Author: admin

ಗೋಧಿ ಕಟಾವು ಮಷಿನ್‌ ಒಳಗೆ ಸಿಲುಕಿ 14 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಆಗ್ರಾದಲ್ಲಿ ನಡೆದಿದೆ. ಈ ಭೀಕರ ಘಟನೆಯಲ್ಲಿ ಬಾಲಕನ ದೇಹ ಛಿದ್ರಗೊಂಡಿದ್ದು, ದೃಶ್ಯ ಕಂಡು ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ. 14 ವರ್ಷದ ಬಾಲಕ ತನ್ನ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದು, ಗೋಧಿ ಕಟಾವು ಯಂತ್ರವನ್ನು ನಿರ್ವಹಿಸುತ್ತಿದ್ದ. ಆದರೆ, ಏಕಾಏಕಿ ಜೋರಾಗಿ ಬೀಸಿದ ಗಾಳಿಯ ರಭಸಕ್ಕೆ ಯಂತ್ರದ ಮೇಲೆ ಇಟ್ಟಿದ್ದ ಟಾರ್ಪಾಲಿನ್ ಹಾರಿ ಹೋಗಿದೆ. ಪರಿಣಾಮ ಟಾರ್ಪಾಲ್​​ ಸಮೇತ ಬಾಲಕ ಕಟಾವು ಯಂತ್ರದೊಳಗೆ ಬಿದ್ದಿದ್ದಾನೆ. ಬಾಲಕ ಕಿರುಚುವ ಧ್ವನಿ ಕೇಳುತ್ತಿದ್ದಂತೆ ಅಕ್ಕಪಕ್ಕದ ಜಮೀನಿನಲ್ಲಿದ್ದ ಗ್ರಾಮಸ್ಥರು ಓಡೋಡಿ ಬಂದಿದ್ದರು ಕೂಡ ಅಷ್ಟೋತ್ತಿಗಾಗಲೇ ಬಾಲಕನ ದೇಹ ಛಿದ್ರಗೊಂಡಿದೆ. ಸದ್ಯ ಘಟನೆಗೆ ಸಂಬಂಧಿಸಿದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಯಂತ್ರದ ಬಳಿ ತಲುಪಿದಾಗ ದೃಶ್ಯ ಕಂಡ ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಸರಗೂರು: ತಾಲ್ಲೂಕು ಹಾದನೂರು ಗ್ರಾಪಂ ವ್ಯಾಪ್ತಿಯ ಯಶವಂತಪುರ ಗ್ರಾಮದಲ್ಲಿ ಕುಡಿಯುವ ನೀರಿಗಾಗಿ ಮೂರು ಕೊಳವೆ ಬಾವಿಗಳಿವೆ. ಎರಡು ಕೊಳವೆ ಬಾವಿಯಲ್ಲಿ ನೀರಿಲ್ಲ. ಒಂದರಲ್ಲಿ ಮೋಟಾರ್ ಮತ್ತು ಪೈಪ್ ಗಳಿಲ್ಲ. ಬದಲಾವಣೆ ಮಾಡಲು ಸಹ ಅವಕಾಶಗಳಿಲ್ಲ. 150 ಕುಟುಂಬಗಳಿಗೂ ಹೆಚ್ಚು ದಲಿತ, ಆದಿವಾಸಿ, ಇತರೆ ಸಮುದಾಯದ ಕುಟುಂಬಗಳ ಜನರು ವಾಸಿಸುತ್ತಿದ್ದು ಕಳೆದ ಒಂದು ವಾರದಿಂದ ಕುಡಿಯುವ ನೀರಿಗೆ ಸಮಸ್ಯೆಯಾಗಿದೆ. ಗ್ರಾಮ ಪಂಚಾಯತಿಯಲ್ಲಿ ಯಾವುದೇ ಅನುಧಾನದಲ್ಲಿ ಹಣ ಇಲ್ಲವೆಂದು ತಾಲ್ಲೋಕು ಪಂಚಾಯ್ತಿ ಕಾರ್ಯ ನಿರ್ವಹಕಾಧಿಕಾರಗಳಿಗೆ ವರದಿ ನೀಡಿ ಮನವಿ ಸಲ್ಲಿಸಲಾಗಿದೆ. ಆದರೂ ಸಹ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ. ಇದರಿಂದಾಗಿ ಕುಡಿಯಲು ಒಂದು ಹನಿ ನೀರಿಲ್ಲದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಗ್ರಾಮಸ್ಥರು ಸ್ವಯಂ ಪ್ರೇರಿತರಾಗಿ ಅಕ್ಕಪಕ್ಕದ ಪಂಪ್ ಸೆಟ್ ಗಳಿಂದ ಗ್ರಾಮದ ಮಹಿಳೆಯರು ಬಿಂದಿಗೆ ಇಟ್ಟುಕೊಂಡು ತಲೆ ಮೇಲೆ ಹೊತ್ತು, ಬೈಕ್ ಗಳಲ್ಲಿ ಬಿಂದಿಗೆ ಕಟ್ಟಿ ತರಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಇದರಿಂದ ಗ್ರಾಮದ ಯುವ ಜನರಾದ ಸ್ವಾಮಿ, ವಾಸು, ಪ್ರೀತಮ್, ನಾಗರಾಜು, ವಿನಯ್, ಕುಮಾರ್, ರಾಜೇಶ್, ಸಂತೋಷ್,…

Read More

ಬೀದರ್: ಹುಬ್ಬಳಿಯ ನೇಹಾ ಹೀರೆಮಠ ಕೊಲೆ ಪ್ರಕರಣವನ್ನು ಸರ್ಕಾರ ತೀವ್ರವಾಗಿ ಖಂಡಿಸುತ್ತದೆ ಹಾಗೂ ಆರೋಪಿಗೆ ಘೋರ ಶಿಕ್ಷೆ ವಿಧಿಸಲು ಸಿಐಡಿ ತನಿಖೆ ಚುರುಕುಗೊಳಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬೀದರ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕೆಂದು ಬಿಜೆಪಿ ಒತ್ತಾಯ ಮಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿದರು. ಬಿಜೆಪಿ ತನ್ನ ಅಧಿಕಾರದ ಅವಧಿಯಲ್ಲಿ ಯಾವುದಾದರೂ ಪ್ರಕರಣವನ್ನು ಸಿಬಿಐ ಗೆ ವಹಿಸಿದೆಯೇ? ಎಂದು ಪ್ರಶ್ನಿಸಿದರು. ನಾನು ಹಿಂದೆ ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ಪ್ರಕರಣಗಳನ್ನು ಸಿಬಿಐ ಗೆ ವಹಿಸಿದ್ದೇನೆ. ಅವರಿಗೆ ಕೇಳಲು ಯಾವ ನೈತಿಕ ಹಕ್ಕಿದೆ? ಇದರಲ್ಲಿ ರಾಜಕೀಯ ಮಾಡಬಾರದು. ನೇಹಾ ಹತ್ಯೆ ಆರೋಪಿಗೆ ಕಠಿಣ ಶಿಕ್ಷೆ ನೀಡಬೇಕೆಂದು ಸರ್ಕಾರಿ ಅಭಿಯೋಜಕರೊಂದಿಗೆ ಮಾತನಾಡಿದ್ದು, ಸರ್ಕಾರ ಈಗಾಗಲೇ ಆರೋಪಿಯನ್ನು ಬಂಧಿಸಿದೆ. ಸಿಐಡಿ ತನಿಖೆ ನಡೆದಿದ್ದು ಆರೋಪಪಟ್ಟಿಯನ್ನು ತಯಾರಿಸಲಿದೆ ಎಂದರು. ನೇಹಾ ಹತ್ಯೆ ಪ್ರಕರಣದಲ್ಲಿ ರಾಜಕೀಯ ಬೇಡ: ನೇಹಾ ತಂದೆಯವರು ತಮ್ಮ ಮಗಳ ಕೊಲೆ ಪ್ರಕರಣದಲ್ಲಿ, ಕಾಂಗ್ರೆಸ್ ಪಕ್ಷವೇ ರಾಜಕೀಯ ಮಾಡುತ್ತಿದೆ ಹಾಗೂ ಬಿಜೆಪಿಯವರ…

