Subscribe to Updates
Get the latest creative news from FooBar about art, design and business.
- ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!
- ಮುಳ್ಳಯ್ಯನಗಿರಿಯಲ್ಲಿ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಟಿಟಿ: 13 ಪ್ರವಾಸಿಗರು ಅದೃಷ್ಟವಶಾತ್ ಪಾರು!
- ಥಿಯೇಟರ್ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ
- ರಾಜ್ಯದಲ್ಲಿ ಸಿಎಂ ಬದಲಾವಣೆ ಇಲ್ಲ: ಸ್ಪಷ್ಟನೆ ನೀಡಿದ ಆರ್.ವಿ.ದೇಶಪಾಂಡೆ
- ಇಂಧನ ದರ ಏರಿಕೆ: ರಾಜಕೀಯ ಮಾಡದೆ ವ್ಯಾಟ್ ಕಡಿಮೆ ಮಾಡಿ; ಸಿಎಂ ಸಿದ್ದರಾಮಯ್ಯಗೆ ಆರ್.ಅಶೋಕ್ ಒತ್ತಾಯ
- ಸಂಸ್ಕರಿಸದೆ ನದಿಗೆ ತ್ಯಾಜ್ಯ ಹರಿಸಿದರೆ ಕ್ರಿಮಿನಲ್ ಮೊಕದ್ದಮೆ: ಅರಣ್ಯ ಸಚಿವ ಈಶ್ವರ ಖಂಡ್ರೆ ಖಡಕ್ ಎಚ್ಚರಿಕೆ!
- ಬೇಸಿಗೆ ಕಾಲದಲ್ಲಿ ಲಿಂಬೆಹಣ್ಣುಗಳನ್ನು ದೀರ್ಘಕಾಲದವರೆಗೆ ತಾಜಾವಾಗಿಡುವುದು ಹೇಗೆ?
- ವಿಶ್ವದ ಅತ್ಯಂತ ದೊಡ್ಡ ಶಕ್ತಿ ತಾಯಿ: ಪರಿಷತ್ ಸದಸ್ಯ ಆರ್.ರಾಜೇಂದ್ರ ರಾಜಣ್ಣ
Author: admin
ಬಿಸಿಲಿಗೆ ದೇಹವನ್ನು ತಂಪಾಗಿಸುತ್ತೆ ಸೋರೆ ಕಾಯಿ ಜ್ಯೂಸ್: ಬೇಸಿಗೆ ಶಾಖಕ್ಕೆ ದಾಹವೂ ಹೆಚ್ಚಾಗುತ್ತಿದ್ದಂತೆ ತಂಪಾಗಿರುವ ಉಲ್ಲಾಸಕರವಾದ ಏನನ್ನಾದರೂ ಸೇವಿಸಬೇಕೆಂದೆನಿಸುವುದು ಸಹಜ. ಹಾಗಾದಾಗ ನೀವು ಸೋರೆಕಾಯಿ ಜ್ಯೂಸ್ ಕುಡಿದು ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ಇದರಲ್ಲಿ ಇರುವಂತಹ ನೈಸರ್ಗಿಕ ಸಕ್ಕರೆ ಅಂಶವು ಗೈಕೊಜನ್ ಮಟ್ಟವನ್ನು ಮರುಸ್ಥಾಪಿಸುವುದು ಮತ್ತು ದೇಹದಲ್ಲಿ ವ್ಯಾಯಾಮದಿಂದ ಕಾರ್ಬೋಹೈಡ್ರೆಟ್ಸ್ ನ್ನು ಇದು ಮರಳಿ ನೀಡುವುದು. ಅಧಿಕ ಪ್ರೋಟೀನ್ ಹಾಗೂ ಪೋಷಕಾಂಶಗಳು ಇರುವಂತಹ ಇದು ಸ್ನಾಯುಗಳ ಕಾರ್ಯಕ್ಷಮತೆ ವೃದ್ಧಿಸುತ್ತದೆ. ಗಸಗಸೆ ತಿಂದರೆ ಈ ಪ್ರಯೋಜನಗಳು..! ಗಸಗಸೆ ಬೀಜಗಳು ಪೋಷಕಾಂಶಗಳಲ್ಲಿ ಸಮೃದ್ಧವಾಗಿವೆ. ಮಹಿಳೆಯರಿಗೆ ಇವುಗಳನ್ನು ಸೇವಿಸುವುದರಿಂದ ಹಲವಾರು ಪ್ರಯೋಜನಗಳಿವೆ. ಗಸಗಸೆಯಲ್ಲಿ ಕ್ಯಾಲ್ಸಿಯಂ, ಕಬ್ಬಿಣ, ಮೆಗ್ನಿಸಿಯಮ್ ಮತ್ತು ಸತುವುಗಳಂತಹ ಪೋಷಕಾಂಶಗಳು ಸಮೃದ್ಧವಾಗಿದ್ದು ಇದನ್ನು ಸೇವಿಸುವುದರಿಂದ ಹಸಿವನ್ನು ನಿಯಂತ್ರಿಸಬಹುದು. ಇದು ಜೀರ್ಣಾಂಗ ವ್ಯವಸ್ಥೆಯ ಕಾರ್ಯನಿರ್ವಹಣೆಯನ್ನು ಸುಧಾರಿಸುತ್ತದೆ. ಇದರಿಂದ ಮಲಬದ್ಧತೆಯಂತಹ ಸಮಸ್ಯೆಗಳು ದೂರವಾಗುತ್ತವೆ. ಗಸಗಸೆಯಲ್ಲಿ ಕ್ಯಾಲ್ಸಿಯಂ ಅಧಿಕವಾಗಿರುತ್ತದೆ. ಇದರಿಂದ ಮೂಳೆಗಳು ಬಲಗೊಳ್ಳುತ್ತವೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ…
ಆಗದು ಎಂದು ಕೈಕಟ್ಟಿ ಕುಳಿತರೆ ಸಾಗದು ಕೆಲಸವು ಮುಂದೆ.. ಎಂಬಂತೆ, ಕೈಗಳಿಲ್ಲದಿದ್ದರೂ ಕೊರಗುತ್ತಾ ಕೂರದೆ, ಕಾಲಿನ ಸಹಾಯದಿಂದ ಕಾರು ಚಲಾಯಿಸಿ ಸರ್ಕಾರದಿಂದ ಡ್ರೈವಿಂಗ್ ಲೈಸೆನ್ಸ್ ಪಡೆದಿದ್ದಾಳೆ ಕೇರಳದ ಜಿಲುಮೋಲ್ ಮರಿಯೆಟ್ ಥಾಮಸ್. ಹುಟ್ಟಿನಿಂದಲೇ ಎರಡು ಕೈಗಳನ್ನು ಕಳೆದುಕೊಂಡಿದ್ದ ಮರಿಯೆಟ್ ಥಾಮಸ್ ಚಿಕ್ಕ ವಯಸ್ಸಿನಲ್ಲೇ ಕಾಲಿನ ಮೂಲಕವೇ ದೈನಂದಿನ ಚಟುವಟಿಕೆಗಳನ್ನು ಅಭ್ಯಾಸ ಮಾಡಿಕೊಂಡಿದ್ದಳು. ಇದೀಗ ಕೈಗಳಿಲ್ಲದಿದ್ದರೂ, ಕಾಲಿನ ಮೂಲಕವೇ ಕಾರು ಚಲಾಯಿಸಿ ದೇಶದ ಗಮನ ಸೆಳೆದಿದ್ದಾಳೆ. ಇದಲ್ಲದೇ ಎರಡು ಕೈಗಳಿಲ್ಲದೇ ಡ್ರೈವಿಂಗ್ ಲೈಸೆನ್ಸ್ ಪಡೆದ ಏಷ್ಯಾದ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾಳೆ. ಸೋಶಿಯಲ್ ಮೀಡಿಯಾಗಳಲ್ಲಿ ಸಖತ್ ಆಕ್ಟೀವ್ ಆಗಿರುವ ಮರಿಯೆಟ್ ಥಾಮಸ್, ಇತ್ತೀಚೆಗಷ್ಟೇ ತಾನು ಕಾರು ಚಲಾಯಿಸುತ್ತಿರುವ ವೀಡಿಯೋ ಹಂಚಿಕೊಂಡಿದ್ದಾಳೆ. ಮಾರ್ಚ್ 28ರಂದು @jilumolmarietthomas ಎಂಬ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡ ಈ ವೀಡಿಯೋ ಇದೀಗಾಗಲೇ 60ಲಕ್ಷಕ್ಕೂ ಹೆಚ್ಚಿನ ವೀಕ್ಷಣೆಯನ್ನು ಪಡೆದುಕೊಂಡಿದೆ. ಇದಲ್ಲದೆ, 2.5 ಲಕ್ಷಕ್ಕೂ ಹೆಚ್ಚು ಜನರು ವೀಡಿಯೊವನ್ನು ಲೈಕ್ ಮಾಡಿದ್ದಾರೆ. ಕೈಗಳಿಲ್ಲದಿದ್ದರೂ, ಕಾಲಿನ ಸಹಾಯದಿಂದ ಕಾರು ಚಲಾಯಿಸುವುದರ ಜೊತೆಗೆ ಚಿತ್ರಕಲೆಯಲ್ಲೂ…
