವ ವೇಳೆ ಮೊಬೈಲ್ ಬಳಸದಂತೆ ಎಷ್ಟೇ ಜಾಗೃತಿ ಮೂಡಿಸಿದವರು ಜನರು ತಿಳಿದುಕೊಳ್ಳುತ್ತಿಲ್ಲ. ಇದೇ ಕಾರಣಕ್ಕೆ ಪ್ರತಿದಿನ ಅನಾಹುತಗಳು ಘಟಿಸುತ್ತಲೇ ಇವೆ. ಇದೀಗ ಬೈಕ್ ಓಡಿಸುತ್ತಿದ್ದ ವೇಳೆ ಮೊಬೈಲ್ ಬ್ಲಾಸ್ಟ್ ಆಗಿ ಮಹಿಳೆ ಸಾವನ್ನಪ್ಪಿದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಕಾನ್ಸುರದಲ್ಲಿ ಮಹಿಳೆ ಹೆಲೈಟ್ ಧರಿಸದೆ ಸ್ಕೂಟರ್ ಸವಾರಿ ಮಾಡುತ್ತಿದ್ದಳು. ಈ ವೇಳೆ ಇದ್ದಕ್ಕಿದ್ದಂತೆಯೇ ಮೊಬೈಲ್ ಬ್ಲಾಸ್ಟ್ ಆಗಿದೆ. ಮೊಬೈಲ್ ಬ್ಲಾಸ್ಟ್ ಆಗುತ್ತಿದ್ದಂತೆಯೇ ಮಹಿಳೆಯ ಸ್ಕೂಟರ್ ನಿಯಂತ್ರಣ ತಪ್ಪಿ ರಸ್ತೆಯಲ್ಲಿ ಬಿದ್ದಿದ್ದಾಳೆ. ಗಂಭೀರವಾಗಿ ಗಾಯಗೊಂಡಿದ್ದ ಅವಳನ್ನು ಸ್ಥಳೀಯರು ಪೊಲಿಸರಿಗೆ ಮಾಹಿತಿ ನೀಡಿ, ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ, ಮಾರ್ಗಮಧ್ಯೆ ಆಕೆ ಸಾವನ್ನಪ್ಪಿದ್ದಾಳೆ. ಸಾವನ್ನಪ್ಪಿದ ಮಹಿಳೆಯನ್ನು ಪೂಜಾ(28) ಎಂದು ಗುರುತಿಸಲಾಗಿದೆ. ನೆಹ್ರರಿಯಾ ಗ್ರಾಮದ ಫರೂಖಾಬಾದ್ ಜಿಲ್ಲೆಯವಳಾಗಿರುವ ಪೂಜಾ ರೈಲು ನಿಲ್ದಾಣಕ್ಕೆ ಸ್ಕೂಟರ್ ನಲ್ಲಿ ತೆರಳುವ ವೇಳೆ ಈ ದುರ್ಘಟನೆ ಸಂಭವಿಸಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್…
ಹುಬ್ಬಳ್ಳಿ: ನೇಹಾ ತಂದೆ ನಿರಂಜನ ಹಿರೇಮಠ ಅವರಿಗೆ ಗನ್ ಮ್ಯಾನ್, ಮನೆಗೆ ಪೊಲೀಸ್ ಭದ್ರತೆಯನ್ನು ರಾಜ್ಯ ಸರ್ಕಾರ ಕಲ್ಪಿಸಿದೆ. ನೇಹಾ ಹಿರೇಮಠ ಹತ್ಯೆ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ನೇಹಾ ತಂದೆ ನಿರಂಜನ್ ಅವರನ್ನು ಭೇಟಿಯಾಗಿ ಸಾಂತ್ವನ ಹೇಳಿ, ಜೀವಬೆದರಿಕೆ ಇದ್ದರೆ ಭದ್ರತೆ ಒದಗಿಸುವುದಾಗಿ ಭರವಸೆ ನೀಡಿದ್ದರು. ಅದರಂತೆ ನೇಹಾ ತಂದೆಗೆ ಭದ್ರತೆ ವ್ಯವಸ್ಥೆ ಮಾಡಲಾಗಿದೆ. ಮಗಳ ಹತ್ಯೆ ನಂತರ ಅನೇಕರು ಬಂದು ಸಾಂತ್ವನ ಹೇಳಿ, ಧೈರ್ಯ ತುಂಬುತ್ತಿದ್ದಾರೆ. ಆದರೆ ಸಂತಾಪದ ನೆಪದಲ್ಲಿ ಒಬ್ಬರು ನಮ್ಮ ಮನೆಗೆ ಬಂದು ವಿಡಿಯೋ ಮಾಡಿಕೊಂಡು ಹೋಗಿದ್ದಾರೆ. ಕೆಲವೊಂದು ಅನುಮಾನಾಸ್ಪದ ಸನ್ನಿವೇಶ ಕಂಡುಬಂದಿದೆ. ಈ ವಿಷಯನ್ನು ಪೊಲೀಸ್ ಆಯುಕ್ತರಿಗೆ ಹೇಳಿದ್ದೇವೆ. ಅವರು ಭದ್ರತೆ ಕೊಡುವುದಾಗಿ ಹೇಳಿದ್ದು ಪೊಲೀಸರನ್ನು ನಿಯೋಜಿಸಿದ್ದಾರೆಂದು ನಿರಂಜನ್ ತಿಳಿಸಿದ್ದರು. ಇದರ ಬೆನ್ನಲ್ಲೇ ಅವರಿಗೆ ಭದ್ರತೆ ವ್ಯವಸ್ಥೆ ಮಾಡಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ದೆಹಲಿ: ಸರ್ಕಾರಿ ಶಾಲಾ ಮಕ್ಕಳಿಗೆ ಪಠ್ಯಪುಸ್ತಕ-ಸಮವಸ್ತ್ರ ಪೂರೈಕೆ ವಿಳಂಬಕ್ಕೆ ಸಂಬಂಧಿಸಿದಂತೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಸರ್ಕಾರದ ವಿರುದ್ಧ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ. ಜೈಲಿನಿಂದ ಅಧಿಕಾರ ನಡೆಸುತ್ತಿರುವ ಕೇಜ್ರಿವಾಲ್ ಗೆ ದೇಶಕ್ಕಿಂತ ಅಧಿಕಾರವೇ ಮುಖ್ಯವಾಯಿತೆ ಎಂದು ಚಾಟಿ ಬೀಸಿರುವ ಹೈಕೋರ್ಟ್, ಸರ್ಕಾರ ಮಕ್ಕಳ ಶಿಕ್ಷಣದ ಬಗ್ಗೆ ಅವರ ಭವಿಷ್ಯದ ಬಗ್ಗೆ ಯಾವುದೇ ಚಿಂತೆ ಇಲ್ಲ. ಮಕ್ಕಳಿಗೆ ಪಠ್ಯ ಪುಸ್ತಕ ಸಿಗುತ್ತಿಲ್ಲ. ಮೂಲಭೂತ ಹಕ್ಕಾದ ಶಿಕ್ಷಣ ಪಡೆಯಲು ಸಮಸ್ಯೆಯಾಗುತ್ತಿದೆ ಎಂದು ಹೇಳಿದೆ. ದೆಹಲಿಯಲ್ಲಿ ಆಡಳಿತ ಮಾಡುತ್ತಿರುವ ಎಎಪಿ ಪಕ್ಷ ಕೇವಲ ಅಧಿಕಾರಕ್ಕೆ ಅಂಟಿಕೊಂಡಿದೆ. ಸಿಎಂ ಕೇಜ್ರಿವಾಲ್ ಗೆ ಜನರ ಹಿತಕ್ಕಿಂತ ವೈಯಕ್ತಿಕ ರಾಜಕೀಯ ಮೇಲಾಟವೇ ಮುಖ್ಯವಾಗಿದೆ ಎಂದು ಎಎಪಿ ಪರ ವಕೀಲರನ್ನು ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. ವೈಯಕ್ತಿಕ ಪ್ರತಿಷ್ಠೆಗೆ ಜೋತು ಬಿದ್ದಿರುವ ಕೇಜ್ರಿವಾಲ್ ರಾಜೀನಾಮೆ ನೀಡದೆ ರಾಜಕೀಯ ಡ್ರಾಮಾ ಮಾಡುತ್ತಿದ್ದಾರೆ. ಮುಖ್ಯಮಂತ್ರಿ, ಸಚಿವರು ಜೈಲಿನಲ್ಲಿದ್ದುಕೊಂಡು ಉತ್ತಮ ಆಡಳಿತ, ಜನರಿಗೆ ಸ್ಪಂದನೆ ನೀಡಲು ಸಾಧ್ಯವೇ? ಎಂದು ನ್ಯಾಯಪೀಠ ಪ್ರಶ್ನಿಸಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು…