Read More

ಪಾಟ್ನಾ: ಪಾಟ್ನಾದಲ್ಲಿ ನಿತೀಶ್ ಕುಮಾರ್ ನೇತೃತ್ವದ ಜನತಾ ದಳ ಯುನೈಟೆಡ್ ಯುವ ಮುಖಂಡನನ್ನು ಗುಂಡು ಹಾರಿಸಿ ಹತ್ಯೆಗೈದ ಘಟನೆ ನಡೆದಿದೆ. ಸೌರಭ್ ಕುಮಾರ್ ಗುಂಡಿನ ದಾಳಿಯಲ್ಲಿ ಮೃತಪಟ್ಟ ಜೆಡಿಯು ನಾಯಕನಾಗಿದ್ದಾರೆ. ಅವರು ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಹಿಂದಿರುಗುತ್ತಿದ್ದಾಗ ಬೈಕ್ ‍ನಲ್ಲಿ ಬಂದ ನಾಲ್ವರು ದುಷ್ಕರ್ಮಿಗಳು ಗುಂಡು ಹಾರಿಸಿದ್ದಾರೆ. ಈ ವೇಳೆ ಸೌರಭ್ ಅವರ ತಲೆಗೆ ಎರಡು ಗುಂಡುಗಳು ತಗಲಿವೆ. ದಾಳಿಯಲ್ಲಿ ಅವರ ಜೊತೆಗಿದ್ದ ಮುನ್ಮುನ್ ಎಂಬವರಿಗೂ ಮೂರು ಗುಂಡುಗಳು ತಗುಲಿದ್ದು ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸೌರಭ್ ಅವರನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಈ ವೇಳೆ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ಘೋಷಿಸಿದರು. ಮತ್ತೋರ್ವ ಗಾಯಾಳುವಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಚಾಮರಾಜನಗರ: ಕೊಳ್ಳೇಗಾಲ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರ ಮುಗಿಸಿ ಮಧ್ಯರಾತ್ರಿ ಮೈಸೂರಿಗೆ ಬರುತ್ತಿದ್ದ ವೇಳೆ, ಕೊಳ್ಳೇಗಾಲದ ಶಾಸಕ ಎ.ಆರ್. ಕೃಷ್ಣಮೂರ್ತಿಯವರ ಕಾರು ಅಪಘಾತವಾಗಿದ್ದು ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಶಾಸಕರು, ಅವರ ಸಹಾಯಕ ಹಾಗೂ ಕಾರಿನ ಚಾಲಕ ಅಪಾಯದಿಂದ ಪಾರಾಗಿದ್ದಾರೆ. ಕೊಳ್ಳೇಗಾಲ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರ ಮುಗಿಸಿ ಮಧ್ಯರಾತ್ರಿ ಮೈಸೂರಿಗೆ ಬರುತ್ತಿದ್ದ ವೇಳೆ ಆಕಸ್ಮಿಕವಾಗಿ ಶಾಸಕರ ಕಾರಿನ ಟೈರ್ ಬ್ಲಾಸ್ಟ್ ಆಗಿದೆ. ಈ ವೇಳೆ ಕಾರು ರಸ್ತೆಯ ಬದಿಗೆ ನುಗ್ಗಿ, ಪಕ್ಕದಲ್ಲಿದ್ದ ಕಲ್ಲಿಗೆ ಡಿಕ್ಕಿಯಾಗಿದ್ದು, ಪರಿಣಾಮ ಕಾರಿನ ಮುಂಭಾಗಕ್ಕೆ ಹಾನಿಯಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

2023ರಲ್ಲಿ ಅಕ್ರಮವಾಗಿ ಐಪಿಎಲ್ ಪಂದ್ಯ ಪ್ರಸಾರ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣದ ಹೆಸರಾಂತ ತಾರೆ ತಮನ್ನಾ ಭಾಟಿಯಾಗೆ ಮುಂಬೈ ಸೈಬರ್ ಪೊಲೀಸ್ ಸಮನ್ಸ್ ಜಾರಿ ಮಾಡಿದ್ದಾರೆ. ಏಪ್ರಿಲ್ 29ರಂದು ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಲಾಗಿದೆ. ಅಕ್ರಮವಾಗಿ ಐಪಿಎಲ್ ಪಂದ್ಯ ಪ್ರಸಾರ ಮಾಡಿದ್ದರಿಂದ, ವಯಾಕಾಮ್‌ ಗೆ ಕೋಟ್ಯಂತರ ರೂಪಾಯಿಗಳ ನಷ್ಟವನ್ನು ಉಂಟುಮಾಡಿದ ಪ್ರಕರಣ ಇದಾಗಿದೆ. ಐಪಿಎಲ್ ಪಂದ್ಯ ಪ್ರಸಾರದ ಹಕ್ಕನ್ನು ಹೊಂದಿರುವ ವಯಾಕಾಮ್, ಈ ನಟಿಯ ವಿರುದ್ಧ ದೂರು ನೀಡಿತ್ತು. ದೂರಿಗೆ ಸಂಬಂಧಿಸಿದಂತೆ ಈಗ ತಮನ್ನಾಗೆ ನೋಟಿಸ್ ಜಾರಿ ಮಾಡಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಉತ್ತರ ಪ್ರದೇಶದ ಹತ್ರಾಸ್‌ ಕ್ಷೇತ್ರದ ಹಾಲಿ ಬಿಜೆಪಿ ಸಂಸದ ರಾಜವೀರ್ ದಿಲೇರ್ ಅವರು ಹೃದಯಾಘಾತದಿಂದ ನೆನ್ನೆ ನಿಧನರಾಗಿದ್ದಾರೆ. ದೊರೆತ ಮಾಹಿತಿ ಪ್ರಕಾರ ಸಂಸದ ರಾಜವೀರ್ ದಿಲೇರ್ ಅವರು ಅಲಿಘರ್ ‌ನಲ್ಲಿರುವ ತಮ್ಮ ನಿವಾಸದಲ್ಲಿದ್ದ ಸಂದರ್ಭದಲ್ಲಿ ಇದ್ದಕ್ಕಿದ್ದಂತೆ ಮೂರ್ಛೆ ಹೋಗಿ ಕುಸಿದು ಬಿದ್ದಿದ್ದಾರೆ. ತಕ್ಷಣ ಅವರನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೂ ಕಾಲ ಮೀರಿತ್ತು. ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಅಂದಹಾಗೆ, ರಾಜವೀರ್ ದಿಲೇರ್ ಅವರು ಈ ಬಾರಿಯ ಲೋಕಸಭಾ ಚುನಾವಣೆಯ ಟಿಕೆಟ್‌ ಆಕಾಂಕ್ಷಿಯಾಗಿದ್ದರು. ಆದರೆ ಇವರಿಗೆ ಬಿಜೆಪಿ ಟಿಕೆಟ್‌ ಕೊಡಲು ನಿರಾಕರಿಸಿತ್ತು. ಸಂಸದರ ನಿಧನಕ್ಕೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಂತಾಪ ಸೂಚಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಎರಡು ಕಾಲು ಸ್ವಾಧೀನ ಕಳೆದುಕೊಂಡ ವಿಕಲಚೇತನನೊಬ್ಬ ಬಸ್ ನಲ್ಲಿ ಪ್ರಯಾಣಿಸಿದ್ದ ವೇಳೆ, ಬಸ್‌ನಿಲ್ದಾಣದಿಂದ ಇನ್ನೊಂದು ಬಸ್ ಗೆ ಹೋಗಲು ಹರಸಾಹಸ ಪಡುತ್ತಿದ್ದನ್ನು ಕಂಡು ಬಸ್ ಕಾರ್ಯನಿರ್ವಾಹಕ, ವಿಕಲಚೇತನನ್ನು ಮಗುವಿನಂತೆ ಬಸ್‌ ನಿಂದ ಎತ್ತಿಕೊಂಡು ಹೋಗಿ ಇನ್ನೊಂದು ಬಸ್‌ ಗೆ ಹತ್ತಿಸಿ ಮಾನವೀಯತೆ ಮರೆದಿದ್ದಾರೆ. ಈ ಘಟನೆ ವಿಜಯಪುರ ಜಿಲ್ಲೆಯ ಸಿಂದಗಿ ಬಸ್‌ ನಿಲ್ದಾಣದಲ್ಲಿ ಸಾಯಂಕಾಲ ನಡೆದಿದ್ದು, ವಿಕಲಚೇತನ ಸಾಹಯಕ್ಕೆ ಬಂದ ಕಾರ್ಯನಿರ್ವಾಹಕನ ಬಗ್ಗೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಬಾಗಲಕೋಟೆ ಸರ್ಕಾರಿ ಡಿಪೋಗೆ ಸೇರಿದ ಬಸ್‌ ಕಾರ್ಯನಿರ್ವಾಹಕ ವಿರುಪಾಕ್ಷ ಅಂಬಿಗೇರ, ವಿಕಲಚೇತನನಿಗೆ ಸಹಾಯ ಮಾಡಿದ ಬಸ್ ನಿರ್ವಾಹಕ. ನಿನ್ನೆ ಕಲಬುರ್ಗಿಯಿಂದ ಸಿಂದಗಿ ಮಾರ್ಗವಾಗಿ ಬಾಗಲಕೋಟೆಗೆ ತೆರಳುತ್ತಿದ್ದ ಬಸ್. ಚೌಡಾಪೂರದಲ್ಲಿ ಸಂಬಂಧಿಸಿಕರು ವಿಕಲಚೇತನನ್ನು ಇದೇ ಬಸ್‌ ಗೆ ಹತ್ತಿಸಿದ್ದರು. ಸಿಂದಗಿಯಲ್ಲಿ ಬಸ್ ಇಳಿದು ವಿಜಯಪುರಕ್ಕೆ ತೆರಳಬೇಕಿದ್ದ ವಿಕಲಚೇತನ. ಈ ವೇಳೆ ಸಿಂದಗಿ ಬಸ್ ನಿಲ್ದಾಣದಲ್ಲಿ ವಿಜಯಪುರಕ್ಕೆ ತೆರಳುತ್ತಿದ್ದ ಮತ್ತೊಂದು ಬಸ್ ಕಂಡು ಕಂಡಕ್ಟರ್ ಗೆ ಮನವಿ ಮಾಡಿದ್ದಾನೆ. ಅದಕ್ಕೆ ಸ್ಪಂದಿಸಿದ ಕಂಡಕ್ಟರ್ ವಿಕಲಚೇತನನ್ನು ಎತ್ತಿಕೊಂಡು…

Read More

