Author: admin

ಬೆಂಗಳೂರು: ಬೆಂಗಳೂರು ಕರಗ ಮೆರವಣಿಗೆಯ ವೇಳೆ ಕ್ಷುಲ್ಲಕ ಕಾರಣಕ್ಕೆ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಯುವಕ ಡಿ.ಸಾರದಿ ಕೊಲೆಯಾದ ಯುವಕನಾಗಿದ್ದಾನೆ. ಏ.24ರಂದು ಮುಂಜಾನೆ 3.30ರ ಸುಮಾರಿಗೆ ಅಣ್ಣಮ್ಮ ದೇಗುಲದ ಮುಂದೆಯೇ ಯುವಕನನ್ನು ಕೊಲೆ ಮಾಡಲಾಗಿದೆ. ಮೆರವಣಿಗೆಯಲ್ಲಿ ಡ್ಯಾನ್ಸ್ ಮಾಡುತ್ತಿದ್ದ ಒಬ್ಬ ವ್ಯಕ್ತಿ ಸಾರದಿ ಮತ್ತು ಸ್ನೇಹಿತರನ್ನು ಟಚ್ ಮಾಡಿದ್ದಾನೆ. ಟಚ್ ಮಾಡಿದ್ದನ್ನು ಪ್ರಶ್ನಿಸಿದ್ದಕ್ಕೆ ಮೂರ್ನಾಲ್ಕು ಹುಡುಗರಿಂದ ಸಾರದಿ ಮೇಲೆ ಮಾರಣಾಂತಿಕವಾಗಿ ಹಲ್ಲೆಯಾಗಿದೆ. ತಕ್ಷಣವೇ ಸಾರದಿಯನ್ನು ಆಸ್ಪತ್ರೆಗೆ ಸೇರಿಸಲಾಗಿದ್ದು, ಆದರೆ  ಚಿಕಿತ್ಸೆ ಫಲಕಾರಿಯಾಗದೆ ಸಾರದಿ ಮೃತಪಟ್ಟಿದ್ದಾನೆ. ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಬೆಂಗಳೂರು: ಮನೆಯೊಂದಕ್ಕೆ ನುಗ್ಗಿದ ದುಷ್ಕರ್ಮಿಗಳು ಗನ್‌ ತೋರಿಸಿ 40 ಲಕ್ಷ ರೂಪಾಯಿ ದರೋಡೆ ಮಾಡಿದ ಘಟನೆ ಸಿಲಿಕಾನ್‌ ಸಿಟಿಯಲ್ಲಿ ನಡೆದಿದೆ. ರಾತ್ರಿ 8 ಗಂಟೆ ಸುಮಾರಿಗೆ ವರ್ನಾ ಕಾರಿನಲ್ಲಿ ಬಂದಿದ್ದ ದರೋಡೆಕೋರರು, ಇದ್ದಕ್ಕಿದ್ದಂತೆ ಮನೆಗೆ ನುಗ್ಗಿದ್ದಾರೆ. ಬಳಿಕ ಗನ್‌ ತೋರಿಸಿ, ಹೆದರಿಸಿ ಕಳ್ಳತನ ಮಾಡಿದ್ದಾರೆ. ಕೊಡಿಗೆಹಳ್ಳಿ ಪೊಲೀಸ್‌ ಠಾಣಾ ವ್ಯಾಪ್ತಿಯ ಸಹಕಾರ ನಗರದಲ್ಲಿ ಈ ಘಟನೆ ನಡೆದಿದ್ದು, ದುಷ್ಕರ್ಮಿಗಳ ಬಗ್ಗೆ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ. ಘಟನೆ ನಡೆದ ಅಕ್ಕ ಪಕ್ಕ ಸಿಸಿ ಕ್ಯಾಮರಾಗಳನ್ನು ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಉತ್ತರ ಪ್ರದೇಶ: ಉತ್ತರ ಪ್ರದೇಶದಲ್ಲಿ ಪತ್ನಿ ಅಪಘಾತದಲ್ಲಿ ಮೃತಪಟ್ಟ ಬೆನ್ನಲ್ಲೇ ಆಘಾತಕ್ಕೊಳಗಾದ ಪತಿಯೂ ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿರುವ ಆಘಾತಕಾರಿ ಘಟನೆ ನಡೆದಿದೆ. ಯೋಗೇಶ್‌ ಕುಮಾರ್‌(36) ಹಾಗೂ ಮಣಿಕರ್ಣಿಕಾ ಕುಮಾರಿ(28) ಮೃತ ದುರ್ದೈವಿಗಳಾಗಿದ್ದಾರೆ. ಅವರು 6 ತಿಂಗಳ ಹಿಂದೆಯಷ್ಟೇ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಏಪ್ರಿಲ್‌ 22 ರಂದು ಮಣಿಕರ್ಣಿಕಾ ಅವರು ತಡಿಯಾವಾಣ ಆರೋಗ್ಯ ಕೇಂದ್ರಕ್ಕೆ ಹೋಗುವಾಗ ಅಪರಿಚಿತ ವಾಹನವೊಂದು ಸ್ಕೂಟಿಗೆ ಡಿಕ್ಕಿ ಹೊಡೆದಿತ್ತು. ಈ ವೇಳೆ ಮಣಿಕರ್ಣಿಕಾ ಮೃತಪಟ್ಟಿದ್ದರು. ಗುರುತಿನ ಚೀಟಿ ಆಧಾರದ ಮೇಲೆ ಮಣಿಕರ್ಣಿಕಾ ಸಾವಿನ ಸುದ್ದಿಯನ್ನು ಪತಿ ಯೋಗೇಶ್‌ ಗೆ ತಿಳಿಸಲಾಗಿದ್ದು, ಪತ್ನಿ ಸಾವಿನಿಂದ ನೊಂದ ಪತಿ, ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ವೇಳೆ ಡೆತ್‌ ನೋಟ್‌ ಪತ್ತೆಯಾಗಿದ್ದು, “ನಾವು ಇದ್ದರೂ ಜತೆಯಾಗಿಯೇ, ಸತ್ತರೂ ಜತೆಯಾಗಿಯೇ” ಎಂದು ಬರೆದಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಬ್ಲಾಕ್ ಟೀ ಕುಡಿಯುವುದು ಒಳ್ಳೇದಾ ಕೆಟ್ಟದ್ದಾ?: ಬೆಳಗ್ಗೆ ತಿಂಡಿ ತಿನ್ನುವ ಮುಂಚೆ ಟೀ ಅಥವಾ ಕಾಫಿ ಕುಡಿಯುವ ಅಭ್ಯಾಸ ಮಾಡಿಕೊಂಡಿರುತ್ತಾರೆ. ಇನ್ನು ಕೆಲವರಿಗೆ ಬ್ಲ್ಯಾಕ್ ಟೀ ತುಂಬಾ ಇಷ್ಟ ಆಗುತ್ತೆ.. ಇದು ಆರೋಗ್ಯಕ್ಕೂ ಒಳ್ಳೆಯದೂ ಎಂಬ ಮಾತು ಇದೆ. ಆದರೆ ಬೆಳಗಿನ ಸಮಯದಲ್ಲಿ ಬ್ಲ್ಯಾಕ್ ಟೀ ಕುಡಿಯುವುದು ಅಷ್ಟು ಒಳ್ಳೆಯದಲ್ಲ ಎಂದು ಹೇಳಲಾಗುತ್ತದೆ. ಏಕೆಂದರೆ ಇದು ಹಲವು ಕಾಯಿಲೆಗಳನ್ನು ತರುತ್ತದೆ ಎಂದು ಹೇಳಲಾಗುತ್ತದೆ. ತಜ್ಞರ ಲೆಕ್ಕಾಚಾರದಲ್ಲಿ ಬ್ಲ್ಯಾಕ್ ಟೀ ತುಂಬಾ ಆಮ್ಮಿಯ ಪ್ರಭಾವವನ್ನು ಹೊಂದಿದ್ದು, ಖಾಲಿ ಹೊಟ್ಟೆಯಲ್ಲಿ ಕುಡಿಯುವುದರಿಂದ ದೂರ ಸರಿಯುವುದು ಉತ್ತಮ. ಸೀತಾಫಲ ಹಣ್ಣಿಂದ ಇರೋ ಪ್ರಯೋಜನ ಒಂದೆರೆಡಲ್ಲ: ಸೀತಾಫಲವು ಕಣ್ಣುಗಳಿಗೆ ತುಂಬಾ ಒಳ್ಳೆಯದು. ಇದರಲ್ಲಿರುವ ಲುಟೀನ್ ಶಕ್ತಿಯುತವಾದ ಉತ್ಕರ್ಷಣ ನಿರೋಧಕವಾಗಿದೆ. ಇದು ಕಣ್ಣುಗಳಲ್ಲಿ ಕಂಡುಬರುತ್ತದೆ. ಇದನ್ನು ತಿನ್ನುವುದರಿಂದ ನಿಮ್ಮ ಕಣ್ಣುಗಳನ್ನು ರಾಡಿಕಲ್ ಹಾನಿಯಿಂದ ರಕ್ಷಿಸುತ್ತದೆ. ಸೀತಾಫಲ ತಿನ್ನುವುದರಿಂದ ದೇಹದಲ್ಲಿ ವಿಟಮಿನ್ ಸಿ ಕೊರತೆಯನ್ನು ಪೂರೈಸುತ್ತದೆ. ಜೊತೆಗೆ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಈ ಹಣ್ಣುಗಳು ಸ್ನಾಯು ನೋವನ್ನು ನಿವಾರಿಸುತ್ತದೆ. ಮೂಳೆಗಳನ್ನು…

Read More

ಬೆಂಗಳೂರು: ಲೋಕಸಭೆ ಚುನಾವಣೆಗೂ ಮುನ್ನ ರಾಜಧಾನಿ ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯವೊಂದು ನಡೆದಿದ್ದು, 23 ವರ್ಷದ ಯುವತಿಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. ಐವರು ಕಾಮುಕರು ಯುವತಿನ್ನು ಅಪಹರಿಸಿ ನಿರ್ಜನ ಪ್ರದೇಶದಲ್ಲಿ ಅತ್ಯಾಚಾರವೆಸಗಿದ್ದಾರೆ. ಸದ್ಯ ಸಂತ್ರಸ್ತೆ ಕುಟುಂಬಸ್ಥರು ನೀಡಿದ ದೂರಿನ ಮೇರೆಗೆ ಹೈಗ್ರೌಂಡ್ಸ್ ಪೊಲೀಸರು ಐದು ಜನ ಆರೋಪಿಗಳನ್ನು ಬಂಧಿಸಿದ್ದಾರೆ. ಈ ಸಂಬಂಧ ತನಿಖೆಯನ್ನು ನಡೆಸಲಾಗುತ್ತಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಬೆಂಗಳೂರು: ರೈಲಿಗೆ ಸಿಲುಕಿ 25 ವರ್ಷದ ಮೂವರು ಯುವಕರು ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ಗುರುವಾರ ಮಧ್ಯಾಹ್ನ ನಡೆದಿದೆ. ಬೆಂಗಳೂರಿನ ಬೈಯಪ್ಪನಹಳ್ಳಿ ಬಳಿ ಆಂಧ್ರಪ್ರದೇಶದ ಮೂಲದ ಚಿತ್ತೂರಿನ ಮೂವರು ರೈಲಿಗೆ ಸಿಲುಕಿ ಸಾವನ್ನಪ್ಪಿದ್ದಾರೆ. ಮೃತರನ್ನು ಶಶಿಕುಮಾರ್ (23), ಲೋಕೇಶ್ (25) ಮೃತ ದುರ್ದೈವಿಗಳು. ಮತ್ತೋರ್ವನ ಗುರುತು ಪತ್ತೆಯಾಗಿಲ್ಲ. ಆತ್ಮಹತ್ಯೆಗೆ ನಿಖರ ಕಾರಣವೇನು ಎಂಬುದು ತಿಳಿದುಬಂದಿಲ್ಲ. ಇನ್ನು ಘಟನಾ ಸ್ಥಳಕ್ಕೆ ಆಗಮಿಸಿದ ಬೈಯಪ್ಪನಹಳ್ಳಿ ಪೊಲೀಸರು ಪರಿಶೀಲನೆ ನಡೆಸಿದ್ದಾರೆ, ಇನ್ನೂ ಈ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿ ತಿಳಿದುಬರಬೇಕಿದೆ ಅ‍ಷ್ಟೆ. ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗುತ್ತಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ತುಮಕೂರು: ಜಿಲ್ಲೆಯ ಶಿರಾ ತಾಲೂಕಿನ ಚಿಕ್ಕನಹಳ್ಳಿ ಬಳಿ ಮುಂದೆ ಹೋಗುತ್ತಿದ್ದ ಲಾರಿಗೆ ಬುಲೆರೋ ವಾಹನ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಬೆಳಗಾವಿ ಜಿಲ್ಲೆಯ ಅಥಣಿ ಮೂಲದವರಾದ ಉಮೇಶ್ ನಾಗಪ್ಪ ಹಾಗೂ ಸಂತೋಷ್ ಸುರೇಶ್ ಮೃತ ದುರ್ದೈವಿಗಳಾಗಿದ್ದಾರೆ. ಬುಲೆರೋ ವಾಹನ ಚಾಲಕನಿಗೆ ಶಿರಾ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ದ್ರಾಕ್ಷಿ ತುಂಬಿಕೊಂಡು ಬೆಂಗಳೂರು ಕಡೆ ಹೋಗುತ್ತಿದ್ದ ಲಾರಿಗೆ ಬುಲೆರೋ ವಾಹನ ಡಿಕ್ಕಿಯಾಗಿ ಅವಘಡ ಸಂಭವಿಸಿದ್ದು, ಕಳ್ಳಂಬೆಳ್ಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಕೊಪ್ಪಳ: ಏಪ್ರಿಲ್ 19 ರಂದು ಕಿನ್ನಾಳ ಗ್ರಾಮದಲ್ಲಿರುವ ಅನುಶ್ರೀ ಮಡಿವಾಳರ್ ಅನ್ನೋ ಏಳು ವರ್ಷದ ಬಾಲಕಿ, ಮಧ್ಯಾಹ್ನ ಮನೆಯಲ್ಲಿ ಊಟ ಮಾಡಿ ಮನೆ ಮುಂದೆ ಆಡುತ್ತಿದ್ದಾಗ ಬಾಲಕಿ ಧಿಡೀರನೆ ನಾಪತ್ತೆಯಾಗಿದ್ದಳು. ಏಪ್ರಿಲ್ 19 ರ ಸಂಜೆಯಿಂದ ಅನುಶ್ರೀಯ ಹೆತ್ತವರು, ಗ್ರಾಮದ ಜನರು, ಬಾಲಕಿಗಾಗಿ ಹುಡುಕಾಟ ನಡೆಸಿದ್ದರು. ಸುತ್ತಮುತ್ತಲಿನ ಗ್ರಾಮಗಳು ಸೇರಿದಂತೆ ಗ್ರಾಮದ ಹೊರವಲಯದಲ್ಲಿರುವ ಕೆರೆ, ಬಾವಿಗಳನ್ನು ಶೋಧ ಮಾಡಿದ್ದರು. ಯಾರಾದರು ನಿಧಿಗಾಗಿ ಬಾಲಕಿಯನ್ನು ಬಲಿ ಕೊಡಲು ಕರೆದುಕೊಂಡು ಹೋಗಿರಬಹುದು ಅಂತ ತಮ್ಮೂರು ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ಸ್ಮಶಾನಗಳನ್ನು ಕೂಡಾ ಹುಡುಕಿ ಬಂದಿದ್ದರು. ಆದರೆ ಎಲ್ಲಿಯೂ ಕೂಡ ಬಾಲಕಿಯ ಸುಳಿವು ಸಿಕ್ಕಿರಲಿಲ್ಲಾ. ಜೊತೆಗೆ ಕೊಪ್ಪಳ ಗ್ರಾಮೀಣ ಠಾಣೆಯ ಪೊಲೀಸ್ ಠಾಣೆಯಲ್ಲಿ ಮಿಸ್ಸಿಂಗ್ ಕೇಸ್ ಕೂಡಾ ಕೊಟ್ಟಿದ್ದರು. ಪೊಲೀಸರು ಕೂಡ ಬಾಲಕಿಯ ಮಿಸ್ಸಿಂಗ್ ಬಗ್ಗೆ ಎಲ್ಲಡೆ ಮಾಹಿತಿ ನೀಡಿದ್ದರು. ಆದರೂ ಬಾಲಕಿಯ ಸುಳಿವು ಸಿಕ್ಕಿರಲಿಲ್ಲ. ಆದರೆ ಶುಕ್ರವಾರ ಸಂಜೆ ನಾಪತ್ತೆಯಾಗಿದ್ದ ಬಾಲಕಿಯ ಮೃತದೇಹ, ಭಾನುವಾರ ಸಂಜೆ ಅದೇ ಕಿನ್ನಾಳ ಗ್ರಾಮದಲ್ಲಿ ಪತ್ತೆಯಾಗಿದೆ. ನಮ್ಮತುಮಕೂರಿನ ಕ್ಷಣ…

Read More

ನಾಳೆ ನಡೆಯಲಿರುವ ಚುನಾವಣೆಯಲ್ಲಿ, ಕೊರಟಗೆರೆ ವಿಧಾನಸಭಾ ಕ್ಷೇತ್ರದ 240 ಮತಗಟ್ಟೆಗಳಲ್ಲಿ 2100 ಚುನಾವಣ ಸಿಬ್ಬಂದಿಗಳ ನಿಯೋಜನೆ ಮಾಡಿದ್ದು, 500ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಗಳ ಜೊತೆ ಕೇರಳ ಪೊಲೀಸ್ ಹಾಗೂ ಸಿ ಆರ್ ಪಿ ಎಫ್ ಮಿಲಿಟರಿ ಪಡೆ ಹದ್ದಿನ ಕಣ್ಗಾವಲಲ್ಲಿ ಈ ಚುನಾವಣೆ ನಡೆಯುತ್ತಿದೆ. “18 ವರ್ಷ ಮೇಲ್ಪಟ್ಟ ಎಲ್ಲ ಮತದಾರರು ತಮ್ಮ ತಮ್ಮ ಕ್ಷೇತ್ರದ ಮತಗಟ್ಟೆಗಳಿಗೆ ತೆರಳಿ ಮತದಾನವನ್ನು ಮಾಡಿ” ಎಂದು ತಹಶೀಲ್ದಾರ್ ಮಂಜುನಾಥ್ ತಿಳಿಸಿದರು. ಕೊರಟಗೆರೆ ವಿಧಾನಸಭಾ ಕ್ಷೇತ್ರದ ಮತದಾರರ ಸಂಖ್ಯೆ ಈ ಕೆಳಗಿನಂತಿದೆ: ಪುರುಷ ಮತದಾರರು :-102837 ಮಹಿಳಾ ಮತದಾರರು :-104513 ಒಟ್ಟು ಮತದಾರರ ಸಂಖ್ಯೆ :- 207361.. ತಪ್ಪದೇ ನಾಳೆ ಮತದಾನ ಕೇಂದ್ರಕ್ಕೆ ತೆರಳಿ ಎಲ್ಲರೂ ಮತದಾನವನ್ನು ಮಾಡಿ. ಇದು ನಮ್ಮ ಹಕ್ಕು.  ವರದಿ: ಮಂಜುಸ್ವಾಮಿ ಎಂ.ಎನ್. ಕೊರಟಗೆರೆ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ನವದೆಹಲಿ: ಅರುಣಾಚಲ ಪ್ರದೇಶದಲ್ಲಿ ಇಂದು ಭೂಕುಸಿತ ಸಂಭವಿಸಿದ್ದು, ಚೀನಾದ ಗಡಿಗೆ ಸಂಪರ್ಕ ಕಲ್ಪಿಸುವ ಹೆದ್ದಾರಿಯ ಒಂದು ಭಾಗ ಕೊಚ್ಚಿ ಹೋಗಿದೆ. ಘಟನೆಯ ಬಗ್ಗೆ ಅರುಣಾಚಲ ಪ್ರದೇಶದ ಮುಖ್ಯಮಂತ್ರಿ ಪೆಮಾ ಖಂಡು ಕಳವಳ ವ್ಯಕ್ತಪಡಿಸಿದ್ದಾರೆ. ಜಿಲ್ಲಾಡಳಿತವು ದಿಭಾಂಗ್ ಕಣಿವೆಯ ನಿವಾಸಿಗಳಿಗೆ ಮೂರು ದಿನಗಳಲ್ಲಿ ಪ್ರಯಾಣಿಕರಿಗೆ ಅನುಕೂಲ ಮಾಡುತ್ತೇವೆ ಎಂದು ನೋಟಿಸ್‌ ನೀಡಿದೆ. ಜಿಲ್ಲೆಯಲ್ಲಿ ನಿರಂತರ ಮಳೆಯಿಂದಾಗಿ ರೋಯಿಂಗ್‌ಗೆ ಸಂಪರ್ಕಿಸುವ NH 313 ರ ಪ್ರಮುಖ ಭಾಗವು ಕೊಚ್ಚಿಹೋಗಿದೆ ಎಂದು ದಿಭಾಂಗ್ ಕಣಿವೆಯ ಎಲ್ಲಾ ನಿವಾಸಿಗಳಿಗೆ ತಿಳಿಸಲಾಗಿದೆ. ಇದನ್ನು ಸರಿಪಡಿಸಲು ಕನಿಷ್ಟ ಮೂರು ದಿನಗಳು ಬೇಕಾಗಬಹುದು ಎಂದು ಅಂದಾಜಿಸಲಾಗಿದೆ. ಆದ್ದರಿಂದ ರಸ್ತೆಯನ್ನು ಪುನಃಸ್ಥಾಪಿಸುವವರೆಗೆ ಮತ್ತು ಮಳೆ ಸಹಜ ಸ್ಥಿತಿಗೆ ಮರಳುವವರೆಗೆ ಸಹಕರಿಸಬೇಕಾಗಿ ನೋಟಿಸ್‌ ನಲ್ಲಿ ತಿಳಿಸಲಾಗಿದೆ. ದಿಭಾಂಗ್ ಕಣಿವೆಯು ಭಾರತದ ಇತರ ಭಾಗಗಳೊಂದಿಗೆ ಸಂಪರ್ಕಿಸುವ ಏಕೈಕ ಮಾರ್ಗವಾಗಿದೆ. ಈ ಸಂಬಂಧ ತಮ್ಮ ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿರುವ ಅವರು, ಸತತ ಮಳೆಯಿಂದಾಗಿ ಈ ಘಟನೆ ನಡೆದಿದೆ. ಹುನ್ಲಿ ಮತ್ತು ಅನಿನಿ ನಡುವಿನ ಹೆದ್ದಾರಿ ಕುಸಿತದಿಂದಾಗಿ ಪ್ರಯಾಣಿಕರಿಗೆ ತೊಂದರೆಯಾಗಿದೆ.…

Read More