ಕರ್ನಾಟಕದಲ್ಲಿ ‘ಲೋಕ’ ರಾಜಕೀಯ ಚಿತ್ರಣವೇ ಬೇರೆ ಇದೆ. ಈ ರಾಜ್ಯದಲ್ಲಿ ಬಿಜೆಪಿ ಪ್ರಬಲವಾಗಿದೆ. ಕರ್ನಾಟಕದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ಲಿಂಗಾಯತ ಮತಗಳನ್ನು ಕ್ರೋಢೀಕರಿಸಿದ ಕೀರ್ತಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಸಲ್ಲುತ್ತದೆ. ಆದರೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಯಡಿಯೂರಪ್ಪರನ್ನು ಮೂಲೆಗುಂಪು ಮಾಡಿ ಬಿಜೆಪಿ ರಾಜ್ಯದಲ್ಲಿ ಅಸ್ತಿತ್ವವನ್ನೇ ಕಳೆದುಕೊಂಡಿತ್ತು. ಜೊತೆಗೆ ಯಡಿಯೂರಪ್ಪನವರ ನಂತರದ ಕರ್ನಾಟಕದಲ್ಲಿ ಬಿಜೆಪಿ ಉಳಿವು ತುಂಬಾ ಕಷ್ಷವಿದೆ ಎನ್ನಲಾಗಿದೆ. ದೇಶದಲ್ಲಿ ಲೋಕಸಭಾ ಚುನಾವಣೆ ಕಾವು ರಂಗೇರಿದಿ. ಪಕ್ಷಗಳ ನಡುವೆ ನೇರಾ ಹಣಾಹಣಿ ಏರ್ಪಟ್ಟಿದೆ. ಒಂದೆಡೆ ಮೋದಿ ಅಲೆಯ ಮೂಲಕ ಬಿಜೆಪಿ ಚುನಾವಣೆಯಲ್ಲಿ ಸೆಣೆಸಲು ಅಣಿಯಾಗಿದ್ದರೆ, ತನ್ನದೇ ಗ್ಯಾರಂಟಿ, ಜೋಡೋ ಯಾತ್ರೆಗಳ ಮೂಲಕ ಕಾಂಗ್ರೆಸ್ ಹೋರಾಡಲು ತಯಾರಾಗಿದೆ. ಇದೆಲ್ಲದರ ನಡುವೆ ದಕ್ಷಿಣ ಭಾರತದತ್ತ ತನ್ನ ಚಿತ್ತ ನೆಟ್ಟಿರುವ ಬಿಜೆಪಿ ಕರ್ನಾಟಕ ಹೊರತಾಗಿ ಇತರ ದಕ್ಷಿಣ ರಾಜ್ಯಗಳಲ್ಲಿ ತನ್ನ ಖಾತೆ ತೆರೆಯಲು ಶತಾಯ-ಗತಾಯ ಪ್ರಯತ್ನ ನಡೆಸಿದೆ. ಏನೇನು ತಯಾರಿ ಬೇಕು ಎಲ್ಲಾ ಮಾಡಿಕೊಂಡಿದೆ. ಹೀಗಾಗಿ ಕೆಲವು ದಕ್ಷಿಣ ರಾಜ್ಯಗಳಲ್ಲಿ ಬಿಜೆಪಿ ಪರ ವಾತಾವರಣ ಸೃಷ್ಟಿಯಾಗಿದೆ.…
ತುಮಕೂರು: ತುಮಕೂರು ಜಿಲ್ಲೆ ತಿಪಟೂರು ಪಟ್ಟಣದ ಮತಗಟ್ಟೆ ಸಂಖ್ಯೆ 82 ರಲ್ಲಿ ಕುದುರೆ ಏರಿ ಬಂದು ವೈದ್ಯರೊಬ್ಬರು ಮತದಾನ ಮಾಡಿದರು. ಕುದುರೆ ಏರಿ ಬಂದು ಮತದಾರರ ಗಮನಸೆಳೆದ ಡಾ. ಶ್ರೀಧರ್, ಈ ಮಧ್ಯೆ ಮತದಾನ ಮಾಡಿ ಬಂದವರಿಗೆ ಉಚಿತ ಸಮೋಸ ಹಾಗೂ ಟೀ ವಿತರಣೆ ಮಾಡಿದರು. ಇವರು ಮತದಾರರಿಗೆ ವಿನೂತನ ರೀತಿಯಲ್ಲಿ ಅರಿವು