Subscribe to Updates
Get the latest creative news from FooBar about art, design and business.
- ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!
- ಮುಳ್ಳಯ್ಯನಗಿರಿಯಲ್ಲಿ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಟಿಟಿ: 13 ಪ್ರವಾಸಿಗರು ಅದೃಷ್ಟವಶಾತ್ ಪಾರು!
- ಥಿಯೇಟರ್ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ
- ರಾಜ್ಯದಲ್ಲಿ ಸಿಎಂ ಬದಲಾವಣೆ ಇಲ್ಲ: ಸ್ಪಷ್ಟನೆ ನೀಡಿದ ಆರ್.ವಿ.ದೇಶಪಾಂಡೆ
- ಇಂಧನ ದರ ಏರಿಕೆ: ರಾಜಕೀಯ ಮಾಡದೆ ವ್ಯಾಟ್ ಕಡಿಮೆ ಮಾಡಿ; ಸಿಎಂ ಸಿದ್ದರಾಮಯ್ಯಗೆ ಆರ್.ಅಶೋಕ್ ಒತ್ತಾಯ
- ಸಂಸ್ಕರಿಸದೆ ನದಿಗೆ ತ್ಯಾಜ್ಯ ಹರಿಸಿದರೆ ಕ್ರಿಮಿನಲ್ ಮೊಕದ್ದಮೆ: ಅರಣ್ಯ ಸಚಿವ ಈಶ್ವರ ಖಂಡ್ರೆ ಖಡಕ್ ಎಚ್ಚರಿಕೆ!
- ಬೇಸಿಗೆ ಕಾಲದಲ್ಲಿ ಲಿಂಬೆಹಣ್ಣುಗಳನ್ನು ದೀರ್ಘಕಾಲದವರೆಗೆ ತಾಜಾವಾಗಿಡುವುದು ಹೇಗೆ?
- ವಿಶ್ವದ ಅತ್ಯಂತ ದೊಡ್ಡ ಶಕ್ತಿ ತಾಯಿ: ಪರಿಷತ್ ಸದಸ್ಯ ಆರ್.ರಾಜೇಂದ್ರ ರಾಜಣ್ಣ
Author: admin
ಶ್ರೀನಗರ: ಉಗ್ರರ ಗುಂಡಿನ ದಾಳಿಯಲ್ಲಿ ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬ ಬಲಿಯಾಗಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಬ್ದುಲ್ ರಜಾಕ್ ಉಗ್ರರ ಗುಂಡಿಗೆ ಬಲಿಯಾದ ವ್ಯಕ್ತಿಯಾಗಿದ್ದಾರೆ. ತಕ್ಷಣ ಗಾಯಾಳುವನ್ನು ಆಸ್ಪತ್ರೆಗೆ ಸೇರಿಸಲಾಯಿತಾದರೂ ಚಿಕಿತ್ಸೆ ಫಲಿಸದೆ ರಜಾಕ್ ಕೊನೆಯುಸಿರೆಳೆದಿದ್ದಾರೆ. ಥಾನಮಂಡಿ ಪೊಲೀಸ್ ಠಾಣಾ ವ್ಯಾಪ್ತಿಯ ಕುಂದಾ ಟಾಪ್ ಎಂಬ ಹಳ್ಳಿಯ ಮಸೀದಿಯಲ್ಲಿ ಸಂಜೆಯ ನಮಾಜ್ ಮುಗಿಸಿ ಹೊರಗೆ ಬಂದಾಗ ಅಬ್ದುಲ್ ರಜಾಕ್ ಮೇಲೆ ಉಗ್ರರು ಗುಂಡು ಹಾರಿಸಿದ್ದಾರೆ. ಭಯೋತ್ಪಾದಕರು ಸಮೀಪದಿಂದ ಗುಂಡು ಹಾರಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮೃತ ರಜಾಕ್ ನ ಸಹೋದರ ಟೆರಿಟೋರಿಯಲ್ ಆರ್ಮಿಯಲ್ಲಿ ಸೈನಿಕರಾಗಿದ್ದಾರೆ. ಭದ್ರತಾ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಭಯೋತ್ಪಾದಕರನ್ನು ಪತ್ತೆಹಚ್ಚಲು ಬೃಹತ್ ಕಾರ್ಡನ್ ಮತ್ತು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಬೀದರ್: ಬಿಜೆಪಿ ಪಕ್ಷದ ವಿರೂಪಾಕ್ಷ ಗಾದಗಿಯವರು, ಗೃಹ ಮಂತ್ರಿ ಡಾ.ಜಿ.ಪರಮೇಶ್ವರ್ ಅವರನ್ನು ಅವಹೇಳನಾಕಾರಿ ಪದ ಬಳಸಿ ಅಶ್ಲೀಲವಾಗಿ ನಿಂದಿಸಿದ್ದು, ಅವರ ವಿರುದ್ಧ ತುಮಕೂರು ಪೋಲಿಸ್ ವರಿಷ್ಠಾಧಿಕಾರಿ ಗೆ ದೂರು ನೀಡಿದ್ದೇವೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅರಕೆರೆ ಶಂಕರ್ ತಿಳಿಸಿದ್ದಾರೆ. ಕೊರಟಗೆರೆಯ ರಾಜೀವ್ ಭವನದಲ್ಲಿ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊರಟಗೆರೆ ತಾಲೂಕಿನ ಡಾ.ಜಿ.ಪರಮೇಶ್ವರ್ ರವರ ಅಭಿಮಾನಿಗಳು ಮತ್ತು ಕಾಂಗ್ರೆಸ್ ಮುಖಂಡರೆಲ್ಲರೂ ಒಟ್ಟಾಗಿ ವಿರೂಪಾಕ್ಷ ಗಾದಗಿ ಅವರನ್ನು ಕೂಡಲೇ ಬಂಧಿಸಿ ಕಾನೂನು ಕ್ರಮ ಕೈಗೊಳ್ಳಲು ಪೋಲಿಸ್ ವರಿಷ್ಠಾಧಿಕಾರಿ ಗೆ ದೂರು ನೀಡಿದ್ದೇವೆ ಎಂದು ತಿಳಿಸಿದರು. ಬೀದರ್ ನಲ್ಲಿ ವೈಯಕ್ತಿಕವಾಗಿ ಪರಮೇಶ್ವರ್ ರನ್ನುನಿಂದನೆ ಮಾಡಿದ್ದಾರೆ. ಇದರಿಂದ ಅವರ ಅಭಿಮಾನಿಗಳಿಗೆ ಬಹಳ ನೋವಾಗಿದೆ. ವಿರೂಪಾಕ್ಷ ಒಬ್ಬ ಗೂಂಡಾ. ಅವನ ಮೇಲೆ ಸುಮಾರು ಪ್ರಕರಣಗಳು ದಾಖಲಾಗಿದೆ. ಅವನು ಕನ್ನಡ ಪರ ಸಂಘಟನೆಗಳಲ್ಲಿ ಕೆಲಸ ಮಾಡುತ್ತಿದ್ದಾನೆ ಎಂದರು. ಪರಮೇಶ್ವರ್ ರವರು, ಸೌಮ್ಯ ಸ್ವಭಾವದ ವ್ಯಕ್ತಿ. ಆದರೆ ಅವರ ಅಭಿಮಾನಿಗಳು ಹಾಗಲ್ಲ. ನಮಗೂ ಸಹ ಮಾತನಾಡಲು ಬರುತ್ತದೆ. ರಾಜಕೀಯ…
