Subscribe to Updates
Get the latest creative news from FooBar about art, design and business.
- ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!
- ಮುಳ್ಳಯ್ಯನಗಿರಿಯಲ್ಲಿ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಟಿಟಿ: 13 ಪ್ರವಾಸಿಗರು ಅದೃಷ್ಟವಶಾತ್ ಪಾರು!
- ಥಿಯೇಟರ್ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ
- ರಾಜ್ಯದಲ್ಲಿ ಸಿಎಂ ಬದಲಾವಣೆ ಇಲ್ಲ: ಸ್ಪಷ್ಟನೆ ನೀಡಿದ ಆರ್.ವಿ.ದೇಶಪಾಂಡೆ
- ಇಂಧನ ದರ ಏರಿಕೆ: ರಾಜಕೀಯ ಮಾಡದೆ ವ್ಯಾಟ್ ಕಡಿಮೆ ಮಾಡಿ; ಸಿಎಂ ಸಿದ್ದರಾಮಯ್ಯಗೆ ಆರ್.ಅಶೋಕ್ ಒತ್ತಾಯ
- ಸಂಸ್ಕರಿಸದೆ ನದಿಗೆ ತ್ಯಾಜ್ಯ ಹರಿಸಿದರೆ ಕ್ರಿಮಿನಲ್ ಮೊಕದ್ದಮೆ: ಅರಣ್ಯ ಸಚಿವ ಈಶ್ವರ ಖಂಡ್ರೆ ಖಡಕ್ ಎಚ್ಚರಿಕೆ!
- ಬೇಸಿಗೆ ಕಾಲದಲ್ಲಿ ಲಿಂಬೆಹಣ್ಣುಗಳನ್ನು ದೀರ್ಘಕಾಲದವರೆಗೆ ತಾಜಾವಾಗಿಡುವುದು ಹೇಗೆ?
- ವಿಶ್ವದ ಅತ್ಯಂತ ದೊಡ್ಡ ಶಕ್ತಿ ತಾಯಿ: ಪರಿಷತ್ ಸದಸ್ಯ ಆರ್.ರಾಜೇಂದ್ರ ರಾಜಣ್ಣ
Author: admin
ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಬೋಸ್ ಲೇಬಲ್ ಅಂಟಿಸಿರುವ ಮದ್ಯದ ಪೌಚುಗಳು ಪತ್ತೆಯಾಗಿದೆ. ಕರ್ನಾಟಕದ 14 ಲೋಕಸಭೆ ಕ್ಷೇತ್ರಗಳಿಗೆ ಮೊದಲ ಹಂತದ ಮತದಾನ ಇಂದು ನಡೆಯಲಿದೆ. ಚಾಮರಾಜನಗರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಬೋಸ್ ಲೇಬಲ್ ಅಂಟಿಸಿರುವ ಮದ್ಯದ ಪೌಚುಗಳ ಹಂಚಿಕೆ ಮಾಡಲಾಗಿದ್ದು, ಇದೀಗ ಈ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿವೆ. ಸುನೀಲ್ ಬೋಸ್, ಕ್ರಮ ಸಂಖ್ಯೆ 3 ಎಂಬ ಲೇಬಲ್ ಇರುವ ಮದ್ಯದ ಪೌಚುಗಳನ್ನು ಹಂಚಿಕೆ ಮಾಡುತ್ತಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗುತ್ತಿದೆ. ಆದರೆ ಈ ಘಟನೆ ನಡೆದ ಸ್ಥಳದ ಬಗ್ಗೆ ನಿಖರತೆ ಇಲ್ಲ ಮತ್ತು ಹಂಚಿರುವ ವ್ಯಕ್ತಿಗಳ ಬಗ್ಗೆ ಮಾಹಿತಿ ತಿಳಿದುಬಂದಿಲ್ಲ. ಮತದಾನದ ಹಿನ್ನೆಲೆಯಲ್ಲಿ ಏ.24 ರಿಂದ ಏ.26 ರ ಮಧ್ಯರಾತ್ರಿವರೆಗೆ ಕಮಿಷನರೇಟ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಕಮಿಷನರ್ ಆದೇಶ ಹೊರಡಿಸಿದ್ದಾರೆ. ಹೀಗಾಗಿ, ಯಾವುದೇ ಸಭೆ, ಸಮಾರಂಭ ನಡೆಸುವಂತಿಲ್ಲ. ರಾಜಕೀಯ ಗುಂಪುಗಳು ಸೇರುವಂತಿಲ್ಲ. ಅಲ್ಲದೆ, ಶುಕ್ರವಾರ(ಎ.25 ದಿಂದ ಮತದಾನ ಮುಕ್ತಾಯವಾಗುವ ತನಕ ಮದ್ಯ…
ರಾಕಿಂಗ್ ಸ್ಟಾರ್ ಯಶ್ ಅಭಿಮಾನಿಗಳಿಗೆ ಸಂತಸದ ಸುದ್ದಿ ನೀಡಲ್ಲಿದ್ದಾರೆ.ಯಶ್ ರಾವಣನ ಪಾತ್ರ ಮಾಡೋಕೆ ರೆಡಿಯಾಗಿದ್ದಾರೆ. 15ಕೆಜಿ ತೂಕ ಹೆಚ್ಚಿಸಿ ವಿಭಿನ್ನವಾಗಿ ಕಾಣಲಿದ್ದಾರೆ. ನಿತೇಶ್ ತಿವಾರಿ ಅವರ ʼರಾಮಾಯಣʼ ದಲ್ಲಿ ರಾವಣನ ಪಾತ್ರಧಾರಿಯಾಗಿ ಕಾಣಿಸಿಕೊಳ್ಳುತ್ತಿದ್ದು ಚಿತ್ರೀಕರಣ ಭರದಿಂದ ಸಾಗಿದೆ. ಈ ಸಿನಿಮಾಗಾಗಿ ನಟ ಯಶ್, 15 ಕೆಜಿ ತೂಕ ಹೆಚ್ಚಿಸಲಿದ್ದಾರೆ. ರಾಮಾಯಣದಲ್ಲಿ ರಣಬೀರ್ ಕಪೂರ್ ಭಗವಾನ್ ರಾಮನಾಗಿ ನಟಿಸಿದರೆ, ಸಾಯಿ ಪಲ್ಲವಿ ಮತ್ತು ಸನ್ನಿ ಡಿಯೋಲ್ ಮಾತಾ ಸೀತೆ ಮತ್ತು ಭಗವಾನ್ ಹನುಮಾನ್ ಆಗಿ ಕಾಣಿಸಿಕೊಳ್ಳುತ್ತಾರೆ. ಯಶ್ , ತಮ್ಮ ಎರಡು ಚಿತ್ರಗಳಾದ ಟಾಕ್ಸಿಕ್ ಮತ್ತು ರಾಮಾಯಣಕ್ಕೆ ಎರಡು ವಿಭಿನ್ನ ನೋಟವನ್ನು ಹೊಂದಿದ್ದಾರೆ. ಟಾಕ್ಸಿಕ್ ನಂತರವೇ ಯಶ್ ಅವರು ರಾಮಾಯಣದ ಚಿತ್ರೀಕರಣದಲ್ಲಿ ಭಾಗಿಯಾಗಲಿದ್ದಾರೆ. ಟಾಕ್ಸಿಕ್ ಮುಗಿಸಿದ ತಕ್ಷಣ ಸಿಕ್ಸ್ ಪ್ಯಾಕ್ಗಳೊಂದಿಗೆ ರಾವಣನನ್ನು ಹೊಂದಲು ಸಾಧ್ಯವಿಲ್ಲ . ಆದ್ದರಿಂದ ಯಶ್ ಅವರು ಕನಿಷ್ಠ 15 ಕೆಜಿ ತೂಕ ಹೆಚ್ಚಿಸಿಕೊಳ್ಳುವ ಉಮೇದಿನಲ್ಲಿದ್ದಾರೆ. ನಟ ಪ್ರಸ್ತುತ ಬೆಂಗಳೂರು, ಮುಂಬೈ ಮತ್ತು ಲಂಡನ್ನಲ್ಲಿ ಚಿತ್ರೀಕರಣಗೊಳ್ಳುತ್ತಿರುವ ಗೀತು ಮೋಹನ್ದಾಸ್ ಅವರ…
ಹನುಮಂತನನ್ನು ಪೂಜಿಸುವ ಭಕ್ತರು ಆಂಜನೇಯನ ಗಾತ್ರ ಬದಲಾವಣೆ, ತಾಂತ್ರಿಕ ವಿಚಾರಗಳ ಬಗ್ಗೆ ನಂಬಿಕೆ ಇಟ್ಟಿರುವುದು ಸಹಜ. ಆಂಜನೇಯನ ಹಲವು ದೇವಾಲಯಗಳು ತನ್ನ ಪವಾಡಗಳಿಗೆ ಹೆಸರುವಾಸಿಯಾಗಿದೆ. ಇದೇ ರೀತಿ ಛತ್ತೀಸ್ ಗಢದ ಬಲೋಡ್ ಜಿಲ್ಲಾ ಕೇಂದ್ರದಿಂದ 15 ಕಿ. ಮೀ. ದೂರದಲ್ಲಿರುವ ಕಮ್ರೌಡ್ ಗ್ರಾಮದಲ್ಲಿರುವ ಹನುಮಂತನ ದೇವಾಲಯವು ಇದಕ್ಕೆ ಉದಾಹರಣೆಯಾಗಿದೆ. ಹನುಮ ಭಕ್ತರಿಗೆ ಇದೊಂದು ಪವಾಡಸದೃಶ ದೇವಾಲಯ ಎಂಬ ನಂಬಿಕೆಯಿದೆ. ಛತ್ತೀಸ್ ಗಢದ ಕಮ್ರೌಡ್ ಗ್ರಾಮದಲ್ಲಿರುವ ಈ ದೇವಾಲಯದಲ್ಲಿ 400 ವರ್ಷಗಳಷ್ಟು ಹಳೆಯದಾದ ಹನುಮಂತನ ವಿಗ್ರಹವಿದೆ. ಜನರು ಇಲ್ಲಿರುವ ದೇವರನ್ನು ಪವಾಡ ಹನುಮಂತ ಎಂದು ಕರೆಯುತ್ತಾರೆ. ದೂರದ ಊರುಗಳಿಂದ ಜನರು ತಮ್ಮ ಆಸೆಗಳನ್ನು ಪೂರೈಸಿಕೊಳ್ಳಲು ಇಲ್ಲಿಗೆ ಬರುತ್ತಾರೆ. ಈ ದೇವಾಲಯ ಈಗ ಇಡೀ ಛತ್ತೀಸ್ ಗಢದಲ್ಲಿ ಮಾತ್ರವಲ್ಲದೆ ಇತರ ಅನೇಕ ರಾಜ್ಯಗಳಲ್ಲಿಯೂ ಪ್ರಸಿದ್ಧವಾಗಿದೆ. ಸುಮಾರು 400 ವರ್ಷಗಳ ಹಿಂದೆ ಕಮ್ರೌಡ್ ಗ್ರಾಮದ ಸುತ್ತ- ಮುತ್ತಲೂ ಸಾಕಷ್ಟು ಬರಗಾಲವಿತ್ತು. ಆ ಕಾರಣದಿಂದಾಗಿ ಅಲ್ಲಿನ ಜನ ತುಂಬಾ ಚಿಂತಿತರಾಗಿದ್ದರು. ಅದೇ ರೀತಿ ಒಂದು ದಿನ ಒಬ್ಬ…
ಆಟವಾಡಲು ಹೋಗಿದ್ದ ಇಬ್ಬರು ಮಕ್ಕಳು 4 ಗಂಟೆಗಳ ಕಾಲ ನಾಪತ್ತೆ. ಪೋಷಕರು, ಸ್ಥಳೀಯರು ಎಲ್ಲರೂ ಹುಡುಕಿದ್ದಾರೆ. ಪತ್ತೆಯಾಗದ ಕಾರಣ ಪೊಲೀಸರಿಗೆ ದೂರು ನೀಡಿದ್ದಾರೆ. ಇತ್ತ ಸ್ಥಳಕ್ಕೆ ಆಗಮಿಸಿದ ಪೊಲೀಸರು ಹುಡುಕಾಟ ನಡೆಸಿದಾಗ ಇಬ್ಬರ ಮಕ್ಕಳ ಮೃತದೇಹ ಕಾರಿನಲ್ಲಿ ಪತ್ತೆಯಾದ ಘಟನೆ ಮುಂಬೈನ ಅನೋಟ್ಪ್ ಹಿಲ್ ನಲ್ಲಿ ನಡೆದಿದೆ. ಅ5 ವರ್ಷದ ಮುಸ್ಕಾನ್ ಮೊಹಬ್ಬತ್ ಶೇಕ್ ಹಾಗೂ 7 ವರ್ಷದ ಸಾಜಿದ್ ಮೊಹಮ್ಮದ್ ಶೇಕ್ ಎಂದು ಗುರುತಿಸಲಾಗಿದೆ. ವಿಶಾಲವಾದ ಪ್ರದೇಶದಲ್ಲಿ ಹಲವು ಗುಜುರಿ ಕಾರುಗಳು ಸೇರಿದಂತೆ ಹಲವರು ವಾಹನಗಳನ್ನು ಪಾರ್ಕಿಂಗ್ ಮಾಡುತ್ತಾರೆ. ಮೈದಾನದ ರೀತಿ ಪ್ರದೇಶವಾಗಿರುವ ಕಾರಣ ಬಹುತೇಕರು ಇದೇ ಜಾಗದಲ್ಲಿ ಪಾರ್ಕಿಂಗ್ ಮಾಡುತ್ತಾರೆ. ಆಟವಾಡುತ್ತಿದ್ದ ಮಕ್ಕಳು, ಕಾರಿನ ಡೋರ್ ಹಿಡಿದು ಎಳೆದಾಗ ತೆರೆದುಕೊಂಡಿದೆ. ಕಾರಿನ ಡೋರ್ ತೆರೆದುಕೊಂಡ ಕಾರಣ ಇಬ್ಬರು ಮಕ್ಕಳು ಕಾರಿನೊಳಗೆ ಕುಳಿತು ಆಡವಾಡಿದ್ದಾರೆ. ಕೆಲ ಹೊತ್ತು ಆಡವಾಡಿದ ಬಳಿಕ ಕಾರಿನ ಡೋರ್ ನ್ನು ಹಾಕಿ ಆಡಲು ಆರಂಭಿಸಿದ್ದಾರೆ. ಇತ್ತ ಸಂಜೆಯಾದರೂ ಮಕ್ಕಳು ಮನೆಗೆ ಬರಲಿಲ್ಲ. ಹೀಗಾಗಿ ಆತಂಕಗೊಂಡ ಪೋಷಕರು…
ಕಾರಿನಲ್ಲಿ ಬರೋಬ್ಬರಿ 30ಕ್ಕೂ ಅಧಿಕ ಕುರಿ, ಆಡುಗಳನ್ನು ತುಂಬಿಸಿಕೊಂಡು ತೆರಳುತ್ತಿದ್ದ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಘಟನೆ ವೈರಲ್ ಆದ ಬಳಿಕ ಕುರಿ, ಆಡುಗಳನ್ನು ರಕ್ಷಿಸಿರುವ ಪ್ರಕರಣ ದೆಹಲಿಯ ಸಿವಿಲ್ ಲೈನ್ಸ್ ಪ್ರದೇಶದಲ್ಲಿ ನೆನ್ನೆ ನಡೆದಿದೆ. ಮಾರುತಿ ಸುಝುಕಿ ಸ್ವಿಫ್ಟ್ ಡಿಝೈರ್ ಕಾರಿನೊಳಗೆ 30ಕ್ಕೂ ಅಧಿಕ ಆಡು, ಕುರಿಗಳನ್ನು ತುಂಬಿಸಲಾಗಿತ್ತು. ಈ ಬಗ್ಗೆ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದರು. ತಕ್ಷಣವೇ ಕಾರ್ಯಪ್ರವೃತ್ತರಾದ ಪೊಲೀಸರು, ಕಾರಿನೊಳಗಿದ್ದ ಆಡು, ಕುರಿಗಳನ್ನು ರಕ್ಷಿಸಿ, ಕಾರನ್ನು ವಶಕ್ಕೆ ಪಡೆದಿದ್ದಾರೆ. ಪ್ರಕರಣದ ಬಗ್ಗೆ ತನಿಖೆ ನಡೆಸುತ್ತಿರುವುದಾಗಿ ಹೇಳಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಕರ್ನಾಟಕದಲ್ಲಿ ಮೊದಲ ಹಂತದ ಲೋಕಸಭಾ ಚುನಾವಣೆ ಇಂದು ನಡೆಯಲಿದ್ದು, 14 ಕ್ಷೇತ್ರಗಳಲ್ಲಿ ನಾಗರೀಕರು ತಮ್ಮ ಹಕ್ಕನ್ನು ಚಲಾಯಿಸಲಿದ್ದಾರೆ. ಸುಮಾರು 2.9 