ಮೂಡಿಸುತ್ತಿರುವ ವೈದ್ಯರಾಗಿದ್ದಾರೆ. ಸತ್ಯಕುಮಾರ್ ಫೌಡೇಂಶನ್ ಮೂಲಕ ಸಮಾಜ ಸೇವೆ ಮಾಡುತ್ತಿರುವ ಡಾ. ಶ್ರೀಧರ್, ಆಸ್ಪತ್ರೆ, ಉಚಿತ ದಾಸೋಹ ಸೇರಿದಂತೆ ಹಲವಾರು ಸೇವೆ ಒದಗಿಸುತ್ತಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ತುಮಕೂರು: ಗಾಂಧಿನಗರ ಬಡಾವಣೆಯಲ್ಲಿರುವ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ತೆರೆಯಲಾಗಿರುವ ವಿಶೇಷವಾದ ಸಖಿ ಮತಗಟ್ಟೆ ಕೇಂದ್ರವು ಮತದಾರರನ್ನು ಸಾಕಷ್ಟು ಆಕರ್ಷಣೆಗೆ ಒಳಗಾಗಿಸಿದೆ. ಹೊರಭಾಗದ ಗೋಡೆಯಲ್ಲಿ ಮಹಿಳೆಯರ ಚಿತ್ರಗಳನ್ನು ಚಿತ್ರಿಸಲಾಗಿದ್ದು ಮತದಾನಕ್ಕೆ ಪ್ರೇರೇಪಿಸಲಾಗುತ್ತಿದೆ. ಅಲ್ಲದೆ ವಿಶೇಷವಾಗಿ ಈ ಮತಗಟ್ಟೆ ಕೇಂದ್ರದಲ್ಲಿ ಪುರುಷರಿಗಿಂತ ಮಹಿಳೆಯರೇ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಇರುವುದು ಕೂಡ ಗಮನಾರ್ಹ ಅಂಶವಾಗಿದೆ. ಮತಗಟ್ಟೆ ಮುಂಭಾಗ ಬಲೂನ್ ಗಳನ್ನು ಕಟ್ಟಿ ವಿಭಿನ್ನವಾಗಿ ಅಲಂಕರಿಸಲಾಗಿದೆ. ಮತಗಟ್ಟೆ ಕೇಂದ್ರದಲ್ಲಿ ಇರುವ ಸಿಬ್ಬಂದಿಗಳು ಕೂಡ ಮಹಿಳೆಯರೇ ಆಗಿರುವುದು ವಿಶೇಷವಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಹೃದಯಾಘಾತಕ್ಕೊಳಗಾಗಿ ತೀವ್ರ ಸಮಸ್ಯೆಯಿಂದ ಬಳಲುತ್ತಿದ್ದ ಪಾಕಿಸ್ಥಾನದ ಹದಿಹರೆಯದ ಯುವತಿಯೊಬ್ಬಳು, ದೆಹಲಿಯಲ್ಲಿ ಹೃದಯ ದಾನಿಯೊಬ್ಬರಿಂದ ಹೃದಯ ಪಡೆದ ನಂತರ ಹೊಸ ಜೀವನವನ್ನು ಪಡೆದುಕೊಂಡಿದ್ದಾಳೆ. 19 ರ ಹರೆಯದ ಆಯೇಶಾ ರಶಾನ್ ಕಳೆದ ಒಂದು ದಶಕದಿಂದ ಹೃದ್ರೋಗದಿಂದ ಬಳಲುತ್ತಿದ್ದಳು. ಆಕೆ ಭಾರತಕ್ಕೆ ಭೇಟಿ ನೀಡಿದ್ದಳು, ಆಕೆಗೆ ಹೃದಯ ಪಂಪ್ ಅನ್ನು ಅಳವಡಿಸಲಾಗಿತ್ತು. ಆಕೆಯ ಹೃದಯವು ದುರ್ಬಲಗೊಂಡಿತ್ತು. ದುರದೃಷ್ಟವಶಾತ್, ಸಾಧನವು ನಿಷ್ಪರಿಣಾಮಕಾರಿಯಾಗಿದೆ ಎಂದು ಸಾಬೀತಾದ ಬಳಿಕ ತಜ್ಞ ವೈದ್ಯರು ಆಕೆಯ ಜೀವವನ್ನು ಉಳಿಸಲು ಹೃದಯ ಕಸಿ ಮಾಡಲು ಶಿಫಾರಸು ಮಾಡಿದರು. ಆಯೇಷಾ ರಶಾನ್ ಕುಟುಂಬವು ಚೆನ್ನೈನ ಎಂಜಿಎಂ ಹೆಲ್ತ್ ಕೇರ್ ಆಸ್ಪತ್ರೆಯಲ್ಲಿ ಹೃದಯ ಮತ್ತು ಶ್ವಾಸಕೋಶ ಕಸಿ ಸಂಸ್ಥೆಯ ನಿರ್ದೇಶಕ ಡಾ.