Author: admin

ತುಮಕೂರು: ಲೋಕ ಸಭಾ ಚುನಾವಣೆ ಹಿನ್ನಲೆಯಲ್ಲಿ ಕರ್ನಾಟಕ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ ಅವರು ಪತ್ನಿ ಜೊತೆ ಆಗಮಿಸಿ ಮತದಾನ ಮಾಡಿದ್ದಾರೆ. ತುಮಕೂರು ಜಿಲ್ಲೆಯ ಶಿರಾ ತಾಲ್ಲೂಕಿನ ಬಾಲೇನ ಹಳ್ಳಿ ಮತಗಟ್ಟೆ ಸಂಖ್ಯೆ 224ರಲ್ಲಿ ಟಿ.ಬಿ.ಜೆ ಮತದಾನ ಮಾಡುವ ಮೂಲಕ ತಮ್ಮ ಹಕ್ಕು ಚಲಾಯಿಸಿದ್ದಾರೆ. ನಂತರ ಮಾತನಾಡಿದ ದೇಶದ ಪ್ರಜೆಯಾಗಿ ಸಂವಿಧಾನದತ್ತ ಅಧಿಕಾರವನ್ನು ಚಲಾಯಿಸಿದ್ದೇನೆ. ಎಲ್ಲರೂ ತಪ್ಪದೇ ಮತ ಚಲಾಯಿಸುವಂತೆ ಟಿ.ಬಿ.ಜೆ ಮನವಿ ಮಾಡಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಪಾವಗಡ:  ಚಿತ್ರದುರ್ಗ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ ತುಮಕೂರು ಜಿಲ್ಲೆ ಪಾವಗಡ ತಾಲ್ಲೂಕಿನ ಟಿ.ಎನ್. ಬೆಟ್ಟದ ನವ ದಂಪತಿ ಲಕ್ಷ್ಮೀ ಪತಿ ಪಿ.ಹೆಚ್. ಮತ್ತು ನವ್ಯಶ್ರೀ ಇಂದು ಹಸೆಮಣೆ ತುಳಿದು ನವ ಸಂಸಾರಕ್ಕೆ ಕಾಲಿಟ್ಟರು. ಮತದಾನವೂ ಇಂದೇ ಇರುವುದರಿಂದ, ಇದು ನಮ್ಮ ಹಕ್ಕು ನಮ್ಮ ಕರ್ತವ್ಯ. ಯಾರೂ ಕೂಡ ಮತದಾನದಿಂದ ದೂರ ಉಳಿಯದಿರಿ. ಎಲ್ಲರೂ ಮತಗಟ್ಟೆಗೆ ಬಂದು ಮತದಾನ ಮಾಡಿ ಎಂದು ಸಂದೇಶ ರವಾನಿಸಿದರು. ಪ್ರಜಾಪ್ರಭುತ್ವದ ಭದ್ರ ಬುನಾದಿ ಈ ಮತದಾನ ಅಂತಹ ಮತದಾನದ ಮೌಲ್ಯ ಅರಿತ  ಈ ನವ ದಂಪತಿಗಳ ಕಾರ್ಯ ಕಂಡ ನೆಟ್ಟಿಗರು, ಚುನಾವಣಾ ಅಧಿಕಾರಿಗಳು ಅವರಿಗೆ  ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಜೀವನದ ಮುಖ್ಯ ಘಟ್ಟ ತಲುಪಿದ ನವ ದಂಪತಿಗಳಾದ ಲಕ್ಷ್ಮೀಪತಿ ಹಾಗೂ ನವ್ಯಶ್ರೀ ಅವರಿಗೆ ಬದುಕಲ್ಲಿ ಭಗವಂತ  ಒಳಿತು ಮಾಡಲಿ.. ಒಬ್ಬೊಬ್ಬರನ್ನೊಬ್ಬರು ಅರ್ಥ ಮಾಡಿಕೊಂಡು ಬದುಕುವ ಶಕ್ತಿ ತಾಳ್ಮೆ ಕರುಣಿಸಲಿ ಎಂದು ಹಾರೈಸೋಣ. ವರದಿ: ನಂದೀಶ್ ನಾಯ್ಕ ಪಾವಗಡ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ…

Read More

ಲೋಕಸಭಾ ಚುನಾವಣೆಗೆ ರಾಜ್ಯದ 14 ಕ್ಷೇತ್ರಗಳಲ್ಲಿ ಮತದಾನ ಪ್ರಕ್ರಿಯೆ ನಡೆಯುತ್ತಿದ್ದು, ಹಲವು ಸ್ವಾರಸ್ಯಕರ ಘಟನೆಗಳಿಗೆ ಸಾಕ್ಷಿಯಾಗುತ್ತಿವೆ. ಅಚ್ಚರಿಯೆಂಬಂತೆ ಒಂದೇ ಕುಟುಂಬದ 85 ಮಂದಿ ಏಕಕಾಲದಲ್ಲಿ ಮತದಾನ ಮಾಡಿದ್ದಾರೆ. ಹೌದು. ಚಿಕ್ಕಬಳ್ಳಾಪುರ ನಗರದ ಮತಗಟ್ಟೆ ಸಂಖ್ಯೆ 161ರಲ್ಲಿ ವಾರ್ಡ್ ನಂಬರ್ 19ರ ನಿವಾಸಿಗಳು ತಮ್ಮ ಹಕ್ಕು ಚಲಾಯಿಸಿದ್ದಾರೆ. ತಾಯಿ-ಮಗಳು-ಮೊಮ್ಮಗಳು ಸೇರಿದಂತೆ ಒಂದೇ ಕುಟುಂಬದ 85 ಮಂದಿ ಮತ ಹಾಕಿದ್ದಾರೆ. ಮತದಾನಕ್ಕಾಗಿ ಎಲ್ಲರೂ ಒಂದೆಡೆ ಸೇರಿ ಮತದಾನ ಮಾಡುವ ಸಂಪ್ರದಾಯವಿದೆ. ಅಂತೆಯೇ ಬಾದಾಮ್ ಫ್ಯಾಮಿಲಿಯಿಂದ ಒಂದೇ ಸಮಯದಲ್ಲಿ ಮತದಾನ ನಡೆದಿದೆ. ಚಿಕ್ಕಬಳ್ಳಾಪುರದಲ್ಲಿ ಬಿಜೆಪಿಯಿಂದ ಡಾ. ಸುಧಾಕರ್ ಹಾಗೂ ಕಾಂಗ್ರೆಸ್‍ನಿಂದ ರಕ್ಷಾ ರಾಮಯ್ಯ ಚುನಾವಣಾ ಅಖಾಡದಲ್ಲಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296  

Read More

ಮತಗಟ್ಟೆಗೆ ಕೇಸರಿ ಶಾಲು ಧರಿಸಿ ಬಂದಿದ್ದ ಪಕ್ಷದ ಏಜೆಂಟ್ ಒಬ್ಬರನ್ನು ಪೊಲೀಸರು ವಾಪಸ್ ಕಳಿಸಿದ ಪ್ರಸಂಗ ಬೆಂಗಳೂರಿನ ಆರ್ ಆರ್ ನಗರದ ಮತಗಟ್ಟೆಯಲ್ಲಿ ಶುಕ್ರವಾರ ಬೆಳಗ್ಗೆ ನಡೆದಿದೆ. ಮತಗಟ್ಟೆಗೆ ಕೇಸರಿ ಶಾಲು ಧರಿಸಿ ಬಂದಿದ್ದ ವ್ಯಕ್ತಿಯನ್ನು, ಪರೋಕ್ಷವಾಗಿ ಪಕ್ಷದ ಪ್ರಚಾರ ಆಗಲಿದೆ ಎಂಬ ಕಾರಣಕ್ಕೆ ಪೊಲೀಸರು ವಾಪಸ್ ಕಳಿಸಿದರು. ಶಾಲು ತೆಗೆದಿಟ್ಟು ಬಂದ ನಂತರ ಮತಗಟ್ಟೆ ಒಳಗೆ ಬಿಡಲಾಯಿತು. ಬೆಂಗಳೂರು ನಗರದಲ್ಲಿ ಎಂದಿನಂತೆ ನಿಧಾನಗತಿಯಲ್ಲಿ ಮತದಾನ ಮುಂದುವರಿದಿದೆ. ಆದರೆ ವಿಧಾನಸಭಾ ಚುನಾವಣೆಗಿಂತ ವೇಗವಾಗಿ ಮತದಾನ ಪ್ರಕ್ರಿಯೆ ನಡೆಯುತ್ತಿದೆ. ಪ್ರಸ್ತುತ ಬೆಳಗ್ಗೆ 10 ಗಂಟೆವರೆಗೆ ಬೆಂಗಳೂರು ನಗರ ವ್ಯಾಪ್ತಿಯ ಮೂರೂ ಲೋಕಸಭಾ ಕ್ಷೇತ್ರಗಳಲ್ಲಿ ಒಟ್ಟು ಶೇ. 8.5ರಷ್ಟು ಮತದಾನವಾಗಿದೆ. ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ, ಮಾಜಿ ಸಿಎಂ ಸದಾನಂದ ಗೌಡ, ರಾಜ್ಯಸಭಾ ಸದಸ್ಯೆ ಸುಧಾ ಮೂರ್ತಿ, ಕ್ರಿಕೆಟಿಗ ರಾಹುಲ್ ದ್ರಾವಿಡ್, ಚಿತ್ರನಟಿ ಅಮೂಲ್ಯ, ಆರ್‌ಎಸ್‌ಎಸ್ ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ, ಸಚಿವ ಜಮೀರ್…

Read More

ನೋಡ ನೋಡುತ್ತಲೇ ಬೃಹತ್ ಮರವೊಂದು ನೆಲಕ್ಕುರುಳಿದೆ. ಬೆಂಗಳೂರಿನ ಶಾಂತಿನಗರ ವಿಧಾನಸಭಾ ಕ್ಷೇತ್ರದ 38ನೇ ಮತಗಟ್ಟೆ ಸಮೀಪದಲ್ಲೆ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ. ‘ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿರುಸಿನ ಮತದಾನ ನಡೆಯುತ್ತಿದ್ದು, ಇದೇ ವೇಳೆ ಮತಗಟ್ಟೆ ಸಮೀಪ ಬೃಹತ್ ಮರವೊಂದು ಬುಡ ಸಮೇತ ಕಿತ್ತು ಬಂದಿದ್ದು, ಭಾರೀ ಅನಾಹುತವೊಂದು ತಪ್ಪಿದೆ. ಆಗಷ್ಟೇ ಮತದಾನ ಮಾಡಲು ಮತದಾರರು ಆ ರಸ್ತೆ ಮೂಲಕ ಹಾದು ಹೋಗಿದ್ದರು. ಅದೃಷ್ಟವಶಾತ್‌ ಮರ ಬೀಳುವಾಗ ಆ ಸಂದರ್ಭದಲ್ಲಿ ಜನರ ಓಡಾಟ ಇರಲಿಲ್ಲ. ಹೀಗಾಗಿ ದೊಡ್ಡ ದುರಂತವೊಂದು ತಪ್ಪಿದೆ. ಮರದ ಪಕ್ಕದಲ್ಲೇ ಇದ್ದ ಮಾರುತಿ ಕಾರ್ ಬೋನೆಟ್‌ ಮೇಲೆ ಮರ ಬಿದ್ದಿದೆ. ಹೀಗಾಗಿ ಕಾರಿನ ಮುಂಭಾಗದ ಲೈಟ್‌ ಜಖಂ ಗೊಂಡಿದೆ. ರಸ್ತೆಗೆ ಅಡ್ಡಲಾಗಿ ಬೃಹತ್‌ ಮರ ಬಿದ್ದಿದ್ದು, ವಾಹನ ಸವಾರರ ಸಂಚಾರಕ್ಕೆ ಅಡ್ಡಿಯಾಗಿತ್ತು. ಇಂದಿರಾನಗರದ ಅಪ್ಪಾರೆಡ್ಡಿ ಪಾಳ್ಯದಲ್ಲಿರುವ ಮತಗಟ್ಟೆಯ ಕೂದಲಳತೆ ದೂರದಲ್ಲಿ ಘಟನೆ ನಡೆದಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್…