ಕೋಟಿ ಜನರು ಶುಕ್ರವಾರ 247 ಅಭ್ಯರ್ಥಿಗಳ ಭವಿಷ್ಯವನ್ನು ನಿರ್ಧರಿಸಲಿದ್ದಾರೆ. ದಕ್ಷಿಣ ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಚುನಾವಣೆ ನಡೆಯುತ್ತಿದ್ದು, ಘಟಾನುಘಟಿಗಳು ಕಣದಲ್ಲಿದ್ದಾರೆ. ಮತದಾರರು ಕೂಡ ತಮ್ಮ ಮತ ನೀಡಿ ನೆಚ್ಚಿನ ಅಭ್ಯರ್ಥಿಗಳನ್ನು ಗೆಲ್ಲಿಸಲು ಕಾತರರಾಗಿದ್ದಾರೆ. ಇದರ ನಡುವೆ ಮೊದಲ ಹಂತದ ಮತದಾನ ಪ್ರಕ್ರಿಯೆ ವೇಳೆ ನೀವು ಈ 5 ಅಂಶಗಳನ್ನು ಗಮನಿಸಿ. ದಕ್ಷಿಣ ಕರ್ನಾಟಕದ 14 ಕ್ಷೇತ್ರಗಳಲ್ಲಿ ಶುಕ್ರವಾರ ನಾಗರೀಕರು ತಮ್ಮ ಹಕ್ಕನ್ನು ಚಲಾಯಿಸಲಿದ್ದಾರೆ. ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆವರೆಗೆ ಮತದಾನ ನಡೆಯಲಿದ್ದು, ಬಿಜೆಪಿ – ಜೆಡಿಎಸ್ ಹಾಗೂ ಕಾಂಗ್ರೆಸ್ ನಡುವೆ ಹೋರಾಟ ನಡೆಯುತ್ತಿದೆ. ಇದರ ನಡುವೆ ಶುಕ್ರವಾರ ನಡೆಯುವ ಲೋಕಸಭಾ ಚುನಾವಣೆ ಒಂದಿಷ್ಟು ಕುತೂಹಲಕಾರಿ ಅಂಶಗಳಿಂದ ಗಮನ ಸೆಳೆದಿವೆ. ಅವುಗಳ ಕುರಿತು ನೋಡೋಣ. ಕರ್ನಾಟಕದಲ್ಲಿ ಮೂರು ಪ್ರಮುಖ ಪಕ್ಷಗಳಿದ್ದು, ಚುನಾವಣೆಯಲ್ಲಿ ತ್ರಿಕೋನ ಸಮರ ನಡೆಯುತ್ತಿತ್ತು. ಆದರೆ…
ಬೆಂಗಳೂರು: ಲೋಕಸಭೆ ಚುನಾವಣೆ ಎರಡನೇ ಹಂತದ ಮತದಾನ ಏಪ್ರಿಲ್ 26ರಂದು ನಡೆಯಲಿದೆ. 2ನೇ ಹಂತದಲ್ಲಿ ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳ ಪೈಕಿ 14 ಲೋಕಸಭಾ ಕ್ಷೇತ್ರಗಳೂ ಸೇರಿವೆ. ಚುನಾವಣೆ ಹಿನ್ನೆಲೆಯಲ್ಲಿ ಎರಡು ದಿನ ಸಾರಿಗೆ ಬಸ್ ಸಂಚಾರದಲ್ಲಿ ವ್ಯತ್ಯಯವಾಗುವ ಸಾಧ್ಯತೆ ಇದೆ. ಚುನಾವಣಾ ಆಯೋಗವು 2,100 ಕೆಎಸ್ ಆರ್ ಟಿಸಿ ಹಾಗೂ 1,700 ಬಿಎಂಟಿಸಿ ಬಸ್ ಗಳನ್ನು ಬುಕ್ ಮಾಡಿಕೊಂಡಿದ್ದು, ಸರ್ಕಾರಿ ಬಸ್ ಗಳಿಗೆ ಕಿ.ಮೀ. 