ಕೆ.ಆರ್. ಬಾಲಕೃಷ್ಣನ್ ಮತ್ತು ಸಹ ನಿರ್ದೇಶಕ ಡಾ. ಸುರೇಶ್ ರಾವ್ ಅವರಿಂದ ಸಮಾಲೋಚನೆಯನ್ನು ಕೇಳಿತ್ತು. ಆಯೇಷಾಳ ಹೃದಯ ಪಂಪ್ ಸೋರಿಕೆಯನ್ನು ಅಭಿವೃದ್ಧಿಪಡಿಸಿದ ಕಾರಣ, ಹೃದಯ ಕಸಿ ಅಗತ್ಯ ಎಂದು ವೈದ್ಯಕೀಯ ತಂಡ ಸಲಹೆ ನೀಡಿತು ಮತ್ತು ಆಕೆಯನ್ನು ECMO(ಎಕ್ಸ್ ಟ್ರಾ ಕಾರ್ಪೋರಿಯಲ್ ಮೆಂಬರೇನ್ ಆಕ್ಸಿಜನೇಷನ್)…
ಬೆಂಗಳೂರು: ಅಶೋಕನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪಾನಿಪುರಿ ಕೊಡಿಸುತ್ತೇನೆ ಎಂದು 7 ವರ್ಷದ ಬಾಲಕಿಯನ್ನು ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ ಘಟನೆ ನಡೆದಿದೆ. 54 ವರ್ಷದ ವ್ಯಕ್ತಿ ಅತ್ಯಾಚಾರ ಎಸಗಿದ ಆರೋಪಿಯಾಗಿದ್ದಾನೆ. ಬಾಲಕಿಯ ತಾಯಿ ಮೂಕರಾಗಿದ್ದು, ತಾಯಿ ಹಾಗೂ ಮಗು ಪ್ರತಿಷ್ಠಿತ ಮಾಲ್ ವೊಂದರ ಬಳಿ ಭಿಕ್ಷೆ ಬೇಡುತ್ತಿದ್ದರು. ಈ ವೇಳೆ ಬಾಲಕಿ ಮೇಲೆ ನೀಚ ವ್ಯಕ್ತಿ ಅತ್ಯಾಚಾರ ಎಸಗಿದ್ದಾನೆ ಎಂದು ತಿಳಿದು ಬಂದಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ತುಮಕೂರು: ಮಧುಗಿರಿ ತಾಲ್ಲೂಕಿನ ಗುರುವಡೇರಹಳ್ಳಿ ಸರ್ಕಾರಿ ಪ್ರಾಥಮಿಕ ಪಾಠಶಾಲೆಯಲ್ಲಿ ಮತದಾನ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಮತ ಚಲಾವಣೆ ಮಾಡಿದರು. ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದ ಕೆ.ಎನ್.ರಾಜಣ್ಣ, ಮತಗಟ್ಟೆ ಸಂಖ್ಯೆ 148ರಲ್ಲಿ ಮತದಾನ ಮಾಡಿದರು. ಪುತ್ರ ಎಂಎಲ್ಸಿ ರಾಜೇಂದ್ರ, ಪುತ್ರಿ ರಶ್ಮಿ ಸಮೇತರಾಗಿ ಆಗಮಿಸಿ ಮತದಾನ ಮಾಡಿದರು. ಇನ್ನೊಂದೆಡೆ ಗೃಹ ಸಚಿವ ಡಾ. ಪರಮೇಶ್ವರ್ ಪತ್ನಿ ಕನ್ನಿಕಾ ಸಮೇತ ಆಗಮಿಸಿ ತುಮಕೂರಿನ ಸಿದ್ದಾರ್ಥ ನಗರದಲ್ಲಿ ಮತದಾನ ಮಾಡಿದರು. ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯಲ್ಲಿ ಸ್ಥಾಪಿಸಲಾಗಿರೋ ಮತಗಟ್ಟೆ ಸಂಖ್ಯೆ 57 ರಲ್ಲಿ ಮತದಾನ ಮಾಡಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ತುಮಕೂರು: ದೇಶದಲ್ಲಿ ಮತದಾನವನ್ನು ಕಡ್ಡಾಯ ಮಾಡಬೇಕಿದೆ. ಹಾಗಾದರೆ ಮಾತ್ರ ಶೇಕಡ 100ರಷ್ಟು ಮತದಾನ ಪ್ರಮಾಣವಾಗಲಿದೆ ಎಂದು ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿ ಹೇಳಿದರು. ಸಿದ್ದಗಂಗಾ ಮಠದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಗ್ರಾಮೀಣ ಪ್ರದೇಶದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನದ ಜಾಗೃತಿಯಾಗಿದೆ. ಆದರೆ ಹೆಚ್ಚಿನ ವಿದ್ಯಾವಂತರಾದ ನಗರ ಪ್ರದೇಶದಲ್ಲಿ ಇರುವಂತವರು ಮತದಾನ ಮಾಡಲು ನಿರಾಸಕ್ತಿ ತೋರುತ್ತಿದ್ದಾರೆ. ಇದು ಆಗಬಾರದು ಎಂದು ಹೇಳಿದರು. ಪ್ರಜಾಪ್ರಭುತ್ವ ಉಳಿಯಬೇಕಾದರೆ ಪ್ರತಿಯೊಬ್ಬರು ಕಡ್ಡಾಯವಾಗಿ ನಿಷ್ಠೆಯಿಂದ ಮತದಾನವನ್ನು ಮಾಡಬೇಕಿದೆ ಎಂದು ಹೇಳಿದರು. ತಮ್ಮ ನಾಯಕನನ್ನು ಆಯ್ಕೆ ಮಾಡಿಕೊಳ್ಳುವಂತಹ ಜನರಿಗೆ ಪ್ರಜಾಪ್ರಭುತ್ವ ನೀಡಿದೆ ಎಂದು ಹೇಳಿದರು. ರಾಜ್ಯದಲ್ಲಿ ಅತಿ ಹೆಚ್ಚು ಬಾರಿ ಚುನಾವಣೆಯಲ್ಲಿ ಮತದಾನ ಮಾಡಿರುವಂತಹ ಕೀರ್ತಿ ಶ್ರೀ ಶಿವಕುಮಾರ ಸ್ವಾಮೀಜಿಯವರಿಗೆ ಸಲ್ಲುತ್ತದೆ ಎಂದು ತಿಳಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ತುಮಕೂರು: ಸಿದ್ದಗಂಗಾ ಮಠದ ಪ್ರಾಥಮಿಕ ಶಾಲಾ ಸ್ಥಾಪಿಸಲಾಗಿರುವ ಮತಗಟ್ಟೆಯಲ್ಲಿ ಶ್ರೀ ಸಿದ್ದಲಿಂಗ ಸ್ವಾಮೀಜಿ ಮೊದಲ ಮತದಾನ ಮಾಡಿದರು. ಮತಗಟ್ಟೆ ಸಂಖ್ಯೆ 113ರಲ್ಲಿ ಸ್ವಾಮೀಜಿ ತಮ್ಮ ಹಕ್ಕು ಚಲಾಯಿಸಿದರು. ತುಮಕೂರಿನ ಕ್ಯಾತ್ಸಂದ್ರದಲ್ಲಿರುವ ಸಿದ್ದಗಂಗಾ ಮಠದಲ್ಲಿ, ಮೊದಲಿಗೆ ಶ್ರೀ ಸಿದ್ದಲಿಂಗ ಸ್ವಾಮೀಜಿ ಹಸುವಿಗೆ ಹಣ್ಣು ತಿನ್ನಿಸಿ ಬಳಿಕ ಮತದಾನ ಕೇಂದ್ರಕ್ಕೆ ಆಗಮಿಸಿ ಮತದಾನ ಮಾಡಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296