ಕೊರಟಗೆರೆ: ವಿಧಾನಸಭಾ ಕ್ಷೇತ್ರದ ಕೆಲವು ಮತಗಟ್ಟೆಗಳಿಗೆ ದಿಡೀರ್ ಚುನಾವಣಾ ಜನರಲ್ ಅಬ್ಸರ್ವರ್ ಭೇಟಿ ನೀಡಿ ಮತಕಟ್ಟೆಯಲ್ಲಿ ಏನಾದರು ಸಮಸ್ಯೆಗಳು ಇದೇಯೆ ಎಂದು ಪರಿಶೀಲನೆ ನಡೆಸಿದ್ದಾರೆ. ಪಟ್ಟಣದ ಜೂನಿಯರ್ ಕಾಲೇಜ್ ಹಾಗೂ ತುಂಬಾಡಿ ಗ್ರಾಮದ ಮತಗಟ್ಟೆಗಳಿಗೆ ಭೇಟಿ ಪರಿಶೀಲನೆ ನಡೆಸಿದ್ದಾರೆ. ತಹಶೀಲ್ದಾರ್ ಹಾಗೂ ಸ್ಥಳೀಯ ಚುನಾವಣಾ ಅಧಿಕಾರಿಯಿಂದ ಚುನಾವಣಾ ಜನರಲ್ ಅಬ್ಸರ್ವರ್ ಅಧಿಕಾರಿಗಳು ಮಾಹಿತಿಯನ್ನು ಪಡೆದಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ತುಮಕೂರು: ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಗೋಡೆಕೆರೆ ಗ್ರಾಮದಲ್ಲಿ ಮತದಾನ ನಡೆಯಿತು. ಲೋಕಸಭೆ ಚುನಾವಣೆ ಹಿನ್ನೆಲೆ, ನೂತನ ವಧು ವರ ಮದುವೆಯಾದ ಬಳಿಕ ಮತದಾನ ಮಾಡಿದರು. ನೂತನ ವಧು ವರರು ಮತಗಟ್ಟೆ ಸಂಖ್ಯೆ 253 ರಲ್ಲಿ ಮತದಾನ ಮಾಡುವ ಮೂಲಕ ತಮ್ಮ ಹಕ್ಕು ಚಲಾವಣೆ ಮಾಡಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ಚಿಂಪುಗಾನಹಳ್ಳಿಯಲ್ಲಿ ಗುಡಿಸಲುಗಳಲ್ಲಿದ್ದ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡು ಭಾರೀ ಅನಾಹುತವೊಂದು ತಪ್ಪಿದೆ. ಆಕಸ್ಮಿಕವಾಗಿ ಕಾಣಿಸಿಕೊಂಡ ಬೆಂಕಿಗೆ ಹತ್ತಕ್ಕೂ ಹೆಚ್ಚು ಗುಡಿಸಲುಗಳು ಸುಟ್ಟು ಭಸ್ಮವಾಗಿವೆ. ಕರ್ತವ್ಯ ನಿರತ ಚುನಾವಣಾ ಅಧಿಕಾರಿಗಳು ಅಗ್ನಿಶಾಮಕ ಠಾಣೆಗೆ ಮಾಹಿತಿ ನೀಡಿದ್ದಾರೆ. ಗುಡಿಸಲಿನಲ್ಲಿದ್ದ ದಿನಸಿ, ಬಟ್ಟೆ, ವಸ್ತುಗಳು ಭಸ್ಮವಾಗಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ. ಮಾಹಿತಿ ತಿಳಿದು ತಕ್ಷಣವೇ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕದಳವರು ಬೆಂಕಿ ನಂದಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296