ಕೌಲಾಲಂಪುರ್: ಇಂದು ಬೆಳಗ್ಗೆ 9.30ರ ಸುಮಾರಿಗೆ ಲುಮುಟ್ ನೌಕಾ ನೆಲೆಯಲ್ಲಿ 2 ಹೆಲಿಕಾಪ್ಟರ್ ಗಳ ನಡುವೆ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ 10 ಮಂದಿ ದುರಂತ ಅಂತ್ಯ ಕಂಡಿದ್ದಾರೆ. ಮಲೇಷಿಯಾದಲ್ಲಿ ನೌಕಾಪಡೆಯ 2 ಹೆಲಿಕಾಪ್ಟರ್ ಗಳ ನಡುವೆ ಡಿಕ್ಕಿ ಸಂಭವಿಸಿದ್ದು, ಸದ್ಯ ಹೆಲಿಕಾಪ್ಟರ್ಗಳ ಡಿಕ್ಕಿಯ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಹೆಲಿಕಾಪ್ಟರ್ ಗಳು ರಾಯಲ್ ಮಲೇಷಿಯನ್ ನೇವಿ ಪರೇಡ್ ಗಾಗಿ ಪೂರ್ವಾಭ್ಯಾಸ ಮಾಡುತ್ತಿದ್ದಾಗ ಡಿಕ್ಕಿ ಸಂಭವಿಸಿದೆ. ಘಟನೆಯಿಂದ ಹೆಲಿಕಾಪ್ಟರ್ ನಲ್ಲಿದ್ದ 10 ಮಂದಿ ಸಿಬ್ಬಂದಿ ಮೃತಪಟ್ಟಿರುವ ಬಗ್ಗೆ ನೌಕಾಪಡೆ ದೃಢಪಡಿಸಿದೆ ಎಂದು ವರದಿ ಮಾಡಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಬೆಂಗಳೂರು: ನಗರದ ಹೆಚ್ ಎಸ್ ಆರ್ ಲೇಔಟ್ ನ ಆಗರದಲ್ಲಿ ಏಪ್ರಿಲ್ 21ರ ರಾತ್ರಿ 11:30ಕ್ಕೆ, ಆಕಸ್ಮಿಕವಾಗಿ ತಂದೆಯಿಂದಲೇ ಕಾರು ಹರಿದು ಮಗು ಸಾವನ್ನಪ್ಪಿರುವ ಘಟನೆ ನಡೆದಿದ್ದು, ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಒಂದೂವರೆ ವರ್ಷದ ಶೈಜಾ ಜನ್ನತ್ ಮೃತ ಮಗುವಾಗಿದೆ. ಮೃತ ಮಗುವಿನ ಕುಟುಂಬವು ಸಂಬಂಧಿಗಳ ಮದುವೆಗೆ ಹೋಗಿ ತಮ್ಮ ಸ್ವಂತ ನಿವಾಸಕ್ಕೆ ವಾಪಾಸ್ ಆಗಿದ್ದು, ಕಾರಿನಿಂದ ಇಳಿದು ಎಲ್ಲರೂ ಮನೆ ಒಳಗೆ ಹೋಗಿದ್ದರು. ಮಗುವಿನ ತಂದೆ ಕಾರಿನಿಂದ ಲಗೇಜ್ ತೆಗೆದು ಮನೆಯೊಳಗೆ ಇಡುತ್ತಿದ್ದರು. ಈ ವೇಳೆ ಮಗು ತಂದೆಯ ಹತ್ತಿರ ಓಡಿ ಬಂದಿದೆ. ಕಾರಿನಲ್ಲಿದ್ದ ಲಗೇಜ್ ಮನೆಯೊಳಗೆ ಇಡುತ್ತಿದ್ದಾಗ ಮಗು ಕಾರಿನ ಡೋರ್ ಬಳಿಯೇ ನಿಂತಿತ್ತು. ಆದರೆ ಇದನ್ನು ತಂದೆ ಗಮನಿಸಿರಲಿಲ್ಲ. ಲಗೇಜ್ ತೆಗೆದು ಕಾರು ಚಾಲನೆ ಮಾಡಿದ ಸಂದರ್ಭ ಆಕಸ್ಮಿಕವಾಗಿ ಕಾರು ಮಗು ಮೇಲೆ ಹರಿದಿದೆ. ಪರಿಣಾಮ ಮಗು ಸ್ಥಳದಲ್ಲೇ ಮೃತಪಟ್ಟಿದೆ. ಅಪಘಾತದ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು…
ಪ್ರಧಾನಿ ನರೇಂದ್ರ ಮೋದಿ ಅವರು ಮುಸ್ಲಿಂ ಕಲ್ಯಾಣ ಯೋಜನೆಗಳನ್ನು ಪ್ರಸ್ತಾಪಿಸಿದರು. ಅಲಿಗಢದಲ್ಲಿ ನಡೆದ ರ್ಯಾಲಿಯಲ್ಲಿ ಮಾತನಾಡಿದ ನರೇಂದ್ರ ಮೋದಿ ಅವರು, ಮುಸ್ಲಿಮರ ಕಲ್ಯಾಣವನ್ನು ಖಾತ್ರಿಪಡಿಸಿದ್ದಾರೆ. ಹಿಂದಿನ ಸರ್ಕಾರಗಳು ಮುಸ್ಲಿಂ ಸಮುದಾಯದ ಉನ್ನತಿಗಾಗಿ ಏನನ್ನೂ ಮಾಡಿಲ್ಲ ಎಂದು ಮೋದಿ ಟೀಕಿಸಿದರು. ರಾಜಸ್ಥಾನದ ಭಾಷಣ ವಿವಾದಕ್ಕೀಡಾದ ನಂತರ ಪ್ರಧಾನಿ ಮುಸ್ಲಿಂ ಕಲ್ಯಾಣ ಯೋಜನೆಗಳನ್ನು ವಿವರಿಸಿ ಹೊರಬಂದಿದ್ದಾರೆ. ಹಜ್ ಯಾತ್ರೆಯ ಕೋಟಾವನ್ನು ಹೆಚ್ಚಿಸಲಾಗಿದೆ. ಮುಸ್ಲಿಂ ಸಹೋದರಿಯರು ಏಕಾಂಗಿಯಾಗಿ ಹಜ್ ಯಾತ್ರೆಗೆ ತೆರಳಲು ಅವಕಾಶ ಕಲ್ಪಿಸಲಾಗಿದೆ ಎಂದೂ ಪ್ರಧಾನಿ ಹೇಳಿದರು. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ದೇಶದ ಆಸ್ತಿಯನ್ನು ಮುಸ್ಲಿಮರಿಗೆ ಹಂಚಲಾಗುತ್ತದೆ. ಗೋರಕ್ಷಕರಿಗೆ ಮತ್ತು ಹೆಚ್ಚು ಮಕ್ಕಳನ್ನು ಹೊಂದಿರುವವರಿಗೆ ಆಸ್ತಿಯನ್ನು ನೀಡುವುದು ಸ್ವೀಕಾರಾರ್ಹವೇ ಎಂಬ ಮೋದಿಯವರ ಭಾಷಣವೂ ವಿವಾದಾಸ್ಪದವಾಗಿತ್ತು. ನೀತಿ ಸಂಹಿತೆ ಉಲ್ಲಂಘಿಸಿರುವ ಮೋದಿ ವಿರುದ್ಧ ಚುನಾವಣಾ ಆಯೋಗ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಪಕ್ಷಗಳು ಒತ್ತಾಯಿಸಿವೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಅನಕೊಂಡ ಹಾವು ಸಾಗಾಟಕ್ಕೆ ಯತ್ನಿಸಿದ ವ್ಯಕ್ತಿಯನ್ನು ಬಂಧಿಸಿದ್ದಾರೆ. ಬ್ಯಾಂಕಾಕ್ ನಿಂದ ಬೆಂಗಳೂರಿಗೆ ಬಂದಿದ್ದ ಪ್ರಯಾಣಿಕರನ್ನು ಕಸ್ಟಮ್ಸ್ ಬಂಧಿಸಿದೆ. ಆತನ ಚೀಲಗಳಲ್ಲಿ 10 ಹಳದಿ ಅನಕೊಂಡಗಳು ಪತ್ತೆಯಾಗಿವೆ. ಬೆಂಗಳೂರು ಕಸ್ಟಮ್ಸ್ ಎಕ್ಸ್ ಪೋಸ್ಟ್ ಮೂಲಕ ಈ ಸುದ್ದಿ ಹೊರಬಿದ್ದಿದೆ. ಅನಕೊಂಡವನ್ನು ಅಕ್ರಮವಾಗಿ ಸಾಗಿಸಲು ಯತ್ನಿಸಿದ ವ್ಯಕ್ತಿಯನ್ನು ಕಸ್ಟಮ್ಸ್ ಬಂಧಿಸಿದೆ. ತನಿಖೆ ಪ್ರಗತಿಯಲ್ಲಿದೆ. 1962ರ ಕಸ್ಟಮ್ಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಅರಸೀಕೆರೆ: ಶ್ರೇಯಸ್ ಪಟೇಲ್ ಅವರನ್ನು ಹಾಸನ ಲೋಕಸಭಾ ಕ್ಷೇತ್ರದಿಂದ ಗೆಲ್ಲಿಸಿಕೊಂಡು ಬನ್ನಿ. ಶಾಸಕ ಶಿವಲಿಂಗೇಗೌಡರನ್ನು ಮಂತ್ರಿ ಮಾಡುವ ಜವಾಬ್ದಾರಿ ನನಗೆ ಬಿಡಿ ಎಂದು ಮುಖ್ಯಮಂತ್ರಿ ಸಿ.ಎಂ. ಸಿದ್ದರಾಮಯ್ಯ ಘೋಷಿಸಿದರು. ಶ್ರೇಯಸ್ ಪಟೇಲ್ ಗೆಲುವಿಗೆ ಅರಸೀಕೆರೆಯಲ್ಲಿ ನಡೆಸಿದ ಬೃಹತ್ ರೋಡ್ ಶೋ ವೇಳೆ ಈ ಘೋಷಣೆ ಮಾಡಿದರು. ದೇವೇಗೌಡರು ತಮ್ಮ ಕುಟುಂಬದ ರಾಜಕೀಯ ಹಿತಾಸಕ್ತಿಗಾಗಿ ಮೋದಿಯವರನ್ನು ಹಿಗ್ಗಾ ಮುಗ್ಗಾ ಹೊಗಳುತ್ತಿದ್ದಾರೆ. ಮೋದಿ ಪ್ರಧಾನಿ. ಆದರೆ ದೇಶ ಬಿಟ್ಟು ಹೋಗುತ್ತೀನಿ ಎಂದಿದ್ದ ದೇವೇಗೌಡರೇ, ಈಗ ಮೋದಿಯವರು ರಾಜ್ಯದ ಜನತೆಯ ಕೈಗೆ ನೀಡಿದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಎಂದು ಹೊಗಳುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು. ದೇವೇಗೌಡರ ಅಳಿಯ ಬೆಂಗಳೂರು ಗ್ರಾಮಾಂತರದಲ್ಲಿ, ಮಗ ಮಂಡ್ಯದಲ್ಲಿ, ಮೊಮ್ಮಗ ಹಾಸನದಲ್ಲಿ ಸ್ಪರ್ಧಿಸಿದ್ದಾರೆ. ಇವರಿಗೆ ತಮ್ಮ ಕುಟುಂಬದ ಆಚೆ ಅಭ್ಯರ್ಥಿಗಳೇ ಕಾಣುತ್ತಿಲ್ಲ. ಹೀಗಾಗಿ ಈ ಬಾರಿ ಪ್ರಜ್ವಲ್ ರೇವಣ್ಣ ಅವರನ್ನು ಮನೆಗೆ ಕಳುಹಿಸಿ ಶ್ರೇಯಸ್ ಪಟೇಲ್ ಅವರನ್ನು ಗೆಲ್ಲಿಸಿಕೊಂಡು ಬನ್ನಿ ಎಂದು ಕರೆ ನೀಡಿದರು. ರಾಜ್ಯದಲ್ಲಿ ಅತಿ ಹೆಚ್ಚು ಒಕ್ಕಲಿಗ ನಾಯಕರನ್ನು ರಾಜಕೀಯವಾಗಿ…
ಈರುಳ್ಳಿ ತಿಂದ ಸಂದರ್ಭದಲ್ಲಿ ಅದರ ಕಡು ವಾಸನೆ ಬಾಯಿಯಲ್ಲಿ ಎಷ್ಟು ಹೊತ್ತಾದರೂ ಕಡಿಮೆಯೇ ಆಗುವುದಿಲ್ಲ. ಇದರಿಂದ ಹಲವರಿಗೆ ಇರುಸು-ಮುರುಸು ಉಂಟಾಗುವುದುಂಟು. ಹೀಗಾಗಿ ನಿವಾರಣೆಗೆ ಇಲ್ಲಿದೆ ಟಿಪ್ಸ್!! ಕೆಲವರು ತಾವು ಆಹಾರ ಸೇವನೆ ಮಾಡುವಾಗ ಜೊತೆಯಲ್ಲಿ ಈರುಳ್ಳಿಯನ್ನು ನೆಂಚಿಕೊಂಡು ತಿನ್ನುತ್ತಾರೆ. ಅಥವಾ ಕೆಲವರಿಗೆ ಹಾಗೆಯೇ ತಿನ್ನುವ ಅಭ್ಯಾಸ ಕೂಡ ಉಂಟು. ಆದರೆ ಇದರ ಬಳಿಕ ದೀರ್ಘಕಾಲದ ವರೆಗೆ ಉಳಿಯುವ ಅದರದ್ದೇ ವಾಸನೆಯಿಂದ ಕೆಲವರು ತುಂಬಾ ಮುಜುಗರಕ್ಕೊಳಗಾಗುತ್ತಾರೆ. ಅಂಜಿಕೆಯಿಂದ ಮಾತೇ ಆಡುವುದಿಲ್ಲ. ಹಾಗಾದರೆ ಈ ರೀತಿಯ ಬಾಯಿಯ ವಾಸನೆಯನ್ನು ಮರೆಮಾಚಲು ಯಾವ ತಂತ್ರಗಳನ್ನು ಅನುಸರಿಸಬೇಕು ಎಂದು ನೀವು ಕೇಳುವುದಾದರೆ, ಅದಕ್ಕೆ ಸುಲಭವಾದ ಪರಿಹಾರಗಳು ಇಲ್ಲಿವೆ. ನಿಮ್ಮ ಬಾಯಿಯಿಂದ ಈರುಳ್ಳಿ-ಬೆಳ್ಳುಳ್ಳಿಯ ವಾಸನೆಯನ್ನು ದೂರಾಗಿಸಲು ನೀವು ನಿಮಗಿಷ್ಟವಾದ ಹಣ್ಣುಗಳನ್ನು ಸೇವನೆ ಮಾಡಿ. ಸೇಬುಹಣ್ಣು, ಕಿತ್ತಳೆ ಹಣ್ಣು, ಪೈನಾಪಲ್, ದಾಳಿಂಬೆ ಹಣ್ಣು, ಸೀಬೆಹಣ್ಣು, ಮೋಸಂಬಿ ಹಣ್ಣು, ನಿಂಬೆಹಣ್ಣಿನ ರಸ, ನೇರಳೆ ಹಣ್ಣು ಇತ್ಯಾದಿ ಹಣ್ಣುಗಳ ಸೇವನೆರು ತಕ್ಷಣವೇ ಬಾಯಿಯ ಸಹಿಸಲಸಾಧ್ಯವಾದ ವಾಸನೆಯಿಂದ ಮುಕ್ತಿ ನೀಡುತ್ತವೆ. ಹಸಿರು ಚಹಾ, ಅದರ…
ಕಣ್ಣೂರ್ ಜಿಲ್ಲೆಯ ಪಯ್ಯನೂರು ಬಳಿಯ ಮಡಾಯಿ ಎಂಬಲ್ಲಿ ನೆಲೆಸಿರುವ ಮಡಾಯಿ ಕಾವು ದೇವಸ್ಥಾನ ಎಂದು ಪ್ರಸಿದ್ಧವಾಗಿರುವ ಶ್ರೀ ತಿರುವರ್ಕ್ಕಟ್ಟು ಕಾವು ಭಗವತಿ ದೇವಸ್ಥಾನವು ಭಕ್ತರಿಗೆ ಕೋಳಿಯಿಂದ ಮಾಡಿದ ತಿನಿಸುಗಳನ್ನು ‘ಪ್ರಸಾದ’ವಾಗಿ ನೀಡುತ್ತದೆ. ಕನ್ನಡಿಗರು ಹೆಚ್ಚಾಗಿ ಹೋಗುವ ಈ ದೇವಾಲಯದಲ್ಲಿ ಕೋಳಿ ತಿಂಡಿಯೇ ಪ್ರಸಾದ. ಈ ಪ್ರದೇಶದಲ್ಲಿ ಕನಿಷ್ಠ ಮೂರು ದೇವಾಲಯಗಳು ಕೋಳಿಯನ್ನು ‘ಪ್ರಸಾದ’ವಾಗಿ ವಿತರಿಸುತ್ತವೆ. “ಈ ಹಿಂದೆ ದೇವಾಲಯದಲ್ಲಿ ಪ್ರಾಣಿ ಬಲಿ ನೀಡಲಾಗುತ್ತಿತ್ತು. ಪ್ರಾಣಿ ಬಲಿ ನಿಷೇಧದ ಬಳಿಕ ಈ ಪದ್ಧತಿ ಸ್ಥಗಿತ. ಆದರೆ ಇಂದಿಗೂ ದೇವಸ್ಥಾನದಲ್ಲಿ ದೇವರಿಗೆ ನೈವೇದ್ಯವಾಗಿ ಕೋಳಿ ಮಾಂಸವನ್ನು ಬೇಯಿಸಲಾಗುತ್ತದೆ. ಅದನ್ನು ಭಕ್ತರಿಗೆ ಪ್ರಸಾದವಾಗಿ ವಿತರಿಸಲಾಗುತ್ತದೆ. ದೇವಾಲಯದ ಒಳಗೆ ಕೋಳಿ ಮಾಂಸವನ್ನು ಸ್ವತಃ ಅರ್ಚಕರು ದೇವರಿಗೆ ನೈವೇದ್ಯವಾಗಿ ಬೇಯಿಸುತ್ತಾರೆ. ಇದನ್ನು ಬೇಯಿಸಿದ ಹೆಸರುಕಾಳಿನೊಂದಿಗೆ ಭಕ್ತರಿಗೆ ವಿತರಿಸಲಾಗುತ್ತದೆ. ಮಡಾಯಿ ದೇವಸ್ಥಾನಕ್ಕೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಕೂಡ ಭಕ್ತರು. 2016ರಲ್ಲಿ ಕೊನೆಯ ಬಾರಿಗೆ ದೇವಸ್ಥಾನಕ್ಕೆ ಭೇಟಿ ನೀಡಿದ್ದ ಬಿಎಸ್ ಯಡಿಯೂರಪ್ಪ, ಈ ದೇವಸ್ಥಾನಕ್ಕೆ ಭೋಜನಶಾಲೆ ಕೊಡುಗೆ ನೀಡಿದ್ದಾರೆ. ಹಲವು…
ಬೆಂಗಳೂರಿನ ಕುಂದಲಹಳ್ಳಿಯಲ್ಲಿರುವ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಪೋಟ ಪ್ರಕರಣ ಇಡೀ ರಾಜ್ಯವನ್ನು ಬೆಚ್ಚಿಬೀಳಿಸಿತ್ತು. ಇದೀಗ ನಗರದ ಖಾಸಗಿ ಹೋಟೆಲ್ಗೆ ಬಾಂಬ್ ಬೆದರಿಕೆ ಪತ್ರ ಬಂದಿದ್ದು ಎಲ್ಲರಿಗೂ ಆಂತಕ ಮೂಡಿಸಿದೆ. ಪೋಸ್ಟ್ ಮೂಲಕ ಹೋಟೆಲ್ಗೆ ಬಾಂಬ್ ಬೆದರಿಕೆ ಪತ್ರ ರವಾನೆ ಮಾಡಿದ್ದು, ಖಾಸಗಿ ಹೋಟೆಲ್ ನಲ್ಲಿದ್ದ ಗ್ರಾಹಕರನ್ನು ಹೊರಕಳಿಸಿ ಜಾಲಹಳ್ಳಿ ಠಾಣೆ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಮೂಲಗಳ ಪ್ರಕಾರ, ಎಚ್ ಎಂಟಿ ಮೈದಾನ ಬಳಿಯ ಕದಂಬ ಹೋಟೆಲ್ ಸುತ್ತಮುತ್ತ ಬಾಂಬ್ ಇರಿಸಲಾಗಿದೆ ಎಂದು ಜಾಲಹಳ್ಳಿ ಪೊಲೀಸ್ ಠಾಣೆಗೆ ಅನಾಮಧೇಯ ಪತ್ರ ಬಂದಿದೆ. ಕಳೆದ ಮಾರ್ಚ್ 1 ರಂದು ಬೆಂಗಳೂರಿನ ಕುಂದಲಹಳ್ಳಿಯಲ್ಲಿರುವ ರಾಮೇಶ್ವರಂ ಕೆಫೆಯಲ್ಲಿ ಮಧ್ಯಾಹ್ನ ಬಾಂಬ್ ಸ್ಫೋಟವಾಗಿತ್ತು. ಕಿಕ್ಕಿರಿದು ತುಂಬಿದ್ದ ಜನರ ಮಧ್ಯೆ ಗ್ರಾಹಕರಂತೆ ಬಂದು ಬಾಂಬ್ ಇಟ್ಟು ಹೋಗಿದ್ದ ಶಂಕಿತ ಬಾಂಬರ್ ಕೊನೆಗೂ ಲಾಕ್ ಆಗಿದ್ದ. ಬರೋಬ್ಬರಿ 43 ದಿನಗಳ ಬಳಿಕ ಪಶ್ಚಿಮ ಬಂಗಾಳದಲ್ಲಿ NIA ತೋಡಿದ ಖೆಡ್ಡಾಗೆ ಬಾಂಬರ್ ಬಿದ್ದಿದ್ದ. ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಇಟ್ಟಿದ್ದ ಶಂಕಿತ ಉಗ್ರ ಮುಸಾವಿರ್…