57 ರೂ. ದರ ನಿಗದಿ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಸಾರಿಗೆ ಸಂಚಾರದಲ್ಲಿ ಎರಡು ದಿನ ವ್ಯತ್ಯಯವಾಗುವ ಸಾಧ್ಯತೆ ಇದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಗುಜರಾತ್ ನಾಡಿಯಾಡ್ ಬಳಿ ಅಹಮದಾಬಾದ್-ಮುಂಬೈ ಬುಲೆಟ್ ರೈಲು ಯೋಜನೆಗಾಗಿ 100 ಮೀಟರ್ ಉದ್ದದ ಎರಡನೇ ಉಕ್ಕಿನ ಸೇತುವೆಯನ್ನು ಪ್ರಾರಂಭಿಸಲಾಗಿದೆ. ಭುಜ್ ಜಿಲ್ಲೆಯಲ್ಲಿರುವ ಕಾರ್ಯಾಗಾರದಲ್ಲಿ 1486 ಮೆಟ್ರಿಕ್ ಟನ್ ಉಕ್ಕಿನ ಸೇತುವೆಯನ್ನು ನಿರ್ಮಿಸಲಾಗಿದೆ. ಈ ಸೇತುವೆಯನ್ನು ನೆಲದಿಂದ 15.5 ಮೀಟರ್ ಎತ್ತರದಲ್ಲಿ ನಿರ್ಮಿಸಲಾಗಿದೆ. ಭಾರತೀಯ ರೈಲ್ವೆ ಮಾರ್ಗದ ವಿದ್ಯುತ್ ಬ್ಲಾಕ್ ಮತ್ತು ಸಂಚಾರ ಯೋಜನೆಯನ್ನು ಗಮನದಲ್ಲಿಟ್ಟುಕೊಂಡು ಈ ಸೇತುವೆಯನ್ನು ನಿರ್ಮಿಸಲಾಗಿದೆ. ರೈಲ್ವೆ ಮಾರ್ಗಗಳು, ಎಕ್ಸ್ ಪ್ರೆಸ್ ವೇಗಳು ಮತ್ತು ಹೆದ್ದಾರಿಗಳನ್ನು ದಾಟಲು ಉಕ್ಕಿನ ಸೇತುವೆಗಳು ಸೂಕ್ತವಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಗಂಟೆಗೆ 100-160 ಕಿ.ಮೀ ವೇಗದಲ್ಲಿ ಚಲಿಸಬಲ್ಲ ರೈಲುಗಳಿಗೆ ಉಕ್ಕಿನ ಸೇತುವೆಗಳನ್ನು ನಿರ್ಮಿಸುವ ಪರಿಣತಿಯನ್ನು ಭಾರತ ಹೊಂದಿದೆ. ಈಗ ಅದೇ ಪರಿಣತಿಯನ್ನು 320 ಕಿ.ಮೀ ವೇಗದ ಎಂಎಎಚ್ಎಸ್ಆರ್ಸಿ ಗೆ ಅನ್ವಯಿಸಲಾಗುತ್ತಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಉತ್ತರ ಪ್ರದೇಶ: ಉತ್ತರ ಪ್ರದೇಶದ ಬಲ್ಲಿಯಾದಲ್ಲಿ ಮದುವೆ ಮೆರವಣಿಗೆ ವೇಳೆ ಮಾಜಿ ಪ್ರಿಯತಮೆಯೊಬ್ಬಳು ವರನ ಮೇಲೆ ಆಯಸಿಡ್ ಎರಚಿದ ಘಟನೆ ನಡೆದಿದೆ. ಪರಿಣಾಮ ಈ ದಾಳಿಯಿಂದ ವರನಿಗೆ ಸುಟ್ಟ ಗಾಯಗಳಾಗಿವೆ. ವರನ ಹತ್ತಿರವಿದ್ದ ಮೂವರು ಮಹಿಳೆಯರಿಗೂ ಕೂಡ ಇದರಿಂದ ಗಾಯಗಳಾಗಿವೆ. ಬಲ್ಲಿಯಾದಲ್ಲಿರುವ ದುಮರಿ ಗ್ರಾಮದಲ್ಲಿ ರಾಕೇಶ್ ಬಿಂದ್ ಎಂಬ ವರನ ಮದುವೆ ಮೆರವಣೆಗೆ ನಡೆಯುತ್ತಿದ್ದ ವೇಳೆ, ಆತನ ಮಾಜಿ ಪ್ರಿಯತಮೆ ವರನ ಬಳಿ ಬಂದು ತನ್ನ ಕೈಯಲ್ಲಿದ್ದ ಆಯಸಿಡ್ ಬಾಟಲಿಯಿಂದ ಆತನ ಮೇಲೆ ದಾಳಿ ನಡೆಸಿದ್ದಾಳೆ. ಯುವತಿಯನ್ನು ಕೂಡಲೇ ಬಂಧಿಸಿದ ರಾಕೇಶ್ ಸಂಬಂಧಿಕರು ಆಕೆಗೆ ಸರಿಯಾಗಿ ಥಳಿಸಿದ್ದಾರೆ. ಆಯಸಿಡ್ ದಾಳಿಯಿಂದ ಗಾಯಗೊಂಡ ನಾಲ್ವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಾಥಮಿಕ ಚಿಕಿತ್ಸೆ ನೀಡಿ ಬಿಡುಗಡೆ ಮಾಡಲಾಗಿದೆ. ನಂತರ ವರನು ಮದುವೆ ಮನೆಗೆ ತೆರಳಿ ವಧುವಿಗೆ ತಾಳಿ ಕಟ್ಟಿದ್ದಾನೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ನಟಿ ಅಮೂಲ್ಯವ ಅವರ ಮಾವನ ಮನೆ ಮೇಲೆ ಚುನಾವಣಾಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸಿದ ಘಟನೆಯೊಂದು ನಡೆದಿದೆ. ಆರ್.ಆರ್. ನಗರದಲ್ಲಿರುವ ಮನೆ ಮೇಲೆ ಅಧಿಕಾರಿಗಳು ಶೋಧ ಮಾಡಿದ್ದಾರೆ. ಈ ಸಮಯದಲ್ಲಿ ರಾಮಚಂದ್ರಪ್ಪ ಅವರ ಮನೆಯಲ್ಲಿ ಯಾವುದೇ ಬೆಲೆಬಾಳುವ ವಸ್ತು ಅಥವಾ ಹಣ ಪತ್ತೆಯಾಗಿಲ್ಲ. ಮನೆಯಲ್ಲಿ ಫಂಕ್ಷನ್ ಎಂದು ಸಂಗ್ರಹಿಸಿದ್ದ 31 ಲೀಟರ್ ಮದ್ಯವನ್ನು ಅಧಿಕಾರಿಗಳು ವಶಪಡಿಸಿದ್ದಾರೆ. ಕಾಂಗ್ರೆಸ್ ನವರು ಈ ಭಾಗದಲ್ಲಿ ಹಣ ಹಂಚಿಕೆ ಮಾಡುತ್ತಿದ್ದರು. ಅದಕ್ಕೆ ನಾವು ಅಡ್ಡಿಪಡಿಸುತ್ತೇವೆ ಎಂದು ನಮ್ಮ ಮನೆ ಮೇಲೆ ದಾಳಿ ಮಾಡಿದ್ದಾರೆ. ದಾಳಿ ಸಂದರ್ಭ ಆರ್ಓ ಗೆ ಪದೇ ಪದೇ ಫೋನ್ ಬರ್ತಾನೆ ಇತ್ತು. ಎರಡು ದಿನಕ್ಕಾದರೂ ಒಳಕ್ಕೆ ಹಾಕಿಸಿ, ಏನೋ ದೊಡ್ಡದಾಗಿ ಸಿಗುತ್ತೆ, ಕೂಲ್ ಆಗುತ್ತೆ ಅಂತಾ ಬಂದರು, ಹಾಟ್ ಆಗಿ ಹೋದರು ಎಂದು ಬಿಜೆಪಿ ಮುಖಂಡ ರಾಮಚಂದ್ರ ಹೇಳಿದ್ದಾರೆ. ಮೊಮ್ಮಕ್ಕಳ ಹುಟ್ಟುಹಬ್ಬಕ್ಕೆಂದು ಲಿಕ್ಕರ್ ತರಿಸಿದ್ದೆ. ಚುನಾವಣಾ ಮಟ್ಟದಲ್ಲಿ ಹುಟ್ಟುಹಬ್ಬ ಮಾಡಬಾರದು ಎಂದು ಸುಮ್ಮನಿದ್ದೆವು. ಈಗ ಅದನ್ನ ವಶಕ್ಕೆ ಪಡೆದಿದ್ದಾರೆ. ಬಿಜೆಪಿಗೆ ಲೀಡ್…