ಮದುವೆ ಉಡುಗೊರೆಗೆ ಸಂಬಂಧಿಸಿದಂತೆ ಗಂಡ- ಹೆಂಡತಿ ಜಗಳ ಪತಿಯ ಕೊಲೆಯಲ್ಲಿ ಅಂತ್ಯವಾದ ದುರಂತ ಘಟನೆ ಉತ್ತರಪ್ರದೇಶದಲ್ಲಿ ವರದಿಯಾಗಿದೆ. ಮೃತನಾದ ಚಂದ್ರಪ್ರಕಾಶ್‌ (35) ನನ್ನು ಪತ್ನಿ ಚಾಬಿ ತನ್ನ ಸಹೋದರರ ಸಹಾಯದಿಂದ ಕೊಲೆ ಮಾಡಿದ್ದಾಳೆ.ಎನ್ನಲಾಗಿದೆ ಈ ಘಟನೆ ಉತ್ತರ ಪ್ರದೇಶದ ಬಾರಾಬಂಕಿ ಸಮೀಪದ ಹಳ್ಳಿಯೊಂದರಲ್ಲಿ ನಡೆದಿದೆ. ಚಂದ್ರಪ್ರಕಾಶ್‌ ನ ಸಹೋದರಿಗೆ ಮದುವೆ ನಿಗದಿಯಾಗಿತ್ತು. ಅಂತೆಯೇ ಏಪ್ರಿಲ್‌ 26 ರಂದು ಮದುವೆ ಕಾರ್ಯಕ್ರಮ ನಡೆಯುವುದಿತ್ತು. ಹೀಗಾಗಿ ಸಹೋದರಿಗೆ ಏನಾದರೂ ಗಿಫ್ಟ್‌ ಕೊಡಬೇಕು ಎಂದು ಯೋಚಿಸುತ್ತಿರುವಾಗ ಚಂದ್ರಶೇಖರ್‌ಗೆ ಚಿನ್ನದ ಉಂಗುರ ಮತ್ತು ಟಿವಿ ಕೊಡಿಸುವ ಯೋಚನೆ ಬಂತು. ಅಂತೆಯೇ ಈ ವಿಚಾರವನ್ನು ಪತ್ನಿಯ ಮುಂದೆ ಪ್ರಸ್ತಾಪಿಸಿದ್ದಾನೆ. ಈ ವೇಳೆ ಪತಿಯ ನಿರ್ಧಾರಕ್ಕೆ ಪತ್ನಿ ಚಾಬಿ ವಿರೋಧ ವ್ಯಕ್ತಪಡಿಸಿದ್ದಾಳೆ. ಅಲ್ಲದೇ ಇದೇ ವಿಚಾರವಾಗಿ ಪತಿ- ಪತ್ನಿಯ ನಡುವೆ ವಾಗ್ವಾದವೂ ನಡೆದಿದೆ. ಆದರೆ ಚಂದ್ರಶೇಖರ್‌ ಈ ಎರಡು ವಸ್ತುಗಳನ್ನು ಉಡುಗೊರೆಯಾಗಿ ನೀಡುವುದಾಗಿ ಹೇಳಿದ್ದಾನೆ. ಇದರಿಂದ ಮತ್ತಷ್ಟು ಕೋಪಗೊಂಡ ಪತ್ನಿ ಚಾಬಿ ತನ್ನ ಸಹೋದರರಿಗೆ ಈ ವಿಷಯ ಮುಟ್ಟಿಸುತ್ತಾಳೆ. ಅಲ್ಲದೇ…

Read More

ಆಂಧ್ರಪ್ರದೇಶ: ಶ್ರೀ ಪೊಟ್ಟಿ ಶ್ರೀರಾಮುಲು ನೆಲ್ಲೂರು ಜಿಲ್ಲೆಯ ಕವಲಿ ಗ್ರಾಮಾಂತರ ಮಂಡಲದಲ್ಲಿ ಭೀಕರ ಅಪಘಾತ ಸಂಭವಿಸಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ. ವೇಗವಾಗಿ ಬಂದ ಕಾರು ಲಾರಿಗೆ ಡಿಕ್ಕಿ ಹೊಡೆದಿದ್ದು, ಪರಿಣಾಮ ಮೂವರು ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡ ಇಬ್ಬರನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಅವರು ತಮಿಳುನಾಡಿನ ಚೆನ್ನೈನಿಂದ ಹಿಂದಿರುಗುತ್ತಿದ್ದಾಗ ಘಟನೆ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More