Read More

ಮತಗಟ್ಟೆಯಲ್ಲಿ ಎಪಿಆರ್ ಒ ಆಗಿ ಚುನಾವಣಾ ಕರ್ತವ್ಯಕ್ಕೆ ಹಾಜರಾಗಿದ್ದ ಶಿಕ್ಷಕಿ ಯಶೋಧಮ್ಮ (58) ಚಿತ್ರದುರ್ಗದ ಚಳ್ಳಕೆರೆ ತಾಲೂಕಿನ ಹೊಟ್ಟೆಪ್ಪನಹಳ್ಳಿ ಸಮೀಪದ ಗೊಲ್ಲರಗಟ್ಟಿ ಎಂಬಲ್ಲಿ ಹೃದಯಾಘಾತದಿಂದ ಮೃತ ಪಟ್ಟಿರುವ ಘಟನೆ ನಡೆದಿದೆ. ಮೃತ ದೇಹವನ್ನು ಸರ್ಕಾರಿ ಆಸ್ಪತ್ರೆಗೆ ತರಲಾಗಿದೆ. ಈ ಕುರಿತು ಮಾಹಿತಿ ನೀಡಿರುವ ಚುನಾವಣಾ ಅಧಿಕಾರಿ ಬಿ. ಆನಂದ್, ಮತದಾನಕ್ಕೆ ತೊಂದರೆಯಾಗದ ರೀತಿ ಬೇರೆ ಅಧಿಕಾರಿಯನ್ನು ನಿಯೋಜನೆ ಮಾಡಲಾಗಿದೆ ಎಂದು ಹೇಳಿದ್ದಾರೆ. ಯಶೋಧಮ್ಮ ಅವರು ನಮ್ಮಲ್ಲಿ ಅರೋಗ್ಯ ಸಮಸ್ಯೆಯ ಕುರಿತು ಏನು ಹೇಳಿಕೊಂಡಿರಲಿಲ್ಲ ಅಲ್ಲದೆ ಮತದಾನ ಆರಂಭದಲ್ಲಿ ಲವಲವಿಕೆಯಿಂದಲೇ ಕರ್ತವ್ಯ ನಿರ್ವಹಿಸಿದ್ದರು. ದಿಢೀರನೆ ಹೃದಯಾಘಾತಕ್ಕೆ ಒಳಗಾಗಿ ಮೃತರಾಗಿದ್ದಾರೆ ಎಂದು ತಿಳಿಸಿದ್ದಾರೆ. ಯಶೋದಮ್ಮ ಚಳ್ಳಕೆರೆ ತಾಲೂಕಿನ ಬೊಮ್ಮಸಂದ್ರ ಶಾಲೆಯಲ್ಲಿ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದರು ಎನ್ನಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296  

Read More

ಸಮಯ : ಮಧ್ಯಾಹ್ನ 3 ಗಂಟೆ. ಒಟ್ಟು ಮತದಾನ ಶೇಖಡಾವಾರು : 56.62% ಚಿಕ್ಕನಾಯಕನಹಳ್ಳಿ : 56.15 ಗುಬ್ಬಿ : 60.78 ಕೊರಟಗೆರೆ : 57.84 ಮಧುಗಿರಿ : 55.25 ತಿಪಟೂರು : 60.19 ತುಮಕೂರು ನಗರ : 48.73 ತುಮಕೂರು ಗ್ರಾಮಾಂತರ : 57.35 ತುರುವೇಕೆರೆ : 58.72 ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಮತದಾನದ ಬಳಿಕ ಕುಸಿದು ಬಿದ್ದು ಮತದಾರರೊಬ್ಬರು ಸಾವನ್ನಪ್ಪಿದ ಘಟನೆ ನಡೆದಿದೆ. ರಮೇಶ್ ಮೃತ ಹೃದಯಾಘಾತದಿಂದ ಮೃತಪಟ್ಟ ದುರ್ದೈವಿಯಾಗಿದ್ದಾರೆ. ಮಯೂರ ಯುವ ವೇದಿಕೆಯ ಸದಸ್ಯರಾಗಿರುವ ಎಚ್.ಕೆ. ರಮೇಶ್, ದಂಪತಿ ಸಮೇತವಾಗಿ ಇಂದು ಮತದಾನದಲ್ಲಿ ಪಾಲ್ಗೊಂಡಿದ್ದರು. ತುಮಕೂರಿನ ಎಸ್ .ಎಸ್. ಪುರಂ ಮತ ಕೇಂದ್ರದಿಂದ ಮತದಾನ ಮಾಡಿ ಬಂದಿದ್ದ ರಮೇಶ್‌, ಮತದಾನ ಮಾಡಿದ ಬಳಿಕ ತಮ್ಮದೇ ಮಾಲಿಕತ್ವದ ಬಟ್ಟೆ ಅಂಗಡಿ ಎಫ್ ಸ್ಕೊಯರ್’ಗೆ ತೆರಳಿದ್ದಾಗ ದಿಢೀರನೆ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಹೃದಯಾಘಾತದಿಂದ ಸಾವು ಸಂಭವಿಸಿದೆಯೆಂದು ಶಂಕಿಸಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

2024ರ ಲೋಕಸಭಾ ಚುನಾವಣೆಯ ಪ್ರಯುಕ್ತ ಕೊರಟಗೆರೆ ವಿಧಾನಸಭಾ ಕ್ಷೇತ್ರದಲ್ಲಿ ಬಿರುಸಿನ ಮತದಾನ ನಡೆಯಿತು. ಮತದಾನ ಮಾಡುವಲ್ಲಿ ಯುವಕರಿಗಿಂತ ಹಿರಿಯರೇ ಮೊದಲಿಗರಾಗಿದ್ದಾರೆ. ಕೊರಟಗೆರೆ ವಿಧಾನಸಭಾ ಕ್ಷೇತ್ರದ 240 ಮತಗಟ್ಟೆಗಳಲ್ಲಿ ಬಿಗಿ ಭದ್ರತೆ ಏರ್ಪಡಿಸಲಾಗಿತ್ತು. ಎಲ್ಲ ಮತಗಟ್ಟೆಗಳಲ್ಲೂ ಕುಡಿಯುವ ನೀರಿನಿಂದ ಹಿಡಿದು ಎಲ್ಲಾ ಮುಂಜಾಗ್ರತ ಕ್ರಮ ತೆಗೆದುಕೊಳ್ಳಲಾಗಿದೆ. 240 ಮತಗಟ್ಟೆಗಳಲ್ಲೂ ಯಾವುದೇ ಸಮಸ್ಯೆ ಇಲ್ಲದೆ ಸರಾಗವಾಗಿ ಮತದಾನ ನಡೆಯುತ್ತಿದೆ. ತನ್ನ ತಾತನ ಜೊತೆ ಮತಗಟ್ಟೆಗೆ ಬಂದ ಮೊಮ್ಮಗಳು ತಾತನ ಮತದಾನ ಮಾಡಿಸಿದಳು. ಕೊರಟಗೆರೆ ವಿಧಾನಸಭಾ ಕ್ಷೇತ್ರದ 240 ಮತಗಟ್ಟೆಯಿಂದ ಮತದಾನದ ಮಾಹಿತಿ ಪಡೆಯುತ್ತಿರುವ ಸಿಬ್ಬಂದಿ, ವಿಕಲಚೇತನ ಮತದಾರರಿಗೆ ಮತದಾನದ ಅರಿವು ಮೂಡಿಸಿ ವಿಶೇಷ ವಾಹನದ ಮೂಲಕ ಮತಗಟ್ಟೆಗೆ ಕರೆತಂದು ಮತದಾನ ಮಾಡಿದ ಘಟನೆಗಳು ನಡೆದಿವೆ. ಇಲ್ಲಿಯವರೆಗೂ ಶೇಕಡಾ 65 ರಷ್ಟೇ ಮತದಾನ ನಡೆದಿದೆ. ವರದಿ: ಮಂಜುಸ್ವಾಮಿ ಎಂ.ಎನ್. ಕೊರಟಗೆರೆ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಶ್ರೀನಗರ: ಉತ್ತರ ಕಾಶ್ಮೀರದ ಸೋಪೋರ್ ಪ್ರದೇಶದ ಚೆಕ್ ಮೊಹಲ್ಲಾ ನೌಪೋರಾದಲ್ಲಿ ಗುರುವಾರ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಎನ್‌ ಕೌಂಟರ್ ಪ್ರಾರಂಭಗೊಂಡು, ಶುಕ್ರವಾರ ಮುಂಜಾನೆಯೂ ಗುಂಡಿನ ದಾಳಿ ಮುಂದುವರೆದಿದೆ. ಇದುವರೆಗೆ ಇಬ್ಬರು ಉಗ್ರರು ಬಲಿಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಎನ್‌ ಕೌಂಟರ್ ‌ನಲ್ಲಿ ಗಾಯಗೊಂಡ ಇಬ್ಬರು ಸೇನಾ ಸಿಬ್ಬಂದಿಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದ್ದು, ಎನ್‌ಕೌಂಟರ್‌ನಲ್ಲಿ ಸಮೀಪದ ನಾಗರಿಕರೊಬ್ಬರು ಗಾಯಗೊಂಡಿದ್ದಾರೆ. ಎನ್‌ ಕೌಂಟರ್ ನಡೆದ ಪ್ರದೇಶದಲ್ಲಿ ಕಾರ್ಯಾಚರಣೆ ಮುಂದುವರಿದಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More